Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 22:31 - ಕನ್ನಡ ಸಮಕಾಲಿಕ ಅನುವಾದ

31 “ದೇವರ ಮಾರ್ಗವು ಪರಿಪೂರ್ಣವಾದದ್ದು; ಯೆಹೋವ ದೇವರ ವಾಕ್ಯವು ದೋಷವಿಲ್ಲದ್ದು; ತಮ್ಮಲ್ಲಿ ಆಶ್ರಯ ಹೊಂದಿದ ಎಲ್ಲರಿಗೂ ಅವರು ಗುರಾಣಿಯಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ದೇವರ ಮಾರ್ಗವು ಯಾವ ದೋಷವೂ ಇಲ್ಲದ್ದು ಯೆಹೋವನ ವಚನವು ಶುದ್ಧವಾದದ್ದು. ಆತನು ಆಶ್ರಿತರೆಲ್ಲರಿಗೆ ಗುರಾಣಿಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ದೇವರ ಮಾರ್ಗ ದೋಷರಹಿತ ಸರ್ವೇಶ್ವರನ ವಚನ ಪರಮಪುನೀತ ಆಶ್ರಿತರೆಲ್ಲರಿಗಾತ ರಕ್ಷಣಾಕವಚ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ದೇವರ ಮಾರ್ಗವು ಯಾವ ದೋಷವೂ ಇಲ್ಲದ್ದು; ಯೆಹೋವನ ವಚನವು ಶುದ್ಧವಾದದ್ದು. ಆತನು ಆಶ್ರಿತರೆಲ್ಲರಿಗೆ ಗುರಾಣಿಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ದೇವರ ಶಕ್ತಿಯು ಪರಿಪೂರ್ಣವಾದದ್ದು. ಯೆಹೋವನ ಮಾತು ಪರೀಕ್ಷಿಸಲ್ಪಟ್ಟದ್ದು; ಆತನು ತನ್ನಲ್ಲಿ ಭರವಸೆಯಿಟ್ಟವರನ್ನು ಸಂರಕ್ಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 22:31
18 ತಿಳಿವುಗಳ ಹೋಲಿಕೆ  

ದೇವರು ಸಂರಕ್ಷಿಸುವ ಬಂಡೆ. ದೇವರ ಕಾರ್ಯವು ಸಂಪೂರ್ಣವಾದದ್ದು. ಅವರ ಮಾರ್ಗಗಳೆಲ್ಲಾ ನ್ಯಾಯವಾಗಿವೆ. ಅವರು ಯಾವ ತಪ್ಪನ್ನೂ ಮಾಡದ ನಂಬಿಗಸ್ತ ದೇವರು, ನೀತಿವಂತರೂ ಯಥಾರ್ಥರೂ ಆದ ದೇವರು.


“ದೇವರ ಪ್ರತಿಯೊಂದು ಮಾತು ದೋಷವಿಲ್ಲದ್ದು; ದೇವರಲ್ಲಿ ಭರವಸವಿಡುವವನಿಗೆ ಅವರು ಗುರಾಣಿಯಾಗಿದ್ದಾರೆ.


ದೇವರ ಮಾರ್ಗವು ಪರಿಪೂರ್ಣವಾದದ್ದು, ಯೆಹೋವ ದೇವರ ವಾಕ್ಯವು ದೋಷವಿಲ್ಲದ್ದು; ತಮ್ಮಲ್ಲಿ ಆಶ್ರಯ ಹೊಂದಿದ ಎಲ್ಲರಿಗೂ ಅವರು ಗುರಾಣಿಯಾಗಿದ್ದಾರೆ.


ಆದ್ದರಿಂದ, ಪರಲೋಕದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣರಾಗಿರುವಂತೆ ನೀವೂ ಪರಿಪೂರ್ಣರಾಗಿರಿ.


ನಿಮ್ಮ ವಾಗ್ದಾನಗಳು ಬಹು ಪರಿಶೋಧಿತವಾಗಿವೆ, ಆದ್ದರಿಂದ ನಿಮ್ಮ ಸೇವಕನು ಅವುಗಳನ್ನು ಪ್ರೀತಿಸುತ್ತಾನೆ.


ಯೆಹೋವ ದೇವರ ವಾಕ್ಯಗಳು ದೋಷವಿಲ್ಲದ್ದು. ಅವು ಮಣ್ಣಿನ ಕುಲುಮೆಯಲ್ಲಿ ಶುದ್ಧೀಕರಿಸಿದ ಬೆಳ್ಳಿಯಂತೆಯೂ ಏಳು ಸಾರಿ ಪುಟಕ್ಕೆ ಹಾಕಿದ ಬಂಗಾರದಂತೆಯೂ ಇವೆ.


ನನ್ನ ಬಂಡೆಯಾದ ದೇವರಲ್ಲಿ, ನಾನು ಭರವಸವಿಡುವೆನು; ಅವರು ನನ್ನ ಗುರಾಣಿ ಮತ್ತು ನನ್ನ ರಕ್ಷಣೆಯ ಕೊಂಬು, ಅವರು ನನ್ನ ಉನ್ನತವಾದ ದುರ್ಗವೂ, ನನ್ನ ಆಶ್ರಯವೂ, ಬಲಾತ್ಕಾರಿಯಿಂದ ನನ್ನನ್ನು ರಕ್ಷಿಸುವವರೂ ಅವರೇ ಆಗಿದ್ದಾರೆ.


ಗುರಾಣಿಯನ್ನೂ ಖಡ್ಗವನ್ನೂ ಹಿಡಿದುಕೊಂಡು ನನ್ನ ಸಹಾಯಕ್ಕೆ ಎದ್ದು ಬನ್ನಿರಿ.


ತಮ್ಮ ರೆಕ್ಕೆಗಳಿಂದ ನಿಮ್ಮನ್ನು ಹೊದಿಸುವರು. ದೇವರ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳುವಿರಿ. ದೇವರ ಸತ್ಯತೆಯು ನಿಮ್ಮ ಖೇಡ್ಯವೂ ಕೋಟೆಯೂ ಆಗಿರುವುದು.


ನಮ್ಮ ಗುರಾಣಿಯಾಗಿರುವ ದೇವರೇ, ನೋಡಿರಿ. ನಿಮ್ಮ ಅಭಿಷಿಕ್ತನ ಮುಖವನ್ನು ದೃಷ್ಟಿಸಿ ನೋಡಿರಿ.


ದೇವರ ದಾಸನಾದ ಮೋಶೆಯ ಮತ್ತು ಕುರಿಮರಿ ಆಗಿರುವವರ ಹಾಡನ್ನೂ ಹಾಡುತ್ತಾ: “ಕರ್ತ ಆಗಿರುವ ಸರ್ವಶಕ್ತ ದೇವರೇ, ನಿಮ್ಮ ಕೃತ್ಯಗಳು ಮಹತ್ತಾದವುಗಳೂ ಆಶ್ಚರ್ಯವಾದವುಗಳೂ ಆಗಿವೆ. ರಾಷ್ಟ್ರಗಳ ಅರಸರಾಗಿರುವ ನಿಮ್ಮ ಮಾರ್ಗಗಳು ನೀತಿಯುಳ್ಳವೂ ಸತ್ಯವೂ ಆಗಿವೆ.


ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸರನ್ನು ಸ್ತುತಿಸಿ, ಹೆಚ್ಚಿಸಿ ಘನಪಡಿಸುತ್ತೇನೆ. ಅವರ ಕ್ರಿಯೆಗಳೆಲ್ಲಾ ಸತ್ಯವೇ. ಅವರ ಮಾರ್ಗಗಳು ನ್ಯಾಯವೇ. ಗರ್ವದಲ್ಲಿ ನಡೆಯುವವರನ್ನು ಅವರೇ ತಗ್ಗಿಸಬಲ್ಲರು.


ನಾನು ಯೆಹೋವ ದೇವರ ತೀರ್ಪನ್ನು ಹೀಗೆ ಪ್ರಕಟಿಸುವೆನು: ಅವರು ನನಗೆ ಹೇಳಿದ್ದು, “ನೀನು ನನ್ನ ಪುತ್ರನು; ಇಂದು ನಾನು ನಿನ್ನ ತಂದೆಯಾಗಿದ್ದೇನೆ.


ಅವನ ಹೃದಯವು ನಿಮ್ಮ ಮುಂದೆ ಪ್ರಾಮಾಣಿಕವಾದದ್ದೆಂದೂ ಗುರುತಿಸಿದಿರಿ. ಕಾನಾನ್ಯರೂ, ಹಿತ್ತಿಯರೂ, ಅಮೋರಿಯರೂ, ಪೆರಿಜೀಯರೂ, ಯೆಬೂಸಿಯರೂ, ಗಿರ್ಗಾಷಿಯರೂ ಇವರ ದೇಶವನ್ನು, ಅಬ್ರಾಮನ ಸಂತಾನಕ್ಕೆ ಕೊಡುವಂತೆ ಅವನ ಸಂಗಡ ಒಡಂಬಡಿಕೆಯನ್ನು ಮಾಡಿದಿರಿ. ನೀತಿವಂತರಾದ ನೀವು ನಿಮ್ಮ ವಾಗ್ದಾನವನ್ನು ಈಡೇರಿಸಿದಿರಿ.


“ಆದ್ದರಿಂದ ಬುದ್ಧಿವಂತರೇ, ನಾನು ಹೇಳುವುದನ್ನು ಕೇಳಿರಿ, ದೇವರು ಕೆಟ್ಟದ್ದನ್ನು ಮಾಡುತ್ತಾರೆಂಬ ಯೋಚನೆ ದೂರವಿರಲಿ. ಸರ್ವಶಕ್ತರು ಅನ್ಯಾಯವನ್ನು ಎಸಗುತ್ತಾರೆಂಬ ಭಾವನೆ ದೂರವಾಗಿರಲಿ.


ಯೆಹೋವ ದೇವರು ತಮ್ಮ ಎಲ್ಲಾ ಮಾರ್ಗಗಳಲ್ಲಿ ನೀತಿವಂತರೂ ತಮ್ಮ ಸೃಷ್ಟಿಗೆಲ್ಲಾ ಪ್ರೀತಿ ತೋರಿಸುವವರೂ ಆಗಿದ್ದಾರೆ.


ದೇವರು ಮಾಡುವ ಕಾರ್ಯವೆಲ್ಲವೂ ಶಾಶ್ವತವಾಗಿರುವುದೆಂದು ನಾನು ಬಲ್ಲೆನು; ಅದಕ್ಕೆ ಯಾವುದನ್ನೂ ಕೂಡಿಸಲಾಗದು ಮತ್ತು ಯಾವುದನ್ನೂ ತೆಗೆಯಲಾಗದು. ತಮ್ಮ ಸನ್ನಿಧಿಯಲ್ಲಿ ಮನುಷ್ಯರು ಭಯಭಕ್ತಿಯಿಂದ ಜೀವಿಸಬೇಕೆಂದು ದೇವರು ಇದನ್ನು ಮಾಡಿದ್ದಾರೆ.


ಆ ಸಮಯದ ಅಂತ್ಯದಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರಲೋಕದ ಕಡೆಗೆ ಎತ್ತಿದೆನು. ನನ್ನ ತಿಳುವಳಿಕೆ ನನಗೆ ತಿರುಗಿ ಬಂತು. ಆಗ ನಾನು ಮಹೋನ್ನತರನ್ನು ಕೊಂಡಾಡಿದೆನು. ಸದಾಕಾಲಕ್ಕೂ ಇರುವವರಾದ ಅವರನ್ನು ಗೌರವಿಸಿ, ಮಹಿಮೆ ಪಡಿಸಿದೆನು. ಅವರ ಆಡಳಿತವು ನಿತ್ಯವಾದ ಆಡಳಿತವಾಗಿದೆ. ಅವರ ರಾಜ್ಯವು ತಲತಲಾಂತರಕ್ಕೂ ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು