Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 18:29 - ಕನ್ನಡ ಸಮಕಾಲಿಕ ಅನುವಾದ

29 ಅರಸನು, “ಯುವಕನಾದ ಅಬ್ಷಾಲೋಮನಿಗೆ ಕ್ಷೇಮವೋ?” ಎಂದು ಕೇಳಿದನು. ಅದಕ್ಕೆ ಅಹೀಮಾಚನು ಉತ್ತರವಾಗಿ, “ಯೋವಾಬನು ಅರಸನ ಸೇವಕನನ್ನೂ, ನಿನ್ನ ಸೇವಕನಾದ ನನ್ನನ್ನೂ ಕಳುಹಿಸಿದಾಗ ದೊಡ್ಡ ಗೊಂದಲವನ್ನು ಕಂಡೆನು. ಆದರೆ ಅದು ಏನೋ ನಾನರಿಯೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆಗ ಅರಸನು ಅವನನ್ನು, “ಯೌವನಸ್ಥನಾದ ಅಬ್ಷಾಲೋಮನು ಸುರಕ್ಷಿತವಾಗಿದ್ದಾನೋ” ಎಂದು ಕೇಳಿದನು. ಅದಕ್ಕೆ ಅಹೀಮಾಚನು, “ಯೋವಾಬನು ಒಡೆಯರ ಸೇವಕನಾದ ನನ್ನನ್ನು ಕಳುಹಿಸುವಾಗ ನಾನು ಒಂದು ದೊಡ್ಡ ದೊಂಬಿಯನ್ನು ಕಂಡೆನು, ಆದರೆ ಸಂಗತಿ ಏನೆಂಬುದು ನನಗೆ ಗೊತ್ತಾಗಲಿಲ್ಲ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಆಗ ಅರಸನು, “ಆ ಯುವಕ ಅಬ್ಷಾಲೋಮನು ಸುರಕ್ಷಿತನಾಗಿದ್ದಾನೋ?” ಎಂದು ಕೇಳಿದನು. ಅದಕ್ಕೆ ಅಹೀಮಾಚನು, “ಯೋವಾಬನು ಒಡೆಯರ ಸೇವಕನಾದ ನನ್ನನ್ನು ಕಳುಹಿಸುವಾಗ ನಾನು ಒಂದು ದೊಡ್ಡ ದೊಂಬಿಯನ್ನು ಕಂಡೆ.ಆದರೆ ಸಂಗತಿಯೇನೆಂಬುದು ನನಗೆ ಗೊತ್ತಾಗಲಿಲ್ಲ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆಗ ಅರಸನು ಅವನನ್ನು - ಯೌವನಸ್ಥನಾದ ಅಬ್ಷಾಲೋಮನು ಸುರಕ್ಷಿತನಾಗಿದ್ದಾನೋ ಎಂದು ಕೇಳಿದನು. ಅದಕ್ಕೆ ಅಹೀಮಾಚನು ಯೋವಾಬನು ಒಡೆಯರ ಸೇವಕನಾದ ನನ್ನನ್ನು ಕಳುಹಿಸುವಾಗ ನಾನು ಒಂದು ದೊಡ್ಡ ದೊಂಬಿಯನ್ನು ಕಂಡೆನು. ಆದರೆ ಸಂಗತಿಯೇನೆಂಬದು ನನಗೆ ಗೊತ್ತಾಗಲಿಲ್ಲ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ರಾಜನು, “ಯುವಕನಾದ ಅಬ್ಷಾಲೋಮನು ಕ್ಷೇಮವಾಗಿರುವನೇ?” ಎಂದು ಕೇಳಿದನು. ಅಹೀಮಾಚನು, “ಯೋವಾಬನು ನನ್ನನ್ನು ಕಳುಹಿಸಿದಾಗ, ನಾನು ಒಂದು ದೊಡ್ಡ ಕೋಲಾಹಲವನ್ನು ನೋಡಿದೆನು. ಆದರೆ ಅದು ಏನೆಂದು ನನಗೆ ಗೊತ್ತಿಲ್ಲ” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 18:29
6 ತಿಳಿವುಗಳ ಹೋಲಿಕೆ  

ಆಗ ಚಾದೋಕನ ಮಗ ಅಹೀಮಾಚನು ಯೋವಾಬನಿಗೆ, ಏನೇ ಆಗಲಿ, “ನಾನು ಕೂಷ್ಯ ದೇಶವಾಸಿ ಹಿಂದೆ ಓಡಿಹೋಗುವ ಹಾಗೆ ಅಪ್ಪಣೆಕೊಡಬೇಕು,” ಎಂದನು. ಅದಕ್ಕೆ ಯೋವಾಬನು, “ನನ್ನ ಮಗನೇ, ನೀನು ಏಕೆ ಹೋಗಲು ಬಯಸುತ್ತಿರುವೆ? ನಿನಗೆ ಪ್ರಶಸ್ತಿಯನ್ನು ತರುವ ಯಾವುದೇ ಸುದ್ದಿ ನಿನ್ನ ಬಳಿ ಇಲ್ಲ,” ಎಂದನು.


ಆಗ ಯೋವಾಬನು ಅಮಾಸನಿಗೆ, “ನನ್ನ ಸಹೋದರನೇ, ಕ್ಷೇಮವೋ?” ಎಂದನು. ಯೋವಾಬನು ಅವನನ್ನು ಮುದ್ದಿಟ್ಟುಕೊಳ್ಳಲು ತನ್ನ ಬಲಗೈಯಿಂದ ಅವನ ಗಡ್ಡವನ್ನು ಹಿಡಿದನು.


ಅರಸನು, “ನೀನು ಇತ್ತಲಾಗಿ ಬಂದು ನಿಲ್ಲು,” ಎಂದನು. ಅವನು ಅತ್ತಲಾಗಿ ಹೋಗಿ ನಿಂತನು. ಆಗ ಕೂಷ್ಯನು ಬಂದನು.


ಅರಸನು ಕೂಷ್ಯನಿಗೆ, “ಯುವಕನಾದ ಅಬ್ಷಾಲೋಮನಿಗೆ ಕ್ಷೇಮವೋ?” ಎಂದನು. ಕೂಷ್ಯನು ಉತ್ತರವಾಗಿ, “ಅರಸನಾದ ನನ್ನ ಒಡೆಯನ ಶತ್ರುಗಳು ಕೇಡು ಮಾಡುವಂತೆ ನಿನಗೆ ವಿರೋಧವಾಗಿ ಏಳುವ ಸಮಸ್ತರಿಗೂ, ಆ ಯುವಕನಿಗಾದ ಹಾಗೆಯೇ ಆಗಲಿ,” ಎಂದನು.


ನೀನು ಅವಳನ್ನು ಎದುರುಗೊಳ್ಳಲು ಓಡಿಹೋಗಿ, ಅವಳಿಗೆ, ‘ನಿನಗೂ, ನಿನ್ನ ಗಂಡನಿಗೂ ಮಗನಿಗೂ ಕ್ಷೇಮವೇ? ಎಂದು ಕೇಳು,’ ” ಎಂದನು. ಅವಳು, “ಕ್ಷೇಮ” ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು