Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 21:15 - ಕನ್ನಡ ಸಮಕಾಲಿಕ ಅನುವಾದ

15 ಫಿಲಿಷ್ಟಿಯರು ತಿರುಗಿ ಇಸ್ರಾಯೇಲರ ಮೇಲೆ ಯುದ್ಧಮಾಡಿದರು. ಆಗ ದಾವೀದನು ತನ್ನ ಜನರೊಂದಿಗೆ ಹೋಗಿ, ಫಿಲಿಷ್ಟಿಯರ ಸಂಗಡ ಯುದ್ಧಮಾಡಿದನು. ದಾವೀದನು ದಣಿದು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಫಿಲಿಷ್ಟಿಯರಿಗೂ ಇಸ್ರಾಯೇಲರಿಗೂ ಪುನಃ ಯುದ್ಧವಾಯಿತು. ದಾವೀದನು ತನ್ನ ಸೇವಕರನ್ನು ಕರೆದುಕೊಂಡು ಫಿಲಿಷ್ಟಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೋದಾಗ ಬಹಳವಾಗಿ ದಣಿದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಒಂದು ಕಾಲದಲ್ಲಿ ಫಿಲಿಷ್ಟಿಯರಿಗೂ ಇಸ್ರಯೇಲರಿಗೂ ಮತ್ತೆ ಯುದ್ಧ ನಡೆಯಿತು. ದಾವೀದನು ತನ್ನ ಸೈನಿಕರನ್ನು ಕರೆದುಕೊಂಡು ಫಿಲಿಷ್ಟಿಯರಿಗೆ ವಿರುದ್ಧ ಯುದ್ಧಕ್ಕೆ ಹೋದಾಗ ಬಹಳವಾಗಿ ದಣಿದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಒಂದು ಕಾಲದಲ್ಲಿ ಫಿಲಿಷ್ಟಿಯರಿಗೂ ಇಸ್ರಾಯೇಲ್ಯರಿಗೂ ತಿರಿಗಿ ಯುದ್ಧವಾಯಿತು. ದಾವೀದನು ತನ್ನ ಸೈನಿಕರನ್ನು ಕರಕೊಂಡು ಫಿಲಿಷ್ಟಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೋದಾಗ ಬಹಳವಾಗಿ ದಣಿದಂಥ ಅವನನ್ನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಫಿಲಿಷ್ಟಿಯರು ದಾವೀದನೊಡನೆ ಮತ್ತೆ ಯುದ್ಧವನ್ನು ಮಾಡಿದರು. ದಾವೀದನು ತನ್ನ ಜನರೊಂದಿಗೆ ಫಿಲಿಷ್ಟಿಯರ ವಿರುದ್ಧ ಹೋರಾಡಲು ಹೋದನು. ಆದರೆ ದಾವೀದನು ಆಯಾಸಗೊಂಡು ಬಲಹೀನನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 21:15
14 ತಿಳಿವುಗಳ ಹೋಲಿಕೆ  

ಆ ದಿನದಲ್ಲಿ ಮನೆ ಕಾಯುವವರು ನಡುಗುವರು. ಬಲವಾದ ಮನುಷ್ಯರು ಸಹ ತಾವಾಗಿಯೇ ಬಗ್ಗುವರು. ಅರೆಯುವವರು ಕೆಲವರೇ ಉಳಿದಿರುವುದರಿಂದ ಸುಮ್ಮನಿರುವರು. ಕಿಟಕಿಗಳಿಂದ ಹೊರಗೆ ನೋಡುವವರು ಮಂಕಾಗುವರು.


ನನ್ನ ಮುಪ್ಪಿನ ಕಾಲದಲ್ಲಿ ನನ್ನನ್ನು ತಳ್ಳಿಬಿಡಬೇಡಿರಿ. ನನ್ನ ಶಕ್ತಿಯು ಕುಂದುತ್ತಿರುವಾಗ ನನ್ನನ್ನು ಕೈಬಿಡಬೇಡಿರಿ.


ಇದರ ತರುವಾಯ, ಫಿಲಿಷ್ಟಿಯರ ಸಂಗಡ ಗೆಜೆರಿನಲ್ಲಿ ಯುದ್ಧನಡೆಯಿತು. ಆಗ ಹುಷಾ ಊರಿನವನಾದ ಸಿಬ್ಬೆಕೈ ಎಂಬವನು ರೆಫಾಯನಾದ ಸಿಪ್ಪೈ ಎಂಬವನನ್ನು ಕೊಂದದ್ದರಿಂದ ಫಿಲಿಷ್ಟಿಯರು ಸೋತುಹೋದರು.


ಆಗ ದಾವೀದನು, ಯೆಹೋವ ದೇವರು ತನಗೆ ಆಜ್ಞಾಪಿಸಿದ ಪ್ರಕಾರಮಾಡಿ, ಅವನು ಗೆಬದಿಂದ ಗೆಜೆರಿನವರೆಗೆ ಫಿಲಿಷ್ಟಿಯರನ್ನು ಹೊಡೆದನು.


ಫಿಲಿಷ್ಟಿಯರು ಮತ್ತೆ ತಿರುಗಿಬಂದು, ರೆಫಾಯಿಮಿನ ತಗ್ಗಿನಲ್ಲಿ ವಿಸ್ತಾರವಾಗಿ ಹರಡಿಕೊಂಡರು.


ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಹೊಂದಿದ್ದಾನೆಂದು ಫಿಲಿಷ್ಟಿಯರು ಕೇಳಿದಾಗ, ಫಿಲಿಷ್ಟಿಯರೆಲ್ಲರೂ ದಾವೀದನನ್ನು ಸೆರೆಹಿಡಿಯಲು ಹೋದರು. ದಾವೀದನು ಅದನ್ನು ಕೇಳಿ ಕೋಟೆ ಸ್ಥಳಕ್ಕೆ ಹೋದನು.


ನನ್ನ ತನುಮನಗಳು ಕುಂದುತ್ತವೆ; ಆದರೆ ದೇವರು ಯುಗಯುಗಕ್ಕೂ ನನ್ನ ಹೃದಯದ ಬಲವೂ, ನನ್ನ ಪಾಲೂ ಆಗಿದ್ದಾರೆ.


ದೇವರೇ, ನಾನು ಮುಪ್ಪಿನವನೂ, ನೆರೆಕೂದಲಿನವನೂ ಆದಾಗ ಈ ಸಂತತಿಯವರಿಗೆ ನಿಮ್ಮ ಶಕ್ತಿಯನ್ನೂ, ಮುಂದಿನ ಪೀಳಿಗೆಗೆ ನಿಮ್ಮ ಪರಾಕ್ರಮವನ್ನೂ ತಿಳಿಸುವವರೆಗೂ ನನ್ನನ್ನು ಕೈಬಿಡಬೇಡಿರಿ.


ಆಗ ಮುನ್ನೂರು ಬೆಳ್ಳಿ ನಾಣ್ಯದ ತೂಕದ ಕಂಚು ಈಟಿಯುಳ್ಳ, ಹೊಸ ಖಡ್ಗವನ್ನು ನಡುವಿನಲ್ಲಿ ಕಟ್ಟಿಕೊಂಡಿರುವ ರೆಫಾಯನ ಮಕ್ಕಳಲ್ಲಿ ಇಷ್ಬೀಬೆನೋಬನು ದಾವೀದನನ್ನು ಕೊಲ್ಲಬೇಕೆಂದಿದ್ದನು.


ಇದರ ತರುವಾಯ ದಾವೀದನು ಫಿಲಿಷ್ಟಿಯರ ಮೇಲೆ ದಾಳಿಮಾಡಿ ಅವರನ್ನು ಸೋಲಿಸಿ, ಅವರಿಂದ ಮೇತೆಗ್ ಅಮ್ಮಹವನ್ನು ತೆಗೆದುಕೊಂಡು, ಆಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು