Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 5:10 - ಕನ್ನಡ ಸಮಕಾಲಿಕ ಅನುವಾದ

10 ಹೀಗೆಯೇ ಸರ್ವಶಕ್ತರಾದ ಯೆಹೋವ ದೇವರು ದಾವೀದನ ಸಂಗಡ ಇದ್ದುದರಿಂದ ಅವನು ದಿನದಿನಕ್ಕೆ ಬಲಗೊಳ್ಳುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಸೇನಾಧೀಶ್ವರನಾದ ಯೆಹೋವ ದೇವರು ಅವನ ಸಂಗಡ ಇದ್ದುದರಿಂದ ಅವನು ಆಧಿಕ ಪ್ರಬಲಗೊಳ್ಳುತ್ತಾ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸೇನಾಧೀಶ್ವರ ಹಾಗು ಸರ್ವೇಶ್ವರರಾದ ದೇವರು ಅವನೊಂದಿಗೆ ಇದ್ದರು. ಆದ್ದರಿಂದ ಅವನು ಅಭಿವೃದ್ಧಿಹೊಂದುತ್ತಾ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಸೇನಾಧೀಶ್ವರನಾದ ಯೆಹೋವದೇವರು ಅವನ ಸಂಗಡ ಇದ್ದದರಿಂದ ಅವನು ಅಭಿವೃದ್ಧಿಹೊಂದುತ್ತಾ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಸರ್ವಶಕ್ತನಾದ ಯೆಹೋವನು ದಾವೀದನೊಂದಿಗೆ ಇದ್ದುದರಿಂದ ಅವನು ಬಲಶಾಲಿಯಾಗುತ್ತಲೇ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 5:10
19 ತಿಳಿವುಗಳ ಹೋಲಿಕೆ  

ಸೌಲನ ಕುಟುಂಬದವರಿಗೂ ದಾವೀದನ ಕುಟುಂಬದವರಿಗೂ ಬಹು ದಿವಸ ಯುದ್ಧವು ನಡೆಯಿತು. ದಾವೀದನು ಬಲಗೊಳ್ಳುತ್ತಾ ಬಂದನು. ಆದರೆ ಸೌಲನ ಕುಟುಂಬದವರು ಬಲಹೀನರಾಗುತ್ತಾ ಹೋದರು.


ಹಾಗಾದರೆ, ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಪರವಾಗಿ ಇದ್ದರೆ ನಮ್ಮನ್ನು ವಿರೋಧಿಸುವವರು ಯಾರು?


ಸೇನಾಧೀಶ್ವರ ಯೆಹೋವ ದೇವರು ನಮ್ಮ ಸಂಗಡ ಇದ್ದಾರೆ; ಯಾಕೋಬನ ದೇವರು ನಮಗೆ ಭದ್ರಕೋಟೆಯಾಗಿದ್ದಾರೆ.


ಯೇಸು ಜ್ಞಾನದಲ್ಲಿಯೂ ದೇಹಬಲದಲ್ಲಿಯೂ ಬೆಳೆದು, ದೇವರ ಮೆಚ್ಚುಗೆ ಮತ್ತು ಮನುಷ್ಯರ ಮೆಚ್ಚುಗೆ ಹೆಚ್ಚಾಗಿ ಅವರಿಗೆ ದೊರೆಯಿತು.


ಅವರ ಆಡಳಿತದ ಶ್ರೇಷ್ಠತೆ ಮತ್ತು ಶಾಂತಿಗೆ ಅಂತ್ಯವಿಲ್ಲ. ಅವರ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವುದು, ದಾವೀದನ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು, ಸೇನಾಧೀಶ್ವರ ಯೆಹೋವ ದೇವರ ಅನುಗ್ರಹವು ಇದನ್ನು ನೆರವೇರಿಸುವುದು.


ನೀತಿವಂತರ ಮಾರ್ಗವು ಮುಂಜಾನೆಯ ಸೂರ್ಯನ ಬೆಳಕಿನಂತೆ ಇದ್ದು, ದಿನದ ಪೂರ್ಣ ಬೆಳಕಿನವರೆಗೂ ಪ್ರಕಾಶಿಸಿ ಹೊಳೆಯುತ್ತಾ ಇರುವುದು.


ಸೇನಾಧೀಶ್ವರ ಯೆಹೋವ ದೇವರು ನಮ್ಮ ಸಂಗಡ ಇದ್ದಾರೆ. ಯಾಕೋಬನ ದೇವರು ನಮಗೆ ಭದ್ರಕೋಟೆಯಾಗಿದ್ದಾರೆ.


ಆದರೆ ನೀತಿವಂತನು ತನ್ನ ಮಾರ್ಗದಲ್ಲಿ ಮುಂದುವರಿಯುವನು; ಶುದ್ಧ ಕೈಗಳುಳ್ಳವರು ಬಲದಲ್ಲಿ ಬೆಳೆಯುತ್ತಾ ಇರುವರು.


ಆ ಕಾಲದಲ್ಲಿ ಅಬೀಮೆಲೆಕನೂ, ಅವನ ಮುಖ್ಯ ಸೈನ್ಯಾಧಿಪತಿಯಾದ ಫೀಕೋಲನೂ ಅಬ್ರಹಾಮನಿಗೆ, “ನೀನು ಮಾಡುವ ಎಲ್ಲಾ ಕೆಲಸಕಾರ್ಯಗಳಲ್ಲಿಯೂ ದೇವರು ನಿನ್ನ ಸಂಗಡ ಇದ್ದಾರೆ.


ಮಹಿಮೆಯ ಅರಸ ಯಾರು? ಸೇನಾಧೀಶ್ವರ ಯೆಹೋವ ದೇವರೇ ಆಗಿರುತ್ತಾರೆ. ಇವರೇ ಮಹಿಮೆಯ ಅರಸರು.


ಆದರೂ ಈಗ ಯೆಹೋವ ದೇವರು ಹೀಗೆ ಹೇಳಿದರು: ‘ಜೆರುಬ್ಬಾಬೆಲನೇ, ಬಲವಾಗಿರು. ಯೆಹೋಚಾದಾಕನ ಮಗ ಮತ್ತು ಮಹಾಯಾಜಕನಾದ ಯೆಹೋಶುವನೇ, ಬಲವಾಗಿರು. ದೇಶದ ಜನರೆಲ್ಲರೇ, ಬಲವಾಗಿರಿ,’ ಕೆಲಸಮಾಡಿರಿ. ‘ನಾನು ನಿಮ್ಮ ಸಂಗಡ ಇದ್ದೇನೆ’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.


ಸೌಲನು ದಾವೀದನನ್ನು ಎಲ್ಲಿಗೆ ಕಳುಹಿಸಿದರೂ, ಅಲ್ಲಿಗೆ ಹೋಗಿ ಅವನು ಎಲ್ಲವನ್ನು ವಿವೇಕದಿಂದ ಬಹು ಯಶಸ್ವಿಯಾಗಿ ಮಾಡುತ್ತಿದ್ದನು. ಆದ್ದರಿಂದ ಸೌಲನು ಅವನನ್ನು ಸೈನ್ಯದ ಮೇಲೆ ಅಧಿಕಾರಿಯಾಗಿ ನೇಮಿಸಿದನು. ಇದು ಸಮಸ್ತ ಜನರಿಗೂ, ಸೌಲನ ಸಮಸ್ತ ಸೇವಕರಿಗೂ ಮೆಚ್ಚಿಕೆಯಾಗಿತ್ತು.


ಸೌಲನು ದಾವೀದನಿಗೆ ಭಯಪಟ್ಟನು. ಏಕೆಂದರೆ ಯೆಹೋವ ದೇವರು ಅವನ ಸಂಗಡ ಇದ್ದರು. ಸೌಲನ ಕಡೆಯಿಂದ ಹೊರಟು ಹೋಗಿದ್ದರು.


ಯೆಹೋವ ದೇವರು ದಾವೀದನ ಸಂಗಡ ಇದ್ದುದರಿಂದ ಅವನು ತನ್ನ ಸಕಲ ಮಾರ್ಗಗಳಲ್ಲಿ ವಿವೇಕದಿಂದ ವರ್ತಿಸಿ ಜಯಶಾಲಿಯಾಗುತ್ತಿದ್ದನು.


ನೀನು ಎಲ್ಲಿ ಹೋದರೂ, ಅಲ್ಲಿ ನಿನ್ನ ಸಂಗಡ ಇದ್ದು, ನಿನ್ನ ಶತ್ರುಗಳನ್ನೆಲ್ಲಾ ನಿನ್ನ ಮುಂದೆಯೇ ಸಂಹರಿಸಿದೆನು. ಭೂಮಿಯಲ್ಲಿರುವ ಮಹಾಪುರುಷರ ಹೆಸರಿನ ಹಾಗೆ ನಿನ್ನ ಹೆಸರನ್ನೂ ಪ್ರಸಿದ್ಧಪಡಿಸುವೆನು.


ತರುವಾಯ ದಾವೀದನು ದಮಸ್ಕದ ಅರಾಮಿನಲ್ಲಿ ಕಾವಲುದಂಡುಗಳನ್ನು ಇಟ್ಟನು. ಹೀಗೆ ಅರಾಮ್ಯರು ದಾವೀದನಿಗೆ ಅಧೀನರಾಗಿ, ಕಪ್ಪವನ್ನು ಕೊಡುವವರಾದರು. ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಯೆಹೋವ ದೇವರು ಅವನಿಗೆ ಜಯಕೊಟ್ಟರು.


ಸಮಸ್ತ ಎದೋಮಿನಲ್ಲಿ ಕಾವಲುದಂಡುಗಳನ್ನು ಇಟ್ಟನು. ಇದರಿಂದ, ಎದೋಮ್ಯರೆಲ್ಲರು ದಾವೀದನಿಗೆ ಅಧೀನರಾದರು. ದಾವೀದನು ಹೋದಲ್ಲೆಲ್ಲಾ ಯೆಹೋವ ದೇವರು ಅವನಿಗೆ ಜಯಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು