Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 23:10 - ಕನ್ನಡ ಸಮಕಾಲಿಕ ಅನುವಾದ

10 ಎಲಿಯಾಜರನು ಎದ್ದು ಖಡ್ಗ ಹಿಡಿದ ತನ್ನ ಕೈ ದಣಿದು ಮರಗಟ್ಟಿ ಹೋಗುವವರೆಗೂ ಫಿಲಿಷ್ಟಿಯರನ್ನು ಸಂಹರಿಸುತ್ತಿದ್ದನು. ಆ ದಿನ ಯೆಹೋವ ದೇವರು ದೊಡ್ಡ ರಕ್ಷಣೆಯನ್ನು ಉಂಟುಮಾಡಿದರು. ಸೈನಿಕರು ಸುಲಿದುಕೊಳ್ಳುವುದಕ್ಕೆ ಮಾತ್ರ ಅವನ ಹಿಂದೆ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇಸ್ರಾಯೇಲರು ಹೋದ ನಂತರ ಇವನು ನಿಂತುಕೊಂಡು, ಕತ್ತಿ ಹಿಡಿದು, ಕೈ ಸೋತು ಹೋಗುವ ತನಕ ಫಿಲಿಷ್ಟಿಯರನ್ನು ಕೊಲ್ಲುತ್ತಲೇ ಇದ್ದನು. ಆ ದಿನದಲ್ಲಿ ಯೆಹೋವನು ಮಹಾಜಯವನ್ನುಂಟುಮಾಡಲು ಇಸ್ರಾಯೇಲರು ಸುಲಿದುಕೊಳ್ಳುವುದಕ್ಕಾಗಿ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇಸ್ರಯೇಲರು ಹೋದನಂತರ ಇವನು ಅಲ್ಲೇ ನಿಂತು, ಕತ್ತಿ ಹಿಡಿದು ಕೈಸೋತು ಮರಗಟ್ಟಿಹೋಗುವ ತನಕ, ಫಿಲಿಷ್ಟಿಯರನ್ನು ಕೊಲ್ಲುತ್ತಲೇ ಇದ್ದನು. ಆ ದಿನ ಸರ್ವೇಶ್ವರ ಮಹಾಜಯವನ್ನುಂಟುಮಾಡಲು ಇಸ್ರಯೇಲರು ಸುಲಿದುಕೊಳ್ಳುವುದಕ್ಕಾಗಿಯೇ, ಹಿಂದಿರುಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇಸ್ರಾಯೇಲ್ಯರು ಹೋದನಂತರ ಇವನು ನಿಂತು ಕತ್ತಿ ಹಿಡಿದ ಕೈ ಸೋತು ಮರಗಟ್ಟಿ ಹೋಗುವ ತನಕ ಫಿಲಿಷ್ಟಿಯರನ್ನು ಕೊಲ್ಲುತ್ತಲೇ ಇದ್ದನು. ಆ ದಿನದಲ್ಲಿ ಯೆಹೋವನು ಮಹಾಜಯವನ್ನುಂಟುಮಾಡಲು ಇಸ್ರಾಯೇಲ್ಯರು ಸುಲುಕೊಳ್ಳುವದಕ್ಕೋಸ್ಕರವೇ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಎಲ್ಲಾಜಾರನು ಆಯಾಸಗೊಳ್ಳುವ ತನಕ ಫಿಲಿಷ್ಟಿಯರೊಡನೆ ಹೋರಾಡಿದನು. ಆದರೆ ಅವನು ತನ್ನ ಕೈ ಸೋತು ಹೋಗುವವರೆಗೂ ಫಿಲಿಷ್ಟಿಯರನ್ನು ಕೊಂದನು. ಯೆಹೋವನು ಇಸ್ರೇಲರಿಗೆ ಅಂದು ಮಹಾವಿಜಯವನ್ನು ಉಂಟುಮಾಡಿದನು. ಎಲ್ಲಾಜಾರನು ಯುದ್ಧದಲ್ಲಿ ವಿಜಯಿಯಾದ ಮೇಲೆ ಜನರು ಹಿಂದಿರುಗಿದರು. ಆದರೆ ಅವರು ಶತ್ರುಗಳಿಂದ ಬೆಲೆಬಾಳುವ ವಸ್ತುಗಳನ್ನು ಅಪಹರಿಸಲು ಮಾತ್ರವೇ ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 23:10
20 ತಿಳಿವುಗಳ ಹೋಲಿಕೆ  

ಅವನು ತನ್ನ ಪ್ರಾಣವನ್ನು ತನ್ನ ಕೈಯಲ್ಲಿ ಹಿಡಿದುಕೊಂಡು ಫಿಲಿಷ್ಟಿಯನನ್ನು ಹೊಡೆದನು. ಯೆಹೋವ ದೇವರು ಸಮಸ್ತ ಇಸ್ರಾಯೇಲರಿಗೋಸ್ಕರ ದೊಡ್ಡ ರಕ್ಷಣೆಯನ್ನು ಉಂಟುಮಾಡಿದರು. ನೀನೂ ಕಂಡು ಸಂತೋಷಪಟ್ಟೆ. ಈಗ ಕಾರಣವಿಲ್ಲದೆ ದಾವೀದನನ್ನು ಕೊಂದು ನಿರ್ದೋಷಿಯ ರಕ್ತಕ್ಕೆ ವಿರೋಧವಾಗಿ ಅಪರಾಧವನ್ನು ಮಾಡುವುದೇಕೆ?” ಎಂದನು.


ಆಗ ಸೌಲನು, “ಯೆಹೋವ ದೇವರು ಈ ದಿವಸ ಇಸ್ರಾಯೇಲಿನಲ್ಲಿ ರಕ್ಷಣೆಯನ್ನು ಉಂಟುಮಾಡಿದ್ದರಿಂದ, ಈ ಹೊತ್ತು ಯಾರನ್ನೂ ಕೊಲ್ಲಬಾರದು,” ಎಂದನು.


ನಾವು ನಮ್ಮ ಬಗ್ಗೆಯೇ ಪ್ರಚಾರ ಮಾಡುವುದಿಲ್ಲ. ಆದರೆ ಕ್ರಿಸ್ತ ಯೇಸು ಕರ್ತ ದೇವರೆಂದೂ ನಾವು ಯೇಸುವಿಗಾಗಿ ನಿಮ್ಮ ಸೇವಕರಾಗಿದ್ದೇವೆ ಎಂದೂ ಪ್ರಚುರಪಡಿಸುತ್ತೇವೆ.


ಯೆಹೂದ್ಯರಲ್ಲದವರನ್ನು ದೇವರಿಗೆ ವಿಧೇಯರಾಗುವುದಕ್ಕಾಗಿ ಕ್ರಿಸ್ತನು ನನ್ನ ಮೂಲಕ ಮಾತಿನಿಂದಲೂ ಕೃತ್ಯದಿಂದಲೂ


ಆದ್ದರಿಂದ ನಾನು ಆತನಿಗೋಸ್ಕರ ದೊಡ್ಡವರೊಂದಿಗೆ ಪಾಲನ್ನು ಕೊಡುವೆನು ಮತ್ತು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲು ಹಂಚಿಕೊಳ್ಳುವನು. ಏಕೆಂದರೆ ಆತನು ತನ್ನ ಪ್ರಾಣವನ್ನು ಮರಣದವರೆಗೂ ಹೊಯ್ದುಬಿಟ್ಟು, ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡನು. ಅನೇಕರ ಪಾಪವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾಪನೆ ಮಾಡಿದನು.


ಅರಸರಿಗೆ ಜಯವನ್ನು ಕೊಡುವ ದೇವರೇ, ನಿಮ್ಮ ಸೇವಕನಾದ ದಾವೀದನನ್ನೂ ಭಯಂಕರ ಖಡ್ಗದಿಂದ ಬಿಡಿಸಿದ್ದೀರಿ.


ದೇವರಿಂದ ನಾವು ಜಯ ಹೊಂದುವೆವು. ದೇವರೇ ನಮ್ಮ ವೈರಿಗಳನ್ನು ತುಳಿದುಬಿಡುವರು.


“ಸೈನ್ಯದೊಡನೆ ಅರಸರು ಓಡಿಹೋದರು. ಪಾಳೆಯದಲ್ಲಿರುವ ಮಹಿಳೆಯರು ಕೊಳ್ಳೆಯನ್ನು ಹಂಚಿಕೊಳ್ಳುವರು.


ಅರಾಮಿನ ಅರಸನ ಸೈನ್ಯಾಧಿಪತಿ ನಾಮಾನನು ತನ್ನ ಯಜಮಾನನ ಮುಂದೆ ಮಹಾಪುರುಷನಾಗಿಯೂ, ಘನವುಳ್ಳವನಾಗಿಯೂ ಇದ್ದನು. ಏಕೆಂದರೆ ಅವನಿಂದ ಯೆಹೋವ ದೇವರು ಅರಾಮ್ಯರಿಗೆ ಬಿಡುಗಡೆಯನ್ನು ಉಂಟುಮಾಡಿದ್ದರು. ಇದಲ್ಲದೆ ಅವನು ಪರಾಕ್ರಮಶಾಲಿಯಾಗಿದ್ದನು. ಆದರೆ ಅವನು ಕುಷ್ಠರೋಗಿಯಾಗಿದ್ದನು.


ಹೀಗೆ ಯೆಹೋವ ದೇವರು ಆ ದಿನದಲ್ಲಿ ಇಸ್ರಾಯೇಲನ್ನು ರಕ್ಷಿಸಿದರು. ಆ ಯುದ್ಧವು ಬೇತಾವೆನಿನವರೆಗೂ ನಡೆಯಿತು.


ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ಯುವಕನಿಗೆ, “ನಾವು ಈ ಸುನ್ನತಿ ಇಲ್ಲದವರ ಠಾಣಕ್ಕೆ ದಾಟಿ ಹೋಗೋಣ ಬಾ; ಒಂದು ವೇಳೆ ಯೆಹೋವ ದೇವರು ನಮಗೋಸ್ಕರ ಕಾರ್ಯವನ್ನು ನಡೆಸುವರು. ಏಕೆಂದರೆ ಅನೇಕ ಜನರಿಂದಲಾದರೂ, ಸ್ವಲ್ಪ ಜನರಿಂದಲಾದರೂ ರಕ್ಷಿಸುವುದಕ್ಕೆ ಯೆಹೋವ ದೇವರಿಗೆ ಅಸಾಧ್ಯವಲ್ಲ,” ಎಂದನು.


ಅವನಿಗೆ ಬಹಳ ಬಾಯಾರಿಕೆಯಾದದರಿಂದ ಅವನು ಯೆಹೋವ ದೇವರಿಗೆ ಮೊರೆಯಿಟ್ಟನು, “ನಿಮ್ಮ ಸೇವಕನಿಗೆ ನೀವು ಈ ಮಹಾ ರಕ್ಷಣೆಯನ್ನು ಕೊಟ್ಟಿದ್ದೀರಿ. ಈಗ ಬಾಯಾರಿಕೆಯಿಂದ ಬಳಲಿ, ಸುನ್ನತಿಯಾಗದ ಈ ಜನರ ಕೈಯಲ್ಲಿ ನಾನು ಬೀಳಬೇಕೋ?” ಎಂದನು.


ಅವನು ಲೇಹಿಗೆ ಬಂದಾಗ, ಫಿಲಿಷ್ಟಿಯರು ಅವನ ಎದುರಾಗಿ ಆರ್ಭಟಿಸುತ್ತಾ ಬಂದರು. ಯೆಹೋವ ದೇವರ ಆತ್ಮ ಅವನ ಮೇಲೆ ಬಲವಾಗಿ ಬಂದದ್ದರಿಂದ, ಅವನ ತೋಳುಗಳಲ್ಲಿ ಕಟ್ಟಿದ್ದ ಸೆಣಬಿನ ಹಗ್ಗಗಳು ಬೆಂಕಿಯಲ್ಲಿ ಸುಟ್ಟುಹೋದ ದಾರದ ಹಾಗೆ ಆದವು. ಅವನ ಕೈಯಲ್ಲಿ ಇದ್ದ ಕಟ್ಟುಗಳು ಬಿಚ್ಚಿಬಿದ್ದವು.


ಯೆಹೋವ ದೇವರು ಅವರನ್ನು ಇಸ್ರಾಯೇಲರ ಕೈಯಲ್ಲಿ ಒಪ್ಪಿಸಿಕೊಟ್ಟರು. ಇವರು ಅವರನ್ನು ಹೊಡೆದು ದೊಡ್ಡ ಸೀದೋನ್, ಮಿಸ್ರೆಫೋತ್ಮಯಿಮ್ ಎಂಬ ಊರುಗಳವರೆಗೂ ಪೂರ್ವದಿಕ್ಕಿನಲ್ಲಿರುವ ಮಿಚ್ಪೆಯ ಕಣಿವೆಯವರೆಗೂ ಹಿಂದಟ್ಟಿ, ಅವರಲ್ಲಿ ಒಬ್ಬನನ್ನಾದರೂ ಉಳಿಸದೆ ಎಲ್ಲರನ್ನು ಸಂಹರಿಸಿದರು.


ಯೆಹೋಶುವನು ಈ ಸಮಸ್ತ ಅರಸರನ್ನೂ, ಅವರ ರಾಜ್ಯವನ್ನೂ ಏಕಕಾಲದಲ್ಲಿ ವಶಪಡಿಸಿಕೊಂಡನು. ಏಕೆಂದರೆ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಇಸ್ರಾಯೇಲಿಗೋಸ್ಕರ ಯುದ್ಧಮಾಡಿದರು.


ಆಗ ಯೆಹೋವ ದೇವರು ಅವರನ್ನು ಇಸ್ರಾಯೇಲಿನ ಮುಂದೆ ಕಳವಳಗೊಳಿಸಿದರು. ಯೆಹೋಶುವನು ಮತ್ತು ಇಸ್ರಾಯೇಲರು ಗಿಬ್ಯೋನಿನಲ್ಲಿ ಸಂಪೂರ್ಣವಾಗಿ ಸಂಹರಿಸಿ, ಬೇತ್ ಹೋರೋನಿಗೆ ಹೋಗುವ ಮಾರ್ಗದಲ್ಲಿ ಅವರನ್ನು ಹಿಂದಟ್ಟಿ, ಅಜೇಕ, ಮಕ್ಕೇದದ ಎಂಬ ಊರುಗಳವರೆಗೆ ಹೊಡೆದರು.


ಆದರೆ ಅವನು ಆ ಹೊಲದ ಮಧ್ಯದಲ್ಲಿ ನಿಂತುಕೊಂಡು, ಫಿಲಿಷ್ಟಿಯರನ್ನು ಕೊಂದುಹಾಕಿ ಹೊಲವನ್ನು ಕಾಪಾಡಿದನು, ಹೀಗೆ ಯೆಹೋವ ದೇವರು ಮಹಾಜಯವನ್ನು ಉಂಟುಮಾಡಿದರು.


ಪಸ್ ದಮ್ಮೀಮ್ ಎಂಬಲ್ಲಿ ಫಿಲಿಷ್ಟಿಯರು ಜವೆಗೋಧಿ ತುಂಬಿರುವ ಹೊಲದಲ್ಲಿ ಯುದ್ಧಕ್ಕಾಗಿ ಸೇರಿದಾಗ ಇವನು ದಾವೀದನ ಸಂಗಡ ಇದ್ದನು. ಅಲ್ಲಿ ಇಸ್ರಾಯೇಲ್ ಸೈನ್ಯದವರು ಫಿಲಿಷ್ಟಿಯರ ಎದುರಿನಿಂದ ಓಡಿಹೋದರು.


ಇಸ್ರಾಯೇಲರು ಫಿಲಿಷ್ಟಿಯರನ್ನು ಓಡಿಸಿಬಿಟ್ಟ ತರುವಾಯ ತಿರುಗಿಬಂದು ಅವರ ಡೇರೆಗಳನ್ನು ಸೂರೆಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು