Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 19:32 - ಕನ್ನಡ ಸಮಕಾಲಿಕ ಅನುವಾದ

32 ಈ ಬರ್ಜಿಲ್ಲೈಯು ಎಂಬತ್ತು ವರ್ಷದವನಾಗಿ ಮಹಾವೃದ್ಧನಾಗಿದ್ದನು. ಅರಸನು ಮಹನಯಿಮಿನಲ್ಲಿ ವಾಸಿಸಿಸುವವರೆಗೂ ಇವನು ಅರಸನನ್ನು ಸಂರಕ್ಷಿಸಿದನು. ಏಕೆಂದರೆ ಅವನು ಬಹು ಸಿರಿವಂತ ಮನುಷ್ಯನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಇವನು ಎಂಬತ್ತು ವರ್ಷದ ಮುದುಕನು. ಇವನು ಬಹು ಶ್ರೀಮಂತನಾಗಿದ್ದುದರಿಂದ ದಾವೀದನು ಮಹನಯಿಮಿನಲ್ಲಿದ್ದ ಕಾಲದಲ್ಲೆಲ್ಲಾ ಅವನ ಜೀವನಕ್ಕೆ ಬೇಕಾದದ್ದನ್ನು ಇವನೇ ಒದಗಿಸಿಕೊಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಇವನು ಎಂಬತ್ತು ವರ್ಷದ ಮುದುಕ. ಇವನು ಬಹು ಶ್ರೀಮಂತನಾಗಿದ್ದುದರಿಂದ ದಾವೀದನು ಮಹನಯಿಮಿನಲ್ಲಿದ್ದ ಅವಧಿಯಲ್ಲಿ ಅವನ ಜೀವನಕ್ಕೆ ಬೇಕಾದುದನ್ನು ಇವನೇ ಒದಗಿಸಿಕೊಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಇವನು ಎಂಭತ್ತು ವರುಷದ ಮುದುಕನು. ಇವನು ಬಹುಶ್ರೀಮಂತನಾಗಿದ್ದದರಿಂದ ದಾವೀದನು ಮಹನಯಿವಿುನಲ್ಲಿದ್ದ ಕಾಲದಲ್ಲೆಲ್ಲಾ ಅವನ ಜೀವನಕ್ಕೆ ಬೇಕಾದದ್ದನ್ನು ಇವನೇ ಒದಗಿಸಿಕೊಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಬರ್ಜಿಲ್ಲೈಯನು ಮುದುಕನಾಗಿದ್ದನು. ಅವನಿಗೆ ಎಂಭತ್ತು ವರ್ಷ ವಯಸ್ಸಾಗಿತ್ತು. ದಾವೀದನು ಮಹನಯಿಮಿನಲ್ಲಿ ವಾಸಿಸುತ್ತಿದ್ದಾಗ ಅವನು ದಾವೀದನಿಗೆ ಆಹಾರವನ್ನೂ ಮತ್ತಿತರ ವಸ್ತುಗಳನ್ನೂ ಕೊಟ್ಟಿದ್ದನು; ಯಾಕೆಂದರೆ ಅವನು ಶ್ರೀಮಂತನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 19:32
14 ತಿಳಿವುಗಳ ಹೋಲಿಕೆ  

ಆದರೆ ಕರ್ಮೆಲಿನಲ್ಲಿ ಸೊತ್ತುಗಳಿರುವ ಮಾವೋನಿನ ಒಬ್ಬ ಮನುಷ್ಯನಿದ್ದನು. ಅವನು ಬಹು ಸಿರಿವಂತನಾಗಿದ್ದನು. ಅವನಿಗೆ ಮೂರು ಸಾವಿರ ಕುರಿಗಳೂ ಸಾವಿರ ಮೇಕೆಗಳೂ ಇದ್ದವು.


ನರೆಗೂದಲು ಉಜ್ವಲ ಕಿರೀಟ, ಅದು ನೀತಿಯ ಜೀವಿತದಲ್ಲಿ ಒದಗುತ್ತದೆ.


ಅವನಿಗೆ ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡಿ ಎತ್ತುಗಳು, ಐನೂರು ಕತ್ತೆಗಳು ಮತ್ತು ಅನೇಕ ಕೆಲಸಗಾರರಿದ್ದರು. ಅವನು ಪೂರ್ವದೇಶದ ಜನರೆಲ್ಲರಲ್ಲಿಯೇ ಹೆಚ್ಚು ಐಶ್ವರ್ಯವುಳ್ಳವನಾಗಿದ್ದನು.


ಮೋಶೆಯು ಸಾಯುವಾಗ ನೂರಿಪ್ಪತ್ತು ವರ್ಷದವನಾಗಿದ್ದನು. ಅವನ ಕಣ್ಣು ಮೊಬ್ಬಾಗಲಿಲ್ಲ. ಅವನ ಬಲ ಕುಂದಿಹೋಗಿರಲಿಲ್ಲ.


ಇದಲ್ಲದೆ ಯಾಕೋಬನು ಈಜಿಪ್ಟ್ ದೇಶದಲ್ಲಿ ಹದಿನೇಳು ವರುಷ ಬದುಕಿದನು. ಯಾಕೋಬನು ಬದುಕಿದ ದಿನಗಳು ನೂರ ನಲ್ವತ್ತೇಳು ವರ್ಷಗಳು.


ಅಬ್ರಹಾಮನು ನೂರೆಪ್ಪತ್ತೈದು ವರ್ಷಗಳವರೆಗೆ ಜೀವಿಸಿದನು.


ನೋಹ ಒಟ್ಟು ಒಂಬೈನೂರ ಐವತ್ತು ವರ್ಷ ಜೀವಿಸಿ, ಸತ್ತನು.


ಮೆತೂಷೆಲಹನಿಗೆ ಒಟ್ಟು ಒಂಬೈನೂರ ಅರವತ್ತೊಂಭತ್ತು ವರ್ಷಗಳಾಗಿದ್ದವು. ತರುವಾಯ ಅವನು ಸತ್ತನು.


ಯೋಸೇಫನು ನೂರಹತ್ತು ವರ್ಷದವನಾಗಿ ಈಜಿಪ್ಟ್ ದೇಶದಲ್ಲಿ ಸತ್ತನು. ಅವರು ಅವನಿಗೆ ಸುಗಂಧದ್ರವ್ಯವನ್ನು ಹಾಕಿ, ಈಜಿಪ್ಟಿನಲ್ಲಿ ಪೆಟ್ಟಿಗೆಯೊಳಗೆ ಇಟ್ಟರು.


ಆದ್ದರಿಂದ ಅರಸನು ಬರ್ಜಿಲ್ಲೈಗೆ, “ನೀನು ನನ್ನ ಸಂಗಡ ಬಾ, ಯೆರೂಸಲೇಮಿನಲ್ಲಿ ನಿನ್ನನ್ನು ನನ್ನ ಬಳಿಯಲ್ಲಿ ಸಂರಕ್ಷಿಸುವೆನು,” ಎಂದನು.


ಮೆನಹೇಮನು ಈ ಹಣವನ್ನು ಇಸ್ರಾಯೇಲಿನಿಂದ ವಸೂಲಿ ಮಾಡಿದನು. ಪ್ರತಿಯೊಬ್ಬ ಶ್ರೀಮಂತನು ಅಸ್ಸೀರಿಯದ ಅರಸನಿಗೆ ಕೊಡಬೇಕಾದ ಅರ್ಧ ಕಿಲೋಗ್ರಾಂ ಬೆಳ್ಳಿಯನ್ನು ನೀಡಬೇಕಾಗಿತ್ತು. ಆದ್ದರಿಂದ ಅಸ್ಸೀರಿಯದ ಅರಸನು ದೇಶದಲ್ಲಿ ನಿಲ್ಲದೆ ತನ್ನ ಸೈನ್ಯದೊಂದಿಗೆ ಹಿಂದಿರುಗಿ ಹೋದನು.


ಅದೇ ಪ್ರಕಾರ, ಎರಡು ಚಿನ್ನದ ನಾಣ್ಯಗಳನ್ನು ಹೊಂದಿದವನು ಸಹ ಇನ್ನು ಬೇರೆ ಎರಡು ಚಿನ್ನದ ನಾಣ್ಯಗಳನ್ನು ಸಂಪಾದಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು