Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 2:32 - ಕನ್ನಡ ಸಮಕಾಲಿಕ ಅನುವಾದ

32 ಅವರು ಅಸಾಯೇಲನನ್ನು ಎತ್ತಿಕೊಂಡು ಬೇತ್ಲೆಹೇಮಿನಲ್ಲಿರುವ ಅವನ ತಂದೆಯ ಸಮಾಧಿಯಲ್ಲಿ ಹೂಳಿಟ್ಟರು. ಯೋವಾಬನೂ, ಅವನ ಜನರೂ ರಾತ್ರಿಯೆಲ್ಲಾ ನಡೆದು ಉದಯವಾದಾಗ ಹೆಬ್ರೋನಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅವರು ಅಸಾಹೇಲನ ಶವವನ್ನು ತಂದು ಅದನ್ನು ಬೇತ್ಲೆಹೇಮಿನಲ್ಲಿರುವ ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅನಂತರ ಯೋವಾಬನೂ, ಅವನ ಜನರೂ ರಾತ್ರಿಯೆಲ್ಲಾ ಪ್ರಯಾಣಮಾಡಿ ಹೆಬ್ರೋನಿಗೆ ಬಂದರು. ಆಗ ಸೂರ್ಯೋದಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಅವರು ಅಸಾಹೇಲನ ಶವವನ್ನು ತಂದು ಅದನ್ನು ಬೆತ್ಲೆಹೇಮಿನಲ್ಲಿರುವ ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅನಂತರ ಯೋವಾಬನೂ ಅವನ ಜನರೂ ರಾತ್ರಿಯೆಲ್ಲಾ ಪ್ರಯಾಣಮಾಡಿ ಹೆಬ್ರೋನಿಗೆ ಬಂದರು. ಆಗ ಸೂರ್ಯೋದಯವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಅವರು ಅಸಾಹೇಲನ ಶವವನ್ನು ತಂದು ಅದನ್ನು ಬೇತ್ಲೆಹೇವಿುನಲ್ಲಿರುವ ಅವನ ತಂದೆಯ ಶ್ಮಶಾನ ಭೂವಿುಯಲ್ಲಿ ಸಮಾಧಿಮಾಡಿದರು. ಅನಂತರ ಯೋವಾಬನೂ ಅವನ ಜನರೂ ರಾತ್ರಿಯೆಲ್ಲಾ ಪ್ರಯಾಣಮಾಡಿ ಹೆಬ್ರೋನಿಗೆ ಬಂದರು. ಆಗ ಸೂರ್ಯೋದಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ದಾವೀದನ ಭಟರು ಅಸಾಹೇಲನ ಶವವನ್ನು ಬೆತ್ಲೆಹೇಮಿಗೆ ತಂದು, ಅವನ ತಂದೆಯ ಶ್ಮಶಾನ ಭೂಮಿಯಲ್ಲಿ ಸಮಾಧಿಮಾಡಿದರು. ಯೋವಾಬನು ತನ್ನ ಜನರೊಂದಿಗೆ ರಾತ್ರಿಯೆಲ್ಲ ಪ್ರಯಾಣಮಾಡಿ ಹೆಬ್ರೋನನ್ನು ತಲುಪಿದಾಗ ಸೂರ್ಯೋದಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 2:32
10 ತಿಳಿವುಗಳ ಹೋಲಿಕೆ  

ತನ್ನ ಕೆಲಸದಲ್ಲಿ ಶ್ರದ್ಧೆಯುಳ್ಳವನನ್ನು ನೀನು ನೋಡಿದ್ದೀಯಾ? ಅವನು ನೀಚರ ಮುಂದೆ ಅಲ್ಲ, ಅರಸರ ಮುಂದೆಯೇ ಸೇವೆ ಸಲ್ಲಿಸುವನು.


ಯೆಹೋಷಾಫಾಟನು ಮೃತನಾಗಿ ತನ್ನ ಪಿತೃಗಳ ಜೊತೆ ಸೇರಿದನು. ಅವನ ಶವವನ್ನು ದಾವೀದನ ಪಟ್ಟಣದೊಳಗೆ ಅವನ ಪೂರ್ವಜರ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಆಗ ಅವನಿಗೆ ಬದಲಾಗಿ ಅವನ ಮಗನಾದ ಯೆಹೋರಾಮನು ಅರಸನಾದನು.


ಅವನು ತನಗೋಸ್ಕರ ದಾವೀದನ ಪಟ್ಟಣದಲ್ಲಿ ಅಗಿಸಿದ ಅವನ ಸ್ವಂತ ಸಮಾಧಿಯಲ್ಲಿ ಅವನನ್ನು ಹೂಳಿಟ್ಟರು. ಅವರು ತೈಲಗಾರರ ವಿದ್ಯೆಯಿಂದ ಸಿದ್ಧಮಾಡಿದ ಸುಗಂಧಗಳಿಂದಲೂ, ನಾನಾ ವಿಧವಾದ ಪದಾರ್ಥಗಳಿಂದಲೂ ತುಂಬಿದ ಶವ ಪೆಟ್ಟಿಗೆಯಲ್ಲಿ ಅವನನ್ನು ಇಟ್ಟರು. ಅವನ ಗೌರವಕ್ಕಾಗಿ ಮಹಾ ಅಗ್ನಿಕುಂಡವನ್ನೇರ್ಪಡಿಸಿದರು.


ಇಸ್ರಾಯೇಲಿನ ಎಲ್ಲಾ ಗೋತ್ರದವರು ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಬಂದು, “ನಾವು ನಿನ್ನ ಎಲುಬೂ, ನಿನ್ನ ಮಾಂಸವೂ ಆಗಿದ್ದೇವೆ.


ಆಗ ಸೌಲನು, “ಯೌವನಸ್ಥನೇ, ನೀನು ಯಾರ ಮಗನು?” ಎಂದು ಅವನನ್ನು ಕೇಳಿದನು. ಅದಕ್ಕೆ ದಾವೀದನು, “ನಾನು ನಿನ್ನ ಸೇವಕನಾಗಿರುವ ಬೇತ್ಲೆಹೇಮಿನವನಾದ ಇಷಯನ ಮಗನು,” ಎಂದನು.


ಇಸ್ರಾಯೇಲನ ಮರಣದ ಸಮಯವು ಸಮೀಪಿಸಿದಾಗ, ಅವನು ತನ್ನ ಮಗ ಯೋಸೇಫನನ್ನು ಕರೆಯಿಸಿ ಅವನಿಗೆ, “ಈಗ ನಿನ್ನ ಸಮ್ಮುಖದಲ್ಲಿ ನಾನು ದಯೆ ಹೊಂದಿದ್ದೇಯಾದರೆ, ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಟ್ಟು, ನನಗೆ ಉಪಕಾರವನ್ನೂ, ನಂಬಿಗಸ್ತಿಕೆಯನ್ನೂ ತೋರಿಸು. ಈಜಿಪ್ಟಿನಲ್ಲಿ ನನ್ನನ್ನು ಹೂಳಿಡಬೇಡ.


ನನ್ನ ತಂದೆಯ ಸಂಗಡ ನಾನು ಮಲಗಬೇಕು. ಈಜಿಪ್ಟಿನಿಂದ ನನ್ನನ್ನು ತೆಗೆದುಕೊಂಡುಹೋಗಿ, ಅವರ ಸಮಾಧಿಯ ಸ್ಥಳದಲ್ಲಿ ನನ್ನನ್ನು ಹೂಳಿಡು,” ಎಂದನು. ಅದಕ್ಕವನು, “ನಿನ್ನ ಮಾತಿನ ಪ್ರಕಾರ ನಾನು ಮಾಡುತ್ತೇನೆ,” ಎಂದನು.


ಯೋವಾಷನ ಮಗನಾದ ಗಿದ್ಯೋನನು ಒಳ್ಳೆಯ ವೃದ್ಧಾಪ್ಯದಲ್ಲಿ ಮರಣಹೊಂದಿದಾಗ, ಅವನನ್ನು ಅಬೀಯೆಜೆರೀಯರಿಗೆ ಸೇರಿದ ಒಫ್ರದಲ್ಲಿ ತನ್ನ ತಂದೆಯಾದ ಯೋವಾಷನ ಸಮಾಧಿಯಲ್ಲಿ ಹೂಳಿಡಲಾಯಿತು.


ದಾವೀದನ ಸೇವಕರು ಬೆನ್ಯಾಮೀನ್ಯರಲ್ಲಿಯೂ, ಅಬ್ನೇರನ ಜನರಲ್ಲಿಯೂ ಮುನ್ನೂರ ಅರವತ್ತು ಜನರನ್ನು ಹೊಡೆದದ್ದರಿಂದ ಅವರು ಸತ್ತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು