Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 3:12 - ಕನ್ನಡ ಸಮಕಾಲಿಕ ಅನುವಾದ

12 ಆಗ ಅಬ್ನೇರನು ತನ್ನ ಪರವಾಗಿ ದಾವೀದನ ಬಳಿಗೆ ತನ್ನ ದೂತರನ್ನು ಕಳುಹಿಸಿ, “ದೇಶವು ಯಾರದು? ಇದಲ್ಲದೆ ನೀನು ನನ್ನ ಸಂಗಡ ಒಡಂಬಡಿಕೆಯನ್ನು ಮಾಡು. ಆಗ ಇಗೋ, ಇಸ್ರಾಯೇಲರನ್ನೆಲ್ಲಾ ನಿನ್ನ ಬಳಿಗೆ ಬರಮಾಡುವ ಹಾಗೆ ನನ್ನ ಕೈ ನಿನ್ನ ಸಂಗಡ ಇರುವುದೆಂದು ಹೇಳಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅನಂತರ ಅಬ್ನೇರನು ದಾವೀದನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ದೇಶವು ಯಾರದು? ನೀನು ನನ್ನೊಡನೆ ಒಡಂಬಡಿಕೆ ಮಾಡಿಕೊಂಡರೆ ಇಸ್ರಾಯೇಲರನ್ನೆಲ್ಲಾ ನಿನ್ನ ಕಡೆಗೆ ತಿರುಗಿಸುವ ಪ್ರಯತ್ನದಲ್ಲಿ ನಾನು ನಿನ್ನ ಸಂಗಡ ಕೈಜೋಡಿಸುತ್ತೇನೆ” ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅನಂತರ ಅಬ್ನೇರನು ದಾವೀದನ ಬಳಿಗೆ ದೂತರನ್ನು ಕಳುಹಿಸಿ, “ಈ ನಾಡು ಯಾರದು? ನೀನು ನನ್ನೊಡನೆ ಒಪ್ಪಂದ ಮಾಡಿಕೊಂಡರೆ ಇಸ್ರಯೇಲರನ್ನೆಲ್ಲಾ ನಿನ್ನ ಕಡೆಗೆ ತಿರುಗಿಸುವೆನು. ಹಾಗು ನನ್ನ ಬೆಂಬಲ ನಿನಗಿರುವುದು,” ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅನಂತರ ಅಬ್ನೇರನು ದಾವೀದನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ - ದೇಶವು ಯಾರದು? ನೀನು ನನ್ನೊಡನೆ ಒಡಂಬಡಿಕೆ ಮಾಡಿಕೊಂಡರೆ ಇಸ್ರಾಯೇಲ್ಯರನ್ನೆಲ್ಲಾ ನಿನ್ನ ಕಡೆಗೆ ತಿರುಗಿಸುವ ಹಾಗೆ ನನ್ನ ಹಸ್ತವು ನಿನ್ನ ಸಂಗಡ ಇರುವದು ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅಬ್ನೇರನು ದಾವೀದನ ಬಳಿಗೆ ಸಂದೇಶಕರನ್ನು ಕಳುಹಿಸಿ, “ಈ ದೇಶವನ್ನು ಯಾರು ಆಳಬೇಕೆಂಬದು ನಿನ್ನ ಅಭಿಪ್ರಾಯ? ನನ್ನೊಡನೆ ಒಂದು ಒಪ್ಪಂದವನ್ನು ಮಾಡಿಕೊಂಡರೆ, ಇಸ್ರೇಲಿನ ಜನರೆಲ್ಲರನ್ನು ನೀನು ಆಳುವಂತೆ ಮಾಡಲು ನಾನು ಸಹಾಯ ಮಾಡುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 3:12
15 ತಿಳಿವುಗಳ ಹೋಲಿಕೆ  

ಸಾಮಾನ್ಯ ಜನರು ಬರೀ ಉಸಿರೇ, ಉನ್ನತ ಜನರು ಬರೀ ಸುಳ್ಳೇ. ತಕ್ಕಡಿಯಲ್ಲಿ ತೂಗಿದರೆ ಅವರೇನೂ ಇಲ್ಲ, ಎಲ್ಲರೂ ಬರೀ ಉಸಿರೇ.


ಇಸ್ರಾಯೇಲರೆಲ್ಲರೂ ಅರಸನ ಬಳಿಗೆ ಬಂದು ಅರಸನಿಗೆ, “ನಮ್ಮ ಸಹೋದರರಾದ ಯೆಹೂದದ ಮನುಷ್ಯರು ಕಳ್ಳತನವಾಗಿ ನಿನ್ನನ್ನು ಕರೆತಂದದ್ದೇನು? ಅರಸನನ್ನೂ, ಅವನ ಮನೆಯವರನ್ನೂ, ಅವನ ಸಂಗಡ ಇರುವ ದಾವೀದನ ಸಕಲ ಮನುಷ್ಯರನ್ನೂ ಯೊರ್ದನನ್ನು ದಾಟಿಸಿದ್ದೇನು?” ಎಂದರು.


ಅರಸನು ಸಕಲ ಯೆಹೂದ ಜನರ ಹೃದಯವನ್ನು ಸಂಪೂರ್ಣವಾಗಿ ಗೆದ್ದುಕೊಂಡದ್ದರಿಂದ, ಅವರು ಅರಸನಿಗೆ, “ನೀನೂ, ನಿನ್ನ ಸಮಸ್ತ ಸೇವಕರೂ ತಿರುಗಿ ಬನ್ನಿರಿ,” ಎಂದು ಹೇಳಿ ಕಳುಹಿಸಿದರು.


ನೀನು ನಿನ್ನ ಹಗೆಯವರನ್ನು ಪ್ರೀತಿಮಾಡಿ, ನಿನ್ನನ್ನು ಪ್ರೀತಿಸುವವರನ್ನು ಹಗೆ ಮಾಡಿದ್ದರಿಂದ ಸೇನಾಧಿಪತಿಗಳನ್ನೂ, ಸೈನಿಕರನ್ನೂ ನಿನಗೆ ಏನೂ ಅಲ್ಲವೆಂದು ಈಗ ತಿಳಿಯಮಾಡಿದಿ. ಈ ಹೊತ್ತು ನಾವೆಲ್ಲರೂ ಸತ್ತು ಅಬ್ಷಾಲೋಮನು ಬದುಕಿದ್ದರೆ, ನಿನಗೆ ಸಂತೋಷವಾಗುತ್ತಿತ್ತು ಎಂದು ನನಗೆ ಅನಿಸುತ್ತದೆ.


ಅಬ್ನೇರನು ಹೆಬ್ರೋನಿಗೆ ತಿರುಗಿ ಬಂದ ತರುವಾಯ ಯೋವಾಬನ ಬಾಗಿಲಲ್ಲಿ ಅವನ ಸಂಗಡ ಸಮಾಧಾನವಾಗಿ ಮಾತನಾಡಿ, ಅವನನ್ನು ಒಂದು ಕಡೆ ಕರೆದುಕೊಂಡು ಹೋಗಿ, ತನ್ನ ತಮ್ಮ ಅಸಾಯೇಲನ ರಕ್ತಾಪರಾಧದ ನಿಮಿತ್ತ ಅಲ್ಲಿ ಅವನ ಹೊಟ್ಟೆಯಲ್ಲಿ ಇರಿದು ಕೊಂದುಹಾಕಿದನು.


ಆಗ ಅಬ್ನೇರನು ದಾವೀದನಿಗೆ, “ಸಮಸ್ತ ಇಸ್ರಾಯೇಲರು ನಿನ್ನ ಸಂಗಡ ಒಡಂಬಡಿಕೆಯನ್ನು ಮಾಡುವ ಹಾಗೆಯೂ, ನಿನ್ನ ಪ್ರಾಣವು ಇಚ್ಛೈಸುವ ಹಾಗೆ ಎಲ್ಲರ ಮೇಲೆ ಆಳುವ ಹಾಗೆಯೂ ನಾನು ಎದ್ದು ಹೋಗಿ, ಸಮಸ್ತ ಇಸ್ರಾಯೇಲರನ್ನು ಅರಸನಾದ ನನ್ನ ಒಡೆಯನ ಬಳಿಗೆ ಕೂಡಿಸಿಕೊಂಡು ಬರುವೆನು,” ಎಂದನು. ದಾವೀದನು ಅಬ್ನೇರನಿಗೆ ಅಪ್ಪಣೆ ಕೊಟ್ಟದ್ದರಿಂದ ಅವನು ಸಮಾಧಾನವಾಗಿ ಹೋದನು.


ಈಷ್ಬೋಶೆತನು ಅಬ್ನೇರನಿಗೆ ಭಯಪಟ್ಟದ್ದರಿಂದ ಒಂದು ಮಾತಾದರೂ ಪ್ರತ್ಯುತ್ತರ ಹೇಳಲಾರದೆ ಇದ್ದನು.


ಅದಕ್ಕೆ ದಾವೀದನು, “ಒಳ್ಳೆಯದು, ನಾನು ನಿನ್ನ ಸಂಗಡ ಒಡಂಬಡಿಕೆಯನ್ನು ಮಾಡುವೆನು. ಆದರೆ ನಾನು ನಿನ್ನಲ್ಲಿ ಒಂದನ್ನು ಕೇಳುತ್ತೇನೆ.” ಏನೆಂದರೆ, “ನೀನು ನನ್ನನ್ನು ನೋಡುವುದಕ್ಕೆ ಬರುವಾಗ, ಸೌಲನ ಮಗಳಾದ ಮೀಕಲಳನ್ನು ನೀನು ಕರೆದುಕೊಂಡು ಬಾರದೆ ಹೋದರೆ, ನೀನು ನನ್ನ ಮುಖವನ್ನು ಕಾಣಬಾರದು,” ಎಂದನು.


ಇದಲ್ಲದೆ ಅರಸನು ತನ್ನ ಸೇವಕರಿಗೆ, “ಇಸ್ರಾಯೇಲಿನಲ್ಲಿ ಈ ಹೊತ್ತು ಪ್ರಧಾನನೂ ದೊಡ್ಡವನೂ ಬಿದ್ದಿದ್ದಾನೆಂದು ಗೊತ್ತಿಲ್ಲವೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು