Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 1:3 - ಕನ್ನಡ ಸಮಕಾಲಿಕ ಅನುವಾದ

3 ಯೇಸು ಬಾಧೆಪಟ್ಟು ಸತ್ತ ನಂತರ, ಅಪೊಸ್ತಲರಿಗೆ ಪ್ರತ್ಯಕ್ಷರಾಗುತ್ತಾ ತಾವು ಜೀವಂತವಾಗಿರುವುದನ್ನು ಅನೇಕ ನಿಶ್ಚಿತ ರುಜುವಾತುಗಳಿಂದ ತೋರಿಸಿಕೊಟ್ಟರು ಮತ್ತು ನಲವತ್ತು ದಿನಗಳ ಅವಧಿಯಲ್ಲಿ ಯೇಸು ಅವರಿಗೆ ಕಾಣಿಸಿಕೊಂಡು ದೇವರ ರಾಜ್ಯವನ್ನು ಕುರಿತು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೇಸುವು ಬಾಧೆಪಟ್ಟು ಸತ್ತ ನಂತರ ತಾನು ಜೀವಂತನಾಗಿ ಎದ್ದು ಬಂದಿದ್ದೇನೆ ಎಂದು ಅನೇಕ ಸಂಭವಗಳ ಮೂಲಕ ತಾನು ಆರಿಸಿಕೊಂಡಿದ್ದ ಅಪೊಸ್ತಲರಿಗೆ ಸ್ಪಷ್ಟಪಡಿಸಿದನು. ಸತತವಾಗಿ ನಲವತ್ತು ದಿನಗಳ ತನಕ ಅವರಿಗೆ ಕಾಣಿಸಿಕೊಳ್ಳುತ್ತಾ ದೇವರ ರಾಜ್ಯದ ವಿಷಯವನ್ನು ಕುರಿತು ಅವರಿಗೆ ಬೋಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ತಮ್ಮ ಮರಣದ ನಂತರ ಅವರು ನಲವತ್ತು ದಿನಗಳವರೆಗೆ ಆ ಪ್ರೇಷಿತರಿಗೆ ಪ್ರತ್ಯಕ್ಷರಾದರು. ತಾವು ಜೀವಂತವಾಗಿರುವುದನ್ನು ವಿವಿಧ ರೀತಿಯಲ್ಲಿ ಸ್ಪಷ್ಟಪಡಿಸಿದರು. ದೇವರ ಸಾಮ್ರಾಜ್ಯವನ್ನು ಕುರಿತು ಅವರಿಗೆ ಬೋಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆತನು ಬಾಧೆಪಟ್ಟು ಸತ್ತ ಮೇಲೆ ತನ್ನನ್ನು ಜೀವಂತನೆಂದು ಅನೇಕ ಪ್ರಮಾಣಗಳಿಂದ ಅಪೊಸ್ತಲರಿಗೆ ತೋರಿಸಿಕೊಂಡನು. ನಾಲ್ವತ್ತು ದಿವಸಗಳ ತನಕ ಅವರಿಗೆ ಕಾಣಿಸಿಕೊಳ್ಳುತ್ತಾ ದೇವರ ರಾಜ್ಯದ ವಿಷಯವಾದ ಸಂಗತಿಗಳನ್ನು ಹೇಳುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಇದು ಆತನ ಮರಣಾನಂತರ ನಡೆದ ಸಂಗತಿ. ತಾನು ಜೀವಂತವಾಗಿರುವುದನ್ನು ಆತನು ಅಪೊಸ್ತಲರಿಗೆ ತೋರ್ಪಡಿಸಿದನು ಮತ್ತು ಶಕ್ತಿಯುತವಾದ ಅನೇಕ ಕಾರ್ಯಗಳನ್ನು ಮಾಡುವುದರ ಮೂಲಕ ಅದನ್ನು ನಿರೂಪಿಸಿದನು. ಯೇಸು ಜೀವಂತವಾಗಿ ಎದ್ದುಬಂದ ನಂತರದ ನಲವತ್ತು ದಿನಗಳ ಅವಧಿಯಲ್ಲಿ ಅಪೊಸ್ತಲರು ಆತನನ್ನು ಅನೇಕ ಸಲ ನೋಡಿದರು. ಯೇಸು ದೇವರ ರಾಜ್ಯದ ಕುರಿತು ಅಪೊಸ್ತಲರೊಂದಿಗೆ ಮಾತಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಅಪ್ನಾಚ್ಯಾ ಮರ್‍ನಾಚ್ಯಾ ಮಾನಾಚ್ಯಾ ಎಳಾರ್ ಅಪ್ನಿ ಅನಿ ಪರ್ತುನ್ ಝಿತ್ತೊ ಹೊಲಾ ಮನುನ್ ಸುಮಾರ್ ಖಾತ್ರಿಯಾಂಚ್ಯಾ ವೈನಾ ತೆನಿ ದಾಕ್ವುನ್ ದಿಲ್ಯಾನ್, ಅನಿ ತೊ ಚಾಳಿಸ್ ದಿಸ್ ಪತರ್ ತೆಂಚ್ಯಾ ನದ್ರೆಕ್ ಪಡ್ಲೊ, ಅನಿ ದೆವಾಚ್ಯಾ ರಾಜಾಚ್ಯಾ ವಿಶಯಾತ್ ಬೊಲುನ್ಗೆತ್ ತೆಂಚ್ಯಾಕ್ಡೆ ರ್‍ಹಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 1:3
27 ತಿಳಿವುಗಳ ಹೋಲಿಕೆ  

ಯೇಸುವಿನೊಡನೆ ಗಲಿಲಾಯದಿಂದ ಯೆರೂಸಲೇಮಿನವರೆಗೆ ಮುಂಚೆ ಬಂದಿದ್ದವರಿಗೆ ಯೇಸು ಅನೇಕ ದಿನಗಳವರೆಗೆ ಕಾಣಿಸಿಕೊಂಡರು. ಈಗ ಅವರೇ ನಮ್ಮ ಜನರಿಗೆ ಯೇಸುವಿನ ಸಾಕ್ಷಿಗಳಾಗಿದ್ದಾರೆ.


ಎಂಟು ದಿವಸಗಳಾದ ಮೇಲೆ ಯೇಸುವಿನ ಶಿಷ್ಯರು ಪುನಃ ಮನೆಯ ಒಳಗಿದ್ದಾಗ ತೋಮನೂ ಅವರ ಸಂಗಡ ಇದ್ದನು. ಆಗ ಬಾಗಿಲುಗಳು ಮುಚ್ಚಿರಲಾಗಿ ಯೇಸು ಬಂದು ಮಧ್ಯದಲ್ಲಿ ನಿಂತು, “ನಿಮಗೆ ಸಮಾಧಾನವಾಗಲಿ!” ಎಂದರು.


ಆದಿಯಿಂದ ಇರುವಂಥದ್ದೂ ಕೇಳಿದ್ದನ್ನೂ ಕಣ್ಣಾರೆ ಕಂಡು ನೋಡಿದ್ದನ್ನೂ ನಾವು ಕೈಯಿಂದ ಮುಟ್ಟಿದ್ದ ಆ ಜೀವವಾಕ್ಯವನ್ನೇ ಸಾರುತ್ತಿದ್ದೇವೆ.


ಯೇಸು ಸತ್ತವರೊಳಗಿಂದ ಎದ್ದ ಮೇಲೆ ತಮ್ಮ ಶಿಷ್ಯರಿಗೆ ಕಾಣಿಸಿಕೊಂಡದ್ದು ಇದು ಮೂರನೆಯ ಸಾರಿ.


ಇವುಗಳಾದ ಮೇಲೆ ಯೇಸು ಗಲಿಲಾಯ ಸರೋವರದ ಬಳಿಯಲ್ಲಿ ಶಿಷ್ಯರಿಗೆ ತಮ್ಮನ್ನು ಪುನಃ ತೋರಿಸಿಕೊಂಡರು. ಅವರು ಈ ರೀತಿಯಾಗಿ ಕಾಣಿಸಿಕೊಂಡರು:


ಅವರು ಶಿಷ್ಯರಿಗೆ ತಿಳಿಸುವುದಕ್ಕೆ ಹೋಗುತ್ತಿದ್ದಾಗ, ಯೇಸು ಅವರನ್ನು ಸಂಧಿಸಿ, “ಶುಭವಾಗಲಿ” ಎಂದರು. ಅವರು ಬಂದು ಯೇಸುವಿನ ಪಾದಗಳನ್ನು ಹಿಡಿದು ಅವರನ್ನು ಆರಾಧಿಸಿದರು.


ಅವನು ಧೈರ್ಯದಿಂದ ಯಾವ ಅಡ್ಡಿ ಆತಂಕಗಳಿಲ್ಲದೇ ದೇವರ ರಾಜ್ಯವನ್ನು ಪ್ರಕಟಿಸುತ್ತಾ, ಕರ್ತ ಆಗಿರುವ ಯೇಸುಕ್ರಿಸ್ತರ ವಿಷಯವಾಗಿ ಉಪದೇಶ ಮಾಡುತ್ತಾ ಇದ್ದನು.


ನಿಮಗೆ ಬುದ್ಧಿ ಹೇಳುತ್ತಾ ಸಂತೈಸುತ್ತಾ ಬಂದೆವು. ಹೀಗೆ ದೇವರ ಹಾಗೂ ಅವರ ರಾಜ್ಯದ ಮಹಿಮೆಗಾಗಿ ಕರೆದಾತನಿಗೆ ನೀವು ಯೋಗ್ಯರಾಗಿ ನಡೆಯಬೇಕೆಂದು ಸಾಕ್ಷಿ ಹೇಳಿದೆವೆಂಬುದು ನಿಮಗೆ ತಿಳಿದಿದೆ.


ತಂದೆಯು ನಮ್ಮನ್ನು ಅಂಧಕಾರದ ಅಧಿಪತ್ಯದಿಂದ ಬಿಡಿಸಿ ತಮ್ಮ ಪ್ರಿಯ ಪುತ್ರ ಕ್ರಿಸ್ತ ಯೇಸುವಿನ ರಾಜ್ಯದೊಳಗೆ ಸೇರಿಸಿದರು.


ಏಕೆಂದರೆ ತಿನ್ನುವುದೂ ಕುಡಿಯುವುದೂ ದೇವರ ರಾಜ್ಯವಲ್ಲ. ನೀತಿ, ಸಮಾಧಾನ, ಪವಿತ್ರಾತ್ಮರಲ್ಲಿರುವ ಆನಂದವೂ ಆಗಿದೆ.


“ಆದ್ದರಿಂದ, ದೇವರ ರಾಜ್ಯವು ನಿಮ್ಮಿಂದ ಕಿತ್ತುಕೊಂಡು ತಕ್ಕ ಫಲಕೊಡುವ ಜನರಿಗೆ ಕೊಡಲಾಗುವುದು ಎಂದು ನಾನು ನಿಮಗೆ ಹೇಳುತ್ತೇನೆ.


ಆ ಕಲ್ಲಿನ ಹಲಗೆಗಳು ಅಂದರೆ, ಯೆಹೋವ ದೇವರು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯ ಹಲಗೆಗಳನ್ನು ತೆಗೆದುಕೊಳ್ಳುವುದಕ್ಕೆ ನಾನು ಬೆಟ್ಟದ ಮೇಲೆ ಏರಿದಾಗ, ನಲವತ್ತು ದಿವಸ ಹಗಲುರಾತ್ರಿ ಬೆಟ್ಟದಲ್ಲಿದ್ದೆನು. ರೊಟ್ಟಿ ತಿನ್ನಲಿಲ್ಲ, ನೀರೂ ಕುಡಿಯಲಿಲ್ಲ.


ನಲವತ್ತು ದಿನ ಹಗಲೂ ರಾತ್ರಿ ಉಪವಾಸವಿದ್ದ ಮೇಲೆ ಯೇಸುವಿಗೆ ಹಸಿವಾಯಿತು.


“ದೇವರ ಕಡೆಗೆ ತಿರುಗಿಕೊಳ್ಳಿರಿ, ಪರಲೋಕ ರಾಜ್ಯವು ಸಮೀಪಿಸಿದೆ,” ಎಂದು ಸಾರುತ್ತಿದ್ದನು.


ಆಗ ಅವನೆದ್ದು ತಿಂದು, ಕುಡಿದು ಆ ಭೋಜನದ ಶಕ್ತಿಯಿಂದ ರಾತ್ರಿ ಹಗಲು ನಾಲ್ವತ್ತು ದಿವಸ ಹೋರೇಬ್ ಎಂಬ ದೇವರ ಬೆಟ್ಟದವರೆಗೂ ನಡೆದನು.


ಆಮೇಲೆ ನೀವು ಮಾಡಿದ ಎಲ್ಲಾ ಪಾಪಗಳ ನಿಮಿತ್ತವೂ ನೀವು ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿ ಅವರಿಗೆ ಕೋಪವನ್ನೆಬ್ಬಿಸಿದ ನಿಮಿತ್ತವೂ ಮುಂಚಿನಂತೆ ನಲವತ್ತು ದಿವಸ ಹಗಲುರಾತ್ರಿ ಊಟಮಾಡದೆ, ನೀರು ಕುಡಿಯದೆ, ಯೆಹೋವ ದೇವರ ಮುಂದೆ ಬಿದ್ದಿದ್ದೆನು.


ಕರ್ತ ಯೇಸು ಅವರೊಂದಿಗೆ ಮಾತನಾಡಿದ ನಂತರ, ಅವರು ಪರಲೋಕಕ್ಕೆ ಏರಿ ದೇವರ ಬಲಪಾರ್ಶ್ವದಲ್ಲಿ ಕುಳಿತುಕೊಂಡರು.


ಆದರೆ ಫಿಲಿಪ್ಪನು ದೇವರ ರಾಜ್ಯದ ಶುಭವರ್ತಮಾನವನ್ನೂ ಕ್ರಿಸ್ತ ಯೇಸುವಿನ ಹೆಸರನ್ನೂ ಪ್ರಕಟಿಸಿದಾಗ ಅಲ್ಲಿಯ ಸ್ತ್ರೀ ಪುರುಷರು ಅದನ್ನು ನಂಬಿ ದೀಕ್ಷಾಸ್ನಾನವನ್ನು ಹೊಂದಿದರು.


ಪೌಲನು ಸಭಾಮಂದಿರದೊಳಗೆ ಪ್ರವೇಶಿಸಿದನು. ಅಲ್ಲಿ ಮೂರು ತಿಂಗಳುಗಳ ಕಾಲ, ಧೈರ್ಯವಾಗಿ ಬೋಧನೆ ಮಾಡಿದನು. ದೇವರ ರಾಜ್ಯದ ಬಗ್ಗೆ ಅವರೊಡನೆ ಮನವೊಲಿಸುವಂತೆ ಚರ್ಚಿಸಿದನು.


ಅವರು ಒಂದು ದಿನ ಪೌಲನೊಂದಿಗಿರಲು ಏರ್ಪಡಿಸಿ, ಅವನಿದ್ದ ಸ್ಥಳಕ್ಕೆ ಬಹುಮಂದಿ ಕೂಡಿಬಂದರು. ಬೆಳಿಗ್ಗೆಯಿಂದ ಸಂಜೆಯವರೆಗೆ ಅವನು ದೇವರ ರಾಜ್ಯದ ಬಗ್ಗೆ ಖಚಿತವಾಗಿ ಸಾಕ್ಷಿ ಕೊಡುತ್ತಾ, ಮೋಶೆಯ ನಿಯಮ ಮತ್ತು ಪ್ರವಾದಿಗಳ ಗ್ರಂಥಗಳಿಂದ ಯೇಸುವಿನ ಬಗ್ಗೆ ವಿವರಿಸಿ ಅವರ ಮನವೊಲಿಸಲು ಪ್ರಯತ್ನಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು