Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 2:6 - ಕನ್ನಡ ಸಮಕಾಲಿಕ ಅನುವಾದ

6 ಈಗ ಯೆಹೋವ ದೇವರು ನಿಮಗೆ ದಯೆಯನ್ನೂ, ನಂಬಿಗಸ್ತಿಕೆಯನ್ನೂ ತೋರಿಸಲಿ. ನೀವು ಈ ಕಾರ್ಯವನ್ನು ಮಾಡಿದ್ದರಿಂದ, ನಾನು ನಿಮಗೆ ಪ್ರತ್ಯುಪಕಾರ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನ ಒಡಂಬಡಿಕೆಯ ನಂಬಿಕೆ ಮತ್ತು ಸತ್ಯ ನಿಮ್ಮೊಂದಿಗಿರಲಿ. ಈ ಕಾರ್ಯಕ್ಕಾಗಿ ನಾನೂ ನಿಮಗೆ ಉಪಕಾರ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅವರ ಅಚಲ ಪ್ರೀತಿಸತ್ಯತೆಗಳು ನಿಮ್ಮೊಂದಿಗಿರಲಿ! ಈ ಸತ್ಕಾರ್ಯಕ್ಕಾಗಿ ನಾನೂ ನಿಮಗೆ ಉಪಕಾರ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆತನ ಕೃಪಾಸತ್ಯತೆಗಳು ನಿಮ್ಮೊಂದಿಗಿರಲಿ; ಈ ಕಾರ್ಯಕ್ಕಾಗಿ ನಾನೂ ನಿಮಗೆ ಉಪಕಾರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆತನು ನಿಮಗೆ ಕೃಪಾಳುವೂ ನಂಬಿಗಸ್ತನೂ ಆಗಿರಲಿ. ನೀವು ಸೌಲನ ಬೂದಿಯನ್ನು ಸಮಾಧಿಮಾಡಿದ್ದರಿಂದ ನಾನೂ ನಿಮಗೆ ಕರುಣೆ ತೋರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 2:6
15 ತಿಳಿವುಗಳ ಹೋಲಿಕೆ  

ಕೆಟ್ಟದ್ದನ್ನು ಕಲ್ಪಿಸುವವರು ದಾರಿ ತಪ್ಪುವುದಿಲ್ಲವೇ? ಆದರೆ ಒಳ್ಳೆಯದನ್ನು ಕಲ್ಪಿಸುವವರಿಗೆ ಪ್ರೀತಿ ಸತ್ಯತೆಯು ಇರುವುವು.


ಯೆಹೋವ ದೇವರು ಅವನೆದುರಿಗೆ ಹಾದು ಹೋಗಿ, “ಯೆಹೋವ ದೇವರು, ಯೆಹೋವ ದೇವರು, ಕರುಣಾಳುವು, ಕೃಪಾಳುವು, ದೀರ್ಘಶಾಂತನು, ಮಹಾ ಪ್ರೀತಿಯುಳ್ಳವನು ಮತ್ತು ಸತ್ಯದಲ್ಲಿ ಸಮೃದ್ಧಿಯಾದಾತನೂ


ಆದರೆ ನಾನು ನಿಮಗೆ ಹೇಳುವುದೇನೆಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಹಿಂಸಿಸುವವರಿಗೋಸ್ಕರ ಪ್ರಾರ್ಥಿಸಿರಿ.


ಕರುಣೆಯುಳ್ಳವರು ಧನ್ಯರು, ಅವರು ಕರುಣೆ ಪಡೆಯುವರು.


“ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದ್ದರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.


ದೇವರು ಪರಲೋಕದಿಂದ ಸಹಾಯ ಕಳುಹಿಸಿ, ನನ್ನನ್ನು ನಿಂದಿಸುವವರನ್ನು ದಂಡಿಸಿ, ನನ್ನನ್ನು ರಕ್ಷಿಸುವರು. ದೇವರು ತಮ್ಮ ಒಡಂಬಡಿಕೆಯ ಪ್ರೀತಿಯನ್ನೂ ತಮ್ಮ ಸತ್ಯವನ್ನೂ ಕಳುಹಿಸುವರು.


ನೀನು ನಿನ್ನೆ ಬಂದವನು. ನಾನು ಎಲ್ಲಿಗೆ ಹೋಗುತ್ತೇನೋ ನನಗೇ ಗೊತ್ತಿಲ್ಲ. ಆದುದರಿಂದ ನಾನು ನಿನ್ನನ್ನು ನಮ್ಮ ಸಂಗಡ ಸುಮ್ಮನೇ ತಿರುಗಾಡಿಸುವುದು ಏಕೆ? ನೀನು ನಿನ್ನ ಸಹೋದರರನ್ನು ಕರೆದುಕೊಂಡು ಹಿಂದಕ್ಕೆ ಹೋಗು. ದಯೆಯೂ, ನಂಬಿಗಸ್ತಿಕೆಯೂ ನಿನ್ನ ಸಂಗಡ ಇರಲಿ,” ಎಂದನು.


ಆಗ ದಾವೀದನು, “ಹಾನೂನನ ತಂದೆಯಾದ ನಾಹಾಷನು ನನಗೆ ದಯೆ ತೋರಿಸಿದ್ದರಿಂದ, ನಾನೂ ಅವನ ಮಗ ಹಾನೂನನಿಗೆ ದಯೆ ತೋರಿಸುವೆನು,” ಎಂದನು. ದಾವೀದನು ಅವನ ತಂದೆಯನ್ನು ಕುರಿತು ಹಾನೂನನಿಗೆ ಸಂತಾಪ ಸೂಚಿಸಲು ತನ್ನ ಸೇವಕರನ್ನು ಕಳುಹಿಸಿದನು. ಹೀಗೆಯೇ ದಾವೀದನ ಸೇವಕರು ಅಮ್ಮೋನಿಯರ ದೇಶಕ್ಕೆ ಬಂದರು.


ಆಗ ದಾವೀದನು ಅವನಿಗೆ, “ಭಯಪಡಬೇಡ, ಏಕೆಂದರೆ ನಿನ್ನ ತಂದೆಯಾದ ಯೋನಾತಾನನ ನಿಮಿತ್ತ ನಾನು ನಿನಗೆ ಖಂಡಿತವಾಗಿ ದಯೆ ತೋರಿಸುವೆನು. ನಿನ್ನ ಅಜ್ಜನಾದ ಸೌಲನ ಭೂಮಿಯನ್ನೆಲ್ಲಾ ನಿನಗೆ ತಿರುಗಿ ಕೊಡುವೆನು ಮತ್ತು ನೀನು ನನ್ನ ಮೇಜಿನಲ್ಲಿ ನಿತ್ಯವೂ ಭೋಜನ ಮಾಡುವೆ,” ಎಂದನು.


ಅರಸನು, “ನಾನು ದೇವರ ದಯೆ ತೋರಿಸುವ ಹಾಗೆ ಸೌಲನ ಕುಟುಂಬದಲ್ಲಿ ಇನ್ನೂ ಯಾವನಾದರೂ ಇದ್ದಾನೋ?” ಎಂದನು. ಆಗ ಚೀಬನು ಅರಸನಿಗೆ, “ಯೋನಾತಾನನಿಗೆ ಎರಡೂ ಕಾಲು ಕುಂಟಾದ ಮಗನಿದ್ದಾನೆ,” ಎಂದನು.


ನೀವು ಪರಾಕ್ರಮಶಾಲಿಗಳಾಗಿದ್ದು, ನಿಮ್ಮ ಕೈಗಳು ಬಲವಾಗಿರಲಿ. ಏಕೆಂದರೆ ನಿಮ್ಮ ಯಜಮಾನನಾದ ಸೌಲನು ಮರಣಹೊಂದಿದನು. ಯೆಹೂದನ ಮನೆಯವರು ನನ್ನನ್ನು ತಮ್ಮ ಮೇಲೆ ಅರಸನನ್ನಾಗಿ ಅಭಿಷೇಕ ಮಾಡಿದರು,” ಎಂದನು.


ಆಗ ಅವರು ಆಕೆಗೆ, “ನೀನು ಈ ನಮ್ಮ ಕಾರ್ಯವನ್ನು ಬಹಿರಂಗ ಮಾಡದೆ ಇದ್ದರೆ, ನಾವು ನಿಮ್ಮ ಪ್ರಾಣಕ್ಕೆ ಹೊಣೆಯಾಗಿ ಇರುವೆವು. ಯೆಹೋವ ದೇವರು ನಮಗೆ ದೇಶವನ್ನು ಕೊಟ್ಟಾಗ, ಸತ್ಯದಿಂದಲೂ, ದಯೆಯಿಂದಲೂ ನಡೆದುಕೊಳ್ಳುವೆವು,” ಎಂದರು.


ನೊವೊಮಿಯು ತನ್ನ ಇಬ್ಬರು ಸೊಸೆಯರಿಗೆ, “ನೀವು ನಿಮ್ಮ ನಿಮ್ಮ ತಾಯಿಯ ಮನೆಗೆ ತಿರುಗಿ ಹೋಗಿರಿ. ನೀವು ಮರಣ ಹೊಂದಿದ ಪತಿಯರಿಗೂ ನನಗೂ ದಯೆ ತೋರಿಸಿದ ಹಾಗೆಯೇ ಯೆಹೋವ ದೇವರು ನಿಮಗೆ ದಯೆ ತೋರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು