Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 2:23 - ಕನ್ನಡ ಸಮಕಾಲಿಕ ಅನುವಾದ

23 ಆದರೆ ಅಸಾಯೇಲನು ಒಪ್ಪದೆ ಹೋದದ್ದರಿಂದ, ಅಬ್ನೇರನು ತನ್ನ ಭರ್ಜಿಯ ಹಿಂಭಾಗದ ಮೊನೆಯಿಂದ ಅವನ ಹೊಟ್ಟೆಯೊಳಗೆ ತಿವಿಯಲು, ಅದು ಅವನ ಬೆನ್ನ ಹೊರಗೆ ತೂರಿ ಬಂತು. ಅವನು ಅಲ್ಲಿ ಬಿದ್ದು, ಅದೇ ಸ್ಥಳದಲ್ಲಿ ಸತ್ತನು. ಅಸಾಯೇಲನು ಬಿದ್ದು ಸತ್ತ ಸ್ಥಳಕ್ಕೆ ಬಂದವರೆಲ್ಲರು ಅಲ್ಲಿಯೇ ಸುಮ್ಮನೆ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅಸಾಹೇಲನು ಬಿಟ್ಟು ಹೋಗುವುದಕ್ಕೆ ಒಪ್ಪದ ಕಾರಣ ಅಬ್ನೇರನು ಬರ್ಜಿಯನ್ನು ಹಿಂದಿನಿಂದ ಅವನ ಹೊಟ್ಟೆಯೊಳಗೆ ತಿವಿದನು. ಬರ್ಜಿಯು ಅವನ ಬೆನ್ನಿನಿಂದ ಹಾಯ್ದು ಹೊರಗೆ ಬಂದಿತು. ಅವನು ಕೂಡಲೇ ಅಲ್ಲೇ ಬಿದ್ದು ಸತ್ತನು. ಅಸಾಹೇಲನು ಸತ್ತು ಬಿದ್ದ ಸ್ಥಳಕ್ಕೆ ಬಂದವರೆಲ್ಲರೂ ಅಲ್ಲೇ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆದರೂ ಅಸಾಹೇಲನು ಬಿಟ್ಟುಹೋಗುವುದಕ್ಕೆ ಒಪ್ಪಲಿಲ್ಲ. ಆದಕಾರಣ ಅಬ್ನೇರನು ಭರ್ಜಿಯನ್ನು ಹಿಮ್ಮುಖವಾಗಿ ಎಸೆದು ಅವನ ಹೊಟ್ಟೆಯನ್ನು ತಿವಿದನು. ಆ ಭರ್ಜಿ ಅವನ ಬೆನ್ನಿನಿಂದ ಹಾಯ್ದು ಬಂದಿತು. ಅವನು ಕೂಡಲೇ ಅಲ್ಲೇ ಬಿದ್ದು ಸತ್ತನು. ಅಸಾಹೇಲನು ಸತ್ತುಬಿದ್ದ ಸ್ಥಳಕ್ಕೆ ಬಂದವರೆಲ್ಲರೂ ಅಲ್ಲೇ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅಸಾಹೇಲನು ಬಿಟ್ಟುಹೋಗುವದಕ್ಕೆ ಒಪ್ಪದ್ದರಿಂದ ಅಬ್ನೇರನು ಬರ್ಜಿಯನ್ನು ಹಿಂಗಡೆಯಿಂದ ಅವನ ಹೊಟ್ಟೆಯೊಳಗೆ ತಿವಿದನು. ಬರ್ಜಿಯು ಅವನ ಬೆನ್ನಿನಿಂದ ಹಾಯ್ದು ಬಂದಿತು. ಅವನು ಕೂಡಲೆ ಅಲ್ಲೇ ಬಿದ್ದು ಸತ್ತನು. ಅಸಾಹೇಲನು ಸತ್ತುಬಿದ್ದ ಸ್ಥಳಕ್ಕೆ ಬಂದವರೆಲ್ಲರೂ ಅಲ್ಲೇ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆದರೂ ಅಸಾಹೇಲನು ಅಬ್ನೇರನನ್ನು ಅಟ್ಟಿಸಿಕೊಂಡೇ ಹೋದನು. ಆದ್ದರಿಂದ ಅಬ್ನೇರನು ತನ್ನ ಬರ್ಜಿಯ ಹಿಡಿಕೆಯನ್ನು ಹಿಡಿದುಕೊಂಡು ಅದನ್ನು ಅಸಾಹೇಲನ ಹೊಟ್ಟೆಗೆ ತಿವಿದನು. ಆ ಬರ್ಜಿಯು ಅಸಾಹೇಲನ ಹೊಟ್ಟೆಯೊಳಗೆ ಆಳವಾಗಿ ಚುಚ್ಚಿಕೊಂಡು ಅವನ ಬೆನ್ನಿನಿಂದ ಹಾಯ್ದು ಬಂದಿತು. ಅಸಾಹೇಲನು ಕೂಡಲೇ ಅಲ್ಲೇ ಸತ್ತುಬಿದ್ದನು. ಅಸಾಹೇಲನ ದೇಹವು ನೆಲದ ಮೇಲೆ ಬಿದ್ದಿತ್ತು. ಜನರು ಅವನ ಬಳಿಗೆ ಹೋಗಿ ಅಲ್ಲಿಯೇ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 2:23
7 ತಿಳಿವುಗಳ ಹೋಲಿಕೆ  

ಅಬ್ನೇರನು ಹೆಬ್ರೋನಿಗೆ ತಿರುಗಿ ಬಂದ ತರುವಾಯ ಯೋವಾಬನ ಬಾಗಿಲಲ್ಲಿ ಅವನ ಸಂಗಡ ಸಮಾಧಾನವಾಗಿ ಮಾತನಾಡಿ, ಅವನನ್ನು ಒಂದು ಕಡೆ ಕರೆದುಕೊಂಡು ಹೋಗಿ, ತನ್ನ ತಮ್ಮ ಅಸಾಯೇಲನ ರಕ್ತಾಪರಾಧದ ನಿಮಿತ್ತ ಅಲ್ಲಿ ಅವನ ಹೊಟ್ಟೆಯಲ್ಲಿ ಇರಿದು ಕೊಂದುಹಾಕಿದನು.


ಅವರು ಗೋಧಿಯನ್ನು ತೆಗೆದುಕೊಂಡು ಹೋಗುವವರಂತೆ ನಡುಮನೆಯೊಳಗೆ ಹೋಗಿ ಅವನ ಹೊಟ್ಟೆಯಲ್ಲಿ ತಿವಿದರು. ರೇಕಾಬನೂ ಅವನ ಸಹೋದರ ಬಾಣನೂ ಗುಟ್ಟಾಗಿ ಒಳಗೆ ಜಾರಿಕೊಂಡರು.


ಆದರೆ ಅಮಾಸನು ಯೋವಾಬನ ಕೈಯಲ್ಲಿ ಕಠಾರಿ ಇದ್ದುದರಿಂದ ಎಚ್ಚರಿಕೆ ತೆಗೆದುಕೊಳ್ಳದಿರುವಾಗ, ಯೋವಾಬನು ಅವನನ್ನು ಕರುಳುಗಳು ಹೊರಬರುವ ಹಾಗೆ ಅವನ ಪಕ್ಕೆಯ ಹೊಟ್ಟೆಯಲ್ಲಿ ತಿವಿದನು. ಎರಡನೆಯ ಸಾರಿ ಹೊಡೆಯಲಿಲ್ಲ. ಅವನು ಸತ್ತನು. ಯೋವಾಬನೂ, ಅವನ ಸಹೋದರನಾದ ಅಬೀಷೈಯನೂ ಬಿಕ್ರಿಯ ಮಗ ಶೆಬನನ್ನು ಹಿಂದಟ್ಟಿದರು.


ಅರಸನೂ ಅವನ ಜನರೂ ಯೆಬೂಸಿಯರ ವಿರುದ್ಧವಾಗಿ ಯೆರೂಸಲೇಮಿಗೆ ಬಂದರು. ದಾವೀದನು ಇದರೊಳಗೆ ಬರಲು ಸಾಧ್ಯವಿಲ್ಲವೆಂದು ಅವರು ನೆನಸಿ ದಾವೀದನಿಗೆ, “ನೀನು ಕಣ್ಣು ಕಾಣದವರನ್ನೂ ಕುಂಟರನ್ನೂ ತೆಗೆದುಹಾಕದ ಹೊರತು, ನೀನು ಇಲ್ಲಿಗೆ ಬರಲಾರೆ,” ಎಂದರು.


ಆದರೆ ಯೋವಾಬನೂ, ಅಬೀಷೈಯನೂ ಅಬ್ನೇರನನ್ನು ಹಿಂದಟ್ಟಿ, ಸೂರ್ಯ ಆಸ್ತಮಿಸುವವರೆಗೆ ಗಿಬ್ಯೋನಿನ ಮರುಭೂಮಿಯ ಮಾರ್ಗದ ಅಂಚಾದ ಗೀಯಕ್ಕೆ ಎದುರಾಗಿರುವ ಅಮ್ಮಾ ಎಂಬ ಗುಡ್ಡದವರೆಗೆ ಬಂದರು.


ಹೀಗೆ ಯೋವಾಬ ಮತ್ತು ಅಬೀಷೈ ಅಬ್ನೇರನನ್ನು ಕೊಂದುಹಾಕಿದರು. ಏಕೆಂದರೆ ಅಬ್ನೇರನು ಅವನ ಸಹೋದರ ಅಸಾಯೇಲನನ್ನು ಗಿಬ್ಯೋನಿನ ಯುದ್ಧದಲ್ಲಿ ಕೊಂದುಹಾಕಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು