Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 20:16 - ಕನ್ನಡ ಸಮಕಾಲಿಕ ಅನುವಾದ

16 ಆಗ ಜ್ಞಾನವುಳ್ಳ ಒಬ್ಬ ಸ್ತ್ರೀಯು ಪಟ್ಟಣದಲ್ಲಿಂದ, “ಕೇಳಿರಿ, ಕೇಳಿರಿ. ನಾನು ಯೋವಾಬನ ಸಂಗಡ ಮಾತನಾಡುವ ಹಾಗೆ ಅವನು ಇಲ್ಲಿಗೆ ಸಮೀಪಿಸಲು ಬರಹೇಳಿರಿ,” ಎಂದು ಕೂಗಿ ಬೇಡಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಗ ಆ ಊರಿನ ಬುದ್ಧಿವಂತೆಯಾದ ಒಬ್ಬಳು ಹೆಂಗಸು ಅವರಿಗೆ, “ಕೇಳಿರಿ, ದಯವಿಟ್ಟು ಕೇಳಿರಿ. ಯೋವಾಬನೊಂದಿಗೆ ನಾನು ಮಾತನಾಡುವುದಕ್ಕಾಗಿ ನನ್ನ ಬಳಿಗೆ ಬರಬೇಕೆಂದು ಹೇಳಿ” ಎಂದು ಕೂಗಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆಗ ಆ ಊರಿನ ಬುದ್ಧಿವಂತೆಯಾದ ಒಬ್ಬ ಮಹಿಳೆ ಅವರಿಗೆ, “ಕೇಳಿ, ದಯವಿಟ್ಟು ಕೇಳಿ; ಯೋವಾಬನು ಮಾತಾಡುವುದಕ್ಕಾಗಿ ನನ್ನ ಬಳಿಗೆ ಬರಬೇಕೆಂದು ಹೇಳಿ,” ಎಂದು ಕೂಗಿದಳು. ಯೋವಾಬನು ಬಂದನು. ಆ ಸ್ತ್ರೀ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆಗ ಆ ಊರಿನ ಬುದ್ಧಿವಂತೆಯಾದ ಒಬ್ಬ ಹೆಂಗಸು ಅವರಿಗೆ - ಕೇಳಿರಿ, ದಯವಿಟ್ಟು ಕೇಳಿರಿ; ಯೋವಾಬನು ಮಾತಾಡುವದಕ್ಕೋಸ್ಕರ ನನ್ನ ಬಳಿಗೆ ಬರಬೇಕೆಂದು ಹೇಳಿರಿ ಎಂದು ಕೂಗಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆ ನಗರದ ಬುದ್ಧಿವಂತೆ ಸ್ತ್ರೀಯೊಬ್ಬಳು ಪಟ್ಟಣದೊಳಗಿಂದ ಜೋರಾಗಿ ಕೂಗುತ್ತಾ, “ನನ್ನ ಮಾತನ್ನು ಕೇಳಿ. ಯೋವಾಬನನ್ನು ಇಲ್ಲಿಗೆ ಬರಲು ಹೇಳಿ. ನಾನು ಅವನ ಜೊತೆಯಲ್ಲಿ ಮಾತಾಡಬೇಕಾಗಿದೆ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 20:16
7 ತಿಳಿವುಗಳ ಹೋಲಿಕೆ  

ಆದುದರಿಂದ ಯೋವಾಬನು ತೆಕೋವಗೆ ಮನುಷ್ಯರನ್ನು ಕಳುಹಿಸಿ, ಅಲ್ಲಿಂದ ಒಬ್ಬ ಜ್ಞಾನವುಳ್ಳ ಸ್ತ್ರೀಯನ್ನು ಕರಿಸಿ ಅವಳಿಗೆ, “ನೀನು ಗೋಳಾಡುವವಳ ಹಾಗೆ ನಟಿಸಿ, ದುಃಖ ವಸ್ತ್ರಗಳನ್ನು ಧರಿಸಿಕೋ; ತಲೆಗೆ ಎಣ್ಣೆಯನ್ನು ಹಚ್ಚಿಕೊಳ್ಳದೆ, ಸತ್ತವನಿಗೋಸ್ಕರ ಅನೇಕ ದಿವಸಗಳಿಂದ ದುಃಖಿಸುವವಳ ಹಾಗಿದ್ದು,


ಅವನು ಕರ್ಮೆಲಿನಲ್ಲಿ ತನ್ನ ಕುರಿಗಳ ಉಣ್ಣೆ ಕತ್ತರಿಸುತ್ತಿದ್ದನು. ಈ ಮನುಷ್ಯನ ಹೆಸರು ನಾಬಾಲನು. ಅವನ ಹೆಂಡತಿಯ ಹೆಸರು ಅಬೀಗೈಲಳು. ಆ ಸ್ತ್ರೀಯು ಬಹು ಬುದ್ಧಿವಂತೆ ಹಾಗು ಸುಂದರಿ. ಆದರೆ ಆ ಮನುಷ್ಯನು ಒರಟಾದವನೂ ದುಷ್ಕರ್ಮಿಯೂ ಆಗಿದ್ದನು. ಅವನು ಕಾಲೇಬನ ವಂಶಸ್ಥನು.


ಅವನು ಅವಳ ಬಳಿಗೆ ಸಮೀಪಿಸಿ ಬಂದಾಗ, ಆ ಸ್ತ್ರೀಯು, “ನೀನು ಯೋವಾಬನೋ?” ಎಂದಳು. ಅದಕ್ಕೆ ಅವನು, “ಹೌದು, ನಾನೇ,” ಎಂದು ಉತ್ತರಕೊಟ್ಟನು. ಆಕೆ, “ನಿನ್ನ ದಾಸಿಯ ಮಾತನ್ನು ಕೇಳಿ,” ಎಂದಳು. ಅದಕ್ಕೆ ಅವನು, “ನಾನು ಕೇಳುತ್ತೇನೆ,” ಎಂದನು.


ಆ ಸ್ತ್ರೀಯು ತನ್ನ ಜ್ಞಾನದಿಂದ ಸಮಸ್ತ ಜನರ ಬಳಿಗೆ ಹೋದಳು. ಆಗ ಅವರು ಬಿಕ್ರಿಯ ಮಗ ಶೆಬನ ತಲೆಯನ್ನು ಕಡಿದು ಯೋವಾಬನ ಬಳಿ ಹಾಕಿದರು. ಅವನು ತುತೂರಿಯನ್ನು ಊದಿದ್ದರಿಂದ, ಅವರು ಪಟ್ಟಣದಿಂದ ಚದರಿ ಪ್ರತಿ ಮನುಷ್ಯನೂ ತಮ್ಮ ತಮ್ಮ ಮನೆಗಳಿಗೆ ಹೋದರು. ಯೋವಾಬನು ಯೆರೂಸಲೇಮಿನಲ್ಲಿರುವ ಅರಸನ ಬಳಿಗೆ ಹಿಂದಿರುಗಿ ಬಂದನು.


ಬಾಬಿಲೋನಿನ ಜ್ಞಾನಿಗಳನ್ನು ಕೊಲ್ಲಲು ಹೊರಟಿದ್ದ ಅರಸನ ಕಾವಲುಗಾರರ ಅಧಿಪತಿಯಾದ ಅರ್ಯೋಕನಿಗೆ ದಾನಿಯೇಲನು ಜ್ಞಾನದಿಂದಲೂ ಚಾತುರ್ಯದಿಂದಲೂ ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು