Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 19:24 - ಕನ್ನಡ ಸಮಕಾಲಿಕ ಅನುವಾದ

24 ಸೌಲನ ಮೊಮ್ಮಗ ಮೆಫೀಬೋಶೆತನು ಅರಸನನ್ನು ಎದುರುಗೊಳ್ಳಲು ಬಂದನು. ಅರಸನು ಹೋದಂದಿನಿಂದ ಅವನು ಮರಳಿ ಸಮಾಧಾನವಾಗಿ ಬರುವವರೆಗೂ ಅವನು ತನ್ನ ಪಾದಗಳನ್ನು ಕಟ್ಟಿಕೊಳ್ಳಲಿಲ್ಲ, ಗಡ್ಡವನ್ನು ಕತ್ತರಿಸಿರಲಿಲ್ಲ, ಬಟ್ಟೆಯನ್ನು ಒಗೆಸಿಕೊಂಡಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ತರುವಾಯ ಸೌಲನ ಮೊಮ್ಮಗನಾದ ಮೆಫೀಬೋಶೆತನು ಅರಸನನ್ನು ಎದುರುಗೊಳ್ಳುವುದಕ್ಕಾಗಿ ಬಂದನು. ಅರಸನು ಯೆರೂಸಲೇಮನ್ನು ಬಿಟ್ಟಂದಿನಿಂದ ಸುರಕ್ಷಿತವಾಗಿ ಹಿಂದಿರುಗುವ ವರೆಗೂ ಇವನು ತನ್ನ ಕಾಲುಗಳನ್ನು ತೊಳೆದುಕೊಂಡಿರಲಿಲ್ಲ, ಮೀಸೆಯನ್ನು ಕತ್ತರಿಸಿರಲಿಲ್ಲ, ಬಟ್ಟೆಯನ್ನು ಒಗೆಸಿಕೊಂಡಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ತರುವಾಯ ಸೌಲನ ಮೊಮ್ಮಗನಾದ ಮೆಫೀಬೋಶೆತನು ಅರಸನ ದರ್ಶನಕ್ಕೆ ಬಂದನು. ಅರಸನು ಜೆರುಸಲೇಮನ್ನು ಬಿಟ್ಟಂದಿನಿಂದ ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನು ತನ್ನ ಪಾದಗಳನ್ನು ತೊಳೆದುಕೊಂಡಿರಲಿಲ್ಲ; ಮೀಸೆಯನ್ನು ಕತ್ತರಿಸಿರಲಿಲ್ಲ; ಬಟ್ಟೆಗಳನ್ನು ಒಗೆಸಿಕೊಂಡಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ತರುವಾಯ ಸೌಲನ ಮೊಮ್ಮಗನಾದ ಮೆಫೀಬೋಶೆತನು ಅರಸನನ್ನು ಎದುರುಗೊಳ್ಳುವದಕ್ಕೆ ಬಂದನು. ಅರಸನು ಯೆರೂಸಲೇಮನ್ನು ಬಿಟ್ಟಂದಿನಿಂದ ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನು ತನ್ನ ಕಾಲುಗಳನ್ನು ಕಟ್ಟಿಕೊಂಡಿದ್ದಿಲ್ಲ, ಮೀಸೆಯನ್ನು ಕತ್ತರಿಸಿದ್ದಿಲ್ಲ, ಬಟ್ಟೆಗಳನ್ನು ಒಗೆಸಿಕೊಂಡಿದ್ದಿಲ್ಲ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಸೌಲನ ಮೊಮ್ಮಗನಾದ ಮೆಫೀಬೋಶೆತನು ರಾಜನಾದ ದಾವೀದನನ್ನು ನೋಡಲು ಬಂದನು. ರಾಜನು ಜೆರುಸಲೇಮನ್ನು ಬಿಟ್ಟು ಸುರಕ್ಷಿತವಾಗಿ ಮತ್ತೆ ಹಿಂದಿರುಗುವತನಕ ಮೆಫೀಬೋಶೆತನು ತನ್ನ ಪಾದಗಳನ್ನು ಲಕ್ಷಿಸಿರಲಿಲ್ಲ; ಗಡ್ಡವನ್ನು ಬೋಳಿಸಿರಲಿಲ್ಲ ಮತ್ತು ಬಟ್ಟೆಗಳನ್ನು ಒಗೆದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 19:24
12 ತಿಳಿವುಗಳ ಹೋಲಿಕೆ  

ಸೆರೆಯವರ ಸಂಗಡ ನೀವೂ ಜೊತೆಸೆರೆಯವರೆಂಬಂತೆ ಅವರನ್ನು ಜ್ಞಾಪಕಮಾಡಿಕೊಳ್ಳಿರಿ. ಕಷ್ಟ ಅನುಭವಿಸುವವರ ಸಂಗಡ ನೀವು ಸಹ ಕಷ್ಟ ಅನುಭವಿಸುವವರೆಂಬಂತೆ ನೆನೆಸಿರಿ.


ಸಂತೋಷ ಪಡುವವರೊಂದಿಗೆ ಸಂತೋಷಪಡಿರಿ, ಅಳುವವರೊಂದಿಗೆ ಅಳಿರಿ.


“ನೀವು ಉಪವಾಸ ಮಾಡುವಾಗ ಕಪಟಿಗಳಂತೆ ಮುಖ ಸಪ್ಪಗೆ ಮಾಡಿಕೊಳ್ಳಬೇಡಿರಿ, ತಾವು ಉಪವಾಸ ಮಾಡುತ್ತಿದ್ದೇವೆಂದು ಜನರಿಗೆ ತೋರ್ಪಡಿಸಿಕೊಳ್ಳುವುದಕ್ಕಾಗಿ ಅವರು ತಮ್ಮ ಮುಖವನ್ನು ಬಾಡಿಸಿಕೊಂಡಿರುತ್ತಾರೆ. ಅವರು ತಮಗೆ ಬರತಕ್ಕ ಪ್ರತಿಫಲವನ್ನು ಪೂರ್ತಿಯಾಗಿ ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಶೆಕೆಮಿನಿಂದಲೂ ಶೀಲೋವಿನಿಂದಲೂ ಸಮಾರ್ಯದಿಂದಲೂ ಎಂಬತ್ತು ಜನರು ಗಡ್ಡವನ್ನೂ ಕ್ಷೌರ ಮಾಡಿದವರಾಗಿಯೂ ವಸ್ತ್ರಗಳನ್ನು ಹರಿದುಕೊಂಡವರಾಗಿಯೂ ತಮ್ಮನ್ನು ಕೊಯ್ದುಕೊಂಡವರಾಗಿಯೂ ಯೆಹೋವ ದೇವರ ಆಲಯಕ್ಕೆ ತರುವುದಕ್ಕೋಸ್ಕರ ಕಾಣಿಕೆಯನ್ನೂ, ಧೂಪವನ್ನೂ ಕೈಯಲ್ಲಿ ತೆಗೆದುಕೊಂಡು ಬಂದರು.


ದೀಬೋನ್ ಊರಿನವರು ಅಳುವುದಕ್ಕಾಗಿ ಎತ್ತರವಾದ ಪೂಜಾಸ್ಥಳಕ್ಕೆ ಹೋಗಿದ್ದಾರೆ; ನೆಬೋ ಹಾಗೂ ಮೇದೆಬ ಪಟ್ಟಣದವರಿಗಾಗಿ ಮೋವಾಬ್ಯರು ಗೋಳಾಡುತ್ತಾರೆ. ಪ್ರತಿಯೊಬ್ಬರ ತಲೆಯು ಬೋಳು, ಪ್ರತಿಯೊಬ್ಬರ ಗಡ್ಡವೂ ವಿಕಾರವಾಗಿ ಕತ್ತರಿಸಿದೆ.


ಆಗ ಅರಸನು ಅವನನ್ನು, “ನಿನ್ನ ಯಜಮಾನನ ಪುತ್ರನು ಎಲ್ಲಿದ್ದಾನೆ?” ಎಂದು ಕೇಳಿದನು. ಚೀಬನು ಅರಸನಿಗೆ, “ಅವನು ಯೆರೂಸಲೇಮಿನಲ್ಲಿದ್ದಾನೆ. ಏಕೆಂದರೆ ಈ ಹೊತ್ತು ಇಸ್ರಾಯೇಲಿನ ಮನೆಯವರು ನನ್ನ ತಂದೆಯ ರಾಜ್ಯವನ್ನು ನನಗೆ ತಿರುಗಿ ಕೊಡುವರೆಂದು ಹೇಳಿಕೊಂಡನು,” ಎಂದನು.


ದಾವೀದನು ಅಳುತ್ತಾ ತನ್ನ ತಲೆಯನ್ನು ಮುಚ್ಚಿಕೊಂಡು, ಬರಿಗಾಲಿನಿಂದ ಎಣ್ಣೆಮರಗಳ ಗುಡ್ಡವನ್ನು ಏರಿದನು. ಅವನ ಸಂಗಡ ಇರುವ ಸಮಸ್ತ ಜನರೂ, ತಮ್ಮ ತಮ್ಮ ತಲೆಗಳನ್ನು ಮುಚ್ಚಿಕೊಂಡು ಅಳುತ್ತಾ ಮೇಲಕ್ಕೆ ಏರಿದರು.


ಆಗ ಯೆಹೋವ ದೇವರು ಮೋಶೆಗೆ, “ಜನರ ಬಳಿಗೆ ಹೋಗಿ ಈ ಹೊತ್ತೂ ನಾಳೆಯೂ ಅವರನ್ನು ಶುದ್ಧಮಾಡು. ಅವರು ತಮ್ಮ ವಸ್ತ್ರಗಳನ್ನು ತೊಳೆದುಕೊಳ್ಳಲಿ.


ಆಗ ಚೀಬನು ಅರಸನಿಗೆ, “ಅರಸನಾದ ನನ್ನ ಒಡೆಯನು ತನ್ನ ದಾಸನಿಗೆ ಆಜ್ಞಾಪಿಸಿದ್ದನ್ನೆಲ್ಲಾ ನಿನ್ನ ದಾಸನು ಹಾಗೆಯೇ ಮಾಡುವನು,” ಎಂದನು. ಅರಸನ ಪುತ್ರರಲ್ಲಿ ಒಬ್ಬನ ಹಾಗೆ ಮೆಫೀಬೋಶೆತನು ಭೋಜನ ಮಾಡುವನೆಂದು ಅರಸನು ಹೇಳಿದನು.


ಆಗ ದಾವೀದನು ನೆಲದಿಂದ ಎದ್ದು ಸ್ನಾನಮಾಡಿ, ತೈಲವನ್ನು ಹಚ್ಚಿಕೊಂಡವನಾಗಿ, ಬದಲು ವಸ್ತ್ರಗಳನ್ನು ಧರಿಸಿಕೊಂಡು, ಯೆಹೋವ ದೇವರ ಮನೆಗೆ ಹೋಗಿ, ಅವರನ್ನು ಆರಾಧಿಸಿ ತನ್ನ ಮನೆಗೆ ಬಂದನು. ಅವನ ಕೋರಿಕೆಯ ಮೇರೆಗೆ ಅವರು ಅವನಿಗೆ ಆಹಾರವನ್ನು ಬಡಿಸಿದರು ಮತ್ತು ಅವನು ತಿನ್ನುತ್ತಿದ್ದನು.


“ಇದಲ್ಲದೆ ನಾನು ಮಹನಯಿಮಿಗೆ ಹೋಗುವ ದಿನದಲ್ಲಿ ಘೋರವಾದ ಶಾಪದಿಂದ ನನ್ನನ್ನು ಶಪಿಸಿದ ಬಹುರೀಮಿನ ಬೆನ್ಯಾಮೀನನಾದ ಗೇರನ ಮಗನಾಗಿರುವ ಶಿಮ್ಮಿಯು ನಿನ್ನ ಬಳಿಯಲ್ಲಿದ್ದಾನೆ. ಅವನು ಯೊರ್ದನ್ ನದಿ ಬಳಿಯಲ್ಲಿ ನನ್ನನ್ನು ಎದುರುಗೊಳ್ಳಲು ಬಂದದ್ದರಿಂದ, ‘ನಾನು ನಿನ್ನನ್ನು ಖಡ್ಗದಿಂದ ಕೊಲ್ಲುವುದಿಲ್ಲ,’ ಎಂದು ಯೆಹೋವ ದೇವರ ಹೆಸರಿನಲ್ಲಿ ಆಣೆಯಿಟ್ಟೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು