Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 23:19 - ಕನ್ನಡ ಸಮಕಾಲಿಕ ಅನುವಾದ

19 ಈ ಮೂವರಲ್ಲಿ ಅವನು ಇಬ್ಬರಿಗಿಂತ ಹೆಚ್ಚು ಘನವುಳ್ಳವನಾಗಿದ್ದನು, ಆದ್ದರಿಂದ ಅವನು ಅವರಲ್ಲಿ ಪ್ರಧಾನನಾದನು. ಆದರೂ ಆ ಮೊದಲಿನ ಮೂರು ಜನರಿಗೆ ಅವನು ಸಮಾನನಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅ ಮೂವರಲ್ಲಿ ಘನತೆಯುಳ್ಳವನೂ, ನಾಯಕನೂ ಇವನೇ. ಇವನು ಮೊದಲಿನ ಮೂರು ಜನರಿಗಿಂತ ಹೆಚ್ಚು ಪ್ರಸಿದ್ಧನಾಗಿದ್ದನಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಇವರಲ್ಲಿ ಘನತೆ ಗೌರವ ಪಡೆದ ನಾಯಕ ಇವನೇ. ಆದರೂ ಇವನು ಮೊದಲಿನ ಮೂರು ಮಂದಿಗೆ ಸಮಾನನಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಇವರಲ್ಲಿ ಘನವುಳ್ಳವನೂ ನಾಯಕನೂ ಇವನೇ. ಆದರೂ ಇವನು ಮೊದಲಿನ ಮೂರು ಮಂದಿಗೆ ಸಮಾನನಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅಬೀಷೈಯನು ಈ ಮೂವರಿಗಿಂತಲೂ ಹೆಚ್ಚು ಗೌರವಕ್ಕೆ ಪಾತ್ರನಾದನು. ಅವನು ಈ ಮೂವರಿಗೆ ನಾಯಕನಾದನು. ಆದರೆ ಅವನು ಈ ಮೂವರಲ್ಲಿ ಒಬ್ಬನಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 23:19
9 ತಿಳಿವುಗಳ ಹೋಲಿಕೆ  

ಆದರೆ ಒಳ್ಳೆಯ ಭೂಮಿಯಲ್ಲಿ ಬಿತ್ತಲಾಗಿರುವ ಬೀಜವಾಗಿರುವವರು, ವಾಕ್ಯವನ್ನು ಕೇಳಿ ಅದನ್ನು ಗ್ರಹಿಸಿಕೊಳ್ಳುತ್ತಾರೆ. ಇವರು ಫಲ ಫಲಿಸುವವರಾಗಿ ನೂರರಷ್ಟು ಅರವತ್ತರಷ್ಟು ಮತ್ತು ಮೂವತ್ತರಷ್ಟು ಫಲವನ್ನು ಕೊಡುತ್ತಾರೆ.”


ಆದರೆ ಕೆಲವು ಬೀಜಗಳು ಒಳ್ಳೆಯ ಭೂಮಿಯಲ್ಲಿ ಬಿದ್ದು, ಒಂದು ನೂರರಷ್ಟು ಮತ್ತೆ ಕೆಲವು ಅರವತ್ತರಷ್ಟು ಇನ್ನು ಕೆಲವು ಮೂವತ್ತರಷ್ಟು ಫಲಕೊಟ್ಟವು.


ಸೂರ್ಯನ ಮಹಿಮೆ ಬೇರೆ, ಚಂದ್ರನ ಮಹಿಮೆಯೇ ಬೇರೆ ವಿಧ, ನಕ್ಷತ್ರಗಳ ಮಹಿಮೆ ಇನ್ನೊಂದು ವಿಧ. ಏಕೆಂದರೆ, ನಕ್ಷತ್ರ ನಕ್ಷತ್ರಕ್ಕೆ ಮಹಿಮೆಯಲ್ಲಿ ವ್ಯತ್ಯಾಸವಾಗಿರುವುದು.


ಅವನು ಮೂವತ್ತು ಜನರಿಗಿಂತ ಹೆಚ್ಚು ಘನವುಳ್ಳವನಾಗಿದ್ದನು; ಆದರೆ ಆ ಮೊದಲಿನ ಮೂರು ಮಂದಿಯಲ್ಲಿ ಅವನನ್ನು ಸೇರಿಸಲಾಗಲಿಲ್ಲ; ದಾವೀದನು ಅವನನ್ನು ತನ್ನ ಮೈಗಾವಲಿನವರ ಮೇಲೆ ಯಜಮಾನನನ್ನಾಗಿ ಇಟ್ಟನು.


ಆಗ ಆ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿಯರ ದಂಡಿನಲ್ಲಿ ನುಗ್ಗಿಹೋಗಿ ಬೇತ್ಲೆಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ, ದಾವೀದನಿಗೆ ತೆಗೆದುಕೊಂಡು ಬಂದರು. ಆದರೆ ಅದನ್ನು ಅವನು ಕುಡಿಯದೇ ಯೆಹೋವ ದೇವರಿಗೆ ಸಮರ್ಪಿಸುವಂತೆ ನೆಲದ ಮೇಲೆ ಸುರಿದನು.


ಮೂವತ್ತು ಮಂದಿ ಪರಾಕ್ರಮಶಾಲಿಗಳ ಮುಖ್ಯಸ್ಥರಲ್ಲಿ ಮೂರು ಮಂದಿ ಹೊರಟು ಸುಗ್ಗಿಯ ಕಾಲದಲ್ಲಿ ಅದುಲ್ಲಾಮ್ ಗವಿಯಲ್ಲಿರುವ ದಾವೀದನ ಬಳಿಗೆ ಬಂದರು. ಅದೇ ವೇಳೆಯಲ್ಲಿ ಫಿಲಿಷ್ಟಿಯರ ಸೈನ್ಯವು ರೆಫಾಯಿಮ್ ತಗ್ಗಿನಲ್ಲಿ ಪಾಳೆಯ ಮಾಡಿಕೊಂಡಿತ್ತು.


ಇವನ ತರುವಾಯ ಅಹೋಹ್ಯನಾಗಿರುವ ದೋದೋ ಎಂಬವನ ಮಗನಾಗಿರುವ ಎಲಿಯಾಜರನು; ಇವನು ಇಸ್ರಾಯೇಲ್ ಜನರು ಓಡಿ ಹೋದ ತರುವಾಯ ಯುದ್ಧಕ್ಕೆ ಕೂಡಿಬಂದ ಫಿಲಿಷ್ಟಿಯರನ್ನು ನಿಂದಿಸಿದ ದಾವೀದನ ಸಂಗಡ ಇದ್ದ ಮೂವರು ಪರಾಕ್ರಮಶಾಲಿಗಳಲ್ಲಿ ಒಬ್ಬನಾಗಿದ್ದನು.


ಯೋವಾಬನ ಸಹೋದರ ಚೆರೂಯಳ ಮಗ ಅಬೀಷೈಯನು ಮೂರು ಮಂದಿಯಲ್ಲಿ ಮುಖ್ಯಸ್ಥನು. ಅವನು ಮುನ್ನೂರು ಮಂದಿಗೆ ವಿರೋಧವಾಗಿ ತನ್ನ ಈಟಿಯನ್ನು ಎತ್ತಿ ಅವರನ್ನು ಕೊಂದುಹಾಕಿದ್ದರಿಂದ, ಮೂವರಂತೆ ಹೆಸರುಗೊಂಡನು.


ಕಬ್ಜಯೇಲನ ಪರಾಕ್ರಮಶಾಲಿಯ ಮೊಮ್ಮಗನೂ ಯೆಹೋಯಾದಾವನ ಮಗನೂ ಆದ ಬೆನಾಯನು ಅನೇಕ ಶೂರ ಕೃತ್ಯಗಳನ್ನು ಮಾಡಿದನು. ಅವನು ಬಲಶಾಲಿಯಾದ ಮೋವಾಬಿನ ಇಬ್ಬರು ಮನುಷ್ಯರನ್ನು ಕೊಂದನು. ಇದಲ್ಲದೆ ಹಿಮಕಾಲದಲ್ಲಿ ಕುಣಿಯೊಳಗೆ ಇಳಿದು ಒಂದು ಸಿಂಹವನ್ನು ಕೊಂದುಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು