Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 19:37 - ಕನ್ನಡ ಸಮಕಾಲಿಕ ಅನುವಾದ

37 ಅಪ್ಪಣೆ ಆದರೆ ನಿನ್ನ ಸೇವಕನಾದ ನಾನು ತಿರುಗಿ ಹೋಗಿ, ನನ್ನ ಪಟ್ಟಣದಲ್ಲಿ ನನ್ನ ತಂದೆತಾಯಿಗಳ ಸಮಾಧಿಯ ಬಳಿಯಲ್ಲಿ ಸಾಯುತ್ತೇನೆ. ಆದರೆ ಅರಸನಾದ ನನ್ನ ಒಡೆಯನ ಸಂಗಡ ನಿನ್ನ ಸೇವಕನಾದ ನನ್ನ ಮಗ ಕಿಮ್ಹಾಮನು ಬರುವನು. ನಿನ್ನ ದೃಷ್ಟಿಗೆ ಒಳ್ಳೆಯದಾಗಿರುವುದನ್ನು ಅವನಿಗೆ ಮಾಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ದಯವಿಟ್ಟು ನಿನ್ನ ಸೇವಕನಾದ ನನಗೆ ಹಿಂದಿರುಗಿ ಹೋಗುವುದಕ್ಕೆ ಅಪ್ಪಣೆಯಾಗಲಿ. ನಾನು ನನ್ನ ತಂದೆತಾಯಿಗಳ ಸಮಾಧಿಯಿರುವ ಸ್ವಂತ ಊರಿಗೆ ಹೋಗಿ ಅಲ್ಲೇ ಸಾಯುವೆನು. ಇಗೋ ಇಲ್ಲಿ ನಿನ್ನ ಸೇವಕನಾದ ಕಿಮ್ಹಾಮನಿರುತ್ತಾನೆ. ನನ್ನ ಒಡೆಯನಾದ ಅರಸನು ಇವನನ್ನು ಕರೆದುಕೊಂಡು ಹೋಗಿ ತನ್ನ ಇಷ್ಟವಿದ್ದಂತೆ ಇವನಿಗೆ ದಯೆತೋರಿಸಲಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ದಯವಿಟ್ಟು ನಿಮ್ಮ ಸೇವಕನಾದ ನನಗೆ ಹಿಂದಿರುಗಿ ಹೋಗುವುದಕ್ಕೆ ಅಪ್ಪಣೆಯಾಗಲಿ; ನಾನು ನನ್ನ ತಂದೆತಾಯಿಗಳ ಸಮಾಧಿಯಿರುವ ಸ್ವಂತ ಊರಿಗೆ ಹೋಗಿ ಅಲ್ಲೇ ಸಾಯುವೆನು. ಇಗೋ, ಇಲ್ಲಿ ನಿಮ್ಮ ಸೇವಕನಾದ ಕಿಮ್ಹಾಮನಿರುತ್ತಾನೆ. ನನ್ನ ಒಡೆಯರಾದ ಅರಸರು ಇವನನ್ನು ಕರೆದುಕೊಂಡು ಹೋಗಿ ತಮ್ಮ ಇಷ್ಟವಿದ್ದಂತೆ ಇವನಿಗೆ ದಯೆತೋರಿಸಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ದಯವಿಟ್ಟು ನಿನ್ನ ಸೇವಕನಾದ ನನಗೆ ಹಿಂದಿರುಗಿ ಹೋಗುವದಕ್ಕೆ ಅಪ್ಪಣೆಯಾಗಲಿ; ನಾನು ನನ್ನ ತಂದೆತಾಯಿಗಳ ಸಮಾಧಿಯಿರುವ ಸ್ವಂತ ಊರಿಗೆ ಹೋಗಿ ಅಲ್ಲೇ ಸಾಯುವೆನು. ಇಗೋ ಇಲ್ಲಿ ನಿನ್ನ ಸೇವಕನಾದ ಕಿಮ್ಹಾಮನಿರುತ್ತಾನೆ. ನನ್ನ ಒಡೆಯನಾದ ಅರಸನು ಇವನನ್ನು ಕರಕೊಂಡುಹೋಗಿ ತನ್ನ ಇಷ್ಟವಿದ್ದಂತೆ ಇವನಿಗೆ ದಯೆತೋರಿಸಲಿ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಆದರೆ ದಯವಿಟ್ಟು ನನ್ನನ್ನು ಹಿಂದಿರುಗಲು ಬಿಡು. ನಂತರ ನಾನು ನನ್ನ ಸ್ವಂತ ಸ್ಥಳದಲ್ಲಿ ಸಾಯುತ್ತೇನೆ. ನನ್ನ ತಂದೆತಾಯಿಗಳನ್ನು ಸಮಾಧಿ ಮಾಡಿದ ಸ್ಮಶಾನದಲ್ಲಿಯೇ ನನ್ನನ್ನು ಸಮಾಧಿ ಮಾಡಲಿ. ಆದರೆ ನನ್ನ ಒಡೆಯನಾದ ರಾಜನೇ, ಇಲ್ಲಿರುವ ಕಿಮ್ಹಾಮನು ನಿನ್ನ ಸೇವಕನಾಗಿರುತ್ತಾನೆ; ಅವನು ನಿನ್ನೊಂದಿಗೆ ಬರುತ್ತಾನೆ. ನಿನಗೆ ಇಷ್ಟಬಂದಂತೆ ಅವನಿಗೆ ಮಾಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 19:37
15 ತಿಳಿವುಗಳ ಹೋಲಿಕೆ  

ಈಜಿಪ್ಟಿಗೆ ಹೋಗುವುದಕ್ಕೆ ಬೇತ್ಲೆಹೇಮಿನ ಬಳಿಯಲ್ಲಿರುವ ಗೇರುಥ್ ಕಿಮ್ಹಾಮಿನಲ್ಲಿ ಇಳಿದುಕೊಂಡರು.


“ನೀನು ಗಿಲ್ಯಾದ್ಯನಾದ ಬರ್ಜಿಲ್ಲೈಯನ ಮಕ್ಕಳಿಗೆ ದಯೆತೋರಿಸು. ಅವರು ನಿನ್ನ ಮೇಜಿನಲ್ಲಿ ಊಟಮಾಡುವವರಾಗಿ ನಿನ್ನ ಸಂಗಡ ಇರಲಿ. ಏಕೆಂದರೆ ನಾನು ನಿನ್ನ ಸಹೋದರನಾದ ಅಬ್ಷಾಲೋಮನ ಮುಂದೆ ಓಡಿಹೋದಾಗ ಅವರು ನನ್ನನ್ನು ಉಪಚರಿಸಿದರು.


ಅರಸನು ಗಿಲ್ಗಾಲಿಗೆ ಬಂದನು. ಹಾಗೆಯೇ ಅವನ ಸಂಗಡ ಕಿಮ್ಹಾಮನು ಬಂದನು. ಯೆಹೂದದ ಸೈನಿಕರೆಲ್ಲರೂ, ಇಸ್ರಾಯೇಲಿನ ಅರ್ಧ ಪಾಲು ಸೈನಿಕರೂ ಅರಸನನ್ನು ಕರೆದುಕೊಂಡು ಬಂದರು.


ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರು ನನಗೆ ಸ್ಪಷ್ಟ ಪಡಿಸಿದ ಪ್ರಕಾರ, ಈ ನನ್ನ ದೇಹವೆಂಬ ಗುಡಾರವನ್ನು ತೆಗೆದುಹಾಕುವ ಕಾಲ ಬೇಗನೆ ಬರುತ್ತದೆಂದು ನಾನು ಬಲ್ಲೆನು.


ಏಕೆಂದರೆ ನಾನು ಈಗಲೇ ಪಾನ ಅರ್ಪಣೆಯಾಗಿ ಇದ್ದೇನೆ. ನಾನು ಹೊರಟುಹೋಗಬೇಕಾದ ಸಮಯವು ಹತ್ತಿರ ಬಂದಿದೆ.


ನೀನು ಹಿಂದಿರುಗಿ ಬಂದು, ನೀನು ರೊಟ್ಟಿ ತಿಂದು, ನೀರು ಕುಡಿದಿದ್ದರಿಂದ, ನಿನ್ನ ಹೆಣ ನಿನ್ನ ಪಿತೃಗಳ ಸಮಾಧಿಗೆ ಸೇರುವುದಿಲ್ಲವೆಂದು ಯೆಹೋವ ದೇವರು ಹೇಳುತ್ತಾರೆ,” ಎಂದು ಹೇಳಿದನು.


“ಭೂನಿವಾಸಿಗಳೆಲ್ಲರು ಹೋಗುವ ಮಾರ್ಗವಾಗಿ ಇಂದು ನಾನು ಹೋಗಬೇಕಾಗಿದೆ. ನಿಮ್ಮ ದೇವರಾದ ಯೆಹೋವ ದೇವರು ನಿಮಗೋಸ್ಕರ ಹೇಳಿದ ಎಲ್ಲಾ ಒಳ್ಳೆಯ ವಾಗ್ದಾನಗಳಲ್ಲಿ ಒಂದೂ ತಪ್ಪಲಿಲ್ಲವೆಂದು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ಅರಿತಿದ್ದೀರಿ. ಅವುಗಳಲ್ಲಿ ಒಂದು ಮಾತಾದರೂ ತಪ್ಪದೆ ಅವೆಲ್ಲಾ ನಿಮಗೆ ಸಂಭವಿಸಿದವು.


ಅವನ ಪುತ್ರರು ಅವನನ್ನು ಕಾನಾನ್ ದೇಶಕ್ಕೆ ತೆಗೆದುಕೊಂಡುಹೋಗಿ, ಅಬ್ರಹಾಮನು ಸ್ವಂತ ಸಮಾಧಿಗೋಸ್ಕರ ಹಿತ್ತಿಯನಾದ ಎಫ್ರೋನಿನಿಂದ ಕೊಂಡುಕೊಂಡಿದ್ದ ಮಮ್ರೆಗೆ ಎದುರಾಗಿರುವಂಥ ಮಕ್ಪೇಲ ಹೊಲದ ಗವಿಯಲ್ಲಿ ಹೂಳಿದರು.


ಆಗ ಇಸ್ರಾಯೇಲನು ಯೋಸೇಫನಿಗೆ, “ನಾನು ಸಾಯುತ್ತೇನೆ, ಆದರೆ ದೇವರು ನಿಮ್ಮ ಸಂಗಡವಿದ್ದು, ನಿಮ್ಮನ್ನು ನಿಮ್ಮ ಪಿತೃಗಳ ದೇಶಕ್ಕೆ ಮತ್ತೆ ಸೇರಿಸುವರು.


ನನ್ನ ತಂದೆಯ ಸಂಗಡ ನಾನು ಮಲಗಬೇಕು. ಈಜಿಪ್ಟಿನಿಂದ ನನ್ನನ್ನು ತೆಗೆದುಕೊಂಡುಹೋಗಿ, ಅವರ ಸಮಾಧಿಯ ಸ್ಥಳದಲ್ಲಿ ನನ್ನನ್ನು ಹೂಳಿಡು,” ಎಂದನು. ಅದಕ್ಕವನು, “ನಿನ್ನ ಮಾತಿನ ಪ್ರಕಾರ ನಾನು ಮಾಡುತ್ತೇನೆ,” ಎಂದನು.


ನಿನ್ನ ಸೇವಕನು ಸ್ವಲ್ಪ ದೂರ ಯೊರ್ದನನ್ನು ದಾಟುವವರೆಗೂ ಅವರ ಅರಸನ ಸಂಗಡ ಬರುವನು. ಅದಕ್ಕೆ ಇಂಥಾ ಬಹುಮಾನ ಕೊಡುವುದೇನು?


ಆಗ ಅರಸನು, “ಕಿಮ್ಹಾಮನು ನನ್ನ ಸಂಗಡ ಬರಲಿ; ನಿನ್ನ ದೃಷ್ಟಿಗೆ ಒಳ್ಳೆಯದಾಗಿರುವುದನ್ನು ನಾನು ಅವನಿಗೆ ಮಾಡುವೆನು. ನಿನಗೆ ನನ್ನಿಂದ ಬೇಕಾದದ್ದೆಲ್ಲಾ ಮಾಡುವೆನು,” ಎಂದನು.


ನಾತಾನನ ಮಗ ಅಜರ್ಯನು ಅಧಿಪತಿಗಳ ಮೇಲ್ವಿಚಾರಕನು. ನಾತಾನನ ಮಗ ಜಾಬೂದನು ಯಾಜಕನು ಹಾಗು ಅರಸನ ವೈಯಕ್ತಿಕ ಸಲಹೆಗಾರನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು