Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 21:14 - ಕನ್ನಡ ಸಮಕಾಲಿಕ ಅನುವಾದ

14 ಅವುಗಳನ್ನು ಬೆನ್ಯಾಮೀನನ ದೇಶದ ಚೇಲದಲ್ಲಿರುವ ಸೌಲನ ತಂದೆಯಾದ ಕೀಷನ ಸಮಾಧಿಯಲ್ಲಿ ಹೂಳಿಟ್ಟರು. ಅವರು ಅರಸನು ಆಜ್ಞಾಪಿಸಿದ್ದನ್ನೆಲ್ಲಾ ತೀರಿಸಿದ ತರುವಾಯ, ದೇವರು ದೇಶಕ್ಕೋಸ್ಕರ ಮಾಡಿದ ಬಿನ್ನಹವನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವರು ಅ ಎಲಬುಗಳನ್ನೆಲ್ಲಾ ಬೆನ್ಯಾಮೀನ್ ದೇಶದ ಚೇಲಾ ಊರಿನಲ್ಲಿ ಸೌಲನ ತಂದೆಯಾದ ಕೀಷನ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿಸಿದನು. ಅರಸನ ಅಪ್ಪಣೆಯಂತೆ ಇದೆಲ್ಲಾ ಆದ ನಂತರ ದೇಶದ ಮೇಲೆ ದೇವರಿಗಿದ್ದ ಕೋಪವು ಶಾಂತವಾಗಿ, ಅವನು ಅವರ ಪ್ರಾರ್ಥನೆಗಳಿಗೆ ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅವುಗಳನ್ನೆಲ್ಲಾ ಬೆನ್ಯಾಮೀನ್ ದೇಶದ ಚೇಲಾ ಊರಿನಲ್ಲಿ ಸೌಲನ ತಂದೆಯಾದ ಕೀಷನ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿಸಿದನು. ಅರಸನ ಅಪ್ಪಣೆಯಂತೆ ಇದೆಲ್ಲಾ ಆದನಂತರ ನಾಡಿನ ಮೇಲೆ ದೇವರಿಗಿದ್ದ ಕೋಪ ಶಮನವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವುಗಳನ್ನೆಲ್ಲಾ ಬೆನ್ಯಾಮೀನ್ ದೇಶದ ಚೇಲಾ ಊರಿನಲ್ಲಿ ಸೌಲನ ತಂದೆಯಾದ ಕೀಷನ ಶ್ಮಶಾನಭೂವಿುಯಲ್ಲಿ ಸಮಾಧಿಮಾಡಿಸಿದನು. ಅರಸನ ಅಪ್ಪಣೆಯಂತೆ ಇದೆಲ್ಲಾ ಆದನಂತರ ದೇಶದ ಮೇಲೆ ದೇವರಿಗಿದ್ದ ಕೋಪವು ಶಾಂತಿಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಸೌಲ ಮತ್ತು ಅವನ ಮಗನಾದ ಯೋನಾತಾನರ ಮೂಳೆಗಳನ್ನು ಅವರು ಬೆನ್ಯಾಮೀನಿನ ಪ್ರದೇಶದಲ್ಲಿ ಸಮಾಧಿ ಮಾಡಿದರು. ಸೌಲನ ತಂದೆಯಾದ ಕೀಷನ ಸ್ಮಶಾನದಲ್ಲಿ ಈ ದೇಹಗಳನ್ನು ಜನರು ಸಮಾಧಿ ಮಾಡಿದರು. ರಾಜನು ಆಜ್ಞಾಪಿಸಿದ್ದನ್ನೆಲ್ಲ ಜನರು ಮಾಡಿದರು. ನಂತರ ಆ ದೇಶದ ಜನರ ಪ್ರಾರ್ಥನೆಯನ್ನು ದೇವರು ಆಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 21:14
16 ತಿಳಿವುಗಳ ಹೋಲಿಕೆ  

ಆಗ ದಾವೀದನು ಯೆಹೋವ ದೇವರಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿಸಿ, ಅದರ ಮೇಲೆ ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿದನು. ಹೀಗೆ ಯೆಹೋವ ದೇವರು ದೇಶಕ್ಕೋಸ್ಕರ ಬಿನ್ನಹವನ್ನು ಕೇಳಿದ್ದರಿಂದ, ಇಸ್ರಾಯೇಲಿನ ಕಡೆಯಿಂದ ಆ ವ್ಯಾಧಿಯು ನಿಂತುಹೋಯಿತು.


ಚೇಲ, ಎಲೆಫ್, ಯೆಬೂಸಿಯರು ಇದ್ದಂಥ ಯೆರೂಸಲೇಮು ಗಿಬೆಯ, ಕಿರ್ಯತ್ ಎಂಬ ಹದಿನಾಲ್ಕು ಪಟ್ಟಣಗಳೂ, ಅವುಗಳ ಗ್ರಾಮಗಳೂ ಆಗಿರುತ್ತವೆ. ಇವೇ ಬೆನ್ಯಾಮೀನ್ ಗೋತ್ರದವರಿಗೆ ಅವರ ಕುಟುಂಬಗಳ ಪ್ರಕಾರ ದೊರೆತ ಸೊತ್ತು.


ಅವರ ಮೇಲೆ ಕಲ್ಲುಕುಪ್ಪೆ ಕೂಡಿಸಿದರು. ಅದು ಈ ದಿನದವರೆಗೂ ಇದೆ. ಆಗ ಯೆಹೋವ ದೇವರು ತಮ್ಮ ಕೋಪದ ಉರಿಯನ್ನು ಬಿಟ್ಟು ತಿರುಗಿದರು. ಆದ್ದರಿಂದ ಆ ಸ್ಥಳವು ಈವರೆಗೂ ಆಕೋರಿನ ಕಣಿವೆ ಎಂದು ಕರೆಯಲಾಗುತ್ತದೆ.


ಆಗ ದೂತನು ನನಗೆ ಕೂಗಿ, “ನೋಡು, ಉತ್ತರ ದೇಶಕ್ಕೆ ಹೊರಟವುಗಳು, ಉತ್ತರ ದೇಶದಲ್ಲಿ ನನ್ನ ಆತ್ಮವನ್ನು ಶಾಂತಿ ಪಡಿಸಿವೆ,” ಎಂದನು.


ಆಗ ಅವರು ಯೋನನನ್ನು ಎತ್ತಿ ಸಮುದ್ರದಲ್ಲಿ ಹಾಕಿದರು. ಆಗ ಸಮುದ್ರವು ತನ್ನ ಉಗ್ರವನ್ನು ನಿಲ್ಲಿಸಿಬಿಟ್ಟಿತು.


ದಾವೀದನು ತನ್ನ ಜನರಿಗೆ ಆಜ್ಞಾಪಿಸಿದ್ದರಿಂದ, ಅವರು ಅವರನ್ನು ಕೊಂದುಹಾಕಿ, ಅವರ ಕೈಕಾಲುಗಳನ್ನು ಕಡಿದು, ಹೆಬ್ರೋನಿನ ಕೊಳದ ಬಳಿಯಲ್ಲಿ ತೂಗುಹಾಕಿದರು. ಈಷ್ಬೋಶೆತನ ತಲೆಯನ್ನು ತೆಗೆದುಕೊಂಡು, ಅದನ್ನು ಹೆಬ್ರೋನಿನಲ್ಲಿರುವ ಅಬ್ನೇರನ ಸಮಾಧಿಯಲ್ಲಿ ಹೂಳಿಟ್ಟರು.


ಅವರು ಅಬ್ನೇರನನ್ನು ಹೆಬ್ರೋನಿನಲ್ಲಿ ಹೂಳಿಟ್ಟರು. ಆಗ ಅರಸನು ತನ್ನ ಧ್ವನಿಯನ್ನೆತ್ತಿ ಅಬ್ನೇರನ ಸಮಾಧಿಯ ಬಳಿಯಲ್ಲಿ ಅತ್ತನು; ಜನರೆಲ್ಲರು ಅತ್ತರು.


ನೀನು ಈ ಹೊತ್ತು ನನ್ನನ್ನು ಬಿಟ್ಟುಹೋದಾಗ, ಬೆನ್ಯಾಮೀನ್ಯರ ಮೇರೆಯಾದ ಚೆಲ್ಚಹಿನಲ್ಲಿರುವ ರಾಹೇಲಳ ಸಮಾಧಿಯ ಬಳಿಯಲ್ಲಿ ಇಬ್ಬರು ಮನುಷ್ಯರನ್ನು ಕಂಡುಕೊಳ್ಳುವೆ. ಅವರು ನಿನಗೆ, ‘ನೀನು ಹುಡುಕಲು ಹೋದ ಕತ್ತೆಗಳು ಸಿಕ್ಕಿದವು, ನಿನ್ನ ತಂದೆಯು ಕತ್ತೆಗಳ ಚಿಂತೆ ಬಿಟ್ಟು, ನಿನಗೋಸ್ಕರ ಚಿಂತೆಪಟ್ಟು, ತನ್ನ ಮಗನಿಗೋಸ್ಕರ ಏನು ಮಾಡಲಿ? ಎನ್ನುತ್ತಾನೆ,’ ಎಂದು ಹೇಳುವರು.


ಅವನು ತನ್ನ ದೇವರ ಗೌರವವನ್ನು ಕಾಪಾಡಲು ಆಸಕ್ತನಾಗಿದ್ದು, ಇಸ್ರಾಯೇಲರಿಗೋಸ್ಕರ ಪಾಪ ಪ್ರಾಯಶ್ಚಿತ್ತ ಮಾಡಿದ್ದರಿಂದ, ಅವನಿಗೂ ಅವನ ಹಿಂದೆ ಬರುವ ಅವನ ಸಂತತಿಗೂ ನಿತ್ಯ ಯಾಜಕತ್ವದ ಒಡಂಬಡಿಕೆ ಮಾಡಿದ್ದೇನೆ,” ಎಂದರು.


ದಾವೀದನು ಸೌಲನ ಎಲುಬುಗಳನ್ನೂ ಅವನ ಮಗನಾದ ಯೋನಾತಾನನ ಎಲುಬುಗಳನ್ನೂ ಗಿಬ್ಯೋನಿನಲ್ಲಿ ಹತರಾದ ಆ ಮನುಷ್ಯರ ಎಲುಬುಗಳನ್ನೂ ಅವರಿಂದ ತೆಗೆದುಕೊಂಡನು.


ಇಸ್ರಾಯೇಲಿನವನಾದ ಆ ಮನುಷ್ಯನ ಹಿಂದೆ ಡೇರೆಯೊಳಗೆ ಪ್ರವೇಶಿಸಿ, ಇಸ್ರಾಯೇಲಿನವನನ್ನೂ ಆ ಮಹಿಳೆಯನ್ನೂ ಒಂದೇ ಬಾರಿಗೆ ಇಬ್ಬರ ಹೊಟ್ಟೆಯನ್ನು ತಿವಿದನು. ಹೀಗೆ ಇಸ್ರಾಯೇಲರಿಗೆ ಉಂಟಾಗಿದ್ದ ವ್ಯಾಧಿಯು ನಿಂತುಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು