Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 19:20 - ಕನ್ನಡ ಸಮಕಾಲಿಕ ಅನುವಾದ

20 ಏಕೆಂದರೆ ಪಾಪ ಮಾಡಿದೆನೆಂದು ನಿನ್ನ ಸೇವಕನಾಗಿರುವ ನಾನು ತಿಳಿದಿದ್ದೇನೆ. ಆದ್ದರಿಂದ ಇಗೋ, ನಾನು ಅರಸನಾದ ನನ್ನ ಒಡೆಯನನ್ನು ಎದುರುಗೊಳ್ಳಲು ಯೋಸೇಫ್ಯರಲ್ಲಿ ಎಲ್ಲರಿಗಿಂತ ಮುಂದಾಗಿ ಈ ದಿನ ಬಂದಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಒಡೆಯನೇ, ನಿನ್ನ ಸೇವಕನಾದ ನಾನು ಪಾಪಮಾಡಿದೆನೆಂದು ಒಪ್ಪಿಕೊಳ್ಳುತ್ತೇನೆ. ಆದ್ದರಿಂದಲೆ ನಾನು ಈ ಹೊತ್ತು ಅರಸನನ್ನು ಎದುರುಗೊಳ್ಳುವುದಕ್ಕೆ ಎಲ್ಲಾ ಯೋಸೇಫ್ಯರಲ್ಲಿ ಮೊದಲಿಗನಾಗಿ ಬಂದಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಒಡೆಯರೇ, ತಮ್ಮ ಸೇವಕನಾದ ನಾನು ಪಾಪಮಾಡಿದೆನೆಂದು ಒಪ್ಪಿಕೊಳ್ಳುತ್ತೇನೆ. ಆದುದರಿಂದಲೇ ನಾನು ಈ ದಿನ ಅರಸನನ್ನು ಸ್ವಾಗತಿಸುವುದಕ್ಕೆ ಎಲ್ಲಾ ಜೋಸೇಫ್ಯರಲ್ಲಿ ಮೊದಲಿಗನಾಗಿ ಬಂದಿದ್ದೇನೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಒಡೆಯನೇ, ನಿನ್ನ ಸೇವಕನಾದ ನಾನು ಪಾಪ ಮಾಡಿದೆನೆಂದು ಒಪ್ಪಿಕೊಳ್ಳುತ್ತೇನೆ. ಆದದರಿಂದಲೇ ನಾನು ಈಹೊತ್ತು ಅರಸನನ್ನು ಎದುರುಗೊಳ್ಳುವದಕ್ಕೆ ಎಲ್ಲಾ ಯೋಸೇಫ್ಯರಲ್ಲಿ ಮೊದಲಾಗಿ ಬಂದಿದ್ದೇನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಾನು ಪಾಪಮಾಡಿದ್ದೇನೆಂದು ಒಪ್ಪಿಕೊಳ್ಳುತ್ತೇನೆ. ಆದ ಕಾರಣವೇ, ನನ್ನ ರಾಜನಾದ ಒಡೆಯನೇ, ನಿನ್ನನ್ನು ಭೇಟಿಮಾಡಲು ಬಂದ ಯೋಸೇಫ್ಯರ ಕುಲದಲ್ಲಿ ನಾನೇ ಮೊದಲಿಗನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 19:20
12 ತಿಳಿವುಗಳ ಹೋಲಿಕೆ  

ಅಪರಾಧಗಳನ್ನು ಅರಿಕೆಮಾಡಿ, ನನ್ನ ಮುಖವನ್ನು ಹುಡುಕುವವರೆಗೂ, ನಾನು ತಿರುಗಿಕೊಂಡು ನನ್ನ ಗುಹೆಗೆ ಹೋಗುವೆನು. ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.”


ನಾನು ಎಫ್ರಾಯೀಮನ್ನು ಬಲ್ಲೆನು, ಇಸ್ರಾಯೇಲು ನನಗೆ ಮರೆಯಾದದ್ದಲ್ಲ. ಏಕೆಂದರೆ ಎಫ್ರಾಯೀಮೇ, ನೀನು ಈಗಲೇ ವ್ಯಭಿಚಾರ ಮಾಡಲು ತಿರುಗಿಕೊಂಡಿದ್ದೀ. ಇಸ್ರಾಯೇಲು ಸಹ ಅಪವಿತ್ರವಾಯಿತು.


ಓ, ‘ಲೆಬನೋನಿನಲ್ಲಿ’ ವಾಸಮಾಡುವವಳೇ, ದೇವದಾರುಗಳಲ್ಲಿ ಗೂಡು ಮಾಡಿಕೊಂಡವಳೇ, ನಿನ್ನ ಮೇಲೆ ಬೇನೆಗಳೂ, ಹೆರುವವಳಂತಿರುವ ವೇದನೆಯೂ ಬರುವಾಗ ಎಷ್ಟೋ ದುಃಖಕರವಾಗಿರುವೆ.


ಯಾರೊಬ್ಬಾಮನು ಎಫ್ರಾಯೀಮನ ಬೆಟ್ಟದಲ್ಲಿ ಶೆಕೆಮ್ ಪಟ್ಟಣವನ್ನು ಭದ್ರಪಡಿಸಿ, ಅದರಲ್ಲಿ ವಾಸಿಸಿದನು. ಅಲ್ಲಿಂದ ಹೊರಟುಹೋಗಿ ಪೆನೀಯೇಲ್ ಪಟ್ಟಣವನ್ನು ಭದ್ರಪಡಿಸಿದನು.


ಇಸ್ರಾಯೇಲರು ಯಾರೊಬ್ಬಾಮನು ತಿರುಗಿ ಬಂದಿದ್ದಾನೆಂದು ಕೇಳಿದಾಗ, ಅವರು ಸಭೆಗೆ ಅವನನ್ನು ಕರೆಕಳುಹಿಸಿ, ಸಮಸ್ತ ಇಸ್ರಾಯೇಲಿನ ಮೇಲೆ ಅವನನ್ನು ಅರಸನನ್ನಾಗಿ ಮಾಡಿದರು. ಯೆಹೂದನ ಗೋತ್ರ ಹೊರತಾಗಿ ದಾವೀದನ ಮನೆಯನ್ನು ಹಿಂಬಾಲಿಸುವವರು ಯಾರೂ ಇರಲಿಲ್ಲ.


ಇಸ್ರಾಯೇಲಿನ ಎಲ್ಲಾ ಕುಲಗಳಲ್ಲಿ ಸಮಸ್ತ ಜನರು ತಮ್ಮೊಳಗೆ ಜಗಳ ಮಾಡುತ್ತಾ, “ನಮ್ಮ ಶತ್ರುಗಳ ಕೈಯಿಂದ ನಮ್ಮನ್ನು ವಿಮೋಚನೆ ಮಾಡಿದವನು ಅರಸನೇ, ಫಿಲಿಷ್ಟಿಯರ ಕೈಯಿಂದ ನಮ್ಮನ್ನು ವಿಮೋಚನೆ ಮಾಡಿದವನು ಅರಸನೇ, ಆದರೆ ಈಗ ಅಬ್ಷಾಲೋಮನಿಗೋಸ್ಕರ ದೇಶವನ್ನು ಬಿಟ್ಟು ಓಡಿಹೋಗಿದ್ದಾನೆ.


ಅರಸನಾದ ದಾವೀದನು ಬಹುರೀಮಿನವರೆಗೂ ಬಂದಾಗ, ಸೌಲನ ಗೋತ್ರದವನಾದ ಗೇರನ ಮಗ ಶಿಮ್ಮಿ ಎಂಬ ಹೆಸರುಳ್ಳ ಒಬ್ಬ ಮನುಷ್ಯನು ಅಲ್ಲಿಂದ ಹೊರಟು ದೂಷಿಸುತ್ತಾ ನಡೆದು ಬಂದನು.


ಹೀಗೆ ಅವನು ಅವರನ್ನು ಆ ದಿನದಲ್ಲಿ ಆಶೀರ್ವದಿಸಿ, ಹೀಗೆಂದನು: “ನಿಮ್ಮ ಹೆಸರಿನಲ್ಲಿ ಇಸ್ರಾಯೇಲರು ಈ ಆಶೀರ್ವಾದವನ್ನು ಹೇಳುವರು: ‘ಎಫ್ರಾಯೀಮ್ ಮನಸ್ಸೆಯರ ಹಾಗೆ ದೇವರು ನಿನ್ನನ್ನು ಮಾಡಲಿ.’ ” ಹೀಗೆ ಹೇಳುತ್ತಾ ಯಾಕೋಬನು ಎಫ್ರಾಯೀಮನಿಗೆ ಮನಸ್ಸೆಗಿಂತಲೂ ಉನ್ನತಸ್ಥಾನವನ್ನು ಕೊಟ್ಟನು.


ಆಗ ಇಸ್ರಾಯೇಲನು ತನ್ನ ಬಲಗೈಯನ್ನು ಚಾಚಿ ಚಿಕ್ಕವನಾದ ಎಫ್ರಾಯೀಮನ ತಲೆಯ ಮೇಲೆಯೂ, ತನ್ನ ಎಡಗೈಯನ್ನು ಮನಸ್ಸೆಯ ತಲೆಯ ಮೇಲೆಯೂ ಇಟ್ಟನು. ಮನಸ್ಸೆಯು ಹಿರಿಯವನಾಗಿದ್ದರೂ, ಬೇಕೆಂದೇ ಅವನು ತನ್ನ ಕೈಗಳನ್ನು ಹಾಗೆ ಇಟ್ಟನು.


ಆಗ ಚೆರೂಯಳ ಮಗ ಅಬೀಷೈಯನು ಉತ್ತರವಾಗಿ, “ಯೆಹೋವ ದೇವರ ಅಭಿಷಿಕ್ತನನ್ನು ಶಿಮ್ಮಿಯು ಶಪಿಸಿದ್ದರಿಂದ, ಅದಕ್ಕಾಗಿ ಅವನಿಗೆ ಮರಣದಂಡನೆ ಆಗಬೇಕಲ್ಲವೆ?” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು