Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 19:43 - ಕನ್ನಡ ಸಮಕಾಲಿಕ ಅನುವಾದ

43 ಆದರೆ ಇಸ್ರಾಯೇಲರು ಯೆಹೂದ ಜನರಿಗೆ ಉತ್ತರವಾಗಿ, “ಅರಸನಲ್ಲಿ ನಮಗೆ ಹತ್ತು ಪಾಲು ಉಂಟು. ನಿಮಗಿಂತ ನಮಗೆ ದಾವೀದನ ಬಾಧ್ಯತೆಯು ಅಧಿಕವಾಗಿದೆ. ನಮ್ಮ ಅರಸನನ್ನು ತಿರುಗಿ ಕರೆದುಕೊಂಡು ಬರುವುದರ ವಿಷಯದಲ್ಲಿ ಮೊದಲು ಮಾತನಾಡಿದವರು ನಾವಲ್ಲವೋ? ಹಾಗಾದರೆ ನಮ್ಮನ್ನು ಏಕೆ ಅಲ್ಪರಾಗಿ ಎಣಿಸಿದಿರಿ?” ಎಂದರು. ಆದರೆ ಇಸ್ರಾಯೇಲರ ಮಾತುಗಳಿಗಿಂತ ಯೆಹೂದ ಜನರ ಮಾತುಗಳು ಕಠಿಣವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಆಗ ಇಸ್ರಾಯೇಲರು ಯೆಹೂದ್ಯರಿಗೆ, “ಅರಸನಲ್ಲಿ ನಮಗೆ ಹತ್ತು ಪಾಲು ಉಂಟಲ್ಲಾ, ದಾವೀದನ ವಿಷಯದಲ್ಲೂ ನಮಗೆ ಹೆಚ್ಚು ಹಕ್ಕು ಉಂಟು. ಹೀಗಿರುವುದರಿಂದ ನೀವು ನಮ್ಮನ್ನು ಕಡೆಗಾಣಿಸಿದ್ದೇಕೆ? ನಮ್ಮ ಅರಸನನ್ನು ಕರೆದುಕೊಂಡು ಬರುವ ವಿಷಯದಲ್ಲಿ ಮೊದಲು ಮಾತನಾಡಿದವರು ನಾವಲ್ಲವೋ?” ಎಂದರು. ಇಸ್ರಾಯೇಲರ ಮಾತುಗಳಿಗಿಂತ ಯೆಹೂದ್ಯರ ಮಾತುಗಳು ಕಠಿಣವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಆಗ ಇಸ್ರಯೇಲರು ಯೆಹೂದ್ಯರಿಗೆ, “ಅರಸರಲ್ಲಿ ನಮಗೆ ಹತ್ತುಪಾಲು ಉಂಟಲ್ಲವೆ? ದಾವೀದನ ವಿಷಯದಲ್ಲೂ ನಮಗೆ ಹೆಚ್ಚು ಉಂಟು. ಹೀಗಿರುವುದರಿಂದ ನೀವು ನಮ್ಮನ್ನು ತಿರಸ್ಕರಿಸಿದ್ದೇಕೆ? ನಮ್ಮ ಅರಸರನ್ನು ಕರೆದುಕೊಂಡು ಬರುವ ವಿಷಯದಲ್ಲಿ ಮೊದಲು ಮಾತಾಡಿದವರು ನಾವಲ್ಲವೇ?’ ಎಂದರು. ಇಸ್ರಯೇಲರ ವಾದಕ್ಕಿಂತ ಯೆಹೂದ್ಯರ ವಾದ ಉಗ್ರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಆಗ ಇಸ್ರಾಯೇಲ್ಯರು ಯೆಹೂದ್ಯರಿಗೆ - ಅರಸನಲ್ಲಿ ನಮಗೆ ಹತ್ತುಪಾಲು ಉಂಟಲ್ಲಾ; ದಾವೀದನ ವಿಷಯದಲ್ಲಿಯೂ ನಮಗೆ ಹೆಚ್ಚು ಹಕ್ಕು ಉಂಟು. ಹೀಗಿರುವದರಿಂದ ನೀವು ನಮ್ಮನ್ನು ತಿರಸ್ಕರಿಸಿದ್ದೇಕೆ? ನಮ್ಮ ಅರಸನನ್ನು ಕರಕೊಂಡು ಬರುವ ವಿಷಯದಲ್ಲಿ ಮೊದಲು ಮಾತಾಡಿದವರು ನಾವಲ್ಲವೋ ಅಂದರು. ಇಸ್ರಾಯೇಲ್ಯರ ಮಾತುಗಳಿಗಿಂತ ಯೆಹೂದ್ಯರ ಮಾತುಗಳು ಕಠಿಣವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಇಸ್ರೇಲರು, “ದಾವೀದನಲ್ಲಿ ನಾವು ಹತ್ತುಪಾಲನ್ನು ಹೊಂದಿದ್ದೇವೆ. ಆದ್ದರಿಂದ ದಾವೀದನ ಮೇಲೆ ನಿಮಗಿಂತಲೂ ನಮಗೆ ಹೆಚ್ಚಿನ ಹಕ್ಕಿದೆ. ಆದರೆ ನೀವು ನಮ್ಮನ್ನು ಕಡೆಗಣಿಸಿದ್ದೇಕೆ? ರಾಜನನ್ನು ಹಿಂದಕ್ಕೆ ಕರೆತರಲು ಮಾತಾನಾಡಿದವರಲ್ಲಿ ನಾವೇ ಮೊದಲಿಗರು” ಎಂದು ಉತ್ತರಿಸಿದರು. ಆದರೆ ಯೆಹೂದದ ಜನರು ಇಸ್ರೇಲರಿಗೆ ಕಟುವಾಗಿ ಉತ್ತರಿಸಿದರು. ಯೆಹೂದ ಜನರ ಮಾತುಗಳು ಇಸ್ರೇಲರ ಮಾತುಗಳಿಗಿಂತ ಹೆಚ್ಚು ಕಟುವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 19:43
23 ತಿಳಿವುಗಳ ಹೋಲಿಕೆ  

ವಿಗ್ರಹಾರಾಧನೆ, ಮಾಟ, ಹಗೆತನ, ಜಗಳ, ಹೊಟ್ಟೆಕಿಚ್ಚು, ಸಿಟ್ಟು, ಸ್ವಾರ್ಥತ್ವ, ವಿರೋಧತ್ವ, ಭಿನ್ನತೆ,


ಇಸ್ರಾಯೇಲಿನ ಎಲ್ಲಾ ಗೋತ್ರದವರು ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಬಂದು, “ನಾವು ನಿನ್ನ ಎಲುಬೂ, ನಿನ್ನ ಮಾಂಸವೂ ಆಗಿದ್ದೇವೆ.


ಏಕೆಂದರೆ ಮನುಷ್ಯನ ಕೋಪವು ದೇವರು ಬಯಸುವ ನೀತಿಯ ಜೀವನವನ್ನು ತರುವುದಿಲ್ಲ.


ಸ್ವಾರ್ಥ ಉದ್ದೇಶದಿಂದಾಗಲಿ, ವ್ಯರ್ಥ ಹೆಮ್ಮೆಯಿಂದಾಗಲಿ ಯಾವುದನ್ನೂ ಮಾಡದೆ ಪ್ರತಿಯೊಬ್ಬನೂ ದೀನತ್ವದಿಂದ ಮತ್ತೊಬ್ಬನನ್ನು ತನಗಿಂತಲೂ ಶ್ರೇಷ್ಠನೆಂದು ಎಣಿಸಲಿ.


ನಾವು ಅಹಂಕಾರಿಗಳಾಗಿರಬಾರದು. ಒಬ್ಬರನ್ನೊಬ್ಬರು ಕೆಣಕದೆಯೂ ಒಬ್ಬರ ಮೇಲೊಬ್ಬರು ಮತ್ಸರಗೊಳ್ಳದೆಯೂ ಇರೋಣ.


ಆದರೆ ನೀವು ಒಬ್ಬರನ್ನೊಬ್ಬರು ಕಚ್ಚಿ ನುಂಗುವವರಾದರೆ ಒಬ್ಬರಿಂದೊಬ್ಬರು ನಾಶವಾದೀರಿ, ಎಚ್ಚರಿಕೆ.


ಕೆಟ್ಟದ್ದಕ್ಕೆ ಸೋಲಬೇಡಿರಿ, ಕೆಟ್ಟದ್ದನ್ನು ಒಳ್ಳೆಯದರಿಂದ ಜಯಿಸಿರಿ.


ಬಲವಾದ ಪಟ್ಟಣವನ್ನು ಗೆಲ್ಲುವುದಕ್ಕಿಂತ ಬೇಸರಗೊಂಡ ಸಹೋದರನನ್ನು ಗೆಲ್ಲುವುದು ಕಷ್ಟಕರ; ಅವರ ಕಲಹಗಳು ಕೋಟೆಯ ಬಾಗಿಲಿಗೆ ಅಗುಳಿಗಳಂತೆ ಇವೆ.


ಕಲಹದ ಪ್ರಾರಂಭವು ಆಣೆಕಟ್ಟು ಒಡೆದಂತೆ ಇರುವುದು; ಆದಕಾರಣ ಆ ಕಲಹಕ್ಕೆ ಕೈಹಾಕುವುದಕ್ಕಿಂತ ಮುಂಚೆ ಅದನ್ನು ಬಿಟ್ಟುಬಿಡು.


ಮೃದುವಾದ ಉತ್ತರವು ಕೋಪವನ್ನು ತಿರುಗಿಸಿಬಿಡುತ್ತದೆ. ಆದರೆ ಬಿರುಸಾದ ಮಾತುಗಳು ಕೋಪವನ್ನು ಎಬ್ಬಿಸುತ್ತದೆ.


ಎಲ್ಲಿ ಗರ್ವವೋ ಅಲ್ಲಿ ಕಲಹ; ಆದರೆ ಒಳ್ಳೆಯ ಸಲಹೆಯನ್ನು ತೆಗೆದುಕೊಳ್ಳುವವರಲ್ಲಿ ಜ್ಞಾನವು ಕಂಡುಬರುತ್ತದೆ.


ಅರಸನು ಅವರ ಮಾತನ್ನು ಕೇಳದೆ ಹೋದನೆಂದು ಸಮಸ್ತ ಇಸ್ರಾಯೇಲರು ತಿಳಿದಾಗ, ಜನರು ಅರಸನಿಗೆ ಉತ್ತರವಾಗಿ, “ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಏನು? ಇಸ್ರಾಯೇಲರೇ, ನಿಮ್ಮ ಡೇರೆಗಳಿಗೆ ಹೋಗಿರಿ. ದಾವೀದನೇ, ಈಗ ನಿನ್ನ ಕುಟುಂಬವನ್ನು ನೀನೇ ನೋಡಿಕೋ,” ಎಂದು ಹೇಳಿ, ಇಸ್ರಾಯೇಲರು ತಮ್ಮ ತಮ್ಮ ಡೇರೆಗಳಿಗೆ ಹೋದರು.


ಆದ್ದರಿಂದ ದಾವೀದನು ಅಬೀಷೈಯನಿಗೆ, “ಈಗ ಅಬ್ಷಾಲೋಮನಿಗಿಂತ ಬಿಕ್ರಿಯ ಮಗ ಶೆಬನು ನಮಗೆ ಹೆಚ್ಚಿನ ಕೇಡನ್ನು ಮಾಡುವನು. ಅವನು ತನಗೆ ಗಡಿ ಪಟ್ಟಣಗಳನ್ನು ಸಂಪಾದಿಸಿಕೊಂಡು, ನಮ್ಮಿಂದ ತಪ್ಪಿಸಿಕೊಳ್ಳದೆ ಹಾಗೆ ನೀನು ನಿನ್ನ ಯಜಮಾನನ ಸೇವಕರನ್ನು ತೆಗೆದುಕೊಂಡು ಹೊರಟು ಅವನನ್ನು ಹಿಂದಟ್ಟು,” ಎಂದನು.


ಬೆನ್ಯಾಮೀನ್ಯನಾದ ಬಿಕ್ರಿಯ ಮಗ ಶೆಬನೆಂಬ ಹೆಸರುಳ್ಳ ಒಬ್ಬ ನೀಚ ವ್ಯಕ್ತಿ ಅಲ್ಲಿದ್ದನು. ಅವನು ತುತೂರಿಯನ್ನು ಊದಿ ಹೀಗಂದನು, “ನಮಗೆ ದಾವೀದನಲ್ಲಿ ಪಾಲಿಲ್ಲ, ಇಷಯನ ಮಗನ ಬಳಿಯಲ್ಲಿ ನಮಗೆ ಬಾಧ್ಯತೆಯೂ ಇಲ್ಲ. ಇಸ್ರಾಯೇಲರೇ, ನಿಮ್ಮ ನಿಮ್ಮ ಗುಡಾರಗಳಿಗೆ ಹೋಗಿರಿ.”


ಅರಸನು ಸಕಲ ಯೆಹೂದ ಜನರ ಹೃದಯವನ್ನು ಸಂಪೂರ್ಣವಾಗಿ ಗೆದ್ದುಕೊಂಡದ್ದರಿಂದ, ಅವರು ಅರಸನಿಗೆ, “ನೀನೂ, ನಿನ್ನ ಸಮಸ್ತ ಸೇವಕರೂ ತಿರುಗಿ ಬನ್ನಿರಿ,” ಎಂದು ಹೇಳಿ ಕಳುಹಿಸಿದರು.


ಇಸ್ರಾಯೇಲಿನ ಎಲ್ಲಾ ಕುಲಗಳಲ್ಲಿ ಸಮಸ್ತ ಜನರು ತಮ್ಮೊಳಗೆ ಜಗಳ ಮಾಡುತ್ತಾ, “ನಮ್ಮ ಶತ್ರುಗಳ ಕೈಯಿಂದ ನಮ್ಮನ್ನು ವಿಮೋಚನೆ ಮಾಡಿದವನು ಅರಸನೇ, ಫಿಲಿಷ್ಟಿಯರ ಕೈಯಿಂದ ನಮ್ಮನ್ನು ವಿಮೋಚನೆ ಮಾಡಿದವನು ಅರಸನೇ, ಆದರೆ ಈಗ ಅಬ್ಷಾಲೋಮನಿಗೋಸ್ಕರ ದೇಶವನ್ನು ಬಿಟ್ಟು ಓಡಿಹೋಗಿದ್ದಾನೆ.


ದೇವರು ಅಬೀಮೆಲೆಕ ಮತ್ತು ಶೆಕೆಮಿನ ಹಿರಿಯರ ನಡುವೆ ಒಂದು ದುರಾತ್ಮನನ್ನು ಕಳುಹಿಸಿದರು. ಆಗ ಶೆಕೆಮಿನವರು ಅಬೀಮೆಲೆಕನಿಗೆ ದ್ರೋಹಮಾಡಿದರು.


ಆಗ ಎಫ್ರಾಯೀಮ್ಯರು, “ನೀನು ಮಿದ್ಯಾನ್ಯರ ಮೇಲೆ ಯುದ್ಧಮಾಡುವುದಕ್ಕೆ ಹೋಗುವಾಗ, ನಮ್ಮನ್ನು ಕರೆಯದೆ ಹೋದದ್ದೇನು?” ಎಂದು ಹೇಳಿ ಅವನ ಸಂಗಡ ತೀಕ್ಷ್ಣವಾಗಿ ವಿವಾದ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು