Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 9:3 - ಕನ್ನಡ ಸಮಕಾಲಿಕ ಅನುವಾದ

3 ಅರಸನು, “ನಾನು ದೇವರ ದಯೆ ತೋರಿಸುವ ಹಾಗೆ ಸೌಲನ ಕುಟುಂಬದಲ್ಲಿ ಇನ್ನೂ ಯಾವನಾದರೂ ಇದ್ದಾನೋ?” ಎಂದನು. ಆಗ ಚೀಬನು ಅರಸನಿಗೆ, “ಯೋನಾತಾನನಿಗೆ ಎರಡೂ ಕಾಲು ಕುಂಟಾದ ಮಗನಿದ್ದಾನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅರಸನು ಅವನಿಗೆ, “ಸೌಲನ ಕುಟುಂಬದಲ್ಲಿ ಯಾರಾದರೂ ಉಳಿದಿದ್ದರೆ ಹೇಳು, ನಾನು ದೇವರನ್ನು ನೆನಸಿ ಅವರಿಗೆ ದಯೆತೋರಿಸುತ್ತೇನೆ” ಎಂದನು. ಆಗ ಚೀಬನು ಅರಸನಿಗೆ “ಯೋನಾತಾನನಿಗೆ ಎರಡೂ ಕಾಲು ಕುಂಟಾದ ಒಬ್ಬ ಮಗನಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಗ ಅರಸನು, “ಸೌಲನ ಕುಟುಂಬದವರಲ್ಲಿ ಯಾರಾದರೂ ಉಳಿದಿದ್ದರೆ ಹೇಳು; ನಾನು ದೇವರನ್ನು ನೆನಸಿ ಅವರಿಗೆ ದಯೆ ತೋರಿಸುತ್ತೇನೆ,” ಎಂದನು. ಆಗ ಚೀಬನು, “ಯೋನಾತಾನನಿಗೆ, ಎರಡು ಕಾಲೂ ಕುಂಟಾದ ಒಬ್ಬ ಮಗನಿರುತ್ತಾನೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅರಸನು ಅವನಿಗೆ - ಸೌಲನ ಕುಟುಂಬದವರಲ್ಲಿ ಯಾರಾದರೂ ಉಳಿದಿದ್ದರೆ ಹೇಳು; ನಾನು ದೇವರನ್ನು ನೆನಸಿ ಅವರಿಗೆ ದಯೆತೋರಿಸುತ್ತೇನೆ ಅಂದನು. ಆಗ ಚೀಬನು ಅರಸನಿಗೆ - ಯೋನಾತಾನನಿಗೆ ಎರಡು ಕಾಲೂ ಕುಂಟಾದ ಒಬ್ಬ ಮಗನಿರುತ್ತಾನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ರಾಜನಾದ ದಾವೀದನು, “ಸೌಲನ ಕುಟುಂಬದಲ್ಲಿ ಯಾವ ವ್ಯಕ್ತಿಯಾದರೂ ಉಳಿದಿರುವನೇ? ನಾನು ಆ ವ್ಯಕ್ತಿಗೆ ದೇವರ ಕರುಣೆಯನ್ನು ತೋರಿಸಬೇಕಾಗಿದೆ” ಎಂದು ಹೇಳಿದನು. ಚೀಬನು ರಾಜನಾದ ದಾವೀದನಿಗೆ, “ಯೋನಾತಾನನ ಮಗನೊಬ್ಬನು ಇನ್ನೂ ಇದ್ದಾನೆ. ಅವನ ಎರಡೂ ಕಾಲುಗಳು ಕುಂಟಾಗಿವೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 9:3
11 ತಿಳಿವುಗಳ ಹೋಲಿಕೆ  

ಸೌಲನ ಮಗ ಯೋನಾತಾನನಿಗೆ ಕಾಲು ಕುಂಟಾದ ಒಬ್ಬ ಮಗನಿದ್ದನು. ಸೌಲನೂ, ಯೋನಾತಾನನೂ ಮರಣ ಹೊಂದಿದರೆಂಬ ವರ್ತಮಾನ ಇಜ್ರೆಯೇಲ್ ಎಂಬ ಪಟ್ಟಣದಿಂದ ಬಂದಾಗ, ಅವನು ಐದು ವರ್ಷದವನಾಗಿದ್ದನು. ಆಗ ಅವನ ದಾದಿಯು ಅವನನ್ನು ಎತ್ತಿಕೊಂಡು ಓಡಿ ಹೋದಳು. ಅವಳು ತ್ವರೆಯಾಗಿ ಓಡಿದಾಗ, ಅವನು ಬಿದ್ದು ಕುಂಟನಾದನು. ಅವನ ಹೆಸರು ಮೆಫೀಬೋಶೆತನು.


ನಿಮ್ಮ ತಂದೆಯು ಕರುಣೆಯುಳ್ಳವರಾಗಿರುವ ಪ್ರಕಾರ, ನೀವೂ ಕರುಣೆಯುಳ್ಳವರಾಗಿರಿ.


ನಿಮ್ಮ ಪಿತೃಗಳ ಮೇಲೆ ಯೆಹೋವ ದೇವರು ತಾವೇ ಮನಸ್ಸಿಟ್ಟು, ಅವರನ್ನು ಪ್ರೀತಿಸಿ, ಅವರ ಸಂತಾನವಾಗಿರುವ ನಿಮ್ಮನ್ನು ಈ ಹೊತ್ತು ಇರುವ ಪ್ರಕಾರ ಎಲ್ಲಾ ಜನರೊಳಗಿಂದ ಆರಿಸಿಕೊಂಡರು.


ಅದಕ್ಕವನು, “ಅರಸನಾದ ನನ್ನ ಒಡೆಯನೇ, ನನ್ನ ಸೇವಕನು ನನ್ನನ್ನು ಮೋಸ ಮಾಡಿದನು. ಏಕೆಂದರೆ ನಿನ್ನ ಸೇವಕನು ಕುಂಟನಾಗಿರುವುದರಿಂದ ಒಂದು ಕತ್ತೆಯ ಮೇಲೆ ತಡಿಯನ್ನು ಹಾಕಿ, ಅದರ ಮೇಲೇರಿ ಅರಸನ ಸಂಗಡ ಹೋಗುವೆನೆಂದು ನಿನ್ನ ಸೇವಕನಾದ ನಾನು ಅವನಿಗೆ ಹೇಳಿದೆನು.


ದೇವರು ನಿಮ್ಮ ಪಿತೃಗಳನ್ನು ಪ್ರೀತಿಮಾಡಿದ್ದರಿಂದ, ಅವರ ತರುವಾಯ ಅವರ ಸಂತತಿಯನ್ನು ಆಯ್ದುಕೊಂಡು, ನಿಮ್ಮನ್ನು ತಮ್ಮ ದೃಷ್ಟಿಯಲ್ಲಿ ತಮ್ಮ ದೊಡ್ಡ ಬಲದಿಂದ ಈಜಿಪ್ಟಿನೊಳಗಿಂದ ಹೊರಗೆ ಬರಮಾಡಿದರು.


ಆಗ ದಾವೀದನು ಅವನಿಗೆ, “ಭಯಪಡಬೇಡ, ಏಕೆಂದರೆ ನಿನ್ನ ತಂದೆಯಾದ ಯೋನಾತಾನನ ನಿಮಿತ್ತ ನಾನು ನಿನಗೆ ಖಂಡಿತವಾಗಿ ದಯೆ ತೋರಿಸುವೆನು. ನಿನ್ನ ಅಜ್ಜನಾದ ಸೌಲನ ಭೂಮಿಯನ್ನೆಲ್ಲಾ ನಿನಗೆ ತಿರುಗಿ ಕೊಡುವೆನು ಮತ್ತು ನೀನು ನನ್ನ ಮೇಜಿನಲ್ಲಿ ನಿತ್ಯವೂ ಭೋಜನ ಮಾಡುವೆ,” ಎಂದನು.


ಹೀಗೆಯೇ ಮೆಫೀಬೋಶೆತನು ಅರಸನ ಪಂಕ್ತಿಯಲ್ಲಿ ನಿತ್ಯವೂ ಭೋಜನ ಮಾಡುತ್ತಿದ್ದುದರಿಂದ ಯೆರೂಸಲೇಮಿನಲ್ಲೇ ವಾಸವಾಗಿದ್ದನು. ಅವನಿಗೆ ಎರಡೂ ಕಾಲು ಕುಂಟಾಗಿದ್ದವು.


ಅವನು ಅರಸನಾದ ನನ್ನ ಒಡೆಯನಿಗೆ ನಿನ್ನ ಸೇವಕನ ಮೇಲೆ ಚಾಡಿಯನ್ನು ಹೇಳಿದನು. ಆದರೆ ಅರಸನಾದ ನನ್ನ ಒಡೆಯನು ದೇವದೂತನ ಹಾಗೆಯೇ ಇದ್ದಾನೆ. ನಿನ್ನ ದೃಷ್ಟಿಗೆ ಒಳ್ಳೆಯದಾಗಿರುವುದನ್ನು ಮಾಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು