Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 19:5 - ಕನ್ನಡ ಸಮಕಾಲಿಕ ಅನುವಾದ

5 ಆಗ ಯೋವಾಬನು ಮನೆಯೊಳಗೆ ಅರಸನ ಬಳಿಗೆ ಬಂದು, ಅವನಿಗೆ, “ನಿನ್ನ ಪ್ರಾಣವನ್ನೂ, ನಿನ್ನ ಪುತ್ರಪುತ್ರಿಯರ ಪ್ರಾಣಗಳನ್ನೂ, ನಿನ್ನ ಹೆಂಡತಿಯರ ಮತ್ತು ಉಪಪತ್ನಿಯರ ಪ್ರಾಣಗಳನ್ನೂ ರಕ್ಷಿಸಿದ ನಿನ್ನ ಸೇವಕರನ್ನು ಈ ಹೊತ್ತು ನಾಚಿಕೆಪಡಿಸಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೋವಾಬನು ಅರಸನ ಬಳಿಗೆ ಹೋಗಿ ಅವನಿಗೆ, “ನಿನ್ನನ್ನೂ, ನಿನ್ನ ಗಂಡು ಹೆಣ್ಣು ಮಕ್ಕಳನ್ನೂ, ಹೆಂಡತಿಯರನ್ನೂ, ಉಪಪತ್ನಿಯರನ್ನೂ ರಕ್ಷಿಸಿದಂಥ ನಿನ್ನ ಸೈನಿಕರನ್ನು ಈ ಹೊತ್ತು ಅಪಮಾನಪಡಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಯೋವಾಬನು ಅರಸನ ಬಳಿಗೆ ಹೋಗಿ, “ನಿಮ್ಮನ್ನೂ ನಿಮ್ಮ ಗಂಡುಹೆಣ್ಣು ಮಕ್ಕಳನ್ನೂ ಹೆಂಡತಿಯರನ್ನೂ ಉಪಪತ್ನಿಯರನ್ನೂ ರಕ್ಷಿಸಿದಂಥ ನಿಮ್ಮ ಸೇವಕರನ್ನು ಈ ದಿನ ಅಪಮಾನಪಡಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೋವಾಬನು ಅರಸನ ಬಳಿಗೆ ಹೋಗಿ ಅವನಿಗೆ - ನಿನ್ನನ್ನೂ ನಿನ್ನ ಗಂಡುಹೆಣ್ಣು ಮಕ್ಕಳನ್ನೂ ಹೆಂಡತಿಯರನ್ನೂ ಉಪಪತ್ನಿಯರನ್ನೂ ರಕ್ಷಿಸಿದಂಥ ನಿನ್ನ ಸೇವಕರನ್ನು ಈಹೊತ್ತು ಅಪಮಾನಪಡಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೋವಾಬನು ರಾಜನ ಮನೆಗೆ ಬಂದನು. ಅವನು ರಾಜನಿಗೆ, “ನೀನು ನಿನ್ನ ಎಲ್ಲಾ ಸೈನಿಕರನ್ನು ಅವಮಾನ ಮಾಡುತ್ತಿರುವೆ! ನಿನ್ನ ಸೈನಿಕರು ಇಂದು ನಿನ್ನ ಜೀವವನ್ನು ರಕ್ಷಿಸಿದರು. ಅವರು ನಿನ್ನ ಗಂಡುಮಕ್ಕಳ, ಹೆಣ್ಣುಮಕ್ಕಳ, ಪತ್ನಿಯರ ಮತ್ತು ದಾಸಿಯರ ಜೀವಗಳನ್ನು ರಕ್ಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 19:5
9 ತಿಳಿವುಗಳ ಹೋಲಿಕೆ  

ರಕ್ಷಣೆಯು ಯೆಹೋವ ದೇವರಿಂದಲೇ ಬರುವುದು. ನಿಮ್ಮ ಜನರ ಮೇಲೆ ನಿಮ್ಮ ಆಶೀರ್ವಾದವಿರಲಿ.


ಆದ್ದರಿಂದ ನೀವು ಬಾಧಿಸುವ ವಿರೋಧಿಗಳ ಕೈಗೆ ಅವರನ್ನು ಒಪ್ಪಿಸಿದಿರಿ. ಆದರೆ ತಮ್ಮ ಇಕ್ಕಟ್ಟಿನ ಕಾಲದಲ್ಲಿ ಅವರು ನಿಮಗೆ ಮೊರೆಯಿಟ್ಟಾಗ, ನೀವು ಪರಲೋಕದಿಂದ ಕೇಳಿ, ನಿಮ್ಮ ಮಹಾ ಕರುಣೆಯ ಪ್ರಕಾರ ಅವರ ವೈರಿಗಳ ಕೈಯಿಂದ ರಕ್ಷಿಸುವುದಕ್ಕೆ ರಕ್ಷಕರನ್ನು ಅವರಿಗೆ ಕಳುಹಿಸಿದಿರಿ.


ನಾನು ಅರಸನಾಗಿ ಅಭಿಷೇಕ ಹೊಂದಿದ್ದರೂ ಇಂದಿಗೆ ದುರ್ಬಲನಾಗಿದ್ದೇನೆ. ಚೆರೂಯಳ ಪುತ್ರರಾದ ಇವರು ನನ್ನ ಹತೋಟಿಗೆ ಬಾರದವರು. ಕೆಟ್ಟತನ ಮಾಡುವವನಿಗೆ ಯೆಹೋವ ದೇವರು ಅವನ ಕೆಟ್ಟತನಕ್ಕೆ ಸರಿಯಾಗಿ ಪ್ರತಿಫಲ ಕೊಡುವರು,” ಎಂದನು.


ಆದರೆ ಅರಸನು ಮೋರೆಯನ್ನು ಮುಚ್ಚಿಕೊಂಡು, ಮಹಾಶಬ್ದವಾಗಿ, “ನನ್ನ ಮಗ ಅಬ್ಷಾಲೋಮನೇ, ಅಬ್ಷಾಲೋಮನೇ ನನ್ನ ಮಗನೇ, ನನ್ನ ಮಗನೇ,” ಎಂದು ಕೂಗುತ್ತಿದ್ದನು.


ನೀನು ನಿನ್ನ ಹಗೆಯವರನ್ನು ಪ್ರೀತಿಮಾಡಿ, ನಿನ್ನನ್ನು ಪ್ರೀತಿಸುವವರನ್ನು ಹಗೆ ಮಾಡಿದ್ದರಿಂದ ಸೇನಾಧಿಪತಿಗಳನ್ನೂ, ಸೈನಿಕರನ್ನೂ ನಿನಗೆ ಏನೂ ಅಲ್ಲವೆಂದು ಈಗ ತಿಳಿಯಮಾಡಿದಿ. ಈ ಹೊತ್ತು ನಾವೆಲ್ಲರೂ ಸತ್ತು ಅಬ್ಷಾಲೋಮನು ಬದುಕಿದ್ದರೆ, ನಿನಗೆ ಸಂತೋಷವಾಗುತ್ತಿತ್ತು ಎಂದು ನನಗೆ ಅನಿಸುತ್ತದೆ.


ಇದಲ್ಲದೆ ನೀವು ಅಮಾಸನಿಗೆ, ‘ನೀನು ನನ್ನ ರಕ್ತವೂ, ನನ್ನ ಮಾಂಸವೂ ಅಲ್ಲವೋ? ನೀನು ಯೋವಾಬನಿಗೆ ಬದಲಾಗಿ ಯಾವಾಗಲೂ ನನ್ನ ಮುಂದೆ ಸೈನ್ಯದ ಪ್ರಧಾನನಾಗಿರದೆ ಹೋದರೆ, ದೇವರು ನನಗೆ ಏನಾದರೂ ಮಾಡಲಿ,’ ಎಂದು ಹೇಳಿರಿ,” ಎಂದನು.


ದಾವೀದನು ಅಳುತ್ತಾ ತನ್ನ ತಲೆಯನ್ನು ಮುಚ್ಚಿಕೊಂಡು, ಬರಿಗಾಲಿನಿಂದ ಎಣ್ಣೆಮರಗಳ ಗುಡ್ಡವನ್ನು ಏರಿದನು. ಅವನ ಸಂಗಡ ಇರುವ ಸಮಸ್ತ ಜನರೂ, ತಮ್ಮ ತಮ್ಮ ತಲೆಗಳನ್ನು ಮುಚ್ಚಿಕೊಂಡು ಅಳುತ್ತಾ ಮೇಲಕ್ಕೆ ಏರಿದರು.


ಅವರು ಅಬ್ಷಾಲೋಮನನ್ನು ತೆಗೆದುಕೊಂಡು, ಅಡವಿಯಲ್ಲಿರುವ ಒಂದು ದೊಡ್ಡ ಗುಂಡಿಯಲ್ಲಿ ಹಾಕಿ, ಅವನ ಮೇಲೆ ದೊಡ್ಡ ಕಲ್ಲಿನ ಕುಪ್ಪೆಯನ್ನು ಹಾಕಿದರು. ಆದರೆ ಇಸ್ರಾಯೇಲರೆಲ್ಲರೂ ತಮ್ಮ ಗುಡಾರಗಳಿಗೆ ಓಡಿಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು