Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 20:6 - ಕನ್ನಡ ಸಮಕಾಲಿಕ ಅನುವಾದ

6 ಆದ್ದರಿಂದ ದಾವೀದನು ಅಬೀಷೈಯನಿಗೆ, “ಈಗ ಅಬ್ಷಾಲೋಮನಿಗಿಂತ ಬಿಕ್ರಿಯ ಮಗ ಶೆಬನು ನಮಗೆ ಹೆಚ್ಚಿನ ಕೇಡನ್ನು ಮಾಡುವನು. ಅವನು ತನಗೆ ಗಡಿ ಪಟ್ಟಣಗಳನ್ನು ಸಂಪಾದಿಸಿಕೊಂಡು, ನಮ್ಮಿಂದ ತಪ್ಪಿಸಿಕೊಳ್ಳದೆ ಹಾಗೆ ನೀನು ನಿನ್ನ ಯಜಮಾನನ ಸೇವಕರನ್ನು ತೆಗೆದುಕೊಂಡು ಹೊರಟು ಅವನನ್ನು ಹಿಂದಟ್ಟು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅರಸನು ಅಬೀಷೈಗೆ, “ಅಬ್ಷಾಲೋಮನಿಗಿಂತ ಬಿಕ್ರೀಯ ಮಗನಾದ ಶೆಬನು ನಮಗೆ ಹೆಚ್ಚಿನ ಕೇಡು ಮಾಡುವಂತಿದೆ. ಆದುದರಿಂದ ನೀನು ನನ್ನ ಸ್ವಂತ ಆಳುಗಳನ್ನು ಕರೆದುಕೊಂಡು ಹೋಗಿ ಅವನನ್ನು ಬೆನ್ನಟ್ಟಿಜಡಿಸು. ಇಲ್ಲವಾದರೆ ಅವನು ನಮ್ಮ ಕಣ್ಣಿಗೆ ಮರೆಯಾಗಿ ಹೋಗಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸೇರಿಕೊಂಡಾನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆದ್ದರಿಂದ ಅರಸನು ಅಬೀಷೈಗೆ, “ಅಬ್ಷಾಲೋಮನಿಗಿಂತ ಬಿಕ್ರೀಯ ಮಗನಾದ ಶೆಬನು ನಮಗೆ ಹೆಚ್ಚಿನ ಕೇಡು ಮಾಡುವಂತಿದೆ. ಆದುದರಿಂದ ನೀನು ನನ್ನ ಸ್ವಂತ ಆಳುಗಳನ್ನು ತೆಗೆದುಕೊಂಡು ಹೋಗಿ ಅವನನ್ನು ಬೆನ್ನಟ್ಟಿ ಬಂಧಿಸು. ಇಲ್ಲವಾದರೆ ಅವನು ನಮ್ಮ ಕಣ್ಣಿಗೆ ಮರೆಯಾಗಿ ಹೋಗಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸೇರಿಕೊಳ್ಳಬಹುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅಬ್ಷಾಲೋಮನಿಗಿಂತ ಬಿಕ್ರೀಯ ಮಗನಾದ ಶೆಬನು ನಮಗೆ ಹೆಚ್ಚಿನ ಕೇಡು ಮಾಡುವಂತಿದೆ. ಆದದರಿಂದ ನೀನು ನನ್ನ ಸ್ವಂತ ಆಳುಗಳನ್ನು ತೆಗೆದುಕೊಂಡು ಹೋಗಿ ಅವನನ್ನು ಹಿಂದಟ್ಟು; ಇಲ್ಲವಾದರೆ ಅವನು ನಮ್ಮ ಕಣ್ಣಿಗೆ ಮರೆಯಾಗಿ ಹೋಗಿ ಕೋಟೆ ಕೊತ್ತಲುಗಳುಳ್ಳ ಪಟ್ಟಣಗಳನ್ನು ಸೇರಿಕೊಂಡಾನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದಾವೀದನು ಅಬೀಷೈಯನಿಗೆ, “ಬಿಕ್ರೀಯ ಮಗನಾದ ಶೆಬನು ಅಬ್ಷಾಲೋಮನಿಗಿಂತ ನಮಗೆ ಹೆಚ್ಚು ಅಪಾಯಕಾರಿಯಾಗಿದ್ದಾನೆ. ಆದ್ದರಿಂದ ನನ್ನ ಸೇವಕರನ್ನು ಕರೆದುಕೊಂಡು, ಶೆಬನನ್ನು ಅಟ್ಟಿಸಿಕೊಂಡು ಹೋಗು. ಶೆಬನು ಕೋಟೆಗಳಿರುವ ನಗರಗಳಲ್ಲಿ ಸೇರಿಕೊಳ್ಳುವುದಕ್ಕಿಂತ ಮುಂಚೆಯೇ ತ್ವರಿತವಾಗಿ ಹೋಗು. ಶೆಬನು ಕೋಟೆಗಳಿರುವ ನಗರಗಳಲ್ಲಿ ಸೇರಿಕೊಂಡರೆ, ಅವನು ನಮ್ಮಿಂದ ತಪ್ಪಿಸಿಕೊಂಡು ಬಿಡುತ್ತಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 20:6
17 ತಿಳಿವುಗಳ ಹೋಲಿಕೆ  

ಅರಸನು ಅವರಿಗೆ, “ನೀವು ನಿಮ್ಮ ಯಜಮಾನನ ಸೇವಕರನ್ನು ಕರೆದುಕೊಂಡು ಹೋಗಿ ನನ್ನ ಮಗ ಸೊಲೊಮೋನನನ್ನು ನನ್ನ ಸ್ವಂತ ಹೇಸರಕತ್ತೆಯ ಮೇಲೆ ಏರಿಸಿ ಗೀಹೋನಿಗೆ ಅವನನ್ನು ಕರೆದುಕೊಂಡು ಹೋಗಿರಿ.


ಆದರೆ ಚೆರೂಯಳ ಮಗ ಅಬೀಷೈಯನು ಅವನಿಗೆ ಸಹಾಯವಾಗಿ ಬಂದು, ಫಿಲಿಷ್ಟಿಯನನ್ನು ಹೊಡೆದು ಕೊಂದುಹಾಕಿದನು. ಆಗ ದಾವೀದನ ಜನರು ಅವನಿಗೆ, “ಇಸ್ರಾಯೇಲಿನ ಬೆಳಕಾಗಿರುವ ನೀನು ಆರಿಹೋಗದಂತೆ ಇನ್ನು ಮೇಲೆ ನಮ್ಮ ಸಂಗಡ ಯುದ್ಧಕ್ಕೆ ಬರಬೇಡ,” ಎಂದು ಆಣೆ ಇಟ್ಟರು.


ಊರೀಯನು ದಾವೀದನಿಗೆ, “ಮಂಜೂಷವೂ, ಇಸ್ರಾಯೇಲಿನವರೂ, ಯೆಹೂದದವರೂ ಡೇರೆಗಳಲ್ಲಿ ವಾಸಿಸಿರುವಾಗಲೂ; ನನ್ನ ಒಡೆಯನಾದ ಯೋವಾಬನೂ, ನನ್ನ ಒಡೆಯನ ಸೇವಕರೂ ಬೈಲಿನಲ್ಲಿ ದಂಡಿಳಿದಿರುವಾಗ ನಾನು ಉಣ್ಣುವುದಕ್ಕೂ, ಕುಡಿಯುವುದಕ್ಕೂ, ನನ್ನ ಹೆಂಡತಿಯ ಸಂಗಡ ಮಲಗುವುದಕ್ಕೂ ನನ್ನ ಮನೆಗೆ ಹೋಗಲೋ? ನಿನ್ನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ಈ ಕಾರ್ಯ ಮಾಡುವುದಿಲ್ಲ,” ಎಂದನು.


ಇದಲ್ಲದೆ ಚೆರೂಯಳ ಮಗ ಅಬೀಷೈಯನು ಉಪ್ಪಿನ ತಗ್ಗಿನಲ್ಲಿ ಹದಿನೆಂಟು ಸಾವಿರ ಎದೋಮ್ಯರ ಸೈನಿಕರನ್ನು ಕೊಂದನು.


ಇದಲ್ಲದೆ ಯೋವಾಬನ ಸಹೋದರನಾದ ಅಬೀಷೈಯನು ಮೂರು ಮಂದಿಯಲ್ಲಿ ಮುಖ್ಯಸ್ಥನು. ಅವನು ಮುನ್ನೂರು ಮಂದಿಗೆ ವಿರೋಧವಾಗಿ ತನ್ನ ಈಟಿಯನ್ನು ಎತ್ತಿ ಅವರನ್ನು ಕೊಂದುಹಾಕಿದ್ದರಿಂದ, ಮೂವರಂತೆ ಹೆಸರುಗೊಂಡನು.


ಯೋವಾಬನ ಸಹೋದರ ಚೆರೂಯಳ ಮಗ ಅಬೀಷೈಯನು ಮೂರು ಮಂದಿಯಲ್ಲಿ ಮುಖ್ಯಸ್ಥನು. ಅವನು ಮುನ್ನೂರು ಮಂದಿಗೆ ವಿರೋಧವಾಗಿ ತನ್ನ ಈಟಿಯನ್ನು ಎತ್ತಿ ಅವರನ್ನು ಕೊಂದುಹಾಕಿದ್ದರಿಂದ, ಮೂವರಂತೆ ಹೆಸರುಗೊಂಡನು.


ಈಗ ನೀನು ಎದ್ದು ಹೊರಟುಬಂದು, ನಿನ್ನ ಸೈನಿಕರ ಸಂಗಡ ಸಮಾಧಾನವಾಗಿ ಮಾತನಾಡು. ನೀನು ಹೊರಗೆ ಬಾರದೆ ಇದ್ದರೆ, ಈ ರಾತ್ರಿಯಲ್ಲಿ ಒಬ್ಬರಾದರೂ ನಿನ್ನ ಸಂಗಡ ಇರುವುದಿಲ್ಲವೆಂದು ಯೆಹೋವ ದೇವರ ಮೇಲೆ ಆಣೆ ಇಟ್ಟು ಹೇಳುತ್ತೇನೆ. ಆಗ ನಿನ್ನ ಯೌವನಕಾಲದಿಂದ ಈ ದಿನದವರೆಗೂ ನಿನಗೆ ಬಂದ ಸಮಸ್ತ ಕೇಡಿಗಿಂತ ಅದು ಅಧಿಕ ಕೇಡಾಗಿರುವುದು,” ಎಂದನು.


ಆದರೆ ಆ ಮನುಷ್ಯನು ಯೋವಾಬನಿಗೆ, “ನೀನು ನನ್ನ ಕೈಯಲ್ಲಿ ಸಾವಿರ ಬೆಳ್ಳಿ ನಾಣ್ಯಗಳನ್ನು ಕೊಟ್ಟರೂ, ನಾನು ಅರಸನ ಮಗನ ಮೇಲೆ ನನ್ನ ಕೈಚಾಚುವುದಿಲ್ಲ. ಏಕೆಂದರೆ, ‘ಅಬ್ಷಾಲೋಮನೆಂಬ ಯುವಕನೊಡನೆ ಸೌಮ್ಯದಿಂದ ನಡೆದು ಕಾಪಾಡಿರಿ,’ ಎಂದು ಅರಸನು ನಮ್ಮೆಲ್ಲರಿಗೆ ಕೇಳಿಸುವಂತೆ ನಿನಗೂ, ಅಬೀಷೈಯನಿಗೂ, ಇತ್ತೈಗೂ ಸ್ಪಷ್ಟವಾಗಿ ಆಜ್ಞಾಪಿಸಿದ್ದನು.


ದಾವೀದನು ಜನರಲ್ಲಿ ಮೂರನೆಯ ಪಾಲನ್ನು ಯೋವಾಬನಿಗೂ, ಎರಡನೆಯ ಪಾಲನ್ನು ಚೆರೂಯಳ ಮಗನೂ ಯೋವಾಬನ ತಮ್ಮನೂ ಆಗಿರುವ ಅಬೀಷೈಗೂ, ಮೂರನೆಯ ಪಾಲನ್ನು ಗಿತ್ತೀಯನಾದ ಇತ್ತೈಗೂ ಒಪ್ಪಿಸಿದನು. ತರುವಾಯ ಅರಸನು ಸೈನಿಕರಿಗೆ, “ನಾನೂ ನಿಮ್ಮ ಸಂಗಡ ಹೊರಟು ಬರುತ್ತೇನೆ,” ಎಂದನು.


ಅರಾಮ್ಯರು ಓಡಿ ಹೋದದ್ದನ್ನು ಅಮ್ಮೋನಿಯರು ಕಂಡಾಗ, ಅವರು ಅಬೀಷೈಯನ ಎದುರಿನಿಂದ ಓಡಿಹೋಗಿ ಪಟ್ಟಣದೊಳಗೆ ಅಡಗಿಕೊಂಡರು. ಆಗ ಯೋವಾಬನು ಅಮ್ಮೋನಿಯರೊಡನೆ ಯುದ್ಧಮಾಡುವುದನ್ನು ಬಿಟ್ಟು, ಯೆರೂಸಲೇಮಿಗೆ ತಿರುಗಿಹೋದನು.


ನಾನು ಅರಸನಾಗಿ ಅಭಿಷೇಕ ಹೊಂದಿದ್ದರೂ ಇಂದಿಗೆ ದುರ್ಬಲನಾಗಿದ್ದೇನೆ. ಚೆರೂಯಳ ಪುತ್ರರಾದ ಇವರು ನನ್ನ ಹತೋಟಿಗೆ ಬಾರದವರು. ಕೆಟ್ಟತನ ಮಾಡುವವನಿಗೆ ಯೆಹೋವ ದೇವರು ಅವನ ಕೆಟ್ಟತನಕ್ಕೆ ಸರಿಯಾಗಿ ಪ್ರತಿಫಲ ಕೊಡುವರು,” ಎಂದನು.


ಹೀಗೆ ಯೋವಾಬ ಮತ್ತು ಅಬೀಷೈ ಅಬ್ನೇರನನ್ನು ಕೊಂದುಹಾಕಿದರು. ಏಕೆಂದರೆ ಅಬ್ನೇರನು ಅವನ ಸಹೋದರ ಅಸಾಯೇಲನನ್ನು ಗಿಬ್ಯೋನಿನ ಯುದ್ಧದಲ್ಲಿ ಕೊಂದುಹಾಕಿದ್ದನು.


ಚೆರೂಯಳ ಮೂವರು ಮಕ್ಕಳಾದ ಯೋವಾಬನೂ, ಅಬೀಷೈಯನೂ, ಅಸಾಯೇಲನೂ ಅಲ್ಲಿ ಇದ್ದರು. ಅಸಾಯೇಲನು ಅಡವಿಯ ಜಿಂಕೆಯ ಹಾಗೆ ಪಾದ ತ್ವರಿತನಾಗಿದ್ದನು.


ಆಗ ದಾವೀದನು ಹಿತ್ತಿಯನಾದ ಅಹೀಮೆಲೆಕನನ್ನು ಮತ್ತು ಚೆರೂಯಳ ಮಗನಾಗಿರುವ ಯೋವಾಬನ ಸಹೋದರ ಅಬೀಷೈಯನ್ನು ನೋಡಿ, “ನನ್ನ ಸಂಗಡ ಸೌಲನ ದಂಡಿನಲ್ಲಿ ಪ್ರವೇಶಿಸಲು ಬರುವವರು ಯಾರು?” ಎಂದು ಕೇಳಿದನು. ಅದಕ್ಕೆ ಅಬೀಷೈಯನು, “ನಾನು ನಿನ್ನ ಸಂಗಡ ಬರುವೆನು,” ಎಂದನು.


ನಾವು ಏಕೆ ಸುಮ್ಮನೆ ಕೂತುಕೊಳ್ಳುತ್ತೇವೆ? ನೀವು ಕೂಡಿಕೊಳ್ಳಿರಿ, ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ, ಅಲ್ಲಿ ನಾಶವಾಗೋಣ. ಏಕೆಂದರೆ, ನಾವು ನಮ್ಮ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ ಕಾರಣ, ನಮ್ಮ ದೇವರಾದ ಯೆಹೋವ ದೇವರು ನಮ್ಮನ್ನು ನಾಶಮಾಡಿ, ನಮಗೆ ವಿಷದ ನೀರನ್ನು ಕುಡಿಯಲು ಕೊಟ್ಟಿದ್ದಾರೆ.


ಒಂದು ರಾಜ್ಯ ತನಗೆ ವಿರೋಧವಾಗಿ ವಿಭಾಗಿಸಿಕೊಂಡರೆ ಆ ರಾಜ್ಯವು ನಿಲ್ಲುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು