Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 24:15 - ಕನ್ನಡ ಸಮಕಾಲಿಕ ಅನುವಾದ

15 ಆದಕಾರಣ ಯೆಹೋವ ದೇವರು ಉದಯಕಾಲದಿಂದ ನೇಮಿಸಿದ ಕಾಲದವರೆಗೂ ಇಸ್ರಾಯೇಲರ ಮೇಲೆ ವ್ಯಾಧಿಯನ್ನು ಕಳುಹಿಸಿದರು. ಆಗ ದಾನಿನಿಂದ ಬೇರ್ಷೆಬದವರೆಗೂ ಇರುವ ಜನರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ಯೆಹೋವನು ಇಸ್ರಾಯೇಲರ ಮೇಲೆ ವ್ಯಾಧಿಯನ್ನು ಬರಮಾಡಿದನು. ಅದು ಹೊತ್ತಾರೆಯಿಂದ ನೇಮಕವಾದ ಹೊತ್ತಿನ ವರೆಗೂ ಇತ್ತು. ದಾನಿನಿಂದ ಬೇರ್ಷೆಬದ ವರೆಗೆ ವಾಸವಾಗಿರುವ ಇಸ್ರಾಯೇಲರಲ್ಲಿ ಎಪ್ಪತ್ತು ಸಾವಿರ ಜನರು ಸತ್ತುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆಗ ಸರ್ವೇಶ್ವರ ಇಸ್ರಯೇಲರ ಮೇಲೆ ವ್ಯಾಧಿಯನ್ನು ಬರಮಾಡಿದರು. ಅದು ಹೊತ್ತಾರೆಯಿಂದ ನೇಮಕವಾದ ಹೊತ್ತಿನವರೆಗೂ ಇತ್ತು. ದಾನಿನಿಂದ ಬೇರ್ಷೆಬದವರೆಗೆ ವಾಸವಾಗಿದ್ದ ಇಸ್ರಯೇಲರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಗ ಯೆಹೋವನು ಇಸ್ರಾಯೇಲ್ಯರ ಮೇಲೆ ವ್ಯಾಧಿಯನ್ನು ಬರಮಾಡಿದನು. ಅದು ಹೊತ್ತಾರೆಯಿಂದ ನೇಮಕವಾದ ಹೊತ್ತಿನವರೆಗೂ ಇತ್ತು. ದಾನಿನಿಂದ ಬೇರ್ಷೆಬದವರೆಗೆ ವಾಸವಾಗಿರುವ ಇಸ್ರಾಯೇಲ್ಯರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದ್ದರಿಂದ ಯೆಹೋವನು ಇಸ್ರೇಲಿಗೆ ರೋಗರುಜಿನಗಳನ್ನು ಬರಮಾಡಿದನು. ಇವು ಹೊತ್ತಾರೆಯಿಂದ ಆರಂಭವಾಗಿ ನಿಯಮಿತಕಾಲದವರೆಗೆ ಮುಂದುವರಿದವು. ದಾನ್‌ನಿಂದ ಬೇರ್ಷೆಬದವರೆಗೆ ಎಪ್ಪತ್ತುಸಾವಿರ ಜನರು ಸತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 24:15
11 ತಿಳಿವುಗಳ ಹೋಲಿಕೆ  

ಆದಕಾರಣ ಯೆಹೋವ ದೇವರು ಇಸ್ರಾಯೇಲರ ಮೇಲೆ ವ್ಯಾಧಿಯನ್ನು ಕಳುಹಿಸಿದರು. ಆಗ ಇಸ್ರಾಯೇಲರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು.


ಚೆರೂಯಳ ಮಗ ಯೋವಾಬನು ಎಣಿಸಲು ಆರಂಭಿಸಿದನು. ಆದರೆ ಇಸ್ರಾಯೇಲಿಗೆ ವಿರೋಧವಾಗಿ ದೇವರ ಕೋಪಾಗ್ನಿಯು ಬಂದದ್ದರಿಂದ, ಅವನು ಪೂರ್ತಿಗೊಳಿಸಲಿಲ್ಲ. ಆ ಲೆಕ್ಕವು ಅರಸನಾದ ದಾವೀದನ ಇತಿಹಾಸಗಳ ಪುಸ್ತಕದಲ್ಲಿ ಲಿಖಿತವಾಗಲಿಲ್ಲ.


ನಾನು ನೋಡಲು, ಒಂದು ನಸು ಹಸಿರು ಬಣ್ಣದ ಕುದುರೆ ಕಾಣಿಸಿತು. ಅದರ ಸವಾರನಿಗೆ ಮೃತ್ಯುವೆಂದು ಹೆಸರಿತ್ತು. ಪಾತಾಳವೆಂಬವನು ಅವನ ಹಿಂದೆ ಹೋಗುತ್ತಿದ್ದನು. ಅವರಿಗೆ ಭೂಮಿಯ ನಾಲ್ಕನೆಯ ಒಂದು ಭಾಗದ ಮೇಲೆ ಕತ್ತಿ, ಕ್ಷಾಮ, ಮರಣ ಮತ್ತು ಭೂಮಿಯ ಕ್ರೂರಮೃಗಗಳಿಂದ ಕೊಲ್ಲುವ ಅಧಿಕಾರಕೊಡಲಾಗಿತ್ತು.


ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು. ಅಲ್ಲಲ್ಲಿ ಬರಗಾಲಗಳು ಮತ್ತು ಭೂಕಂಪಗಳು ಸಂಭವಿಸುತ್ತವೆ.


ಆಗ ಯೆಹೋವ ದೇವರ ದೂತನು ಹೊರಟುಬಂದು ಅಸ್ಸೀರಿಯದ ದಂಡಿನಲ್ಲಿದ್ದ 1,85,000 ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ, ಇಗೋ, ಅವರೆಲ್ಲರು ಸತ್ತು ಹೆಣಗಳಾಗಿದ್ದರು.


ಎರಡನೆಯ ತಿಂಗಳಿನ ವರ್ಗದ ಮೇಲೆ ಅಹೋಹ್ಯನಾದ ದೊದಾಯಿಯು. ಅವನ ವರ್ಗದಲ್ಲಿ ಮಿಕ್ಲೋತನು ನಾಯಕನಾಗಿದ್ದನು. ಅವನ ವರ್ಗದಲ್ಲಿ 24,000 ಜನರಿದ್ದರು.


ಬೇತ್ ಷೆಮೆಷ್ ಊರಿನ ಜನರು ಯೆಹೋವ ದೇವರ ಮಂಜೂಷದೊಳಗೆ ಇಣಿಕಿ ನೋಡಿದ್ದರಿಂದ, ಯೆಹೋವ ದೇವರು ಅವರೊಳಗೆ ಎಪ್ಪತ್ತು ಮಂದಿಯನ್ನು ಕಠಿಣವಾಗಿ ದಂಡಿಸಿದರು.


ಆದರೂ, ವ್ಯಾಧಿಯಿಂದ ಸತ್ತವರು 24,000 ಮಂದಿಯಾಗಿದ್ದರು.


ಅರಸನು ಸೈನ್ಯಾಧಿಪತಿಯಾದ ಯೋವಾಬನಿಗೆ, “ನಾನು ಜನರ ಲೆಕ್ಕವನ್ನು ತಿಳಿಯುವ ಹಾಗೆ, ನೀನು ದಾನಿನಿಂದ ಬೇರ್ಷೆಬದವರೆಗೂ ಇರುವ ಇಸ್ರಾಯೇಲ್ ಸಮಸ್ತ ಗೋತ್ರಗಳಲ್ಲಿ ಹೋಗಿ, ಯುದ್ಧಮಾಡಲು ಶಕ್ತರಾದ ಜನರನ್ನು ಲೆಕ್ಕಮಾಡಿಕೊಂಡು ಬಾ,” ಎಂದನು.


ಯೆಹೋವ ದೇವರೇ, ನಿಮ್ಮ ಕೀರ್ತಿಯನ್ನು ನಾನು ಕೇಳಿದ್ದೇನೆ, ಯೆಹೋವ ದೇವರೇ, ನಿಮ್ಮ ಕಾರ್ಯಗಳಿಗಾಗಿ ನಿಮ್ಮ ಮುಂದೆ ಭಯಭಕ್ತಿಯಿಂದ ನಿಲ್ಲುತ್ತೇನೆ. ನಮ್ಮ ದಿನಗಳಲ್ಲಿ ಅವುಗಳನ್ನು ಪುನಃ ಮಾಡಿರಿ. ನಮ್ಮ ವರ್ಷಗಳ ಮಧ್ಯದಲ್ಲಿ ಅವುಗಳನ್ನು ತಿಳಿಸಿರಿ, ನೀನು ರೋಷಗೊಂಡಿದ್ದರೂ ಕರುಣೆಯನ್ನು ಜ್ಞಾಪಕಮಾಡಿಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು