Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 7:13 - ಕನ್ನಡ ಸಮಕಾಲಿಕ ಅನುವಾದ

13 ಅವನೇ ನನ್ನ ಹೆಸರಿಗಾಗಿ ದೇವಾಲಯನ್ನು ಕಟ್ಟುವನು. ನಾನು ಅವನ ರಾಜಸಿಂಹಾಸನವನ್ನು ಸದಾಕಾಲಕ್ಕೂ ಸ್ಥಿರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವನು ನನ್ನ ಹೆಸರಿಗಾಗಿ ಒಂದು ಮನೆಯನ್ನು ಕಟ್ಟುವನು. ನಾನು ಅವನ ರಾಜ್ಯದ ಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅವನು ನನ್ನ ಹೆಸರಿನಲ್ಲಿ ಒಂದು ದೇವಾಲಯವನ್ನು ಕಟ್ಟುವನು. ನಾನು ಅವನ ಸಿಂಹಾಸನವನ್ನು ಸ್ಥಿರಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅವನು ನನ್ನ ಹೆಸರಿಗಾಗಿ ಒಂದು ಮನೆಯನ್ನು ಕಟ್ಟುವನು; ನಾನು ಅವನ ರಾಜ್ಯಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅವನು ನನ್ನ ಹೆಸರಿಗಾಗಿ ಒಂದು ಆಲಯವನ್ನು ನಿರ್ಮಿಸುತ್ತಾನೆ. ಅವನ ರಾಜ್ಯವು ಸದಾಕಾಲಕ್ಕೂ ಇರುವಂತೆ ನಾನು ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 7:13
39 ತಿಳಿವುಗಳ ಹೋಲಿಕೆ  

ಆದರೆ ನೀನು ಆಲಯವನ್ನು ಕಟ್ಟಬಾರದು. ನಿನ್ನಿಂದ ಹುಟ್ಟುವ ಮಗನೇ, ನನ್ನ ಹೆಸರಿಗೋಸ್ಕರ ಆಲಯವನ್ನು ಕಟ್ಟಬೇಕು,’ ಎಂದು ಹೇಳಿದರು.


ಆದ್ದರಿಂದ, ನನ್ನ ದೇವರಾದ ಯೆಹೋವ ದೇವರ ಹೆಸರಿಗೆ ಆಲಯವನ್ನು ಕಟ್ಟಿಸಬೇಕೆಂದಿದ್ದೇನೆ. ಅದರ ವಿಷಯವಾಗಿ ಯೆಹೋವ ದೇವರು ನನ್ನ ತಂದೆಯಾದ ದಾವೀದನಿಗೆ, ‘ನಿನಗೆ ಬದಲಾಗಿ ನಿನ್ನ ಸಿಂಹಾಸನದ ಮೇಲೆ ನಾನು ಕುಳ್ಳಿರಿಸುವ ನಿನ್ನ ಮಗನೇ ನನ್ನ ಹೆಸರಿಗೆ ದೇವಾಲಯವನ್ನು ಕಟ್ಟಿಸುವನು,’ ಎಂದು ಹೇಳಿದ್ದಾರಲ್ಲವೇ.


‘ಎಂದೆಂದಿಗೂ ನಿಮ್ಮ ಸಂತತಿಯನ್ನು ಸ್ಥಿರಪಡಿಸುವೆನು ತಲತಲಾಂತರಕ್ಕೂ ನಿಮ್ಮ ಸಿಂಹಾಸನವನ್ನು ಕಟ್ಟುವೆನು.’ ”


“ನೀನು ಕಟ್ಟಿಸುವ ಈ ಆಲಯವನ್ನು ಕುರಿತು ನನ್ನ ಕಟ್ಟಳೆಗಳಲ್ಲಿ ನಡೆದು, ನನ್ನ ನ್ಯಾಯಗಳ ಪ್ರಕಾರಮಾಡಿ, ನನ್ನ ಸಕಲ ಆಜ್ಞೆಗಳಲ್ಲಿ ನಡೆದುಕೊಳ್ಳುವ ಹಾಗೆ ಅವುಗಳನ್ನು ಕೈಗೊಂಡರೆ, ನಾನು ನಿನ್ನ ತಂದೆ ದಾವೀದನಿಗೆ ಹೇಳಿದ ನನ್ನ ವಾಕ್ಯವನ್ನು ನಿನಗೆ ಸ್ಥಿರಮಾಡಿ,


ಅವನೇ ಯೆಹೋವ ದೇವರ ದೇವಾಲಯವನ್ನು ಕಟ್ಟಿದ ಮೇಲೆ, ರಾಜವೈಭವವನ್ನು ಧರಿಸಿ ಸಿಂಹಾಸನದ ಮೇಲೆ ಆಸೀನನಾಗಿ ಆಳುವನು. ಅವನ ಸಿಂಹಾಸನದಲ್ಲಿ ಒಬ್ಬ ಯಾಜಕನಾಗಿರುವನು. ಸಮಾಧಾನದ ಆಲೋಚನೆ ಅವರಿಬ್ಬರೊಳಗೆ ಇರುವುದು.


ಅವರ ಆಡಳಿತದ ಶ್ರೇಷ್ಠತೆ ಮತ್ತು ಶಾಂತಿಗೆ ಅಂತ್ಯವಿಲ್ಲ. ಅವರ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವುದು, ದಾವೀದನ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು, ಸೇನಾಧೀಶ್ವರ ಯೆಹೋವ ದೇವರ ಅನುಗ್ರಹವು ಇದನ್ನು ನೆರವೇರಿಸುವುದು.


ಆತನ ಸಂತತಿಯನ್ನು ಸಹ ಎಂದೆಂದಿಗೂ ಆತನ ಸಿಂಹಾಸನವನ್ನು ಆಕಾಶ ಇರುವವರೆಗೂ ಮಾಡುವೆನು.


ನಿನ್ನ ಮನೆಯೂ ನಿನ್ನ ರಾಜ್ಯವೂ ನನ್ನ ಮುಂದೆ ಸದಾಕಾಲಕ್ಕೂ ಸ್ಥಿರವಾಗಿರುವವು. ನಿನ್ನ ಸಿಂಹಾಸನವು ಯುಗಯುಗಾಂತರಕ್ಕೂ ಶಾಶ್ವತವಾಗಿರುವುದು,’ ” ಎಂದು ಹೇಳಿದರು.


ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಿಕ ಮಂದಿರವಾಗುವುದಕ್ಕೆ ನಿರ್ಮಿತವಾಗುತ್ತಾ ಇದ್ದೀರಿ. ಕ್ರಿಸ್ತ ಯೇಸುವಿನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮಿಕ ಯಜ್ಞಗಳನ್ನು ಸಮರ್ಪಿಸಲು ನೀವು ಪವಿತ್ರ ಯಾಜಕವರ್ಗದವರಾಗಬೇಕು.


ಮನೆಗಿಂತ ಮನೆಕಟ್ಟಿದವನಿಗೆ ಹೆಚ್ಚಾದ ಗೌರವವಿರುವುದರಿಂದ, ಮೋಶೆಗಿಂತ ಯೇಸು ಹೆಚ್ಚಾದ ಮಹಿಮೆಗೆ ಯೋಗ್ಯರೆಂದು ಎಣಿಸಿಕೊಂಡಿದ್ದಾರೆ.


ಯೆಹೋವ ದೇವರು ಹೇಳುವುದೇನೆಂದರೆ: “ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರವನ್ನು ದಯಪಾಲಿಸಿದ್ದೇನೆ. ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದ್ದೇನೆ. ನಾನು ನಿನ್ನನ್ನು ಕಾಪಾಡಿ, ಭೂಮಿಯನ್ನು ಸ್ಥಾಪಿಸುವುದಕ್ಕೂ, ಹಾಳಾಗಿರುವ ಸ್ಥಳಗಳನ್ನು ಸೊತ್ತಾಗಿ ಹೊಂದುವುದಕ್ಕೂ, ಜನರ ಒಡಂಬಡಿಕೆಯನ್ನಾಗಿಯೂ ನೇಮಿಸಿದ್ದೇನೆ.


ನನ್ನ ಕೈ ಅವನನ್ನು ಪರಿಪಾಲಿಸುವುದು; ನನ್ನ ಭುಜವು ಅವನನ್ನು ಬಲಪಡಿಸುವುದು.


ಆದ್ದರಿಂದ ಜಾಗ್ರತೆಯಾಗಿರು. ಏಕೆಂದರೆ, ಯೆಹೋವ ದೇವರು ಪರಿಶುದ್ಧ ಆಲಯವನ್ನು ಕಟ್ಟಬೇಕೆಂದು ನಿನ್ನನ್ನು ಆರಿಸಿಕೊಂಡಿದ್ದಾರೆ. ನೀನು ಧೈರ್ಯದಿಂದ ಕೆಲಸಕ್ಕೆ ಕೈ ಹಚ್ಚು,” ಎಂದನು.


ನಾನು ಸಹ ನಿನಗೆ ಹೇಳುವುದೇನಂದರೆ, ನೀನು ಪೇತ್ರನು. ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ದ್ವಾರಗಳು ಅದನ್ನು ಜಯಿಸಲಾರವು.


“ಸೇನಾಧೀಶ್ವರ ಯೆಹೋವ ದೇವರೇ, ಇಸ್ರಾಯೇಲಿನ ದೇವರೇ, ‘ನಾನು ನಿಮಗೆ ಮನೆಯನ್ನು ಕಟ್ಟುವೆನೆಂದು’ ನಿಮ್ಮ ಸೇವಕನಿಗೆ ಪ್ರಕಟ ಮಾಡಿದ್ದರಿಂದ, ನಿಮ್ಮನ್ನು ಕುರಿತು ಈ ಪ್ರಾರ್ಥನೆಯನ್ನು ಪ್ರಾರ್ಥಿಸುವುದಕ್ಕೆ ನಿಮ್ಮ ಸೇವಕನ ಹೃದಯದಲ್ಲಿ ಧೈರ್ಯ ಉಂಟಾಯಿತು.


ಯೆಹೋವ ದೇವರು, ‘ನಿನ್ನ ಮಕ್ಕಳು ತಾವು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ನನ್ನ ಮುಂದೆ ನಂಬಿಗಸ್ತರಾಗಿ ನಡೆದುಕೊಳ್ಳುವ ಹಾಗೆ ತಮ್ಮ ಮಾರ್ಗವನ್ನು ಕಾದುಕೊಂಡರೆ ಅವರು ಇಸ್ರಾಯೇಲಿನ ಸಿಂಹಾಸನದ ಮೇಲೆ ತಪ್ಪದೇ ಕುಳಿತುಕೊಳ್ಳುವರು,’ ಎಂದು ನನಗೆ ಹೇಳಿದ ತಮ್ಮ ವಾಕ್ಯವನ್ನು ಸ್ಥಿರಪಡಿಸುವರು.


“ಹಾಗಾದರೆ ನನ್ನನ್ನು ಸ್ಥಿರಪಡಿಸಿ, ನನ್ನ ತಂದೆ ದಾವೀದನ ಸಿಂಹಾಸನದ ಮೇಲೆ ನನ್ನನ್ನು ಕೂಡಿಸಿ, ತಾವು ಮಾತುಕೊಟ್ಟ ಪ್ರಕಾರ ನನಗೆ ಮನೆತನ ಕಟ್ಟಿಸಿದ ಯೆಹೋವ ದೇವರ ಜೀವದಾಣೆ, ಈ ಹೊತ್ತು ಅದೋನೀಯನು ಸಾಯಬೇಕು,” ಎಂದನು.


ಆದರೆ ಅರಸನಾದ ಸೊಲೊಮೋನನಿಗೆ ಆಶೀರ್ವಾದವಾಗಲಿ. ದಾವೀದನ ಸಿಂಹಾಸನವು ಯೆಹೋವ ದೇವರ ಮುಂದೆ ಯುಗಯುಗಾಂತರಕ್ಕೂ ಸ್ಥಿರವಾಗಿರುವುದು,” ಎಂದನು.


ಆದರೆ ನಾನು ನಿಮಗೋಸ್ಕರ ಭವ್ಯವಾದ ಮಂದಿರವನ್ನು ಕಟ್ಟಿಸಿದ್ದೇನೆ, ಅದು ನಿಮಗೆ ಶಾಶ್ವತವಾದ ವಾಸಸ್ಥಳವಾಗಿರಲಿ,” ಎಂದು ಹೇಳಿದನು.


ನಂತರ ರಾಜನು ಹೀಗೆ ಹೇಳಿದನು: “ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಸ್ತೋತ್ರವಾಗಲಿ, ಅವರು ನನ್ನ ತಂದೆಯಾದ ದಾವೀದನಿಗೆ ತಮ್ಮ ಬಾಯಿಂದ ವಾಗ್ದಾನ ಮಾಡಿದ್ದನ್ನು, ತಮ್ಮ ಕೈಗಳಿಂದಲೇ ನೆರವೇರಿಸಿದರು. ಅವರು ಹೇಳಿದ್ದೇನೆಂದರೆ,


ಇದಲ್ಲದೆ, “ಯೆರೂಸಲೇಮಿನಲ್ಲಿ ನನ್ನ ಹೆಸರನ್ನು ಸ್ಥಾಪಿಸುವೆನು,” ಎಂದು ಯೆಹೋವ ದೇವರು ಯಾವುದನ್ನು ಕುರಿತು ಹೇಳಿದ್ದರೋ, ಆ ಆಲಯದಲ್ಲಿ ಅವನು ಬಲಿಪೀಠಗಳನ್ನು ಕಟ್ಟಿಸಿದನು.


ಇದಲ್ಲದೆ ಯೆರೂಸಲೇಮಿನಲ್ಲಿ, “ನನ್ನ ಹೆಸರು ಯುಗಯುಗಕ್ಕೂ ಇರುವುದು,” ಎಂದು ಯೆಹೋವ ದೇವರು ಯಾವುದನ್ನು ಕುರಿತು ಹೇಳಿದ್ದರೋ, ಆ ಆಲಯದಲ್ಲಿ ಅವನು ಬಹಳ ಬಲಿಪೀಠಗಳನ್ನು ಕಟ್ಟಿಸಿದನು.


ರಾಜದಂಡವನ್ನು ಹಿಡಿಯತಕ್ಕವನು ಶೀಲೋವಿನಿಂದ ಬರುವ ತನಕ, ಯೆಹೂದನ ಕೈಯಿಂದ ರಾಜದಂಡವಾಗಲೀ, ಆಡಳಿತಗಾರನ ಅಧಿಕಾರವಾಗಲೀ ಬಿಟ್ಟು ಹೋಗುವುದಿಲ್ಲ. ಎಲ್ಲಾ ಜನಾಂಗಗಳು ಅವನಿಗೆ ವಿಧೇಯವಾಗುವುವು.


“ಅವರು ತಮ್ಮ ಅರಸನಿಗೆ ವಿಶೇಷ ರಕ್ಷಣೆಯನ್ನು ಕೊಡುವರು; ತಮ್ಮ ಅಭಿಷಿಕ್ತನಿಗೂ, ದಾವೀದನಿಗೂ, ಅವನ ಸಂತತಿಯವರಿಗೂ ದಯೆಯನ್ನು ಯುಗಯುಗಕ್ಕೂ ಅನುಗ್ರಹಿಸುವರು.”


ಆದರೂ ಯೆಹೋವ ದೇವರು ಯೆಹೂದದ ರಾಜ್ಯವನ್ನು ನಾಶಮಾಡಲಿಲ್ಲ. “ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ,” ಎಂಬುದಾಗಿ ತಮ್ಮ ದಾಸನಾದ ದಾವೀದನಿಗೆ ಪ್ರಮಾಣ ಮಾಡಿದ ಕಾರಣ ಉಳಿಸಿದರು.


“ಈ ಆಲಯದಲ್ಲಿಯೂ, ಇಸ್ರಾಯೇಲಿನ ಸಕಲ ಗೋತ್ರಗಳಲ್ಲಿಯೂ, ನಾನು ಆಯ್ದುಕೊಂಡ ಯೆರೂಸಲೇಮಿನಲ್ಲಿಯೂ, ನನ್ನ ನಾಮವನ್ನು ಯುಗಯುಗಕ್ಕೂ ಇರುವಂತೆ ಮಾಡುವೆನು,” ಎಂದು ಯೆಹೋವ ದೇವರು ದಾವೀದನಿಗೂ, ಅವನ ಮಗನಾದ ಸೊಲೊಮೋನನಿಗೂ ಯಾವುದನ್ನು ಕುರಿತು ಹೇಳಿದ್ದರೋ, ಆ ಆಲಯದಲ್ಲಿ ತಾನು ಮಾಡಿದ ಅಶೇರ ವಿಗ್ರಹಸ್ತಂಭವನ್ನು ಇಟ್ಟನು.


“ಆದಕಾರಣ, ಈಗ ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ‘ನಿಮ್ಮ ಸಂತಾನದವರು, ನಿನ್ನಂತೆ ಜಾಗ್ರತೆಯಾಗಿದ್ದು, ನನ್ನ ನಿಯಮದ ಪ್ರಕಾರ ನಡೆದುಕೊಳ್ಳುವದಾದರೆ, ಅವರು ತಪ್ಪದೆ ಇಸ್ರಾಯೇಲಿನ ಸಿಂಹಾಸನದ ಮೇಲೆ ನನ್ನ ಸಮ್ಮುಖದಲ್ಲಿ ಕುಳಿತುಕೊಳ್ಳುವರು,’ ಎಂದು ನೀವು ನನ್ನ ತಂದೆಯಾದ ನಿಮ್ಮ ಸೇವಕನಾದ ದಾವೀದನಿಗೆ ವಾಗ್ದಾನ ಮಾಡಿದ್ದನ್ನು ನೆರವೇರಿಸಿರಿ.


ದೇವರು ನೀತಿವಂತರಿಂದ ತಮ್ಮ ಕಣ್ಣುಗಳನ್ನು ತೊಲಗಿಸುವುದಿಲ್ಲ; ದೇವರು ನೀತಿವಂತರನ್ನು ಅರಸುಗಳ ಸಂಗಡ ಸಿಂಹಾಸನದಲ್ಲಿ ಕುಳ್ಳಿರಿಸುವರು; ಹೌದು, ದೇವರು ಅವರನ್ನು ಎಂದೆಂದಿಗೂ ಉನ್ನತಕ್ಕೇರಿಸುವರು.


ಅರಸನ ನಾಮವು ಎಂದೆಂದಿಗೂ ಇರಲಿ. ಸೂರ್ಯನಿರುವವರೆಗೂ ಆತನ ಹೆಸರು ಇರಲಿ. ಮನುಷ್ಯರು ಅರಸನಲ್ಲಿ ಆಶೀರ್ವಾದ ಹೊಂದಲಿ. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತನೆಂದು ಕರೆಯಲಿ.


ಏಕೆಂದರೆ ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನನ್ನು ನಮಗಾಗಿ ಕೊಡಲಾಗಿದೆ. ಆಡಳಿತವು ಅವರ ಬಾಹುವಿನ ಮೇಲಿರುವುದು, ಅದ್ಭುತವಾದವರು ಸಮಾಲೋಚಕರು, ಪರಾಕ್ರಮಿಯಾದ ದೇವರು, ನಿತ್ಯರಾದ ತಂದೆ, ಸಮಾಧಾನದ ಪ್ರಭು, ಎಂಬುದು ಅವರ ಹೆಸರಾಗಿರುವುದು.


ಯೆಹೋವ ದೇವರಾದ ನಾನು ಹೇಳುವುದೇನೆಂದರೆ: ‘ದಾವೀದನು ಎಂದಿಗೂ ಇಸ್ರಾಯೇಲ್ ಸಿಂಹಾಸನದಲ್ಲಿ ಕುಳಿತುಕೊಳ್ಳಲು ಒಬ್ಬ ವ್ಯಕ್ತಿಯನ್ನು ಹೊಂದಲು ವಿಫಲನಾಗುವುದಿಲ್ಲ


ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ಪಿತೃಗಳು ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮೊಮ್ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ರಾಜಕುಮಾರನಾಗಿರುವನು.


“ಆ ಅರಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವರು. ಅದು ಬೇರೆ ಜನರಿಗೆ ಸೇರಿ ಹೋಗುವುದಿಲ್ಲ. ಅದು ಆ ರಾಜ್ಯಗಳನ್ನೆಲ್ಲಾ ಧ್ವಂಸಮಾಡಿ, ಮುಗಿಸಿ, ತಾನು ಎಂದೆಂದಿಗೂ ನಿಲ್ಲುವುದು.


ಅವನಿಗೆ ಹೇಳತಕ್ಕದ್ದೇನೆಂದರೆ: ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ರೆಂಬೆ,’ ಎಂದು ಹೆಸರುಳ್ಳ ಮನುಷ್ಯನು, ತನ್ನ ಸ್ಥಳದೊಳಗಿಂದ ರೆಂಬೆಯನ್ನು ತೆಗೆದುಹಾಕಿ, ಯೆಹೋವ ದೇವರ ಆಲಯವನ್ನು ಕಟ್ಟುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು