Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




3 ಯೋಹಾನನು 1:12 - ಕನ್ನಡ ಸಮಕಾಲಿಕ ಅನುವಾದ

12 ದೇಮೇತ್ರಿಯನನ್ನು ಕುರಿತಾಗಿ ಎಲ್ಲರೂ ಒಳ್ಳೆಯದನ್ನೇ ಮಾತನಾಡುತ್ತಾರೆ. ಅಷ್ಟೇ ಅಲ್ಲದೆ ಸತ್ಯವೇ ಅವನ ಪರವಾಗಿ ಸಾಕ್ಷಿಕೊಡುತ್ತದೆ. ನಮ್ಮ ಸಾಕ್ಷಿ ಸತ್ಯವಾದದ್ದೆಂದು ನೀವು ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ದೇಮೇತ್ರಿಯನು ಎಲ್ಲರಿಂದಲೂ, ಒಳ್ಳೆಯವನೆಂದು ಗುರುತಿಸಲ್ಪಟ್ಟಿದ್ದಾನೆ. ಅಲ್ಲದೆ ಸಾಕ್ಷಿಹೊಂದಿದವನಾಗಿದ್ದಾನೆ. ಅಷ್ಟೇ ಅಲ್ಲದೆ ನಾವು ಅವನ ಪರವಾಗಿ ಸಾಕ್ಷಿಕೊಡುತ್ತದೆ; ನಮ್ಮ ಸಾಕ್ಷಿ ಸತ್ಯವಾದದ್ದೆಂದು ನೀನು ಬಲ್ಲವನಾಗಿದ್ದೀಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ದೆಮೇತ್ರಿಯನ ವಿಷಯದಲ್ಲಿ ಎಲ್ಲರೂ ಒಳ್ಳೆಯದನ್ನೇ ಹೇಳುತ್ತಾರೆ. ಸತ್ಯವೂ ಅವನ ಪರವಾಗಿದೆ. ನಾವು ಅವನ ಬಗ್ಗೆ ಸಾಕ್ಷಿ ಹೇಳಬಲ್ಲೆವು. ನಮ್ಮ ಸಾಕ್ಷ್ಯ ಸತ್ಯವೆಂದು ನೀನು ಬಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಾವು ಸಹ ಅವನ ವಿಷಯದಲ್ಲಿ ಸಾಕ್ಷಿ ಹೇಳುವವರಾಗಿದ್ದೇವೆ; ನಮ್ಮ ಸಾಕ್ಷಿ ಸತ್ಯವಾದದ್ದೆಂದು ನೀನು ಬಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ದೇಮೇತ್ರಿಯನ ಬಗ್ಗೆ ಜನರೆಲ್ಲರೂ ಒಳ್ಳೆಯ ಸಂಗತಿಗಳನ್ನು ಹೇಳುತ್ತಾರೆ. ಅವರು ಹೇಳುವುದನ್ನು ಸತ್ಯವೂ ಅಂಗೀಕರಿಸುತ್ತದೆ. ಅವನನ್ನು ಕುರಿತು ನಾವೂ ಸಹ ಒಳ್ಳೆಯದನ್ನು ಹೇಳುತ್ತೇವೆ. ನಾವು ಹೇಳುವುದು ನಿಜವೆಂಬುದು ನಿನಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ದೆಮೆತ್ರಿ ಮನ್ತಲ್ಯಾ ಮಾನ್ಸಾಚ್ಯಾ ವಿಶಯಾತ್ ಬರೆ ಬೊಲ್ತ್ಯಾತ್, ಅನಿ ತೊ ಅಪ್ನಿಚ್ ಸಾಕ್ಷಿ ದಿತಾ, ಅನಿ ಅಮಿಬಿ ಸಾಕ್ಷಿ ದಿತಾಂವ್ ಅನಿ ಅಮಿ ಸಾಂಗ್ತಲೆ ಖರೆ ತೆಚ್ಯಾ ವಾಂಗ್ಡಾ ಮಿಳ್ವುತಾಂವ್. ಅಮಿ ಸಾಂಗ್ತಲೆ ಖರೆ ಮನುನ್ ತುಕಾ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




3 ಯೋಹಾನನು 1:12
8 ತಿಳಿವುಗಳ ಹೋಲಿಕೆ  

ಇದಲ್ಲದೆ ಅವನು ನಿಂದೆಗೆ ಗುರಿಯಾಗದವನೂ ಸೈತಾನನ ಉರುಲಿಗೆ ಸಿಕ್ಕಿ ಬೀಳದವನೂ ಆಗಿದ್ದಾನೆಂಬ ಒಳ್ಳೆಯ ಸಾಕ್ಷಿಯನ್ನು ಹೊಂದಿದವನಾಗಿರಬೇಕು.


ಇವುಗಳ ವಿಷಯವಾಗಿ ಸಾಕ್ಷಿಕೊಟ್ಟು, ಇವುಗಳನ್ನು ಬರೆದ ಶಿಷ್ಯನು ಅವನೇ, ಅವನ ಸಾಕ್ಷಿಯು ಸತ್ಯವೆಂದು ನಾವು ಬಲ್ಲೆವು.


“ಅನನೀಯ ಎಂಬ ಹೆಸರಿನವನೊಬ್ಬನು ನನ್ನ ಬಳಿ ಬಂದನು. ಅವನು ಮೋಶೆಯ ನಿಯಮಕ್ಕನುಗುಣವಾಗಿ ಭಕ್ತಿವಂತನೂ ಆ ಸ್ಥಳದ ಯೆಹೂದ್ಯರೆಲ್ಲರಿಂದ ಸಾಕ್ಷಿಹೊಂದಿದವನೂ ಆಗಿದ್ದನು.


ಅವರು, “ಕೊರ್ನೇಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನು, ದೇವರಿಗೆ ಭಯಪಡುವವನು, ಯೆಹೂದ್ಯ ಜನರೆಲ್ಲರೂ ಅವನನ್ನು ಗೌರವಿಸುತ್ತಾರೆ. ನೀನು ಹೇಳುವಂಥದ್ದನ್ನು ಕೇಳಲಿಕ್ಕಾಗಿ ನಿನ್ನನ್ನು ಅಲ್ಲಿಗೆ ಕರೆಯಿಸಬೇಕೆಂದು ಒಬ್ಬ ಪರಿಶುದ್ಧ ದೇವದೂತನಿಂದ ಆದೇಶಪಡೆದಿದ್ದಾನೆ,” ಎಂದರು.


ಇದನ್ನು ಕಣ್ಣಾರೆ ಕಂಡವನೇ ಸಾಕ್ಷಿ ಕೊಟ್ಟಿದ್ದಾನೆ. ಅವನ ಸಾಕ್ಷಿಯು ಸತ್ಯವಾದದ್ದು, ನೀವು ಸಹ ನಂಬುವಂತೆ ತಾನು ಹೇಳಿರುವುದು ಸತ್ಯವೆಂದು ಅವನು ಬಲ್ಲನು.


ಹೀಗೆ ನಿಮ್ಮ ಅನುದಿನದ ಜೀವನವು ಹೊರಗಿನವರ ಮುಂದೆ ಯೋಗ್ಯವಾಗಿರುವುದು ಮತ್ತು ನೀವು ಯಾರ ಮೇಲೆಯೂ ಆತುಕೊಳ್ಳದೆ ಬಾಳುವಿರಿ.


ಸಹೋದರರೇ, ನಿಮ್ಮಲ್ಲಿ ಪವಿತ್ರಾತ್ಮಭರಿತರೂ ಜ್ಞಾನವಂತರೂ ಎಂದು ಸಾಕ್ಷಿ ಹೊಂದಿರುವ ಏಳು ಜನರನ್ನು ಆಯ್ಕೆ ಮಾಡಿರಿ. ನಾವು ಅವರನ್ನು ಈ ಕಾರ್ಯಕ್ಕಾಗಿ ನೇಮಿಸುವೆವು.


ಅವರು, “ನೀನು ನಮಗೆ ವಂಚನೆ ಮಾಡಲಿಲ್ಲ, ನಮ್ಮನ್ನು ಹಿಂಸಿಸಲಿಲ್ಲ, ನೀನು ಯಾರ ಕೈಯಿಂದಲೂ ಏನೂ ತೆಗೆದುಕೊಳ್ಳಲಿಲ್ಲ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು