Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 21:6 - ಕನ್ನಡ ಸಮಕಾಲಿಕ ಅನುವಾದ

6 ಅವನ ಪುತ್ರರಲ್ಲಿ ಏಳುಮಂದಿಯನ್ನು ನಮಗೆ ಒಪ್ಪಿಸು. ಆಗ ನಾವು ಯೆಹೋವ ದೇವರು ಆಯ್ದುಕೊಂಡ ಸೌಲನ ಊರಾದ ಗಿಬೆಯದಲ್ಲಿ ಅವರನ್ನು ಯೆಹೋವ ದೇವರಿಗೋಸ್ಕರ ಗಲ್ಲಿಗೆ ಹಾಕುವೆವು,” ಎಂದರು. ಅದಕ್ಕೆ ಅರಸನು, “ನಾನು ಒಪ್ಪಿಸಿಕೊಡುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನಿಂದ ಆರಿಸಲ್ಪಟ್ಟ ಸೌಲನು ವಾಸವಾಗಿದ್ದ ಗಿಬೆಯದಲ್ಲಿ ನಾವು ಅವರನ್ನು ಕೊಂದು, ಯೆಹೋವನ ಸನ್ನಿಧಿಯಲ್ಲಿ ಅವರನ್ನು ನೇತು ಹಾಕುವೆವು” ಎಂದರು. ಅದಕ್ಕೆ ಅರಸನು, “ಆಗಲಿ ಅವರನ್ನು ನಿಮಗೆ ಒಪ್ಪಿಸುತ್ತೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸರ್ವೇಶ್ವರನಿಂದ ಆಯ್ಕೆಯಾದ ಸೌಲನು ವಾಸವಾಗಿದ್ದ ಗಿಬೆಯದಲ್ಲಿ ನಾವು ಅವರನ್ನು ಕೊಂದು ಸರ್ವೇಶ್ವರನ ಸನ್ನಿಧಿಯಲ್ಲೆ ನೇತುಹಾಕುತ್ತೇವೆ,” ಎಂದರು. ಅರಸನು, “ಆಗಲಿ, ಒಪ್ಪಿಸುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆ ಮನುಷ್ಯನ ಮಕ್ಕಳಲ್ಲಿ ಏಳು ಮಂದಿಯನ್ನು ನಮಗೆ ಒಪ್ಪಿಸು. ಯೆಹೋವನಿಂದ ಆರಿಸಲ್ಪಟ್ಟ ಸೌಲನು ವಾಸವಾಗಿದ್ದ ಗಿಬೆಯದಲ್ಲಿ ನಾವು ಅವರನ್ನು ಕೊಂದು ಯೆಹೋವನ ಸನ್ನಿಧಿಯಲ್ಲಿ ನೇತುಹಾಕುವೆವು ಎಂದರು. ಅರಸನು - ಆಗಲಿ, ಒಪ್ಪಿಸುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅವನ ಏಳು ಮಂದಿ ಗಂಡುಮಕ್ಕಳನ್ನು ನಮ್ಮ ಬಳಿಗೆ ಕಳುಹಿಸು. ಸೌಲನು ವಾಸವಾಗಿದ್ದ ಗಿಬೆಯ ಬೆಟ್ಟದ ಮೇಲೆ ಯೆಹೋವನ ಸನ್ನಿಧಿಯಲ್ಲಿ ನೇತುಹಾಕುತ್ತೇವೆ” ಎಂದು ಹೇಳಿದರು. ರಾಜನಾದ ದಾವೀದನು, “ಆ ಗಂಡುಮಕ್ಕಳನ್ನು ನಾನು ನಿಮಗೆ ಒಪ್ಪಿಸುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 21:6
22 ತಿಳಿವುಗಳ ಹೋಲಿಕೆ  

ಆಗ ಸಮುಯೇಲನು, “ಯೆಹೋವ ದೇವರು ಆಯ್ದುಕೊಂಡವನನ್ನು ನೋಡಿರಿ, ಸಮಸ್ತ ಜನರಿಗೆ ಎಲ್ಲಾ ಜನರಲ್ಲಿ ಇವನಿಗೆ ಸಮಾನವಾದವನು ಯಾವನೂ ಇಲ್ಲವಲ್ಲ,” ಎಂದನು. ಜನರೆಲ್ಲರು ಆರ್ಭಟಿಸಿ, “ಅರಸ ಬಾಳಲಿ,” ಎಂದರು.


ದೂತರು ಸೌಲನು ಇರುವ ಗಿಬೆಯಕ್ಕೆ ಬಂದು ಜನರಿಗೆ ಆ ಮಾತುಗಳನ್ನು ಹೇಳಿದರು. ಆಗ ಜನರೆಲ್ಲರೂ ಸ್ವರವನ್ನೆತ್ತಿ ಅತ್ತರು.


ಸೌಲನು ಗಿಬೆಯದಲ್ಲಿರುವ ತನ್ನ ಮನೆಗೆ ಹೋದನು. ದೇವರು ಯಾರ ಹೃದಯವನ್ನು ಮುಟ್ಟಿದರೋ, ಅವರ ಒಂದು ಗುಂಪು ಅವನ ಸಂಗಡ ಹೋಯಿತು.


ಅನಂತರ ಜನರು ಒಬ್ಬ ಅರಸನು ತಮಗೆ ಬೇಕೆಂದು ಕೇಳಿಕೊಳ್ಳಲು, ದೇವರು ಬೆನ್ಯಾಮೀನ್ ಗೋತ್ರದ ಕೀಷನ ಮಗ ಸೌಲನನ್ನು ಅವರಿಗೆ ಕೊಟ್ಟರು. ಇವನು ನಲವತ್ತು ವರ್ಷ ಆಳ್ವಿಕೆ ಮಾಡಿದನು.


ಅವನು ಆ ಬೆಳ್ಳಿಯ ನಾಣ್ಯಗಳನ್ನು ದೇವಾಲಯದಲ್ಲಿ ಬಿಸಾಡಿಬಿಟ್ಟು ಹೊರಟುಹೋಗಿ ನೇಣು ಹಾಕಿಕೊಂಡನು.


ಇವರು ಯೆಹೂದ್ಯರ ವೈರಿಯಾದ ಹಮ್ಮೆದಾತನ ಮಗ ಹಾಮಾನನ ಹತ್ತು ಮಂದಿ ಪುತ್ರರು. ಆದರೆ ಅವರು ಇವರ ಸುಲಿಗೆಯನ್ನು ತೆಗೆದುಕೊಳ್ಳಲಿಲ್ಲ.


ನಾನು ಕೊಡುವ ಅಪ್ಪಣೆ ಏನೆಂದರೆ, ಯಾವನಾದರೂ ಈ ನನ್ನ ಆಜ್ಞೆಯನ್ನು ಬದಲು ಮಾಡಿದರೆ, ಅವನ ಮನೆಯಿಂದ ಒಂದು ತೊಲೆಯನ್ನು ತೆಗೆದು ಅದರಿಂದಲೇ ಅವನನ್ನು ಗಲ್ಲಿಗೆ ಏರಿಸಬೇಕು. ಅವನ ಮನೆಯನ್ನು ಇದರ ನಿಮಿತ್ತ ತಿಪ್ಪೆಯನ್ನಾಗಿ ಮಾಡಿಬಿಡಬೇಕು.


ಅದನ್ನು ಒಬ್ಬನು ಕಂಡು ಯೋವಾಬನಿಗೆ, “ಅಬ್ಷಾಲೋಮನು ಒಂದು ಏಲಾ ಮರದಲ್ಲಿ ತೂಗಾಡುವುದನ್ನು ಕಂಡೆನು,” ಎಂದನು.


ಆದರೆ ಅಹೀತೋಫೆಲನು ತನ್ನ ಯೋಚನೆಯ ಪ್ರಕಾರ ನಡೆಯಲಿಲ್ಲವೆಂದು ನೋಡಿದಾಗ, ತನ್ನ ಕತ್ತೆಯ ಮೇಲೆ ತಡಿಯನ್ನು ಹಾಕಿ ಏರಿ, ತನ್ನ ಪಟ್ಟಣದಲ್ಲಿರುವ ತನ್ನ ಮನೆಗೆ ಹೋದನು. ಅವನು ಮನೆಯನ್ನು ಕ್ರಮಪಡಿಸಿ, ಉರುಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.


ಆಗ ಸಮುಯೇಲನು ಎಣ್ಣೆಕುಪ್ಪಿಯಿಂದ ಅವನ ತಲೆಯ ಮೇಲೆ ಸುರಿದು, ಅವನನ್ನು ಮುದ್ದಿಟ್ಟು ಅವನಿಗೆ, “ಯೆಹೋವ ದೇವರು ನಿನ್ನನ್ನು ತಮ್ಮ ಆಸ್ತಿಯಾಗಿರುವ ಜನರ ಮೇಲೆ ನಾಯಕನಾಗಿರಲು ಅಭಿಷೇಕ ಮಾಡಿದ್ದಾರೆ.


ಆ ತರುವಾಯ ಯೆಹೋಶುವನು ಅವರನ್ನು ದಂಡಿಸಿ, ಐದು ಮರಗಳಲ್ಲಿ ತೂಗುಹಾಕಿಸಿದನು. ಅವರ ಶವಗಳು ಸಾಯಂಕಾಲದವರೆಗೂ ಮರಗಳಲ್ಲಿ ತೂಗಾಡುತ್ತಿದ್ದವು.


ಆಯಿ ಎಂಬ ಪಟ್ಟಣದ ಅರಸನನ್ನು ಸಾಯಂಕಾಲದವರೆಗೂ ಒಂದು ಮರದಲ್ಲಿ ತೂಗಿಹಾಕಿಸಿದನು. ಸೂರ್ಯ ಅಸ್ತಮಿಸುವಾಗ ಯೆಹೋಶುವನು ಅವನ ಹೆಣವನ್ನು ಮರದಿಂದ ಇಳಿಸಿ, ಅದನ್ನು ಆ ಪಟ್ಟಣದ ಬಾಗಿಲಿನ ದ್ವಾರದಲ್ಲಿ ಹಾಕಲು ಆಜ್ಞಾಪಿಸಿದನು. ಆಗ ಅವರು ಹಾಗೆಯೇ ಮಾಡಿದರು. ಆ ದೊಡ್ಡ ಕಲ್ಲು ಕುಪ್ಪೆಯನ್ನು ಅದರ ಮೇಲೆ ಇಟ್ಟರು. ಅದು ಇಂದಿನವರೆಗೂ ಇದೆ.


ಒಬ್ಬನು ಮರಣದಂಡನೆಗೆ ಯೋಗ್ಯವಾದ ಅಪರಾಧ ಮಾಡಿದ್ದರಿಂದ, ನೀವು ಅವನಿಗೆ ಮರಣದಂಡನೆಯನ್ನು ವಿಧಿಸಿ, ಅವನ ಶವವನ್ನು ಮರಕ್ಕೆ ತೂಗುಹಾಕಿದ್ದಾದರೆ,


ಆದರೆ ಮುಖ್ಯ ರೊಟ್ಟಿಗಾರನನ್ನು ಗಲ್ಲಿಗೇರಿಸಿದನು. ಹೀಗೆ ಯೋಸೇಫನು ಹೇಳಿದ ಹೇಳಿದಂತೆಯೇ ಆಯಿತು.


ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನ ತಲೆಯನ್ನು ತೆಗೆಸಿ, ನಿನ್ನನ್ನು ಮರದ ಮೇಲೆ ತೂಗು ಹಾಕಿಸುವನು. ಪಕ್ಷಿಗಳು ನಿನ್ನ ಮಾಂಸವನ್ನು ತಿಂದುಬಿಡುವುವು,” ಎಂದನು.


ಆದ್ದರಿಂದ ನೀನು ನನ್ನ ತರುವಾಯ ನನ್ನ ಸಂತಾನವನ್ನು ಕಡಿದುಬಿಡುವುದಿಲ್ಲವೆಂದೂ, ನನ್ನ ಗೋತ್ರದಿಂದ ನನ್ನ ಹೆಸರನ್ನು ತೆಗೆದುಹಾಕುವುದಿಲ್ಲವೆಂದೂ ನನಗೆ ಯೆಹೋವ ದೇವರ ಹೆಸರಿನಲ್ಲಿ ಪ್ರಮಾಣಮಾಡು,” ಎಂದನು.


ಏಕೆಂದರೆ ಅರಸನಾದ ನನ್ನ ಒಡೆಯನಿಗೆ ನನ್ನ ತಂದೆಯ ಮನೆಯವರೆಲ್ಲರೂ ಸತ್ತವರಾಗಿ ಇದ್ದರೂ, ನಿನ್ನ ಮೇಜಿನಲ್ಲಿ ಭೋಜನ ಮಾಡುವವರೊಳಗೆ ನಿನ್ನ ಸೇವಕನನ್ನು ಇಟ್ಟಿ. ನಾನು ಇನ್ನು ಅರಸನಿಗೆ ಹೆಚ್ಚು ಮೊರೆಯಿಡುವುದಕ್ಕೆ ಯೋಗ್ಯನೋ?” ಎಂದನು.


ಹಾಗೆಯೇ ದಾವೀದನು ಸೌಲನಿಗೆ ಪ್ರಮಾಣ ಮಾಡಿದನು. ಆಗ ಸೌಲನು ತನ್ನ ಮನೆಗೆ ಹೋದನು. ಆದರೆ ದಾವೀದನೂ ಅವನ ಮನುಷ್ಯರೂ ಆಶ್ರಯಗಿರಿಗೆ ಏರಿಹೋದರು.


ಅವರ ಮುಖ್ಯಸ್ಥ ಅಹೀಗೆಜೆರ್, ಇವನ ನಂತರ ಯೋವಾಷ್. ಇವರಿಬ್ಬರೂ ಗಿಬೆಯ ಊರಿನ ಶೇಮಾನ ಪುತ್ರರು. ಅಜ್ಮಾವೆತನ ಪುತ್ರರಾದ ಯೆಜಿಯೇಲ್ ಮತ್ತು ಪೆಲೆಟ್, ಅನಾತೋತ್ ಊರಿನವರಾದ ಬೆರಾಕಾ, ಯೇಹು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು