Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 7:7 - ಕನ್ನಡ ಸಮಕಾಲಿಕ ಅನುವಾದ

7 ನಾನು ನನ್ನ ಜನರಾದ ಇಸ್ರಾಯೇಲರನ್ನು ಪರಿಪಾಲಿಸಲು ಆಜ್ಞಾಪಿಸಿದ ಇಸ್ರಾಯೇಲಿನ ಅಧಿಪತಿಗಳಲ್ಲಿ ಒಬ್ಬನ ಜೊತೆಯಾದರೂ, “ನೀವು ನನಗೆ ದೇವದಾರು ಮನೆಯನ್ನು ಏಕೆ ಕಟ್ಟಲಿಲ್ಲ,” ಎಂದು, ನಾನು ಸಮಸ್ತ ಇಸ್ರಾಯೇಲಿನ ಸಂಗಡ ಸಂಚರಿಸಿದ ಯಾವ ಸ್ಥಳದಲ್ಲಾದರೂ, ಯಾವಾಗಲಾದರೂ ಕೇಳಿದೆನೋ?’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾನು ಇಸ್ರಾಯೇಲರ ಮಧ್ಯದಲ್ಲಿ ಸಂಚರಿಸುತ್ತಿದ್ದಾಗ ನನ್ನ ಜನರಾದ ಇಸ್ರಾಯೇಲರನ್ನು ಪಾಲಿಸುವುದಕ್ಕೊಸ್ಕರ ನನ್ನಿಂದ ನೇಮಿಸಲ್ಪಟ್ಟ ಯಾವ ಕುಲನಾಯಕನನ್ನಾದರೂ ನೀವು ನನಗೋಸ್ಕರ ದೇವದಾರು ಮರದ ಮನೆಯನ್ನೇಕೆ ಕಟ್ಟಲಿಲ್ಲವೆಂದು ಕೇಳಿದೆನೋ?’ ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂದು ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಹೀಗೆ ಇಸ್ರಯೇಲರ ಮಧ್ಯೆ ಸಂಚರಿಸುತ್ತಿದ್ದಾಗ ನನ್ನ ಜನರಾದ ಅವರನ್ನು ಪಾಲಿಸುವುದಕ್ಕೆ ಕುಲನಾಯಕನನ್ನು ನೇಮಿಸಿದೆ. ಅವರಾರಿಂದಲೂ ‘ನೀವೇಕೆ ನನಗೆ ದೇವದಾರು ಮರದಿಂದ ದೇವಾಲಯವನ್ನು ಕಟ್ಟಿಸಲಿಲ್ಲ?’ ಎಂದು ಕೇಳಿದ್ದಿಲ್ಲ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಾನು ಇಸ್ರಾಯೇಲ್ಯರ ಮಧ್ಯದಲ್ಲಿ ಸಂಚರಿಸುತ್ತಿದ್ದಾಗ ನನ್ನ ಜನರಾದ ಇಸ್ರಾಯೇಲ್ಯರನ್ನು ಪಾಲಿಸುವದಕ್ಕೋಸ್ಕರ ನನ್ನಿಂದ ನೇವಿುಸಲ್ಪಟ್ಟ ಯಾವ ಕುಲದವರನ್ನಾದರೂ - ನೀವು ನನಗೋಸ್ಕರ ದೇವದಾರುಮರದ ಮನೆಯನ್ನೇಕೆ ಕಟ್ಟಲಿಲ್ಲವೆಂದು ಕೇಳಿದೆನೋ ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನನಗಾಗಿ ದೇವದಾರು ಮರದಿಂದ ಆಲಯ ಕಟ್ಟುವಂತೆ ಇಸ್ರೇಲರ ಯಾವ ಕುಲದವರನ್ನಾಗಲಿ ನಾನು ಕೇಳಿಕೊಳ್ಳಲಿಲ್ಲ ಎಂಬುದಾಗಿ ಯೆಹೋವನು ತಿಳಿಸುತ್ತಾನೆ’ ಎಂದು ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 7:7
19 ತಿಳಿವುಗಳ ಹೋಲಿಕೆ  

ನಾನು ನನ್ನ ಜನರಾದ ಇಸ್ರಾಯೇಲರನ್ನು ಪರಿಪಾಲಿಸಲು ಆಜ್ಞಾಪಿಸಿದ ಇಸ್ರಾಯೇಲಿನ ಅಧಿಪತಿಗಳಲ್ಲಿ ಒಬ್ಬನ ಜೊತೆಯಾದರೂ, “ನೀವು ನನಗೆ ದೇವದಾರು ಮನೆಯನ್ನು ಏಕೆ ಕಟ್ಟಲಿಲ್ಲ,” ಎಂದು ನಾನು ಸಮಸ್ತ ಇಸ್ರಾಯೇಲಿನ ಸಂಗಡ ಸಂಚರಿಸಿದ ಯಾವ ಸ್ಥಳದಲ್ಲಾದರೂ, ಯಾವಾಗಲಾದರೂ ಕೇಳಿದೆನೋ?’


ಇದಲ್ಲದೆ ಪೂರ್ವದಲ್ಲಿ ಸೌಲನು ನಮ್ಮ ಮೇಲೆ ಅರಸನಾಗಿದ್ದಾಗ, ನೀನು ದಳಪತಿಯಾಗಿ ಇಸ್ರಾಯೇಲನ್ನು ಹೊರಗೆ ನಡೆಸುವವನಾಗಿಯೂ ಒಳಗೆ ತರುವವನಾಗಿಯೂ ಇದ್ದವನು. ಆದ್ದರಿಂದ ಯೆಹೋವ ದೇವರು ನಿನಗೆ, ‘ನೀನು ನನ್ನ ಜನರಾದ ಇಸ್ರಾಯೇಲರ ನಾಯಕನೂ ಪಾಲಕನೂ ಆಗಿರುವೆ ಎಂದು ಹೇಳಿದರು,’ ” ಎಂದರು.


“ಇಸ್ರಾಯೇಲರೇ, ನಮಗೆ ಸಹಾಯಮಾಡಿರಿ! ನಮ್ಮ ಜನರಿಗೂ ನಮ್ಮ ನಿಯಮಕ್ಕೂ ಈ ಸ್ಥಳಕ್ಕೂ ವಿರೋಧವಾಗಿ ಎಲ್ಲಾ ಜನರಿಗೆ ಬೋಧಿಸುತ್ತಿರುವ ಮನುಷ್ಯನು ಇವನೇ. ಅಷ್ಟೇ ಅಲ್ಲ, ಗ್ರೀಕರನ್ನು ದೇವಾಲಯದೊಳಗೆ ಕರೆದುಕೊಂಡು ಬಂದು ಈ ಪವಿತ್ರ ಸ್ಥಳವನ್ನು ಭ್ರಷ್ಟಗೊಳಿಸಿದ್ದಾನೆ,” ಎಂದು ಕೂಗಿ ಹೇಳಿದರು.


ದೇವರು ತಮ್ಮ ರಕ್ತದಿಂದ ಕೊಂಡುಕೊಂಡ ಸಭೆಗೆ ನೀವು ಕುರುಬರಾಗಿರುವುದಕ್ಕಾಗಿ ಪವಿತ್ರಾತ್ಮರು ನಿಮ್ಮನ್ನೇ ಮಂದೆಯಲ್ಲಿ ಮೇಲ್ವಿಚಾರಕರನ್ನಾಗಿ ಇಟ್ಟಿರುವುದರಿಂದ, ನಿಮ್ಮ ವಿಷಯದಲ್ಲಿಯೂ ಇಡೀ ಮಂದೆಯ ವಿಷಯದಲ್ಲಿಯೂ ಎಚ್ಚರವಾಗಿರಿ.


“ ‘ಯೆಹೂದ ಪ್ರಾಂತದಲ್ಲಿರುವ ಬೇತ್ಲೆಹೇಮೇ, ಯೆಹೂದದ ಅಧಿಪತಿಗಳಲ್ಲಿ ನೀನು ಎಷ್ಟು ಮಾತ್ರಕ್ಕೂ ಅಲ್ಪವಲ್ಲ. ಏಕೆಂದರೆ ನನ್ನ ಪ್ರಜೆಗಳಾದ ಇಸ್ರಾಯೇಲನ್ನು ಪರಿಪಾಲಿಸಲು ಒಬ್ಬ ಅಧಿಪತಿಯು ನಿನ್ನೊಳಗಿಂದಲೇ ಬರುವನು,’” ಎಂದು ಹೇಳಿದರು.


ಆತನು ಯೆಹೋವ ದೇವರ ಬಲದಲ್ಲಿಯೂ ತನ್ನ ದೇವರಾದ ಯೆಹೋವ ದೇವರ ಹೆಸರಿನ ಘನತೆಯಲ್ಲಿಯೂ ನಿಂತುಕೊಂಡು ತನ್ನ ಮಂದೆಯನ್ನು ಮೇಯಿಸುವನು. ಅವರು ನೆಲೆಯಾಗಿರುವರು, ಆತನ ಘನತೆಯು ಭೂಮಿಯ ಅಂತ್ಯಗಳ ಮಟ್ಟಿಗೂ ತಲುಪುವುದು.


ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ.


ನಾನೇ ನನ್ನ ಮಂದೆಯನ್ನು ಮೇಯಿಸಿ, ನಾನೇ ಅವುಗಳನ್ನು ಮಲಗಿಸುವೆನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


“ಮನುಷ್ಯಪುತ್ರನೇ, ಇಸ್ರಾಯೇಲಿನ ಕುರುಬರಿಗೆ ವಿರುದ್ಧವಾಗಿ ಪ್ರವಾದಿಸಿ ಅವರಿಗೆ ಹೇಳು: ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ತಮ್ಮನ್ನು ತಾವೇ ಮೇಯಿಸಿಕೊಳ್ಳುವ ಇಸ್ರಾಯೇಲಿನ ಕುರುಬರಿಗೆ ಕಷ್ಟ! ಕುರುಬರು ಮಂದೆಗಳನ್ನು ಮೇಯಿಸಬಾರದೋ?


ಅವರನ್ನು ಮೇಯಿಸತಕ್ಕ ಕುರುಬರನ್ನು ಅವರ ಮೇಲೆ ಇಡುತ್ತೇನೆ. ಅವರು ಇನ್ನು ಮೇಲೆ ಭಯಪಡುವುದೇ ಇಲ್ಲ, ಅಂಜುವುದಿಲ್ಲ, ಕೊರತೆ ಪಡುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


ನನ್ನ ಹೃದಯಕ್ಕೆ ಸರಿಯಾದ ಪಾಲಕರನ್ನು ನಿಮಗೆ ಕೊಡುವೆನು. ಅವರು ತಿಳುವಳಿಕೆಯಿಂದಲೂ, ಬುದ್ಧಿಯಿಂದಲೂ ನಿಮ್ಮನ್ನು ಪೋಷಿಸುವರು.


ಅವರು ತಮ್ಮ ಮಂದೆಯನ್ನು ಕುರುಬನಂತೆ ಮೇಯಿಸುವರು. ಕುರಿಮರಿಗಳನ್ನು ಕೂಡಿಸಿ, ಅವುಗಳನ್ನು ತಮ್ಮ ಎದೆಗಪ್ಪಿಕೊಳ್ಳುವರು, ಎಳೆಯ ಮರಿಗಳನ್ನು ಮೆಲ್ಲಗೆ ನಡಿಸುವರು.


ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ರಕ್ಷಿಸುವುದಕ್ಕೂ, ನಿಮ್ಮ ಶತ್ರುಗಳನ್ನು ನಿಮ್ಮ ಮುಂದೆ ಒಪ್ಪಿಸಿಬಿಡುವುದಕ್ಕೂ ಪಾಳೆಯದ ಮಧ್ಯದಲ್ಲಿ ಸಂಚಾರ ಮಾಡುತ್ತಾರೆ. ಅವರು ನಿಮ್ಮಲ್ಲಿ ಅಶುದ್ಧವಾದ ಕಾರ್ಯವನ್ನು ನೋಡಿ, ನಿಮ್ಮನ್ನು ಬಿಟ್ಟು ತಿರುಗಿಹೋಗದಂತೆ ನಿಮ್ಮ ಪಾಳೆಯವು ನಿರ್ಮಲವಾಗಿರಬೇಕು.


ಜೊತೆ ಹಿರಿಯನೂ ಕ್ರಿಸ್ತ ಯೇಸುವಿನ ಶ್ರಮೆಗಳ ಸಾಕ್ಷಿಯೂ ಪ್ರತ್ಯಕ್ಷವಾಗಲಿರುವ ಮಹಿಮೆಯಲ್ಲಿ ಪಾಲುಗಾರನೂ ಆಗಿರುವ ನಾನು ನಿಮ್ಮಲ್ಲಿರುವ ಹಿರಿಯರನ್ನು ಬೇಡಿಕೊಳ್ಳುವುದು.


ಇದಲ್ಲದೆ ಪೂರ್ವದಲ್ಲಿ ಸೌಲನು ನಮ್ಮ ಮೇಲೆ ಅರಸನಾಗಿದ್ದಾಗ, ನೀನು ದಳಪತಿಯಾಗಿ ಇಸ್ರಾಯೇಲನ್ನು ಹೊರಗೆ ನಡೆಸುವವನಾಗಿಯೂ, ಒಳಗೆ ತರುವವನಾಗಿಯೂ ಇದ್ದವನು. ಆದ್ದರಿಂದ ನಿನ್ನ ದೇವರಾದ ಯೆಹೋವ ದೇವರು ನಿನಗೆ, ‘ನೀನು ನನ್ನ ಜನರಾದ ಇಸ್ರಾಯೇಲರ ನಾಯಕನೂ, ಪಾಲಕನೂ ಆಗಿರುವೆ,’ ಎಂದು ವಾಗ್ದಾನ ಮಾಡಿದ್ದು ನಿಮ್ಮನ್ನು ಕುರಿತೇ,” ಎಂದು ಹೇಳಿ ವಂದಿಸಿದರು.


ಯೆಹೋವ ದೇವರು ಹೇಳುವುದೇನೆಂದರೆ: “ಆಕಾಶವೇ ನನ್ನ ಸಿಂಹಾಸನ, ಭೂಮಿಯೇ ನನ್ನ ಪಾದ ಪೀಠ, ನೀವು ನನಗೋಸ್ಕರ ಕಟ್ಟುವ ಮನೆ ಎಲ್ಲಿ? ನನ್ನ ವಿಶ್ರಾಂತಿಯ ಸ್ಥಳವು ಎಲ್ಲಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು