Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 23:3 - ಕನ್ನಡ ಸಮಕಾಲಿಕ ಅನುವಾದ

3 ಇಸ್ರಾಯೇಲಿನ ದೇವರೂ, ಇಸ್ರಾಯೇಲಿನ ಬಂಡೆಯಾದವರೂ ನನಗೆ ಮಾತನಾಡಿದ್ದು: ‘ಮನುಷ್ಯರ ಮೇಲೆ ನೀತಿಯಿಂದ ಆಳುವವನು, ದೇವರ ಭಯದಿಂದ ಆಳುವವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇಸ್ರಾಯೇಲರ ಶರಣನೂ, ದೇವರೂ ಆಗಿರುವಾತನು ಹೇಳಿದ್ದೇನೆಂದರೆ, ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಜನರನ್ನು ನೀತಿಯಿಂದ ಆಳುವವನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇಸ್ರಯೇಲರ ದೇವನು, ಅವರಾಶಕ್ತನು, ಹೀಗೆಂದು ನನಗೆ ನುಡಿದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇಸ್ರಾಯೇಲ್ಯರ ಶರಣನೂ ದೇವರೂ ಆಗಿರುವಾತನು ಹೇಳಿದ್ದೇನಂದರೆ - ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಜನರನ್ನು ನೀತಿಯಿಂದ ಆಳುವವನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಇಸ್ರೇಲಿನ ದೇವರು ಮಾತನಾಡಿದನು. ಇಸ್ರೇಲಿನ ಬಂಡೆಯಾದಾತನು ನನಗೆ ತಿಳಿಸಿದನು. ‘ದೇವರಲ್ಲಿ ಭಯಭಕ್ತಿಯನ್ನಿಟ್ಟು ಜನರನ್ನು ನ್ಯಾಯವಾಗಿ ಆಳುವ ವ್ಯಕ್ತಿಯು

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 23:3
27 ತಿಳಿವುಗಳ ಹೋಲಿಕೆ  

ಏಕೆಂದರೆ ಯೆಹೋವ ದೇವರಲ್ಲದೆ ಬೇರೆ ದೇವರು ಯಾರು? ಮತ್ತು ನಮ್ಮ ದೇವರನ್ನು ಹೊರತುಪಡಿಸಿ ಬಂಡೆ ಯಾರು?


ದೇವರು ಸಂರಕ್ಷಿಸುವ ಬಂಡೆ. ದೇವರ ಕಾರ್ಯವು ಸಂಪೂರ್ಣವಾದದ್ದು. ಅವರ ಮಾರ್ಗಗಳೆಲ್ಲಾ ನ್ಯಾಯವಾಗಿವೆ. ಅವರು ಯಾವ ತಪ್ಪನ್ನೂ ಮಾಡದ ನಂಬಿಗಸ್ತ ದೇವರು, ನೀತಿವಂತರೂ ಯಥಾರ್ಥರೂ ಆದ ದೇವರು.


ಇದಲ್ಲದೆ ನೀನು ಸಮಸ್ತ ಜನರೊಳಗೆ ಸಮರ್ಥರು ಅಂದರೆ ದೇವರಿಗೆ ಭಯಪಡುವವರೂ, ಸತ್ಯವಂತರೂ, ದುರಾಶೆಯನ್ನು ಹಗೆಮಾಡುವವರೂ ಆಗಿರುವವರನ್ನು ಸಾವಿರ ಮಂದಿಯ ಮೇಲೆಯೂ, ನೂರು ಮಂದಿಯ ಮೇಲೆಯೂ, ಐವತ್ತು ಮಂದಿಯ ಮೇಲೆಯೂ, ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸು.


ತಂದೆ ದೇವರು ತಮ್ಮ ಪುತ್ರ ಆಗಿರುವವರ ವಿಷಯದಲ್ಲಿ ಹೀಗೆ ಹೇಳಿದ್ದಾರೆ: “ದೇವರೇ, ನಿಮ್ಮ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು. ನೀತಿದಂಡವೇ ನಿಮ್ಮ ರಾಜದಂಡವಾಗಿದೆ.


ಚೀಯೋನ್ ಪುತ್ರಿಯೇ, ಮಹಾ ಉಲ್ಲಾಸಪಡು. ಯೆರೂಸಲೇಮಿನ ಪುತ್ರಿಯೇ ಆರ್ಭಟಿಸು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ. ಆತನು ನೀತಿವಂತನಾಗಿಯೂ ಜಯಹೊಂದಿದವನಾಗಿಯೂ, ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಮರಿಯ ಮೇಲೆ ಕೂತುಕೊಂಡು ಬರುತ್ತಾನೆ.


ಅರಸನು ನಿಮ್ಮ ಜನರಿಗೆ ನೀತಿಯಿಂದಲೂ ನಿಮ್ಮ ಬಾಧೆಪಟ್ಟ ಪ್ರಜೆಗೆ ನ್ಯಾಯದಿಂದಲೂ ತೀರ್ಪುಮಾಡಲಿ.


“ದೇವರೇ, ಏಕೆ ನನ್ನನ್ನು ಮರೆತುಬಿಟ್ಟಿದ್ದೀರಿ? ಏಕೆ ನಾನು ಶತ್ರುವಿನ ಬಾಧೆಪೀಡಿತನಾಗಿ ದುಃಖದಲ್ಲಿ ಸಾಗಬೇಕು?” ಎಂದು ನನ್ನ ಶರಣನಾದ ದೇವರಿಗೆ ಮೊರೆಯಿಡುವೆನು.


ಅಲ್ಲಿ ಬಲಿಪೀಠವನ್ನು ಕಟ್ಟಿಸಿ ಅದಕ್ಕೆ, ಏಲೆಲೋಹೇ ಇಸ್ರಾಯೇಲ್ ಎಂದು ಹೆಸರಿಟ್ಟನು.


“ಇಗೋ, ದಿನಗಳು ಬರಲಿವೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ಆಗ ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಎಬ್ಬಿಸುತ್ತೇನೆ. ಒಬ್ಬ ಅರಸನು ರಾಜ್ಯವನ್ನಾಳಿ ವೃದ್ಧಿಯಾಗುವನು. ಭೂಮಿಯಲ್ಲಿ ನ್ಯಾಯವನ್ನೂ, ನೀತಿಯನ್ನೂ ನಡೆಸುವನು.


ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು. ಅಧಿಪತಿಗಳು ನ್ಯಾಯದಿಂದ ದೊರೆತನ ಮಾಡುವರು.


ಅವರ ಪರವಾಗಿ ಮಾತನಾಡಿ, ನೀತಿನ್ಯಾಯವನ್ನು ಸ್ಥಾಪಿಸು. ಬಡವರಿಗಾಗಿಯೂ ದಿಕ್ಕಿಲ್ಲದವರಿಗಾಗಿಯೂ ಹಕ್ಕುಬಾಧ್ಯತೆಯನ್ನು ಕಾಪಾಡು.


ನಿಮ್ಮ ಬಲವಾದ ರಾಜದಂಡವನ್ನು ಯೆಹೋವ ದೇವರು ಚೀಯೋನಿನ ಹೊರಗೂ ವಿಸ್ತರಿಸುವರು. “ನಿಮ್ಮ ಶತ್ರುಗಳ ಮಧ್ಯದಲ್ಲಿ ದೊರೆತನ ಮಾಡಿರಿ,” ಎಂದು ಅವರು ನಿಮಗೆ ಹೇಳುವರು.


ಇದಲ್ಲದೆ ನಾನು ಯೆಹೂದ ದೇಶದಲ್ಲಿ ಅವರ ರಾಜ್ಯಪಾಲನಾದ ಕಾಲ ಮೊದಲ್ಗೊಂಡು ಅರಸನಾದ ಅರ್ತಷಸ್ತನ ಇಪ್ಪತ್ತನೆಯ ವರ್ಷ ಮೊದಲ್ಗೊಂಡು ಮೂವತ್ತೆರಡನೆಯ ವರ್ಷದವರೆಗೆ ಹನ್ನೆರಡು ವರ್ಷವಾಗಿ ನಾನೂ, ನನ್ನ ಸಹೋದರರೂ ರಾಜ್ಯಪಾಲನಿಗೆ ಸಲ್ಲತಕ್ಕ ಆಹಾರವನ್ನು ತಿನ್ನಲಿಲ್ಲ.


“ನಿನ್ನನ್ನು ಈಜಿಪ್ಟ್ ದೇಶದಿಂದಲೂ ದಾಸತ್ವದ ನಾಡಿನೊಳಗಿಂದಲೂ ಹೊರಗೆ ತಂದ ನಿನ್ನ ದೇವರಾದ ಯೆಹೋವ ದೇವರು ನಾನೇ.


ಮತ್ತೆ ದೇವರು ಮೋಶೆಗೆ, “ ‘ನಿಮ್ಮ ಪಿತೃಗಳ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿರುವ ಯೆಹೋವ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ,’ ಎಂದು ಇಸ್ರಾಯೇಲರಿಗೆ ಹೇಳಬೇಕು, “ಇದೇ ಯುಗಯುಗಕ್ಕೆ ನನ್ನ ಹೆಸರೂ, ತಲತಲಾಂತರಕ್ಕೂ ನನ್ನನ್ನು ಸ್ಮರಿಸಬೇಕಾದ ಹೆಸರು.


ಇಸ್ರಾಯೇಲಿನ ಸಿಂಹಾಸನದ ಮೇಲೆ ನಿನ್ನನ್ನು ಕುಳ್ಳಿರಿಸಿದ ನಿನ್ನಲ್ಲಿ ಹರ್ಷಗೊಂಡ ನಿನ್ನ ದೇವರಾದ ಯೆಹೋವ ದೇವರಿಗೆ ಸ್ತೋತ್ರವಾಗಲಿ. ಯೆಹೋವ ದೇವರು ಯುಗಯುಗಕ್ಕೂ ಇಸ್ರಾಯೇಲರನ್ನು ಪ್ರೀತಿಮಾಡಿದ್ದರಿಂದ ನ್ಯಾಯವನ್ನೂ, ನೀತಿಯನ್ನೂ ನಡೆಸಲು ಅವರು ನಿನ್ನನ್ನು ಅರಸನನ್ನಾಗಿ ಮಾಡಿದರು,” ಎಂದಳು.


ನ್ಯಾಯವನ್ನು ದ್ವೇಷಿಸುವ ದೇವರು, ಆಳ್ವಿಕೆಮಾಡಲು ಸಾಧ್ಯವೇ? ನೀತಿವಂತರೂ, ಸರ್ವಶಕ್ತರೂ ಆಗಿರುವ ದೇವರ ಮೇಲೆ ನೀನು ತಪ್ಪುಹೊರಿಸುವಿಯೋ?


ದೇವರೇ, ನಿಮ್ಮ ನ್ಯಾಯವನ್ನು ಅರಸನಿಗೆ ಕಲಿಸಿಕೊಡಿರಿ. ನಿಮ್ಮ ನೀತಿಯನ್ನು ರಾಜಕುಮಾರನಿಗೆ ಕಲಿಸಿಕೊಡಿರಿ.


ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಆಳುತ್ತಾ ತನ್ನ ಸಮಸ್ತ ಜನರಿಗೂ ನೀತಿ ನ್ಯಾಯಗಳಿಂದ ನಡೆಸುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು