Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 5:20 - ಕನ್ನಡ ಸಮಕಾಲಿಕ ಅನುವಾದ

20 ಆದಕಾರಣ ದಾವೀದನು ಬಾಳ್ ಪೆರಾಜಿಮ್ ಎಂಬಲ್ಲಿಗೆ ಹೋಗಿ ಫಿಲಿಷ್ಟಿಯರ ಮೇಲೆ ದಾಳಿಮಾಡಿ ಅವರನ್ನು ಸೋಲಿಸಿದನು. ಆಗ ದಾವೀದನು, “ಪ್ರವಾಹವು ಕೊಚ್ಚಿಕೊಂಡು ಹೋಗುವಹಾಗೆ, ಯೆಹೋವ ದೇವರು ನನ್ನ ಶತ್ರುಗಳನ್ನು ನನ್ನ ಕಣ್ಣ ಮುಂದೆಯೇ ನಾಶಮಾಡಿದ್ದಾರೆ,” ಎಂದು ಹೇಳಿ, ಆ ಸ್ಥಳಕ್ಕೆ ಬಾಳ್ ಪೆರಾಜಿಮ್ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಗ ಅವನು ಹೋಗಿ ಅವರನ್ನು ಸೋಲಿಸಿ, “ಯೆಹೋವನು ಕಟ್ಟೆ ಒಡೆದ ಪ್ರವಾಹದಂತೆ ತನ್ನ ಶತ್ರುಗಳ ಮೇಲೆ ಬಿದ್ದು, ಅವರನ್ನು ನನ್ನ ಕಣ್ಣ ಮುಂದೆಯೇ ನಾಶಮಾಡಿದ್ದಾನೆ” ಎಂದು ಹೇಳಿ ಆ ಯುದ್ಧ ಸ್ಥಳಕ್ಕೆ “ಬಾಳ್ ಪೆರಾಚೀಮ್” ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆದುದರಿಂದ ಅವನು ಹೋಗಿ ಅವರನ್ನು ಸೋಲಿಸಿದನು. “ಕಟ್ಟೆಯೊಡೆದ ಪ್ರವಾಹದಂತೆ ನನ್ನ ಶತ್ರುಗಳ ಮೇಲೆ ಬಿದ್ದು ಅವರನ್ನು ಸರ್ವೇಶ್ವರ ನನ್ನ ಕಣ್ಣ ಮುಂದೆಯೇ ನಾಶಮಾಡಿದ್ದಾರೆ,” ಎಂದು ಹೇಳಿ ಆ ಯುದ್ಧಸ್ಥಳಕ್ಕೆ, ‘ಬಾಳ್ ಪೆರಾಚೀಮ್’ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವನು ಹೋಗಿ ಅವರನ್ನು ಸೋಲಿಸಿ ಯೆಹೋವನು ಕಟ್ಟೆಯೊಡೆದ ಪ್ರವಾಹದಂತೆ ತನ್ನ ಶತ್ರುಗಳ ಮೇಲೆ ಬಿದ್ದು ಅವರನ್ನು ನನ್ನ ಕಣ್ಣ ಮುಂದೆಯೇ ನಾಶಮಾಡಿದ್ದಾನೆಂದು ಹೇಳಿ ಆ ಯುದ್ಧಸ್ಥಳಕ್ಕೆ ಬಾಳ್‍ಪೆರಾಚೀಮೆಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆಗ ದಾವೀದನು ಬಾಳ್‌ಪೆರಾಚೀಮ್‌ಗೆ ಬಂದನು. ಅಲ್ಲಿ ಅವನು ಫಿಲಿಷ್ಟಿಯರನ್ನು ಸೋಲಿಸಿದನು. ದಾವೀದನು, “ಕಟ್ಟೆಯೊಡೆದ ಪ್ರವಾಹವು ನುಗ್ಗಿ ನಾಶಮಾಡುವಂತೆ ಯೆಹೋವನು ನನ್ನ ಶತ್ರುಗಳನ್ನು ನನ್ನ ಎದುರಿನಲ್ಲೇ ನಾಶಪಡಿಸಿದನು” ಎಂದನು. ಆದ್ದರಿಂದ ಅವನು ಆ ಸ್ಥಳಕ್ಕೆ “ಬಾಳ್‌ಪೆರಾಚೀಮ್” ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 5:20
5 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಪೆರಾಚೀಮ್ ಪರ್ವತದಲ್ಲಿ ಎದ್ದಂತೆ ಏಳುವರು. ಹಾಗೆ ಎದ್ದು ಗಿಬ್ಯೋನ್ ತಗ್ಗಿನಲ್ಲಿ ಆದ ಹಾಗೆ ಕೋಪಿಸಿ, ಅಪರೂಪವಾದ ತಮ್ಮ ಕೆಲಸವನ್ನು ನಡಿಸಿ, ಅಪೂರ್ವವಾದ ತಮ್ಮ ಕಾರ್ಯವನ್ನು ನೆರವೇರಿಸುವನು.


ಇಸ್ರಾಯೇಲಿನ ಎಲ್ಲಾ ಕುಲಗಳಲ್ಲಿ ಸಮಸ್ತ ಜನರು ತಮ್ಮೊಳಗೆ ಜಗಳ ಮಾಡುತ್ತಾ, “ನಮ್ಮ ಶತ್ರುಗಳ ಕೈಯಿಂದ ನಮ್ಮನ್ನು ವಿಮೋಚನೆ ಮಾಡಿದವನು ಅರಸನೇ, ಫಿಲಿಷ್ಟಿಯರ ಕೈಯಿಂದ ನಮ್ಮನ್ನು ವಿಮೋಚನೆ ಮಾಡಿದವನು ಅರಸನೇ, ಆದರೆ ಈಗ ಅಬ್ಷಾಲೋಮನಿಗೋಸ್ಕರ ದೇಶವನ್ನು ಬಿಟ್ಟು ಓಡಿಹೋಗಿದ್ದಾನೆ.


ಹಾಗೆಯೇ ದಾವೀದನು ಮತ್ತು ಅವನ ಸಂಗಡಿಗರೂ ಬಾಳ್ ಪೆರಾಜಿಮ್ ಎಂಬಲ್ಲಿಗೆ ಹೋಗಿ ಫಿಲಿಷ್ಟಿಯರ ಮೇಲೆ ದಾಳಿಮಾಡಿ ಅವರನ್ನು ಸೋಲಿಸಿದನು. ಆಗ ದಾವೀದನು, “ಪ್ರವಾಹವು ಕೊಚ್ಚಿಕೊಂಡು ಹೋಗುವಹಾಗೆ, ದೇವರು ನನ್ನ ಕೈಯಿಂದ ನನ್ನ ಶತ್ರುಗಳನ್ನು ನಾಶಮಾಡಿದ್ದಾರೆ,” ಎಂದನು. ಆದಕಾರಣ ಆ ಸ್ಥಳಕ್ಕೆ ಬಾಳ್ ಪೆರಾಜಿಮ್ ಎಂದು ಹೆಸರಿಟ್ಟನು.


ದೇವರೇ, ನನ್ನನ್ನು ಕೈಬಿಟ್ಟಿದ್ದೀರಾ? ನನ್ನನ್ನು ಚದರಿಸಿದ್ದೀರಾ? ನಮ್ಮ ಕಡೆಗೆ ಬೇಸರಗೊಂಡರೂ ನಮ್ಮನ್ನು ಪುನಃ ಸ್ಥಾಪಿಸಿರಿ.


ನಿನ್ನ ಜನರ ರಕ್ಷಣೆಗೋಸ್ಕರವೂ, ನಿನ್ನ ಅಭಿಷಿಕ್ತನ ರಕ್ಷಣೆಗೋಸ್ಕರವೂ ಹೊರಗೆ ಹೊರಟು ಬಂದಿ. ದುಷ್ಟ ದೇಶದ ನಾಯಕನನ್ನು ನೀನು ತುಳಿದುಬಿಟ್ಟಿ. ತಲೆಯಿಂದ ಪಾದದವರೆಗೆ ಅವನನ್ನು ಬೆತ್ತಲೆ ಮಾಡಿದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು