Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 8:5 - ಕನ್ನಡ ಸಮಕಾಲಿಕ ಅನುವಾದ

5 ದಮಸ್ಕದ ಅರಾಮ್ಯರು ಚೋಬದ ಅರಸ ಹದದೆಜೆರನಿಗೆ ಸಹಾಯಮಾಡಲು ಬಂದಾಗ, ದಾವೀದನು ಅರಾಮ್ಯರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಸಂಹರಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದಮಸ್ಕದ ಅರಾಮ್ಯರು, ಚೋಬದ ಅರಸನಾದ ಹದದೆಜೆರನನ್ನು ರಕ್ಷಿಸಲು ಬಂದಾಗ ದಾವೀದನು ಅವರನ್ನೂ ಸೋಲಿಸಿ ಅವರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ದಮಸ್ಕದ ಸಿರಿಯಾದವರು ಚೋಬದ ಅರಸನಾದ ಹದದೆಜೆರನಿಗೆ ನೆರವಾಗಲು ಬಂದಾಗ ದಾವೀದನು ಅವರನ್ನೂ ಸೋಲಿಸಿ ಅವರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಸದೆಬಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ದಮಸ್ಕದ ಅರಾಮ್ಯರು ಚೋಬದ ಅರಸನಾದ ಹದದೆಜೆರನನ್ನು ರಕ್ಷಿಸಬಂದಾಗ ದಾವೀದನು ಅವರನ್ನೂ ಸೋಲಿಸಿ ಅವರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಹತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಚೋಬದ ರಾಜನಾದ ಹದದೆಜೆರನ ಸಹಾಯಕ್ಕೆ ದಮಸ್ಕದ ಅರಾಮ್ಯರು ಬಂದರು. ಆದರೆ ದಾವೀದನು ಆ ಇಪ್ಪತ್ತೆರಡು ಸಾವಿರ ಅರಾಮ್ಯರನ್ನು ಸಂಹರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 8:5
9 ತಿಳಿವುಗಳ ಹೋಲಿಕೆ  

ಈಜಿಪ್ಟಿನವರು ಮನುಷ್ಯ ಮಾತ್ರದವರೇ, ದೇವರಲ್ಲ; ಅವರ ಅಶ್ವಗಳು ಆತ್ಮವಲ್ಲ, ಮೂಳೆಮಾಂಸವೇ. ಹೀಗಿರುವುದರಿಂದ ಯೆಹೋವ ದೇವರು ತನ್ನ ಕೈಚಾಚುವಾಗ ಸಹಾಯ ಮಾಡಿದವನು ಮತ್ತು ಸಹಾಯ ಪಡೆದವನೂ ಬಿದ್ದುಹೋಗುವನು. ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು.


ಏಕೆಂದರೆ, ದಮಸ್ಕವು ಸಿರಿಯಾದ ರಾಜಧಾನಿ ಮತ್ತು ದಮಸ್ಕದ ತಲೆಯು ರೆಚೀನ ಮಾತ್ರ, ಅರವತ್ತೈದು ವರುಷಗಳೊಳಗೆ ಎಫ್ರಾಯೀಮರು ರಾಷ್ಟ್ರವಾಗದೆ ಭಂಗಪಡುವರು.


ದೇವರು ತಮ್ಮ ಬೇಸರವನ್ನು ವ್ಯಕ್ತಪಡಿಸುತ್ತಾರೆ; ರಹಾಬನ ಸಹಾಯಕರು ಸಹ ದೇವರ ಕಾಲಿಗೆ ಅಡ್ಡಬಿದ್ದರಲ್ಲಾ.


ಇದಲ್ಲದೆ ದಾವೀದನು ಯೂಫ್ರೇಟೀಸ್ ನದಿಯ ಬಳಿಯಲ್ಲಿ ತನ್ನ ಅಧಿಕಾರವನ್ನು ಸ್ಥಾಪಿಸುವದಕ್ಕೆ ಹೋಗುತ್ತಿರುವಾಗ, ಚೋಬದ ಅರಸನಾದ ರೆಹೋಬನ ಮಗ ಹದದೆಜೆರನನ್ನು ಸೋಲಿಸಿದನು.


ತಾವು ದಾವೀದನಿಗೆ ಅಸಹ್ಯರಾದೆವೆಂದು ಅಮ್ಮೋನಿಯರಿಗೆ ತಿಳಿಯಿತು. ಆದ್ದರಿಂದ ಅವರು ದೂತರನ್ನು ಕಳುಹಿಸಿ ಬೇತ್‌ರೆಹೋಬ್, ಚೋಬಾ ಎಂಬ ಪಟ್ಟಣಗಳಿಂದ ಇರುವ ಇಪ್ಪತ್ತು ಸಾವಿರ ಕಾಲಾಳುಗಳಾದ ಅರಾಮ್ಯರನ್ನೂ, ಟೋಬ್ ದೇಶದಿಂದ ಹನ್ನೆರಡು ಸಾವಿರ ಜನರನ್ನೂ, ಮಾಕದ ಅರಸನನ್ನೂ ಅವನ ಸಾವಿರ ಜನರನ್ನೂ ಕೂಲಿಗೆ ತೆಗೆದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು