Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 6:16 - ಕನ್ನಡ ಸಮಕಾಲಿಕ ಅನುವಾದ

16 ಯೆಹೋವ ದೇವರ ಮಂಜೂಷವು ದಾವೀದನ ಪಟ್ಟಣದಲ್ಲಿ ಪ್ರವೇಶಿಸುವಾಗ, ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ನೋಡಿ, ಅರಸನಾದ ದಾವೀದನು ಯೆಹೋವ ದೇವರ ಮುಂದೆ ಕುಣಿದಾಡುವುದನ್ನು ಕಂಡು, ತನ್ನ ಹೃದಯದಲ್ಲಿ ಅವನನ್ನು ತಿರಸ್ಕರಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಮಂಜೂಷವು ದಾವೀದನಗರದೊಳಗೆ ಬರುತ್ತಿರುವಾಗ ಸೌಲನ ಮಗಳಾದ ಮೀಕಲಳು ಕಿಟಿಕಿಯಿಂದ ಇಣಿಕಿ ನೋಡಿ, ದಾವೀದನು ಯೆಹೋವನ ಮುಂದೆ ಜಿಗಿಯುತ್ತಾ, ಕುಣಿಯುತ್ತಾ ಇರುವುದನ್ನು ಕಂಡು, ಮನಸ್ಸಿನಲ್ಲಿ ಅವನನ್ನು ತಿರಸ್ಕರಿಸಿದಳು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಮಂಜೂಷವು ದಾವೀದನಗರದೊಳಗೆ ಬರುತ್ತಿರುವಾಗ ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ಇಣಿಕಿ ನೋಡಿ ದಾವೀದನು ಸರ್ವೇಶ್ವರನ ಮುಂದೆ ನಲಿದಾಡುತ್ತಾ ಕುಣಿಯುತ್ತಾ ಇರುವುದನ್ನು ಕಂಡು ಮನಸ್ಸಿನಲ್ಲೇ ಅವನನ್ನು ತಿರಸ್ಕರಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಮಂಜೂಷವು ದಾವೀದನಗರದೊಳಗೆ ಬರುತ್ತಿರುವಾಗ ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ಹಣಿಕಿ ನೋಡಿ ದಾವೀದನು ಯೆಹೋವನ ಮುಂದೆ ಜಿಗಿಯುತ್ತಾ ಕುಣಿಯುತ್ತಾ ಇರುವದನ್ನು ಕಂಡು ಮನಸ್ಸಿನಲ್ಲಿ ಅವನನ್ನು ತಿರಸ್ಕರಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ಹೊರಗೆ ನೋಡುತ್ತಿದ್ದಳು. ಅದೇ ಸಮಯದಲ್ಲಿ ಯೆಹೋವನ ಪವಿತ್ರ ಪೆಟ್ಟಿಗೆಯು ನಗರಕ್ಕೆ ಬಂದಿತು. ದಾವೀದನು ಯೆಹೋವನ ಸನ್ನಿಧಿಯಲ್ಲಿ ಜಿಗಿಯುತ್ತಾ ಕುಣಿದಾಡುತ್ತಿದ್ದನು. ಮೀಕಲಳು ಇದನ್ನು ಕಂಡು ದಾವೀದನನ್ನು ತನ್ನ ಹೃದಯದಲ್ಲಿ ತಿರಸ್ಕರಿಸಿದಳು; ಅವನು ತನ್ನನ್ನು ತಾನೇ ಮೂರ್ಖನನ್ನಾಗಿ ಮಾಡಿಕೊಳ್ಳುತ್ತಿದ್ದಾನೆ ಎಂದು ಆಲೋಚಿಸಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 6:16
12 ತಿಳಿವುಗಳ ಹೋಲಿಕೆ  

ಆದರೆ ಭೌತಿಕ ಮನುಷ್ಯನು ದೇವರಾತ್ಮರ ವಿಷಯಗಳನ್ನು ಸ್ವೀಕರಿಸುವುದಿಲ್ಲ. ಅವು ಅವನಿಗೆ ಬುದ್ಧಿಹೀನವಾಗಿ ತೋರುತ್ತವೆ. ಏಕೆಂದರೆ ಆತ್ಮಿಕ ವಿವೇಚನೆಯಿಂದ ತಿಳಿಯಬೇಕಾಗಿದ್ದ ಕಾರಣ ಅವನು ಅವುಗಳನ್ನು ತಿಳಿದುಕೊಳ್ಳಲಾರನು.


ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ದಾವೀದನ ಪಟ್ಟಣದಲ್ಲಿ ಪ್ರವೇಶಿಸುವಾಗ, ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ನೋಡಿ, ಕುಣಿಯುತ್ತಾ, ಹಾಡುತ್ತಾ ಇರುವ ಅರಸನಾದ ದಾವೀದನನ್ನು ಕಂಡು, ತನ್ನ ಹೃದಯದಲ್ಲಿ ಅವನನ್ನು ತಿರಸ್ಕರಿಸಿದಳು.


ನಾನು ನಿಮ್ಮ ನಿಮಿತ್ತ ನಿಂದೆಗೆ ಒಳಗಾಗಿದ್ದೇನೆ. ಅವಮಾನವು ನನ್ನ ಮುಖವನ್ನು ಮುಚ್ಚಿದೆ.


ಆದರೆ, ಅವರಲ್ಲಿ ಕೆಲವರು, ಅವರ ಬಗ್ಗೆ ಹಾಸ್ಯಮಾಡುತ್ತಾ, “ಇವರು ಕುಡಿದು ಮತ್ತರಾಗಿದ್ದಾರೆ,” ಎಂದರು.


ದಾವೀದನು ಸೌಲನ ಮಗ ಈಷ್ಬೋಶೆತನ ಬಳಿಗೆ ದೂತರನ್ನು ಕಳುಹಿಸಿ, “ಫಿಲಿಷ್ಟಿಯರ ನೂರು ಮುಂದೊಗಲುಗಳಿಂದ ನನಗೆ ನೇಮಕ ಮಾಡಿಕೊಂಡ ನನ್ನ ಹೆಂಡತಿಯಾದ ಮೀಕಲಳನ್ನು ನನಗೆ ಒಪ್ಪಿಸು,” ಎಂದನು.


ಆತನು ತಿರಸ್ಕೃತನೂ ಮಾನವಕುಲದಿಂದ ನಿರಾಕರಿಸಲಾದವನೂ, ದುಃಖಿತ ಮನುಷ್ಯನೂ, ನೋವನ್ನು ಅನುಭವಿಸಿದವನೂ ಆಗಿದ್ದನು. ನಾವು ನಮ್ಮ ಮುಖಗಳನ್ನು ಆತನಿಂದ ಮರೆಮಾಡಿಕೊಂಡೆವು. ಆತನು ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು. ನಾವು ಆತನನ್ನು ಅತ್ಯಲ್ಪವಾಗಿ ಎಣಿಸಿದೆವು.


ಆದರೂ ದಾವೀದನು ಚೀಯೋನಿನ ಕೋಟೆಯನ್ನು ವಶಪಡಿಸಿಕೊಂಡನು. ಅದೇ ದಾವೀದನ ಪಟ್ಟಣವು.


ಈ ಪ್ರಕಾರ ದಾವೀದನೂ, ಇಸ್ರಾಯೇಲರೆಲ್ಲರೂ ಯೆಹೋವ ದೇವರ ಮಂಜೂಷವನ್ನು ಆರ್ಭಟದಿಂದಲೂ, ತುತೂರಿಯ ಶಬ್ದದಿಂದಲೂ ಬರಮಾಡಿದರು.


ಆಗ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವುದಕ್ಕೆ ತಿರುಗಿದಾಗ, ಸೌಲನ ಮಗಳಾದ ಮೀಕಲಳು ದಾವೀದನಿಗೆ ಎದುರಾಗಿ ಬಂದು, “ನಿಷ್ಪ್ರಯೋಜಕ ಮನುಷ್ಯರಲ್ಲಿ ಒಬ್ಬನು ನಾಚಿಕೆ ಇಲ್ಲದೆ ತನ್ನ ವಸ್ತ್ರಗಳನ್ನು ಬಿಚ್ಚಿ ಹಾಕಿದ ಹಾಗೆಯೇ, ಈ ಹೊತ್ತು ತನ್ನ ಸೇವಕರ ದಾಸಿಯರ ಕಣ್ಣು ಮುಂದೆ ತನ್ನ ವಸ್ತ್ರಗಳನ್ನು ಬಿಚ್ಚಿಹಾಕಿದ್ದ ಇಸ್ರಾಯೇಲಿನ ಅರಸನು ಈ ಹೊತ್ತು ಎಷ್ಟು ಘನಹೊಂದಿದನು?” ಎಂದಳು.


ಆಗ ಸೌಲನು, “ನಾನು ಅವನ ಮೇಲೆ ವಿರೋಧವಾಗಿ ಕೈಯೆತ್ತಬಾರದು. ಫಿಲಿಷ್ಟಿಯರು ಅದನ್ನು ಮಾಡಲಿ,” ಎಂದು ತನ್ನಷ್ಟಕ್ಕೆ ಅಂದುಕೊಂಡು ದಾವೀದನಿಗೆ, “ನನ್ನ ಹಿರಿಯ ಮಗಳಾದ ಮೇರಬಳನ್ನು ನಿನಗೆ ಹೆಂಡತಿಯಾಗಿ ಕೊಡುವೆನು, ನೀನು ನನಗೋಸ್ಕರ ಪರಾಕ್ರಮಶಾಲಿಯಾಗಿದ್ದು ಯೆಹೋವ ದೇವರ ಯುದ್ಧಗಳನ್ನು ನಡೆಸು,” ಎಂದನು.


ಸೌಲನ ಮತ್ತೊಬ್ಬ ಮಗಳಾದ ಮೀಕಲಳು ದಾವೀದನನ್ನು ಪ್ರೀತಿಸಿದಳು. ಅದು ಸೌಲನಿಗೆ ತಿಳಿದುಬಂದಾಗ, ಆ ಕಾರ್ಯವು ಅವನಿಗೆ ಮೆಚ್ಚಿಕೆಯಾಯಿತು.


ನಮ್ಮನ್ನು ಕರುಣಿಸು, ಯೆಹೋವ ದೇವರೇ, ನಮ್ಮನ್ನು ಕರುಣಿಸು; ಏಕೆಂದರೆ ನಾವು ಬಹಳವಾಗಿ ತಿರಸ್ಕಾರವನ್ನು ಅನುಭವಿಸಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು