Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 18:20 - ಕನ್ನಡ ಸಮಕಾಲಿಕ ಅನುವಾದ

20 ಆದರೆ ಯೋವಾಬನು ಅವನಿಗೆ, “ನೀನು ಈ ಹೊತ್ತು ವರ್ತಮಾನ ತೆಗೆದುಕೊಂಡು ಹೋಗಬೇಡ. ಮತ್ತೊಂದು ದಿವಸ ವರ್ತಮಾನ ತೆಗೆದುಕೊಂಡು ಹೋಗಬಹುದು. ಏಕೆಂದರೆ ಅರಸನ ಮಗನು ಸತ್ತದ್ದರಿಂದ ಈ ಹೊತ್ತು ನೀನು ವರ್ತಮಾನ ತೆಗೆದುಕೊಂಡು ಹೋಗಬೇಡ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯೋವಾಬನು ಅವನಿಗೆ, “ಈ ಹೊತ್ತಿನ ಸುದ್ದಿಯನ್ನು ತೆಗೆದುಕೊಂಡು ಹೋಗತಕ್ಕವನು ನೀನಲ್ಲ. ಇನ್ನೊಂದು ಸಾರಿ ನಿನ್ನನ್ನು ಕಳುಹಿಸುತ್ತೇನೆ, ಈ ಹೊತ್ತು ಅರಸನ ಮಗನು ಸತ್ತಿರುವುದರಿಂದ ವರ್ತಮಾನವು ಶುಭವಾದುದಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಯೋವಾಬನು, “ಆ ಹೊತ್ತಿನ ಸುದ್ದಿಯನ್ನು ತೆಗೆದುಕೊಂಡು ಹೋಗತಕ್ಕವನು ನೀನಲ್ಲ; ಇನ್ನೊಂದು ಸಾರಿ ನಿನ್ನನ್ನು ಕಳುಹಿಸುತ್ತೇನೆ. ಈ ಹೊತ್ತು ಅರಸರ ಮಗನು ಸತ್ತಿರುವುದರಿಂದ ವರ್ತಮಾನವು ಶುಭವಾದುದ್ದಲ್ಲ,” ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯೋವಾಬನು ಅವನಿಗೆ - ಈಹೊತ್ತಿನ ಸುದ್ದಿಯನ್ನು ತೆಗೆದುಕೊಂಡು ಹೋಗತಕ್ಕವನು ನೀನಲ್ಲ; ಇನ್ನೊಂದು ಸಾರಿ ನಿನ್ನನ್ನು ಕಳುಹಿಸುತ್ತೇನೆ. ಈಹೊತ್ತು ಅರಸನ ಮಗನು ಸತ್ತಿರುವದರಿಂದ ವರ್ತಮಾನವು ಶುಭವಾದದ್ದಲ್ಲ ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯೋವಾಬನು ಅಹೀಮಾಚನಿಗೆ, “ಇಲ್ಲ, ದಾವೀದನಿಗೆ ಇಂದು ನೀನು ಈ ವರ್ತಮಾನವನ್ನು ತಿಳಿಸುವಂತಿಲ್ಲ. ನೀನು ಬೇರೊಂದು ದಿನದಲ್ಲಿ ವರ್ತಮಾನವನ್ನು ತಿಳಿಸಬಹುದು, ಏಕೆಂದರೆ ಇಂದು ರಾಜನ ಮಗನು ಸತ್ತಿದ್ದಾನೆ” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 18:20
8 ತಿಳಿವುಗಳ ಹೋಲಿಕೆ  

ಆಗ ಅರಸನು ನಡುಗುತ್ತಾ ಊರು ಬಾಗಿಲ ಮೇಲಿರುವ ಕೊಠಡಿಗೆ ಏರಿಹೋದನು. ಹೋಗುವಾಗ, “ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ, ನಿನಗೆ ಬದಲಾಗಿ ನಾನು ಸತ್ತಿದ್ದರೆ ಉತ್ತಮವಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನೇ,” ಎಂದು ಹೇಳಿ ಅತ್ತನು.


ಅರಸನು, “ಯುವಕನಾದ ಅಬ್ಷಾಲೋಮನಿಗೆ ಕ್ಷೇಮವೋ?” ಎಂದು ಕೇಳಿದನು. ಅದಕ್ಕೆ ಅಹೀಮಾಚನು ಉತ್ತರವಾಗಿ, “ಯೋವಾಬನು ಅರಸನ ಸೇವಕನನ್ನೂ, ನಿನ್ನ ಸೇವಕನಾದ ನನ್ನನ್ನೂ ಕಳುಹಿಸಿದಾಗ ದೊಡ್ಡ ಗೊಂದಲವನ್ನು ಕಂಡೆನು. ಆದರೆ ಅದು ಏನೋ ನಾನರಿಯೆ,” ಎಂದನು.


ಕಾವಲುಗಾರನು, “ಮೊದಲನೆಯವನ ಓಟವು ಚಾದೋಕನ ಮಗ ಅಹೀಮಾಚನ ಓಟದ ಹಾಗೆ ಇರುವುದೆಂದು ನನಗೆ ಕಾಣುತ್ತದೆ,” ಎಂದನು. ಅದಕ್ಕೆ ಅರಸನು, “ಅವನು ಒಳ್ಳೆಯವನು, ಒಳ್ಳೆಯ ಸಮಾಚಾರ ತರುತ್ತಾನೆ,” ಎಂದನು.


ಅರಸನು ಯೋವಾಬನಿಗೂ, ಅಬೀಷೈಯಿಗೂ, ಇತ್ತೈಗೂ ಆಜ್ಞಾಪಿಸಿ, “ನನಗೋಸ್ಕರ ಯುವಕನಾದ ಅಬ್ಷಾಲೋಮನೊಂದಿಗೆ ಮೃದುವಾಗಿ ವರ್ತಿಸಿರಿ,” ಎಂದನು. ಹೀಗೆ ಅರಸನು ಅಬ್ಷಾಲೋಮನನ್ನು ಕುರಿತು ಅಧಿಪತಿಗಳೆಲ್ಲರಿಗೂ ಕೊಟ್ಟ ಆಜ್ಞೆಯನ್ನು ಸೈನಿಕರೆಲ್ಲರೂ ಕೇಳಿದರು.


ಆಗ ಚಾದೋಕನ ಮಗ ಅಹೀಮಾಚನು, “ಯೆಹೋವ ದೇವರು ರಾಜನ ಶತ್ರುಗಳ ಮೇಲೆ ಹೇಗೆ ನ್ಯಾಯ ತೀರಿಸಿದ್ದಾರೆಂಬ ವರ್ತಮಾನವನ್ನು ಅರಸನಿಗೆ ತಿಳಿಸುವ ಹಾಗೆ, ನಾನು ಓಡಿ ಹೋಗುವೆನು,” ಎಂದನು.


ಯೋವಾಬನು ಕೂಷ್ಯ ದೇಶವಾಸಿಯಾದ ಒಬ್ಬನಿಗೆ, “ನೀನು ಹೋಗಿ ಕಂಡದ್ದನ್ನು ಅರಸನಿಗೆ ತಿಳಿಸು,” ಎಂದನು. ಕೂಷ್ಯ ದೇಶವಾಸಿ ಯೋವಾಬನಿಗೆ ಅಡ್ಡಬಿದ್ದು ಓಡಿಹೋದನು.


“ಅರಸನು ಅಬ್ಷಾಲೋಮನಿಗೋಸ್ಕರ ಅತ್ತು ದುಃಖ ಪಡುತ್ತಾ ಇದ್ದಾನೆ,” ಎಂದು ಯೋವಾಬನಿಗೆ ತಿಳಿಸಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು