Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 22:43 - ಕನ್ನಡ ಸಮಕಾಲಿಕ ಅನುವಾದ

43 ನಾನು ಅವರನ್ನು ನೆಲದ ಧೂಳಿನಂತೆ ಪುಡಿಪುಡಿ ಮಾಡಿದೆನು; ಬೀದಿಯಲ್ಲಿನ ಕೆಸರು ಎಂಬಂತೆ ತುಳಿದು ಎಸೆದುಬಿಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಭೂಮಿಯ ಧೂಳನ್ನೋ ಎಂಬಂತೆ ಅವರನ್ನು ಪುಡಿಪುಡಿ ಮಾಡಿದೆನು. ಬೀದಿಯಲ್ಲಿರುವ ಕೆಸರನ್ನೋ ಎಂಬಂತೆ ಅವರನ್ನು ತುಳಿದು ಎಸೆದುಬಿಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಪುಡಿಪುಡಿ ಮಾಡಿದೆ ನಾನವರನು ಮಣ್ಣಿನ ಹೆಂಟೆಯಂತೆ ಎತ್ತೆಸೆದುಬಿಟ್ಟೆ ನಾನವರನು ಮೋರಿಯ ಕೆಸರಿನಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಭೂವಿುಯ ಧೂಳನ್ನೋ ಎಂಬಂತೆ ಅವರನ್ನು ಪುಡಿಪುಡಿಮಾಡಿದೆನು; ಬೀದಿಯಲ್ಲಿರುವ ಕೆಸರನ್ನೋ ಎಂಬಂತೆ ಅವರನ್ನು ತುಳಿದು ಎಸೆದುಬಿಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ನಾನು ನನ್ನ ಶತ್ರುಗಳನ್ನು ತುಂಡುತುಂಡಾಗಿ ಕತ್ತರಿಸಿಹಾಕಿದೆ. ಅವರು ನೆಲದ ಮೇಲಿನ ಧೂಳಿನಂತಾದರು. ನನ್ನ ಶತ್ರುಗಳನ್ನು ರಸ್ತೆಯಲ್ಲಿನ ಮಣ್ಣಿನಂತಾಗುವವರೆಗೆ ತುಳಿದುಬಿಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 22:43
15 ತಿಳಿವುಗಳ ಹೋಲಿಕೆ  

ಆಗ ನನ್ನ ಶತ್ರು ಇದನ್ನು ನೋಡುವನು. ಅವನ ಮುಖವನ್ನು ಅವಮಾನದಿಂದ ಮುಚ್ಚಿಕೊಳ್ಳುವನು, “ನಿನ್ನ ಯೆಹೋವ ದೇವರು ಎಲ್ಲಿ?” ಎಂದು ನನ್ನನ್ನು ಜರೆದವರೇ ನಾಚಿಕೆಪಡುವರು. ಇದನ್ನು ನಾನು ಕಣ್ಣಾರೆ ಕಾಣುವೆನು. ಆ ಶತ್ರುಗಳಾದರೋ ಬೀದಿಯ ಕಸದಂತೆ ದಾರಿಹೋಕರ ತುಳಿತಕ್ಕೆ ಈಡಾಗುವರು.


ನಾನು ಅವನನ್ನು ಭಕ್ತಿಹೀನ ಜನರಿಗೆ ವಿರುದ್ಧವಾಗಿ ಕಳುಹಿಸಿ, ನನ್ನ ಕೋಪಕ್ಕೆ ಗುರಿಯಾದ ನನ್ನ ಪ್ರಜೆಯನ್ನು ಸೂರೆಮಾಡಿ, ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದುಹಾಕಬೇಕೆಂದು ಅಪ್ಪಣೆ ಕೊಡುವೆನು.


ಯೆಹೋವಾಹಾಜನ ಸೈನ್ಯದಲ್ಲಿ ಐವತ್ತು ಕುದುರೆ ರಾಹುತರು, ಹತ್ತು ರಥಗಳು, ಹತ್ತು ಸಾವಿರ ಜನ ಕಾಲಾಳುಗಳ ಹೊರತು ಏನೂ ಉಳಿಯಲಿಲ್ಲ. ಏಕೆಂದರೆ ಅರಾಮಿನ ಅರಸನು ಉಳಿದವರನ್ನು ಸಂಹರಿಸಿ, ತುಳಿದು, ಧೂಳಿನ ಹಾಗೆ ಮಾಡಿದನು.


ಅವರು ಯುದ್ಧದಲ್ಲಿ ಶತ್ರುವನ್ನು ಕೆಸರಿನ ಬೀದಿಗಳಲ್ಲಿ ತುಳಿಯುವ ಶೂರರ ಹಾಗಿರುವರು. ಯೆಹೋವ ದೇವರು ಅವರ ಸಂಗಡ ಇರುವುದರಿಂದ ಯುದ್ಧಮಾಡುವರು. ಕುದುರೆಗಳ ಮೇಲೆ ಸವಾರಿ ಮಾಡುವ ಶತ್ರುವನ್ನು ನಾಚಿಕೆ ಪಡಿಸುವರು.


ಇದಲ್ಲದೆ ಅವರು ಖಡ್ಗಕ್ಕೆ ತುತ್ತಾಗಿ ಬೀಳುವರು ಮತ್ತು ಸೆರೆಯಾಗಿ ಎಲ್ಲಾ ರಾಷ್ಟ್ರಗಳಲ್ಲಿ ಒಯ್ಯುವರು. ಯೆಹೂದ್ಯರಲ್ಲದವರ ಕಾಲ ಪರಿಪೂರ್ಣವಾಗುವವರೆಗೆ ಅವರು ಯೆರೂಸಲೇಮನ್ನು ತುಳಿದುಹಾಕುವರು.


“ಖಂಡಿತವಾಗಿ ಆ ದಿನ ಬರುತ್ತದೆ, ಅದು ಒಲೆಯಂತೆ ಉರಿಯುತ್ತದೆ. ಆಗ ಗರ್ವಿಷ್ಠರೆಲ್ಲರೂ ಕೆಟ್ಟದ್ದನ್ನು ಮಾಡುವವರೆಲ್ಲರೂ ಹುಲ್ಲಿನಂತಿರುವರು. ಬರುವ ಆ ದಿನವು ಅವರನ್ನು ಸುಟ್ಟುಬಿಡುವುದು. ಬೇರನ್ನಾದರೂ, ಕೊಂಬೆಯನ್ನಾದರೂ ಅವರಿಗೆ ಬಿಡದು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


“ಎಲೈ, ನೀವು ಹೊರಗೆ ಬಂದು ಉತ್ತರ ದೇಶದಿಂದ ಓಡಿಹೋಗಿರಿ. ಏಕೆಂದರೆ ಆಕಾಶದ ನಾಲ್ಕು ದಿಕ್ಕುಗಳಿಗೆ ನಿಮ್ಮನ್ನು ಚದರಿಸಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ಆಗ ಕಬ್ಬಿಣವೂ, ಮಣ್ಣೂ, ಕಂಚು, ಬೆಳ್ಳಿಯೂ, ಬಂಗಾರವೂ ಕೂಡ ಒಡೆದು, ಚೂರುಚೂರಾಗಿ, ಬೇಸಿಗೆ ಕಾಲದ ಧಾನ್ಯದ ಹೊಟ್ಟಿನ ಹಾಗಾದವು. ಅವುಗಳಿಗೆ ನೆಲೆ ಸಿಗದೆ, ಗಾಳಿಯು ಅವುಗಳನ್ನು ಹೊಡೆದುಕೊಂಡು ಹೋಯಿತು. ಪ್ರತಿಮೆಯನ್ನು ಬಡಿದ ಕಲ್ಲು, ದೊಡ್ಡ ಬೆಟ್ಟವಾಗಿ ಸಮಸ್ತ ಭೂಮಿಯನ್ನು ತುಂಬಿಸಿತು.


ಜನಾಂಗವನ್ನು ಹೆಚ್ಚಿಸಿದ್ದೀರಿ. ಯೆಹೋವ ದೇವರೇ, ಜನಾಂಗವನ್ನು ಹೆಚ್ಚಿಸಿದ್ದೀರಿ. ನೀವು ಮಹಿಮೆ ಹೊಂದಿದ್ದೀರಿ. ನೀವು ದೇಶದ ಮೇರೆಗಳನ್ನೆಲ್ಲಾ ಭೂಮಿಯ ಕಟ್ಟಕಡೆಯವರೆಗೂ ವಿಸ್ತರಿಸಿದ್ದೀರಿ.


ಅವರು ಗಾಳಿಗೆ ಹಾರುವ ಹೊಟ್ಟಿನ ಹಾಗೆ ಆಗಲಿ; ಯೆಹೋವ ದೇವರ ದೂತನು ಅವರನ್ನು ಹಿಂದಟ್ಟಲಿ.


ಅವರನ್ನು ಗಾಳಿಯಿಂದ ಬಡಿಸಿಕೊಂಡು ಹೋಗುವ ಧೂಳಿನಂತೆ ಪುಡಿಪುಡಿ ಮಾಡಿದೆನು; ಬೀದಿಯಲ್ಲಿನ ಕೆಸರು ಎಂಬಂತೆ ತುಳಿದು ಎಸೆದುಬಿಟ್ಟೆನು.


ನಾನು ಅವರನ್ನು ಚದರಿಸಿಬಿಡುವೆನು. ಅವರ ನೆನಪೇ ಮನುಷ್ಯರಲ್ಲಿ ಇರದ ಹಾಗೆ ಮಾಡುತ್ತಿದ್ದೆನು.


ಪೂರ್ವದಿಂದ ನೀತಿವಂತನನ್ನು ಎಬ್ಬಿಸಿ, ಅವನನ್ನು ತನ್ನ ಪಾದಸನ್ನಿಧಿಗೆ ಕರೆದು, ರಾಷ್ಟ್ರಗಳನ್ನು ಅವನ ಮುಂದೆ ಕೊಟ್ಟುಬಿಟ್ಟು, ಅವನನ್ನು ರಾಜರ ಮೇಲೆ ಆಳುವುದಕ್ಕೆ ಮಾಡಿದವನು ಯಾರು? ಅವನ ಖಡ್ಗವನ್ನು ಧೂಳನ್ನಾಗಿಯೂ, ಅವನ ಬಿಲ್ಲನ್ನು ಹಾರಿಹೋಗುವ ಹೊಟ್ಟಿನಂತೆಯೂ ಅವರನ್ನು ಕೊಟ್ಟನು.


“ಉತ್ತರ ದಿಕ್ಕಿನಿಂದ ಒಬ್ಬನನ್ನು ನಾನು ಎಬ್ಬಿಸಿದ್ದೇ. ಸೂರ್ಯೋದಯದ ಕಡೆಯಿಂದ ಅವನು ನನ್ನ ಹೆಸರನ್ನು ಸ್ಮರಿಸುವನು. ಅವನು ಜೇಡಿ ಮಣ್ಣಿನಂತೆಯೂ, ಕುಂಬಾರನು ಮಣ್ಣನ್ನು ತುಳಿಯುವಂತೆಯೂ ಅಧಿಕಾರಸ್ಥರ ಮೇಲೆ ಅವನು ಬರುವನು.


ನೀನು ಎಲ್ಲಿ ಹೋದರೂ, ಅಲ್ಲಿ ನಿನ್ನ ಸಂಗಡ ಇದ್ದು, ನಿನ್ನ ಶತ್ರುಗಳನ್ನೆಲ್ಲಾ ನಿನ್ನ ಮುಂದೆಯೇ ಸಂಹರಿಸಿದೆನು. ಭೂಮಿಯಲ್ಲಿರುವ ಮಹಾಪುರುಷರ ಹೆಸರಿನ ಹಾಗೆ ನಿನ್ನ ಹೆಸರನ್ನೂ ಪ್ರಸಿದ್ಧಪಡಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು