Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 20:9 - ಕನ್ನಡ ಸಮಕಾಲಿಕ ಅನುವಾದ

9 ಆಗ ಯೋವಾಬನು ಅಮಾಸನಿಗೆ, “ನನ್ನ ಸಹೋದರನೇ, ಕ್ಷೇಮವೋ?” ಎಂದನು. ಯೋವಾಬನು ಅವನನ್ನು ಮುದ್ದಿಟ್ಟುಕೊಳ್ಳಲು ತನ್ನ ಬಲಗೈಯಿಂದ ಅವನ ಗಡ್ಡವನ್ನು ಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವನು ಅಮಾಸನನ್ನು, “ಸಹೋದರನೇ ಕ್ಷೇಮವೋ” ಎಂದು ಕೇಳಿ ಮುದ್ದಿಡುವುದಕ್ಕೋಸ್ಕರವೋ ಎಂಬಂತೆ ಬಲಗೈಯಿಂದ ಅವನ ಗಡ್ಡವನ್ನು ಹಿಡಿದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವನು ಅಮಾಸನನ್ನು, “ಸಹೋದರಾ, ಕ್ಷೇಮವೇ?” ಎಂದು ಕೇಳಿ ಮುದ್ದಿಡುವುದಕ್ಕೋ ಎಂಬಂತೆ ಬಲಗೈಯಿಂದ ಅವನ ಗಡ್ಡವನ್ನು ಹಿಡಿದು, ಕೈಯಲ್ಲಿದ್ದ ಕತ್ತಿಯನ್ನು ಗಮನಿಸದಿದ್ದ ಅಮಾಸನ ಹೊಟ್ಟೆಯನ್ನು ಇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವನು ಅಮಾಸನನ್ನು - ಸಹೋದರನೇ, ಕ್ಷೇಮವೋ ಎಂದು ಕೇಳಿ ಮುದ್ದಿಡುವದಕ್ಕೋಸ್ಕರವೋ ಎಂಬಂತೆ ಬಲಗೈಯಿಂದ ಅವನ ಗಡ್ಡವನ್ನು ಹಿಡಿದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅವನು ಅಮಾಸನನ್ನು, “ಸೋದರನೇ, ನೀವೆಲ್ಲ ಕ್ಷೇಮವೇ?” ಎಂದು ಕೇಳಿದನು. ಯೋವಾಬನು ಅಮಾಸನಿಗೆ ಮುದ್ದಿಡಲು ಅವನ ಗಡ್ಡವನ್ನು ಬಲಗೈಯಲ್ಲಿ ಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 20:9
14 ತಿಳಿವುಗಳ ಹೋಲಿಕೆ  

ನಿಷ್ಠಾವಂತರು ಭೂಮಿಯೊಳಗಿಂದ ನಾಶವಾಗಿದ್ದಾರೆ. ಮನುಷ್ಯರಲ್ಲಿ ಯಥಾರ್ಥನು ಒಬ್ಬನು ಉಳಿದಿಲ್ಲ; ಎಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾ, ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ.


ಅವನ ಬಾಯಿಯ ಮಾತುಗಳು ಬೆಣ್ಣೆಗಿಂತ ನುಣ್ಣಗಾಗಿವೆ; ಆದರೆ ಅವನ ಹೃದಯದಲ್ಲಿ ಕಾಳಗವಿದೆ; ಅವನ ಮಾತುಗಳು ಎಣ್ಣೆಗಿಂತ ನಯವಾಗಿವೆ; ಆದರೆ ಅವು ಬಿಚ್ಚುಗತ್ತಿಗಳಾಗಿವೆ.


ಅಬ್ನೇರನು ಹೆಬ್ರೋನಿಗೆ ತಿರುಗಿ ಬಂದ ತರುವಾಯ ಯೋವಾಬನ ಬಾಗಿಲಲ್ಲಿ ಅವನ ಸಂಗಡ ಸಮಾಧಾನವಾಗಿ ಮಾತನಾಡಿ, ಅವನನ್ನು ಒಂದು ಕಡೆ ಕರೆದುಕೊಂಡು ಹೋಗಿ, ತನ್ನ ತಮ್ಮ ಅಸಾಯೇಲನ ರಕ್ತಾಪರಾಧದ ನಿಮಿತ್ತ ಅಲ್ಲಿ ಅವನ ಹೊಟ್ಟೆಯಲ್ಲಿ ಇರಿದು ಕೊಂದುಹಾಕಿದನು.


ಯಾವನಾದರೂ ಅವನಿಗೆ ವಂದಿಸುವುದಕ್ಕೆ ಬಂದರೆ, ಕೂಡಲೆ ತನ್ನ ಕೈಯನ್ನು ಚಾಚಿ ಅಂಥವನನ್ನು ಎತ್ತಿ ಮುದ್ದಿಡುತ್ತಿದ್ದನು.


ಅಬ್ಷಾಲೋಮನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೈನ್ಯದ ಅಧಿಪತಿಯಾಗಿ ಇಟ್ಟಿದ್ದನು. ಈ ಅಮಾಸನು ಇಸ್ರಾಯೇಲನಾದ ಇತ್ರನ ಮಗನು. ಈ ಇತ್ರನು ನಾಹಾಷನ ಮಗಳೂ, ಯೋವಾಬನ ತಾಯಿಯೂ, ಚೆರೂಯಳ ಸಹೋದರಿಯೂ ಆದ ಅಬೀಗೈಲಳನ್ನು ಮದುವೆಯಾಗಿದ್ದನು.


ಅರಸನು, “ಯುವಕನಾದ ಅಬ್ಷಾಲೋಮನಿಗೆ ಕ್ಷೇಮವೋ?” ಎಂದು ಕೇಳಿದನು. ಅದಕ್ಕೆ ಅಹೀಮಾಚನು ಉತ್ತರವಾಗಿ, “ಯೋವಾಬನು ಅರಸನ ಸೇವಕನನ್ನೂ, ನಿನ್ನ ಸೇವಕನಾದ ನನ್ನನ್ನೂ ಕಳುಹಿಸಿದಾಗ ದೊಡ್ಡ ಗೊಂದಲವನ್ನು ಕಂಡೆನು. ಆದರೆ ಅದು ಏನೋ ನಾನರಿಯೆ,” ಎಂದನು.


ಆಗ ಯೆಹೋವ ದೇವರು ಅವನ ತಲೆಯ ಮೇಲೆ ಅವನ ರಕ್ತಾಪರಾಧವನ್ನು ಬರಮಾಡುವರು. ಏಕೆಂದರೆ ಅವನು ನನ್ನ ತಂದೆ ದಾವೀದನಿಗೆ ತಿಳಿಯದೆ ತನಗಿಂತ ಉತ್ತಮರೂ ನೀತಿವಂತರೂ ಆದ ಇಬ್ಬರು ವ್ಯಕ್ತಿಗಳನ್ನು ಖಡ್ಗದಿಂದ ಕೊಂದನು. ಅವರು ಯಾರೆಂದರೆ, ಇಸ್ರಾಯೇಲಿನ ಸೈನ್ಯಕ್ಕೆ ಅಧಿಪತಿಯೂ ನೇರನ ಮಗನೂ ಆದ ಅಬ್ನೇರನು, ಯೆಹೂದ ಸೈನ್ಯಕ್ಕೆ ಅಧಿಪತಿಯೂ ಯೆತೆರನ ಮಗನೂ ಆದ ಅಮಾಸನು.


ನೆತನ್ಯನ ಮಗ ಇಷ್ಮಾಯೇಲನು ತನ್ನ ಸಂಗಡ ಇದ್ದ ಹತ್ತು ಜನರಸಹಿತವಾಗಿ ಎದ್ದು, ಬಾಬಿಲೋನಿನ ಅರಸನು ದೇಶದ ಮೇಲೆ ನೇಮಿಸಿದ್ದ ಶಾಫಾನನ ಮೊಮ್ಮಗ ಅಹೀಕಾಮನ ಮಗನಾದ ಗೆದಲ್ಯನನ್ನು ಖಡ್ಗದಿಂದ ಹೊಡೆದು ಕೊಂದುಹಾಕಿದನು.


ಆದರೆ ಇಸ್ರಾಯೇಲರು ಯೆಹೋವ ದೇವರನ್ನು ಕೂಗಿದಾಗ, ಯೆಹೋವ ದೇವರು ಅವರಿಗೆ ಬೆನ್ಯಾಮೀನನಾದ ಗೇರನ ಮಗ ಏಹೂದನನ್ನು ರಕ್ಷಿಸುವುದಕ್ಕೆ ಎಬ್ಬಿಸಿದರು. ಅವನು ಎಡಗೈಯವನಾಗಿದ್ದನು. ಅವನ ಕೈಯಿಂದ ಇಸ್ರಾಯೇಲರು ಮೋವಾಬಿನ ಅರಸನಾದ ಎಗ್ಲೋನನಿಗೆ ಕಪ್ಪವನ್ನು ಕಳುಹಿಸಿದರು.


ಕೆಟ್ಟ ಹೃದಯದಿಂದ ಸವಿನುಡಿಯುವ ತುಟಿಯು, ಬೆಳ್ಳಿಯ ಹೊದಿಕೆಯಿಂದ ಮುಚ್ಚಲ್ಪಟ್ಟ ಬೋಕಿಯಂತೆ ಇದೆ.


ಸ್ನೇಹಿತನು ಮಾಡುವ ಗಾಯಗಳು ಭರವಸೆಗೆ ಯೋಗ್ಯವಾದದ್ದು; ಆದರೆ ಶತ್ರುವಿನ ಮುದ್ದುಗಳು ಹೇರಳವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು