Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 17:9 - ಕನ್ನಡ ಸಮಕಾಲಿಕ ಅನುವಾದ

9 ಅವನು ಈಗ ಒಂದು ಗವಿಯಲ್ಲಾದರೂ, ಒಂದು ಸ್ಥಳದಲ್ಲಾದರೂ ಅಡಗಿಕೊಂಡಿದ್ದಾನೆ. ಮೊದಲೇ ಇವರಲ್ಲಿ ಕೆಲವರು ಸತ್ತರೆ, ಅದನ್ನು ಕೇಳುವವರು ಅಬ್ಷಾಲೋಮನನ್ನು ಹಿಂಬಾಲಿಸುವ ಜನರಲ್ಲಿ ಸಂಹಾರವಾಯಿತೆಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವನು ಈಗ ಒಂದು ಗುಹೆಯಲ್ಲಾಗಲಿ, ಬೇರೆ ಯಾವುದಾದರೊಂದು ಸ್ಥಳದಲ್ಲಾಗಲಿ ಅಡಗಿಕೊಂಡಿರುವನು. ಮೊದಲು ನಮ್ಮವರಲ್ಲೇ ಕೆಲವರು ಸತ್ತರೆ, ಜನರು ಇದನ್ನು ಕೇಳಿ ಅಬ್ಷಾಲೋಮನ ಪಕ್ಷದವರಿಗೆ ಅಪಜಯವುಂಟಾಯಿತೆಂದು ಸುದ್ದಿ ಹಬ್ಬಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವನು ಈಗ ಒಂದು ಗುಹೆಯಲ್ಲೋ ಬೇರೆ ಯಾವುದಾದರೊಂದು ಸ್ಥಳದಲ್ಲಾಗಲೋ ಅಡಗಿಕೊಂಡಿರುವನು. ಮೊದಲು ನಮ್ಮವರಲ್ಲೇ ಕೆಲವರು ಮಡಿದರೆ, ಜನರು ಇದನ್ನು ಕೇಳಿ, ಅಬ್ಷಾಲೋಮನ ಪಕ್ಷದವರಿಗೆ ಮಹಾ ಅಪಜಯವಾಯಿತೆಂದು ಸುದ್ದಿಹಬ್ಬಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವನು ಈಗ ಒಂದು ಗುಹೆಯಲ್ಲಾಗಲಿ ಬೇರೆ ಯಾವದಾದರೊಂದು ಸ್ಥಳದಲ್ಲಾಗಲಿ ಅಡಗಿಕೊಂಡಿರುವನು. ಮೊದಲು ನಮ್ಮವರಲ್ಲೇ ಕೆಲವರು ಮಡಿದರೆ ಜನರು ಇದನ್ನು ಕೇಳಿ ಅಬ್ಷಾಲೋಮನ ಪಕ್ಷದವರಿಗೆ ಮಹಾಪಜಯವಾಯಿತೆಂದು ಸುದ್ದಿ ಹಬ್ಬಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಈಗಾಗಲೇ ಅವನು ಒಂದು ಗವಿಯಲ್ಲಾಗಲಿ ಇಲ್ಲವೆ ಬೇರೆ ಯಾವ ಸ್ಥಳದಲ್ಲಾಗಲಿ ಅಡಗಿಕೊಂಡಿರಬಹುದು. ನಿನ್ನ ತಂದೆಯು ನಿನ್ನ ಜನರ ಮೇಲೆ ಆಕ್ರಮಣ ಮಾಡಿದರೆ, ಆಗ ಜನರಿಗೆ ಸುದ್ದಿಯು ತಿಳಿಯುತ್ತದೆ. ‘ಅಬ್ಷಾಲೋಮನ ಹಿಂಬಾಲಕರು ಸೋಲುತ್ತಿದ್ದಾರೆ’ ಎಂದು ಅವರು ಯೋಚಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 17:9
10 ತಿಳಿವುಗಳ ಹೋಲಿಕೆ  

ಸೌಲನು ಮಾರ್ಗದಲ್ಲಿ ಕುರಿಹಟ್ಟಿಗಳು ಇರುವ ಗವಿಯ ಬಳಿಗೆ ಬಂದು, ಅದರಲ್ಲಿ ಅವನು ಶೌಚಕ್ಕಾಗಿ ಹೋದನು. ಆದರೆ ದಾವೀದನೂ, ಅವನ ಜನರೂ ಅದೇ ಗವಿಯ ಹಿಂದೆ ಅಡಗಿಕೊಂಡಿದ್ದರು.


ದಾವೀದನು ಆ ಸ್ಥಳದಿಂದ ತಪ್ಪಿಸಿಕೊಂಡು ಅದುಲ್ಲಾಮ್ ಎಂಬ ಗವಿಗೆ ಬಂದನು. ಆ ವರ್ತಮಾನವನ್ನು ಅವನ ಸಹೋದರರೂ, ಅವನ ತಂದೆಯ ಮನೆಯವರೆಲ್ಲರೂ ಕೇಳಿ, ಅವನ ಬಳಿಗೆ ಅಲ್ಲಿಗೆ ಬಂದರು.


ಆಗ ಅವರು, ‘ಮುಂಚಿನ ಹಾಗೆಯೇ ನಮ್ಮ ಮುಂದೆ ಓಡಿಹೋಗುತ್ತಾರೆ,’ ಎಂದು ಹೇಳಿಕೊಳ್ಳುವರು. ಪಟ್ಟಣದ ಬಳಿಯಿಂದ ದೂರದವರೆಗೂ ಅವರು ಬರುವವರೆಗೆ ನಾವು ಓಡಿ ಹೋಗುತ್ತಲೇ ಇರುವೆವು.


ಆಯಿ ಎಂಬ ಪಟ್ಟಣದವರು ಇವರಲ್ಲಿ ಹೆಚ್ಚು ಕಡಿಮೆ ಮೂವತ್ತಾರು ಮಂದಿಯನ್ನು ಕೊಂದುಹಾಕಿದರು. ಪಟ್ಟಣದ ಬಾಗಿಲಿನಿಂದ ಪ್ರಾರಂಭಿಸಿ ಶೆಬಾರಿಮಿನವರೆಗೂ ಅವರನ್ನು ಹಿಂದಟ್ಟಿ, ಅವರನ್ನು ಹೊಡೆದರು. ಆದ್ದರಿಂದ ಜನರ ಹೃದಯವು ಕರಗಿ ನೀರಿನಂತಾಯಿತು.


ಹೂಷೈ, “ನಿನ್ನ ತಂದೆಯೂ, ಅವನ ಮನುಷ್ಯರೂ ಪರಾಕ್ರಮಶಾಲಿಗಳು. ಅವರು ಅಡವಿಯಲ್ಲಿ ಮರಿಗಳನ್ನು ಕಳೆದುಕೊಂಡ ಕರಡಿಯ ಹಾಗೆಯೇ ಕೋಪವುಳ್ಳವರಾಗಿದ್ದಾರೆಂದು ನೀನು ಬಲ್ಲೆ. ಇದಲ್ಲದೆ ನಿನ್ನ ತಂದೆಯು ಶೂರನು. ಅವನು ರಾತ್ರಿಯಲ್ಲಿ ಜನರ ಸಂಗಡ ತಂಗುವುದಿಲ್ಲ.


ಆಗ ಸಿಂಹ ಹೃದಯರಾದ ಪರಾಕ್ರಮಶಾಲಿಯ ಹೃದಯವು ಸಹ ಸಂಪೂರ್ಣ ಕರಗುವುದು. ಇದಲ್ಲದೆ ನಿನ್ನ ತಂದೆಯು ಶೂರನೆಂದೂ, ಅವನ ಸಂಗಡ ಇರುವವರು ಪರಾಕ್ರಮಶಾಲಿಗಳೆಂದೂ ಇಸ್ರಾಯೇಲರೆಲ್ಲರು ಬಲ್ಲರು.


ಇಷ್ಮಾಯೇಲನು ಗೆದಲ್ಯನ ನಿಮಿತ್ತ ಕೊಂದುಹಾಕಿದ ಮನುಷ್ಯರೆಲ್ಲರ ಹೆಣಗಳನ್ನು ಹಾಕಿದ ಬಾವಿಯು, ಅರಸನಾದ ಆಸನು ಇಸ್ರಾಯೇಲಿನ ಅರಸನಾದ ಬಾಷನ ಭಯದಿಂದ ತೋಡಿಸಿದ್ದ ಬಾವಿಯೇ ಆಗಿತ್ತು. ಇದನ್ನು ನೆತನ್ಯನ ಮಗ ಇಷ್ಮಾಯೇಲನು ಕೊಂದು ಹಾಕಿದವರಿಂದ ತುಂಬಿಸಿದನು.


ನೀವು ದಯಮಾಡಿ ಹೋಗಿ ಅವನು ಹೆಜ್ಜೆ ಇಡುವ ಸ್ಥಳವನ್ನೂ, ಅಲ್ಲಿ ಅವನನ್ನು ನೋಡಿದವರು ಯಾರು ಎಂಬುದನ್ನೂ ಇನ್ನೂ ಸೂಕ್ಷ್ಮವಾಗಿ ತಿಳಿದುಕೊಂಡು ನೋಡಿರಿ. ಏಕೆಂದರೆ ಅವನು ಬಹು ಉಪಾಯದಿಂದ ಪ್ರವರ್ತಿಸುತ್ತಾನೆಂದು ನನಗೆ ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು