Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 2:1 - ಕನ್ನಡ ಸಮಕಾಲಿಕ ಅನುವಾದ

1 ಇದಾದ ಮೇಲೆ ದಾವೀದನು ಯೆಹೋವ ದೇವರನ್ನು, “ಯೆಹೂದದ ಪಟ್ಟಣಗಳಲ್ಲಿ ಯಾವುದಾದರೊಂದು ಪಟ್ಟಣಕ್ಕೆ ಹೋಗಬಹುದೋ?” ಎಂದು ಕೇಳಿದನು. ಯೆಹೋವ ದೇವರು ಅವನಿಗೆ, “ಹೋಗು,” ಎಂದರು. ಅದಕ್ಕವನು, “ನಾನು ಎಲ್ಲಿಗೆ ಹೋಗಲಿ?” ಎಂದನು. ಅದಕ್ಕೆ ದೇವರು, “ಹೆಬ್ರೋನಿಗೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅನಂತರ ದಾವೀದನು ಯೆಹೋವನನ್ನು, “ನಾನು ಯೆಹೂದ ದೇಶದ ಯಾವುದಾದರು ಒಂದು ಪಟ್ಟಣಕ್ಕೆ ಹೋಗಬಹುದೋ?” ಎಂದು ಕೇಳಲು ಆತನು ಹೋಗಬಹುದು ಅಂದನು. ಅವನು ತಿರುಗಿ, “ಯಾವ ಊರಿಗೆ ಹೋಗಲಿ?” ಎಂದು ಕೇಳಿದ್ದಕ್ಕೆ ಹೆಬ್ರೋನಿಗೆ ಹೋಗು ಎಂದು ಉತ್ತರ ಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅನಂತರ ದಾವೀದನು ಸರ್ವೇಶ್ವರನನ್ನು, “ನಾನು ಜುದೇಯ ನಾಡಿನ ಯಾವುದಾದರೊಂದು ಪಟ್ಟಣಕ್ಕೆ ಹೋಗಬಹುದೇ?” ಎಂದು ಕೇಳಿದನು. “ಹೋಗಬಹುದು” ಎಂದರು ಸರ್ವೇಶ್ವರ. ಅವನು ಪುನಃ, “ಯಾವ ಊರಿಗೆ ಹೋಗಲಿ?” ಎಂದು ಕೇಳಿದ್ದಕ್ಕೆ, “ಹೆಬ್ರೋನಿಗೆ ಹೋಗು,” ಎಂಬ ಉತ್ತರ ಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅನಂತರ ದಾವೀದನು ಯೆಹೋವನನ್ನು - ನಾನು ಯೆಹೂದದೇಶದ ಯಾವದಾದರೊಂದು ಪಟ್ಟಣಕ್ಕೆ ಹೋಗಬಹುದೋ ಎಂದು ಕೇಳಲು ಆತನು - ಹೋಗಬಹುದು ಅಂದನು. ಅವನು ತಿರಿಗಿ - ಯಾವ ಊರಿಗೆ ಹೋಗಲಿ ಎಂದು ಕೇಳಿದ್ದಕ್ಕೆ - ಹೆಬ್ರೋನಿಗೆ ಹೋಗು ಎಂಬ ಉತ್ತರ ಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ತರುವಾಯ ದಾವೀದನು ಯೆಹೋವನಲ್ಲಿ ಪ್ರಾರ್ಥಿಸಿ, “ಯೆಹೂದದ ಯಾವುದಾದರೂ ನಗರಕ್ಕೆ ನಾನು ಹೋಗಬಹುದೇ?” ಎಂದು ಕೇಳಿದನು. “ಹೋಗು” ಎಂಬುದಾಗಿ ಯೆಹೋವನು ಹೇಳಿದನು. “ನಾನು ಎಲ್ಲಿಗೆ ಹೋಗಲಿ?” ಎಂದು ದಾವೀದನು ಕೇಳಿದನು. “ಹೆಬ್ರೋನಿಗೆ ಹೋಗು” ಎಂದು ಯೆಹೋವನು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 2:1
26 ತಿಳಿವುಗಳ ಹೋಲಿಕೆ  

ಹೆಬ್ರೋನಿನವರು ಮತ್ತು ದಾವೀದನೂ ಅವನ ಜನರೂ ಸಂಚರಿಸುತ್ತಿದ್ದ ಇತರ ಎಲ್ಲಾ ಸ್ಥಳದವರಿಗೂ ಬಹುಮಾನಗಳನ್ನು ಕಳುಹಿಸಿಕೊಟ್ಟನು.


ಆದ್ದರಿಂದ ದಾವೀದನು, “ನಾನು ಈ ಫಿಲಿಷ್ಟಿಯರನ್ನು ಹೊಡೆಯಲು ಹೋಗಲೋ?” ಎಂದು ಯೆಹೋವ ದೇವರನ್ನು ಕೇಳಿದನು. ಅದಕ್ಕೆ ಯೆಹೋವ ದೇವರು, “ನೀನು ಹೋಗಿ ಫಿಲಿಷ್ಟಿಯರನ್ನು ಹೊಡೆದು ಕೆಯೀಲಾ ನಗರವನ್ನು ರಕ್ಷಿಸು,” ಎಂದರು.


ದಾವೀದನು ತಿರುಗಿ ಯೆಹೋವ ದೇವರನ್ನು ಕೇಳಿದನು. ಅದಕ್ಕೆ ಯೆಹೋವ ದೇವರು ಉತ್ತರವಾಗಿ, “ನೀನೆದ್ದು ಕೆಯೀಲಾ ನಗರಕ್ಕೆ ಹೋಗು; ಏಕೆಂದರೆ ನಾನು ಫಿಲಿಷ್ಟಿಯರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನು,” ಎಂದರು.


ಯಾಕೋಬನು ಅವರನ್ನು ನೋಡಿದಾಗ, “ಇದು ದೇವರ ಸೈನ್ಯ,” ಎಂದು ಹೇಳಿ, ಆ ಸ್ಥಳಕ್ಕೆ ಮಹನಯಿಮ್ ಎಂದು ಹೆಸರಿಟ್ಟನು.


“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಇನ್ನೊಂದು ವಿಷಯದಲ್ಲಿ, ಇಸ್ರಾಯೇಲರ ಮತ್ತೊಂದು ಕೋರಿಕೆಯನ್ನು ಆಲಿಸಿ ನೆರವೇರಿಸುವೆನು. ನಾನು ಅವರನ್ನು ಮನುಷ್ಯರಲ್ಲಿ ಮಂದೆಯಂತೆ ಹೆಚ್ಚಿಸುವೆನು.


ಬೆಳಿಗ್ಗೆ ನಿಮ್ಮ ಒಡಂಬಡಿಕೆಯ ಪ್ರೀತಿಯು ನನಗೆ ವಾಕ್ಯವನ್ನು ತರಲಿ; ಏಕೆಂದರೆ ನಿಮ್ಮಲ್ಲಿ ಭರವಸವಿಟ್ಟಿದ್ದೇನೆ; ನಾನು ಹೋಗಬೇಕಾದ ಮಾರ್ಗವನ್ನು ನನಗೆ ತಿಳಿಯಪಡಿಸಿರಿ, ಏಕೆಂದರೆ ನನ್ನ ಪ್ರಾಣವನ್ನು ನಿಮಗೇ ಒಪ್ಪಿಸಿದ್ದೇನೆ.


ಯೆಹೋವ ದೇವರ ಮನೆಯಲ್ಲಿ ನಾನು ಜೀವಮಾನವೆಲ್ಲಾ ವಾಸಮಾಡುತ್ತಾ, ಅದರ ದಯೆಯನ್ನು ನೋಡುತ್ತಾ ಅವರ ಮಂದಿರದಲ್ಲಿ ಅವರನ್ನೇ ಧ್ಯಾನಿಸುತ್ತಾ ಇರಬೇಕೆಂಬ ಒಂದೇ ವರವನ್ನು ಯೆಹೋವ ದೇವರಿಂದ ಕೇಳಿಕೊಂಡು ಅದನ್ನೇ ಹುಡುಕುತ್ತಿರುವೆನು.


ಯೆಹೋವ ದೇವರ ಮನೆಯ ಸೇವೆಗೋಸ್ಕರ ಬಂಗಾರವನ್ನೂ 17 0 ಮೆಟ್ರಿಕ್ ಟನ್, ಮತ್ತು 10,000 ಬಂಗಾರದ ನಾಣ್ಯಗಳನ್ನೂ 34 5 ಮೆಟ್ರಿಕ್ ಟನ್ ಬೆಳ್ಳಿಯನ್ನೂ, 61 0 ಮೆಟ್ರಿಕ್ ಟನ್ ಕಂಚನ್ನೂ, 34 50 ಮೆಟ್ರಿಕ್ ಟನ್ ಕಬ್ಬಿಣವನ್ನೂ ಕೊಟ್ಟರು.


ದಾವೀದನು ಇಸ್ರಾಯೇಲಿನ ಮೇಲೆ ಆಳಿದ ದಿವಸಗಳು ನಾಲ್ವತ್ತು ವರ್ಷಗಳು. ಏಳು ವರ್ಷ ಹೆಬ್ರೋನಿನಲ್ಲಿ ಆಳಿದನು. ಮೂವತ್ತಮೂರು ವರ್ಷ ಯೆರೂಸಲೇಮಿನಲ್ಲಿ ಆಳಿದನು.


ನಾಲ್ಕು ವರ್ಷಗಳಾದ ತರುವಾಯ ಅಬ್ಷಾಲೋಮನು ಅರಸನಿಗೆ, “ನಾನು ಯೆಹೋವ ದೇವರಿಗೆ ಮಾಡಿಕೊಂಡಿದ್ದ ನನ್ನ ಹರಕೆಯನ್ನು ಹೆಬ್ರೋನಿನಲ್ಲಿ ಸಲ್ಲಿಸಲು ಹೋಗುವುದಕ್ಕೆ ಅಪ್ಪಣೆಕೊಡಬೇಕು.


ಆದ್ದರಿಂದ ದಾವೀದನು ಇದರ ಬಗ್ಗೆ ಯೆಹೋವ ದೇವರನ್ನು ವಿಚಾರಿಸಿದನು. ಆಗ ದೇವರು ಅವನಿಗೆ, “ನೀನು ಅವರ ಮುಂದೆ ಹೋಗದೆ, ಅವರ ಹಿಂದಿನಿಂದ ಸುತ್ತಿಕೊಂಡು ಹೋಗಿ, ಬಾಕಾಮರಗಳಿಗೆ ಎದುರಾಗಿ ಅವರ ಮೇಲೆ ದಾಳಿಮಾಡು.


ಅದಕ್ಕೆ ದಾವೀದನು, “ನಾನು ಫಿಲಿಷ್ಟಿಯರ ಮೇಲೆ ಯುದ್ಧಕ್ಕೆ ಹೋಗಬಹುದೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವಿರೋ?” ಎಂದು ಯೆಹೋವ ದೇವರನ್ನು ವಿಚಾರಿಸಿದನು. ಆಗ ಯೆಹೋವ ದೇವರು ಅವನಿಗೆ, “ಹೋಗು, ಖಂಡಿತವಾಗಿ ನಾನು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನು,” ಎಂದು ಹೇಳಿದರು.


ದಾವೀದನು ಹೆಬ್ರೋನಿನಲ್ಲಿ ಯೆಹೂದ ಗೋತ್ರದವರ ಮೇಲೆ ಅರಸನಾಗಿದ್ದ ಕಾಲವು ಏಳು ವರ್ಷ ಆರು ತಿಂಗಳು.


ಯೆಹೋಶುವನು ಮರಣ ಹೊಂದಿದ ಬಳಿಕ ಇಸ್ರಾಯೇಲರು, “ಕಾನಾನ್ಯರೊಡನೆ ಯುದ್ಧಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು?” ಎಂದು ಯೆಹೋವ ದೇವರನ್ನು ಕೇಳಿದರು.


ಅವನು ಯಾಜಕನಾದ ಎಲಿಯಾಜರನ ಮುಂದೆ ನಿಲ್ಲಬೇಕು. ಎಲಿಯಾಜರನು ಯೆಹೋವ ದೇವರ ಮುಂದೆ ಊರೀಮ್ ನ್ಯಾಯದ ಪ್ರಕಾರ ಅವನಿಗೋಸ್ಕರ ವಿಚಾರಣೆಯನ್ನು ಮಾಡಬೇಕು. ಯೆಹೋಶುವನ ಆಜ್ಞೆಯ ಪ್ರಕಾರವೇ ಅವನು ಮತ್ತು ಅವನ ಸಂಗಡ ಇರುವ ಸಮಸ್ತ ಇಸ್ರಾಯೇಲರ ಸಮೂಹವೂ ಹೊರಡಬೇಕು ಹಾಗು ಹಿಂದಿರುಗಬೇಕು,” ಎಂದರು.


ಅವರು ನೆಗೆವನ್ನು ದಾಟಿ ಹೆಬ್ರೋನಿನವರೆಗೆ ಬಂದರು. ಅಲ್ಲಿ ಅನಾಕನ ಮಕ್ಕಳಾದ ಅಹೀಮನ್, ಶೇಷೈ, ತಲ್ಮೈ ಎಂಬ ಉನ್ನತರಾದ ಪುರುಷರು ಇದ್ದರು. ಹೆಬ್ರೋನ್ ಪಟ್ಟಣವು ಈಜಿಪ್ಟ್ ದೇಶದ ಚೋವನ್ ಪಟ್ಟಣಕ್ಕಿಂತ ಏಳು ವರ್ಷಗಳು ಮೊದಲು ನಿರ್ಮಿಸಲಾಗಿತ್ತು.


ಅನಂತರ ಅಬ್ರಾಮನು ತನ್ನ ಗುಡಾರವನ್ನು ಹಾಕಿಸಿಕೊಳ್ಳುತ್ತಾ, ಹೆಬ್ರೋನಿನಲ್ಲಿರುವ ಮಮ್ರೆಯ ತೋಪಿಗೆ ಬಂದು, ಅಲ್ಲಿ ವಾಸವಾಗಿದ್ದನು. ಅಲ್ಲಿ ಯೆಹೋವ ದೇವರಿಗೆ ಒಂದು ಬಲಿಪೀಠವನ್ನು ಕಟ್ಟಿದನು.


ಇದಲ್ಲದೆ ಯೆಹೋಶುವನು ಯೆಹೋವ ದೇವರ ಅಪ್ಪಣೆಯ ಪ್ರಕಾರ ಯೆಫುನ್ನೆಯ ಮಗ ಕಾಲೇಬನಿಗೆ ಅನಾಕನ ತಂದೆಯ ಕಿರ್ಯತ್ ಅರ್ಬ ಎಂಬ ಹೆಬ್ರೋನನ್ನು ಯೆಹೂದನ ಮಕ್ಕಳ ನಡುವೆ ಸೊತ್ತಾಗಿ ಕೊಟ್ಟನು.


ಆದ್ದರಿಂದ ಅವರು, “ಅವನು ಇನ್ನು ಇಲ್ಲಿ ಬರುವನೋ?” ಎಂದು ಯೆಹೋವ ದೇವರನ್ನು ವಿಚಾರಿಸಿದರು. ಯೆಹೋವ ದೇವರು, “ಇಗೋ, ಅವನು ಸಲಕರಣೆಗಳಲ್ಲಿ ಅಡಗಿಕೊಂಡಿದ್ದಾನೆ,” ಎಂದು ಹೇಳಿದರು.


ಚೊರ್ಗವನ್ನೂ, ಅಯ್ಯಾಲೋನನ್ನೂ, ಹೆಬ್ರೋನನ್ನೂ ಕಟ್ಟಿಸಿದನು. ಇವು ಯೆಹೂದದಲ್ಲಿಯೂ, ಬೆನ್ಯಾಮೀನರಲ್ಲಿಯೂ ಕೋಟೆಯುಳ್ಳ ಪಟ್ಟಣಗಳಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು