Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 22:40 - ಕನ್ನಡ ಸಮಕಾಲಿಕ ಅನುವಾದ

40 ನೀವು ಯುದ್ಧಕ್ಕಾಗಿ ನನಗೆ ಬಲವನ್ನು ಆಯುಧವನ್ನಾಗಿ ನೀಡಿ; ನನ್ನ ಎದುರಾಳಿಗಳನ್ನು ನನಗೆ ಅಧೀನ ಮಾಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ನೀನು ನನಗೆ ಯುದ್ಧಕ್ಕಾಗಿ ಶೌರ್ಯವೆಂಬ ನಡುಕಟ್ಟನ್ನು ಬಿಗಿದಿದ್ದಿ. ಎದುರಾಳಿಗಳನ್ನು ಕುಗ್ಗಿಸಿ ನನಗೆ ಅಧೀನಮಾಡಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ನನಗಿತ್ತೆ ನೀ ಕದನಕ್ಕಾಗುವ ಶೌರ್ಯವೆಂಬ ನಡುಕಟ್ಟು ತಗ್ಗಿಸಿದೆ ಎದುರಾಳಿಗಳ ನನಗಧೀನ ಮಾಡಿಬಿಟ್ಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ನೀನು ನನಗೆ ಯುದ್ಧಕ್ಕಾಗಿ ಶೌರ್ಯವೆಂಬ ನಡುಕಟ್ಟನ್ನು ಬಿಗಿದಿದ್ದೀ; ಎದುರಾಳಿಗಳನ್ನು ಕುಗ್ಗಿಸಿ ನನಗೆ ಅಧೀನ ಮಾಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ದೇವರೇ, ನೀನು ನನ್ನನ್ನು ಯುದ್ಧಕ್ಕಾಗಿ ಬಲಪಡಿಸಿರುವೆ. ನನ್ನ ಶತ್ರುಗಳನ್ನು ನನಗೆ ಅಧೀನರಾಗುವಂತೆ ಮಾಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 22:40
11 ತಿಳಿವುಗಳ ಹೋಲಿಕೆ  

ನಿಮ್ಮಿಂದ ನಮ್ಮ ವೈರಿಗಳನ್ನು ದಬ್ಬುವೆವು; ನಿಮ್ಮ ಹೆಸರಿನಲ್ಲಿ ನಮ್ಮ ಎದುರಾಳಿಗಳನ್ನು ತುಳಿಯುವೆವು.


ದೇವರ ಮಹಿಮೆಯ ಪರಾಕ್ರಮದಿಂದ ಬರುವ ಸರ್ವಶಕ್ತಿಯನ್ನು ಹೊಂದಿ ಬಲಗೊಳ್ಳಲಿ ಎಂದು ಬೇಡಿಕೊಳ್ಳುತ್ತೇವೆ. ಆಗ ನೀವು ಸರ್ವತಾಳ್ಮೆಯನ್ನೂ ದೀರ್ಘಶಾಂತಿಯನ್ನೂ ಹೊಂದಿದವರಾಗಿ,


ಆಗ ನಿನ್ನನ್ನು ಕುಗ್ಗಿಸಿದವರು, ಬಗ್ಗಿಕೊಂಡು ನಿನ್ನ ಬಳಿಗೆ ಬರುವರು. ನಿನ್ನನ್ನು ಅಸಹ್ಯಿಸಿದವರೆಲ್ಲರೂ ನಿನ್ನ ಪಾದಗಳಿಗೆ ಅಡ್ಡಬಿದ್ದು, ನಿನ್ನನ್ನು ಯೆಹೋವ ದೇವರ ಪಟ್ಟಣವೆಂದೂ, ಇಸ್ರಾಯೇಲಿನ ಪರಿಶುದ್ಧನ ಚೀಯೋನೆಂದೂ ಕರೆಯುವರು.


ನೀವು ಯುದ್ಧಕ್ಕಾಗಿ ನನಗೆ ಬಲವನ್ನು ಆಯುಧವನ್ನಾಗಿ ನೀಡಿ, ನನ್ನ ಎದುರಾಳಿಗಳನ್ನು ನನಗೆ ಅಧೀನ ಮಾಡಿದ್ದೀರಿ.


ಅವರು ಹೊಸಹಾಡನ್ನು ಹಾಡುತ್ತಾ, “ನೀವು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವುದಕ್ಕೆ ಯೋಗ್ಯರಾಗಿದ್ದೀರಿ. ಏಕೆಂದರೆ ನೀವು ವಧಿತರಾಗಿ, ನಿಮ್ಮ ರಕ್ತದಿಂದ ಸಕಲ ಕುಲ, ಭಾಷೆ, ಪ್ರಜೆ, ರಾಷ್ಟ್ರಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿರುವಿರಿ.


ನಾನೇ ಯೆಹೋವ ದೇವರು, ಮತ್ತೊಬ್ಬನಿಲ್ಲ. ನನ್ನ ಹೊರತು ಯಾವ ದೇವರೂ ಇಲ್ಲ. ನೀನು ನನ್ನನ್ನು ಅರಿಯದವನಾಗಿದ್ದರೂ ನಿನ್ನನ್ನು ಬಲಪಡಿಸುವೆನು.


ಅವರು ನನ್ನನ್ನು ಪ್ರೀತಿಸುವ ದೇವರು, ಅವರು ನನ್ನ ಕೋಟೆಯೂ, ನನ್ನ ಬಲವಾದ ಆಶ್ರಯವೂ, ನನ್ನನ್ನು ತಪ್ಪಿಸುವವರೂ, ನನ್ನ ಭರವಸೆಯೂ, ನನ್ನ ಗುರಾಣಿಯೂ, ಜನಾಂಗಗಳನ್ನು ನನಗೆ ವಶಮಾಡುವವರೂ ಆಗಿದ್ದಾರೆ.


ಬಲದಿಂದ ನನಗೆ ಆಯುಧವನ್ನು ಧರಿಸುವಂತೆ ಮಾಡಿ, ನನ್ನ ಮಾರ್ಗವನ್ನು ಸುರಕ್ಷಿತಗೊಳಿಸುವ ದೇವರು ಅವರೇ.


ಹಾಗೆಯೇ ದಾವೀದನೂ, ಅವನ ಜನರೂ ಎದ್ದು ಕೆಯೀಲಾ ನಗರಕ್ಕೆ ಹೋಗಿ, ಫಿಲಿಷ್ಟಿಯರ ಸಂಗಡ ಯುದ್ಧಮಾಡಿ, ಅವರ ಪಶುಗಳನ್ನು ಹಿಡಿದುಕೊಂಡು ಬಂದು, ಅವರನ್ನು ಪೂರ್ಣವಾಗಿ ಸೋಲಿಸಿದರು. ಈ ಪ್ರಕಾರ ದಾವೀದನು ಕೆಯೀಲಾ ನಗರದ ನಿವಾಸಿಗಳನ್ನು ರಕ್ಷಿಸಿದನು.


ಶಾಪವು ಅವನಿಗೆ ತೊಟ್ಟುಕೊಂಡ ಅಂಗಿಯ ಹಾಗೆಯೂ, ಯಾವಾಗಲೂ ಸೊಂಟಕ್ಕೆ ಕಟ್ಟುವ ನಡುಕಟ್ಟಿನ ಹಾಗೆಯೂ ಇರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು