Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 18:33 - ಕನ್ನಡ ಸಮಕಾಲಿಕ ಅನುವಾದ

33 ಆಗ ಅರಸನು ನಡುಗುತ್ತಾ ಊರು ಬಾಗಿಲ ಮೇಲಿರುವ ಕೊಠಡಿಗೆ ಏರಿಹೋದನು. ಹೋಗುವಾಗ, “ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ, ನಿನಗೆ ಬದಲಾಗಿ ನಾನು ಸತ್ತಿದ್ದರೆ ಉತ್ತಮವಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನೇ,” ಎಂದು ಹೇಳಿ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಇದನ್ನು ಕೇಳಿ ಅರಸನು ಎದೆಯೊಡದವನಾಗಿ, “ನನ್ನ ಮಗನೇ, ಅಬ್ಷಾಲೋಮನೇ, ನಿನಗೆ ಬದಲಾಗಿ ನಾನು ಸತ್ತಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು. ಅಬ್ಷಾಲೋಮನೇ! ನನ್ನ ಮಗನೇ, ನನ್ನ ಮಗನೇ!” ಎಂದು ಕೂಗಿ ಅಳುತ್ತಾ ಪಟ್ಟಣದ ಹೆಬ್ಬಾಗಿಲಿನ ಮೇಲಿರುವ ಕೋಣೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಇದನ್ನು ಕೇಳಿದ್ದೇ ಅರಸನ ಎದೆಯೊಡೆಯಿತು. ಅವನು, “ನನ್ನ ಮಗನೇ, ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ, ನಿನಗೆ ಬದಲಾಗಿ ನಾನು ಸತ್ತಿದ್ದರೆ ಎಷ್ಟೋ ಒಳ್ಳೇದಾಗುತ್ತಿತ್ತು! ಅಬ್ಷಾಲೋಮನೇ, ನನ್ನ ಮಗನೇ ಮಗನೇ,” ಎಂದು ಕೂಗಿ ಗೋಳಿಡುತ್ತಾ ಹೆಬ್ಬಾಗಿಲಿನ ಮೇಲಿದ್ದ ಕೋಣೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಇದನ್ನು ಕೇಳಿ ಅರಸನು ಎದೆಯೊಡೆದವನಾಗಿ - ನನ್ನ ಮಗನೇ, ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ, ನಿನಗೆ ಬದಲಾಗಿ ನಾನು ಸತ್ತಿದ್ದರೆ ಎಷ್ಟೋ ಒಳ್ಳೇದಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ, ಮಗನೇ ಎಂದು ಕೂಗಿ ಅಳುತ್ತಾ ಹೆಬ್ಬಾಗಲಿನ ಮೇಲಿರುವ ಕೋಣೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಅಬ್ಷಾಲೋಮನು ಸತ್ತಿದ್ದಾನೆಂಬುದು ಆಗ ರಾಜನಿಗೆ ತಿಳಿಯಿತು. ರಾಜನು ಬಹಳ ತಳಮಳಗೊಂಡನು. ಅವನು ನಗರ ದ್ವಾರದಲ್ಲಿದ್ದ ಕೊಠಡಿಗೆ ಹೋಗಿ ಅಲ್ಲಿ ಗೋಳಾಡಿದನು. ಬಳಿಕ ಅಲ್ಲಿಂದ ತನ್ನ ಕೊಠಡಿಗೆ ಹೋಗುತ್ತಾ, “ನನ್ನ ಮಗನೇ, ಅಬ್ಷಾಲೋಮನೇ, ನನ್ನ ಮಗನಾದ ಅಬ್ಷಾಲೋಮನೇ! ನಿನಗೆ ಬದಲಾಗಿ ನಾನು ಸತ್ತಿದ್ದರೆ ಚೆನ್ನಾಗಿತ್ತು. ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ!” ಎಂದು ಗೋಳಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 18:33
11 ತಿಳಿವುಗಳ ಹೋಲಿಕೆ  

ಆದರೆ ಅರಸನು ಮೋರೆಯನ್ನು ಮುಚ್ಚಿಕೊಂಡು, ಮಹಾಶಬ್ದವಾಗಿ, “ನನ್ನ ಮಗ ಅಬ್ಷಾಲೋಮನೇ, ಅಬ್ಷಾಲೋಮನೇ ನನ್ನ ಮಗನೇ, ನನ್ನ ಮಗನೇ,” ಎಂದು ಕೂಗುತ್ತಿದ್ದನು.


ಬುದ್ಧಿಹೀನನಾದ ಮಗನು ತನ್ನ ತಂದೆಗೆ ದುಃಖವೂ, ತನ್ನನ್ನು ಹೆತ್ತವಳಿಗೆ ಕಹಿಯೂ ಆಗಿದ್ದಾನೆ.


ಸೊಲೊಮೋನನ ಜ್ಞಾನೋಕ್ತಿಗಳು: ಜ್ಞಾನಿಯಾದ ಮಗನು ತಂದೆಗೆ ಸಂತೋಷವನ್ನು ಉಂಟುಮಾಡುತ್ತಾನೆ. ಅಜ್ಞಾನಿಯಾದ ಮಗನಾದರೋ ತನ್ನ ತಾಯಿಗೆ ಶೋಕವನ್ನುಂಟು ಮಾಡುತ್ತಾನೆ.


ಒಬ್ಬ ತಂದೆಯು ತಮ್ಮ ಮಕ್ಕಳ ಮೇಲೆ ಅನುಕಂಪಗೊಳ್ಳುವಂತೆ, ಯೆಹೋವ ದೇವರು ತಮಗೆ ಭಯಪಡುವವರ ಮೇಲೆ ಅನುಕಂಪ ತೋರಿಸುವವರಾಗಿದ್ದಾರೆ.


ನನ್ನ ಸ್ವಂತ ಜನರಾದ ನನ್ನ ಯೆಹೂದ್ಯ ಸಹೋದರರಿಗಾಗಿ, ಸಾಧ್ಯವಾದರೆ ನಾನೇ ಕ್ರಿಸ್ತ ಯೇಸುವಿನಿಂದ ದೂರಹೋಗಿ ಶಾಪಗ್ರಸ್ತನಾಗಲು ಸಿದ್ಧನಾಗಿದ್ದೇನೆ.


ಆದರೂ ಈಗ ನೀವು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲವಾದರೆ ನೀವು ಬರೆದ ಗ್ರಂಥದಿಂದ ನನ್ನ ಹೆಸರನ್ನು ಅಳಿಸಿಬಿಡಿ,” ಎಂದು ಬೇಡಿಕೊಂಡನು.


ಎಲೀಯನು ನಮ್ಮಂಥ ಮಾನವ ಸ್ವಭಾವವುಳ್ಳವನಾಗಿದ್ದನು. ಅವನು ಮಳೆ ಬರಬಾರದೆಂದು ಆಸಕ್ತಿಯಿಂದ ಪ್ರಾರ್ಥಿಸಲು, ಮೂರು ವರ್ಷ ಆರು ತಿಂಗಳವರೆಗೂ ಭೂಮಿಯ ಮೇಲೆ ಮಳೆ ಬೀಳಲಿಲ್ಲ.


ಅಬ್ರಹಾಮನಿಗೆ ತನ್ನ ಮಗನ ದೆಸೆಯಿಂದ ಬಹು ದುಃಖವಾಯಿತು.


ಅರಸನಾದ ದಾವೀದನ ಹೃದಯವು ಅಬ್ಷಾಲೋಮನ ಕಡೆಗೆ ಇರುವುದನ್ನು ಚೆರೂಯಳ ಮಗ ಯೋವಾಬನಿಗೆ ತಿಳಿಯಿತು.


“ಅರಸನು ಅಬ್ಷಾಲೋಮನಿಗೋಸ್ಕರ ಅತ್ತು ದುಃಖ ಪಡುತ್ತಾ ಇದ್ದಾನೆ,” ಎಂದು ಯೋವಾಬನಿಗೆ ತಿಳಿಸಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು