Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 18:5 - ಕನ್ನಡ ಸಮಕಾಲಿಕ ಅನುವಾದ

5 ಅರಸನು ಯೋವಾಬನಿಗೂ, ಅಬೀಷೈಯಿಗೂ, ಇತ್ತೈಗೂ ಆಜ್ಞಾಪಿಸಿ, “ನನಗೋಸ್ಕರ ಯುವಕನಾದ ಅಬ್ಷಾಲೋಮನೊಂದಿಗೆ ಮೃದುವಾಗಿ ವರ್ತಿಸಿರಿ,” ಎಂದನು. ಹೀಗೆ ಅರಸನು ಅಬ್ಷಾಲೋಮನನ್ನು ಕುರಿತು ಅಧಿಪತಿಗಳೆಲ್ಲರಿಗೂ ಕೊಟ್ಟ ಆಜ್ಞೆಯನ್ನು ಸೈನಿಕರೆಲ್ಲರೂ ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅರಸನು ಯೋವಾಬ, ಅಬೀಷೈ ಮತ್ತು ಇತ್ತೈ ಎಂಬುವರಿಗೆ, “ನನಗೋಸ್ಕರವಾಗಿ ಯೌವನಸ್ಥನಾದ ಅಬ್ಷಾಲೋಮನಿಗೆ ದಯೆ ತೋರಿಸಿರಿ” ಎಂದು ಆಜ್ಞಾಪಿಸಿದನು. ದಾವೀದನು ಸೇನಾಧಿಪತಿಗಳಿಗೆ ಕೊಟ್ಟ ಈ ಅಪ್ಪಣೆಯು ಸೈನ್ಯದವರಿಗೆಲ್ಲಾ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅರಸನು ಯೋವಾಬ್, ಅಬೀಷೈ ಹಾಗು ಇತ್ತೈ ಎಂಬವರಿಗೆ, “ನನ್ನ ಸಲುವಾಗಿ ಯುವಕ ಅಬ್ಷಾಲೋಮನಿಗೆ ಹಾನಿಮಾಡಬೇಡಿ,” ಎಂದು ಆಜ್ಞಾಪಿಸಿದನು. ದಾವೀದನು ಸೇನಾಪತಿಗಳಿಗೆ ಕೊಟ್ಟ ಈ ಅಪ್ಪಣೆ ಸೈನ್ಯದವರಿಗೆಲ್ಲಾ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅರಸನು ಯೋವಾಬ್ ಅಬೀಷೈ ಇತ್ತೈ ಎಂಬವರಿಗೆ - ನನಗೋಸ್ಕರವಾಗಿ ಯೌವನಸ್ಥನಾದ ಅಬ್ಷಾಲೋಮನನ್ನು ಕರುಣಿಸಿರಿ ಎಂದು ಆಜ್ಞಾಪಿಸಿದನು. ದಾವೀದನು ಸೇನಾಪತಿಗಳಿಗೆ ಕೊಟ್ಟ ಈ ಅಪ್ಪಣೆಯು ಸೈನ್ಯದವರಿಗೆಲ್ಲಾ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ರಾಜನು ಯೋವಾಬನಿಗೆ, ಅಬೀಷೈಯನಿಗೆ ಮತ್ತು ಇತ್ತೈಯನಿಗೆ, “ನೀವು ನನಗೋಸ್ಕರವಾಗಿ ಯುವಕನಾದ ಅಬ್ಷಾಲೋಮನಿಗೆ ಕರುಣೆ ತೋರಿಸಿ!” ಎಂದು ಆಜ್ಞಾಪಿಸಿದನು. ಅಬ್ಷಾಲೋಮನ ಬಗ್ಗೆ ತನ್ನ ಸೇನಾಪತಿಗಳಿಗೆ ರಾಜನು ನೀಡಿದ ಆಜ್ಞೆಯು ಜನರೆಲ್ಲರಿಗೂ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 18:5
8 ತಿಳಿವುಗಳ ಹೋಲಿಕೆ  

ಆಗ ಯೇಸು, “ತಂದೆಯೇ, ಇವರನ್ನು ಕ್ಷಮಿಸಿ, ತಾವು ಏನು ಮಾಡುತ್ತಿದ್ದಾರೆಂದು ಅರಿಯರು,” ಎಂದರು. ಸೈನಿಕರಾದರೋ ಯೇಸುವಿನ ಉಡುಪನ್ನು ಚೀಟುಹಾಕಿ, ಹಂಚಿಕೊಂಡರು.


ಒಬ್ಬ ತಂದೆಯು ತಮ್ಮ ಮಕ್ಕಳ ಮೇಲೆ ಅನುಕಂಪಗೊಳ್ಳುವಂತೆ, ಯೆಹೋವ ದೇವರು ತಮಗೆ ಭಯಪಡುವವರ ಮೇಲೆ ಅನುಕಂಪ ತೋರಿಸುವವರಾಗಿದ್ದಾರೆ.


ಆದರೆ ಆ ಮನುಷ್ಯನು ಯೋವಾಬನಿಗೆ, “ನೀನು ನನ್ನ ಕೈಯಲ್ಲಿ ಸಾವಿರ ಬೆಳ್ಳಿ ನಾಣ್ಯಗಳನ್ನು ಕೊಟ್ಟರೂ, ನಾನು ಅರಸನ ಮಗನ ಮೇಲೆ ನನ್ನ ಕೈಚಾಚುವುದಿಲ್ಲ. ಏಕೆಂದರೆ, ‘ಅಬ್ಷಾಲೋಮನೆಂಬ ಯುವಕನೊಡನೆ ಸೌಮ್ಯದಿಂದ ನಡೆದು ಕಾಪಾಡಿರಿ,’ ಎಂದು ಅರಸನು ನಮ್ಮೆಲ್ಲರಿಗೆ ಕೇಳಿಸುವಂತೆ ನಿನಗೂ, ಅಬೀಷೈಯನಿಗೂ, ಇತ್ತೈಗೂ ಸ್ಪಷ್ಟವಾಗಿ ಆಜ್ಞಾಪಿಸಿದ್ದನು.


ಆಗ ಅಬ್ಷಾಲೋಮನೂ, ಇಸ್ರಾಯೇಲಿನ ಸಮಸ್ತ ಮನುಷ್ಯರೂ, “ಅಹೀತೋಫೆಲನ ಆಲೋಚನೆಗಿಂತ ಅರ್ಕಿಯನಾದ ಹೂಷೈಯ ಆಲೋಚನೆ ಒಳ್ಳೆಯದು,” ಎಂದರು. ಏಕೆಂದರೆ ತಾನು ಅಬ್ಷಾಲೋಮನ ಮೇಲೆ ಕೇಡನ್ನು ಬರಮಾಡುವ ಹಾಗೆ ಅಹೀತೋಫೆಲನ ಒಳ್ಳೆಯ ಆಲೋಚನೆಯನ್ನು ವ್ಯರ್ಥಮಾಡುವುದಕ್ಕೆ ಯೆಹೋವ ದೇವರು ಹಾಗೆ ನೇಮಿಸಿದ್ದರು.


ದಾವೀದನು ಅಬೀಷೈಯನಿಗೂ, ತನ್ನ ಸಮಸ್ತ ಸೇವಕರಿಗೂ, “ನನ್ನ ಹೊಟ್ಟೆಯಲ್ಲಿ ಹುಟ್ಟಿದ ನನ್ನ ಮಗನು ನನ್ನ ಪ್ರಾಣವನ್ನು ಹುಡುಕಿದರೆ, ಎಷ್ಟೋ ಅಧಿಕವಾಗಿ ಬೆನ್ಯಾಮೀನನಾದವನು ಈಗ ಏನು ಮಾಡಿಯಾನು? ಅವನನ್ನು ಬಿಟ್ಟುಬಿಡಿರಿ. ಅವನು ದೂಷಿಸಲಿ. ಏಕೆಂದರೆ ಯೆಹೋವ ದೇವರು ಅವನಿಗೆ ಹಾಗೆಯೇ ಹೇಳಿದ್ದಾರೆ.


“ಅರಸನು ಅಬ್ಷಾಲೋಮನಿಗೋಸ್ಕರ ಅತ್ತು ದುಃಖ ಪಡುತ್ತಾ ಇದ್ದಾನೆ,” ಎಂದು ಯೋವಾಬನಿಗೆ ತಿಳಿಸಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು