Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 24:2 - ಕನ್ನಡ ಸಮಕಾಲಿಕ ಅನುವಾದ

2 ಅರಸನು ಸೈನ್ಯಾಧಿಪತಿಯಾದ ಯೋವಾಬನಿಗೆ, “ನಾನು ಜನರ ಲೆಕ್ಕವನ್ನು ತಿಳಿಯುವ ಹಾಗೆ, ನೀನು ದಾನಿನಿಂದ ಬೇರ್ಷೆಬದವರೆಗೂ ಇರುವ ಇಸ್ರಾಯೇಲ್ ಸಮಸ್ತ ಗೋತ್ರಗಳಲ್ಲಿ ಹೋಗಿ, ಯುದ್ಧಮಾಡಲು ಶಕ್ತರಾದ ಜನರನ್ನು ಲೆಕ್ಕಮಾಡಿಕೊಂಡು ಬಾ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅರಸನು ತನ್ನ ಹತ್ತಿರದಲ್ಲಿದ್ದ ಸೇನಾಧಿಪತಿಯಾದ ಯೋವಾಬನಿಗೆ, “ಜನಸಂಖ್ಯೆ ಗೊತ್ತಾಗುವ ಹಾಗೆ ನೀನು ದಾನ್ ಊರಿನಿಂದ ಬೇರ್ಷೆಬದ ವರೆಗೆ ಸಂಚರಿಸಿ ಇಸ್ರಾಯೇಲ್ ಕುಲಗಳ ಜನಗಣತಿ ಮಾಡಿಕೊಂಡು ಬಾ” ಎಂದು ಅವನಿಗೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅರಸನು ತನ್ನ ಹತ್ತಿರದಲ್ಲಿದ್ದ ಸೇನಾಪತಿಯಾದ ಯೋವಾಬನಿಗೆ, “ಜನಸಂಖ್ಯೆ ಗೊತ್ತಾಗುವ ಹಾಗೆ ನೀನು ದಾನ್ ಊರಿನಿಂದ ಬೇರ್ಷೆಬದವರೆಗೆ ಸಂಚರಿಸಿ ಇಸ್ರಯೇಲ್ ಕುಲಗಳ ಎಲ್ಲ ಜನರನ್ನು ಲೆಕ್ಕಮಾಡಿಕೊಂಡು ಬಾ,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅರಸನು ತನ್ನ ಹತ್ತಿರದಲ್ಲಿದ್ದ ಸೇನಾಪತಿಯಾದ ಯೋವಾಬನಿಗೆ - ಜನಸಂಖ್ಯೆ ಗೊತ್ತಾಗುವ ಹಾಗೆ ನೀನು ದಾನ್ ಊರಿನಿಂದ ಬೇರ್ಷೆಬದವರೆಗೆ ಸಂಚರಿಸಿ ಇಸ್ರಾಯೇಲ್‍ಕುಲಗಳ ಎಲ್ಲಾ ಜನರನ್ನು ಲೆಕ್ಕಮಾಡಿಕೊಂಡು ಬಾ ಎಂದು ಅವನಿಗೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ರಾಜನಾದ ದಾವೀದನು ಸೈನ್ಯದ ಸೇನಾಧಿಪತಿಯಾದ ಯೋವಾಬನಿಗೆ, “ದಾನ್‌ನಿಂದ ಬೇರ್ಷೆಬದವರೆಗಿನ ಇಸ್ರೇಲಿನ ಎಲ್ಲಾ ಕುಲಗಳಲ್ಲಿ ಸಂಚರಿಸಿ ಜನರನ್ನು ಲೆಕ್ಕಹಾಕಿರಿ. ಆಗ ಅಲ್ಲಿ ಎಷ್ಟು ಜನರಿದ್ದಾರೆಂಬುದು ನನಗೆ ತಿಳಿಯುತ್ತದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 24:2
16 ತಿಳಿವುಗಳ ಹೋಲಿಕೆ  

ದಾವೀದನ ಸಿಂಹಾಸನವನ್ನು ದಾನಿನಿಂದ ಬೇರ್ಷೆಬದ ಮಟ್ಟಿಗೂ ಇರುವ ಇಸ್ರಾಯೇಲಿನ ಮೇಲೆಯೂ, ಯೆಹೂದದ ಮೇಲೆಯೂ ಸ್ಥಿರಪಡಿಸುವ ಹಾಗೆ ನಾನು ಮಾಡದೆ ಇದ್ದರೆ, ದೇವರು ಅಬ್ನೇರನಿಗೆ ಹೀಗೆಯೂ ಅಧಿಕವಾಗಿಯೂ ಮಾಡಲಿ,” ಎಂದನು.


ಆಗ ಇಸ್ರಾಯೇಲರೆಲ್ಲರು ಹೊರಟು ಗಿಲ್ಯಾದ್ ಸಹಿತವಾಗಿ ದಾನ್ ಪಟ್ಟಣ ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ ಒಬ್ಬ ಮನುಷ್ಯನಂತೆ ಮಿಚ್ಪೆಯಲ್ಲಿ ಯೆಹೋವ ದೇವರ ಮುಂದೆ ಕೂಡಿಬಂದರು.


ಯೋವಾಬನು ಇಸ್ರಾಯೇಲಿನ ಸಮಸ್ತ ಸೈನ್ಯದ ಅಧಿಪತಿಯಾಗಿದ್ದನು. ಯೆಹೋಯಾದಾವನ ಮಗ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಮುಖ್ಯಸ್ಥನಾಗಿದ್ದನು.


ಬಹು ವಿಶೇಷವಾದ ಪ್ರಕಟನೆಗಳ ಬಗ್ಗೆ ನಾನು ಗರ್ವಪಡದಂತೆ, ನನ್ನ ಶರೀರದಲ್ಲಿ ಒಂದು ಮುಳ್ಳನ್ನು ಕೊಡಲಾಗಿತ್ತು. ಅದು ನನ್ನನ್ನು ಕಾಡಿಸಲು ಕಳುಹಿಸಲಾದ ಸೈತಾನನ ದೂತನೇ ಆಗಿತ್ತು.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಮಾನವನ ಸಾಮರ್ಥ್ಯಗಳನ್ನು ತನ್ನ ಆಧಾರವಾಗಿ ಮಾಡಿಕೊಂಡ ವ್ಯಕ್ತಿ ಶಾಪಗ್ರಸ್ತ, ಅವನು ಮನುಷ್ಯನ ಶಕ್ತಿಯ ಮೇಲೆ ಭರವಸೆ ಇಡುವನು. ಯೆಹೋವ ದೇವರ ಕಡೆಯಿಂದ ಯಾವನ ಹೃದಯವು ತೊಲಗುವುದೋ, ಅವನು ಶಾಪಗ್ರಸ್ತನು.


ಗರ್ವವು ಮನುಷ್ಯನನ್ನು ಹೀನಸ್ಥಿತಿಗೆ ತರುವುದು; ಆದರೆ ಆತ್ಮದಲ್ಲಿ ದೀನರು ಮೆಚ್ಚಿಕೆಯನ್ನು ಪಡೆಯುವರು.


ಆದರೆ ದೇಶದಲ್ಲಿ ಅದ್ಭುತಕ್ಕೋಸ್ಕರ ವಿಚಾರಣೆ ಮಾಡಲು ಬಾಬಿಲೋನಿನ ಅಧಿಪತಿಗಳಿಂದ ತನ್ನ ಬಳಿಗೆ ಕಳುಹಿಸಲಾದ ರಾಯಭಾರಿಗಳ ಕಾರ್ಯದಲ್ಲಿ ಅವನು ತನ್ನ ಹೃದಯದಲ್ಲಿ ಇರುವ ಪ್ರತಿಯೊಂದನ್ನೂ ತಿಳಿದುಕೊಳ್ಳುವದಕ್ಕಾಗಿಯೂ ಪರಿಶೋಧಿಸುವುದಕ್ಕಾಗಿಯೂ ದೇವರು ಅವನನ್ನು ಕೈಬಿಟ್ಟರು.


ಆದ್ದರಿಂದ ದಾವೀದನು ಯೋವಾಬನನ್ನೂ ಜನರ ಪ್ರಧಾನರನ್ನೂ ಕರೆದು ಅವರಿಗೆ, “ನಾನು ಜನರ ಲೆಕ್ಕವನ್ನು ತಿಳಿಯುವ ಹಾಗೆ, ನೀವು ಹೋಗಿ ಬೇರ್ಷೆಬವು ಮೊದಲುಗೊಂಡು, ದಾನ್ ಊರಿನವರೆಗೆ ಇಸ್ರಾಯೇಲರನ್ನು ಲೆಕ್ಕಿಸಿ, ಅವರ ಲೆಕ್ಕವನ್ನು ನನಗೆ ತೆಗೆದುಕೊಂಡು ಬನ್ನಿರಿ,” ಎಂದನು.


ಅಮ್ಮೋನಿಯನಾದ ಚೆಲೆಕನು; ಚೆರೂಯಳ ಮಗನಾದ ಯೋವಾಬನ ಆಯುಧವಾಹಕನು ಆಗಿದ್ದ ಬೇರೋತ್ಯನಾದ ನಹರೈ;


“ನಾನು ಹೇಳುವ ಆಲೋಚನೆ ಏನೆಂದರೆ, ದಾನಿನಿಂದ ಬೇರ್ಷೆಬದವರೆಗೂ ವಾಸವಾಗಿರುವ ಇಸ್ರಾಯೇಲರೊಳಗಿಂದ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಸೈನ್ಯವನ್ನು ನಿನ್ನ ಬಳಿಯಲ್ಲಿ ಕೂಡಿಸಿ, ನೀನೂ ಅವರ ಜೊತೆಯಲ್ಲಿ ಯುದ್ಧಕ್ಕೆ ಹೋಗಬೇಕು.


ಚೆರೂಯಳ ಮಗ ಯೋವಾಬನು ಸೈನ್ಯದ ಅಧಿಪತಿಯಾಗಿದ್ದನು. ಅಹೀಲೂದನ ಮಗ ಯೆಹೋಷಾಫಾಟನು ಆಸ್ಥಾನದ ಆಗುಹೋಗುಗಳನ್ನು ದಾಖಲಿಸುವವನಾಗಿದ್ದನು.


ಚೆರೂಯಳ ಮಗ ಯೋವಾಬನೂ, ದಾವೀದನ ಸೇವಕರೂ ಹೊರಟು ಗಿಬ್ಯೋನಿನ ಕೊಳದ ಬಳಿಯಲ್ಲಿ ಕೂಡಿಕೊಂಡರು. ಅವರು ಕೊಳದ ಆಚೆಯಲ್ಲಿಯೂ, ಇವರು ಕೊಳದ ಈಚೆಯಲ್ಲಿಯೂ ಕುಳಿತುಕೊಂಡರು.


ಅಬ್ರಹಾಮನು ಬೆಳಿಗ್ಗೆ ಎದ್ದು ರೊಟ್ಟಿಯನ್ನೂ, ನೀರಿನ ತಿತ್ತಿಯನ್ನೂ ತೆಗೆದುಕೊಂಡು ಹಾಗರಳಿಗೆ ಕೊಟ್ಟು, ಅವುಗಳನ್ನು ಆಕೆಯ ಹೆಗಲಿನ ಮೇಲೆ ಇರಿಸಿ, ಆ ಹುಡುಗನ ಸಂಗಡ ಅವಳನ್ನು ಕಳುಹಿಸಿಬಿಟ್ಟನು. ಆಕೆಯು ಹೋಗಿ ಬೇರ್ಷೆಬದ ಮರುಭೂಮಿಯಲ್ಲಿ ಅಲೆದಾಡುತ್ತಿದ್ದಳು.


ಆದಕಾರಣ ಯೆಹೋವ ದೇವರು ಉದಯಕಾಲದಿಂದ ನೇಮಿಸಿದ ಕಾಲದವರೆಗೂ ಇಸ್ರಾಯೇಲರ ಮೇಲೆ ವ್ಯಾಧಿಯನ್ನು ಕಳುಹಿಸಿದರು. ಆಗ ದಾನಿನಿಂದ ಬೇರ್ಷೆಬದವರೆಗೂ ಇರುವ ಜನರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು