Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 1:4 - ಕನ್ನಡ ಸಮಕಾಲಿಕ ಅನುವಾದ

4 ಒಮ್ಮೆ ಯೇಸು ಶಿಷ್ಯರೊಂದಿಗೆ ಊಟಮಾಡುತ್ತಿದ್ದಾಗ ಶಿಷ್ಯರಿಗೆ, “ನೀವು ಯೆರೂಸಲೇಮನ್ನು ಬಿಟ್ಟು ಹೋಗಬೇಡಿರಿ, ನಾನು ನಿಮಗೆ ತಿಳಿಸಿದಂತೆ ನನ್ನ ತಂದೆ ವಾಗ್ದಾನ ಮಾಡಿರುವ ವರಕ್ಕಾಗಿ ಕಾದುಕೊಂಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಒಮ್ಮೆ ಅವರೆಲ್ಲರೂ ಒಂದುಗೂಡಿದ್ದ ಸಂದರ್ಭದಲ್ಲಿ, “ನೀವು ಯೆರೂಸಲೇಮನ್ನು ಬಿಟ್ಟುಹೋಗದೆ, ನನ್ನಿಂದ ಕೇಳಿದಂಥ ಮತ್ತು ತಂದೆಯು ಮಾಡಿದ ವಾಗ್ದಾನಗಳಿಗಾಗಿ ಇಲ್ಲೇ ಕಾದುಕೊಂಡಿರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಒಮ್ಮೆ ಅವರೆಲ್ಲರೂ ಒಂದುಗೂಡಿದ್ದ ಸಂದರ್ಭದಲ್ಲಿ, “ನೀವು ಜೆರುಸಲೇಮನ್ನು ಬಿಟ್ಟು ಹೋಗಬೇಡಿ; ನಾನು ನಿಮಗೆ ತಿಳಿಸಿದಂತೆ ನನ್ನ ಪಿತನು ವಾಗ್ದಾನ ಮಾಡಿರುವ ವರಕ್ಕಾಗಿ ಕಾದುಕೊಂಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4-5 ಹೀಗಿರಲಾಗಿ ಆತನು ಅವರೊಂದಿಗೆ ಕೂಡಿದ್ದಾಗ್ಗೆ ಅವರಿಗೆ - ಯೋಹಾನನಂತೂ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸಿದನು, ನಿಮಗಾದರೋ ಇನ್ನು ಸ್ವಲ್ಪ ದಿವಸಗಳೊಳಗಾಗಿ ಪವಿತ್ರಾತ್ಮದಲ್ಲಿ ಸ್ನಾನವಾಗುವದು. ಆದಕಾರಣ ನೀವು ಯೆರೂಸಲೇಮನ್ನು ಬಿಟ್ಟು ಹೋಗದೆ ತಂದೆ ಮಾಡಿದಂಥ ನೀವು ನನ್ನಿಂದ ಕೇಳಿದಂಥ ವಾಗ್ದಾನಕ್ಕೆ ಕಾದುಕೊಂಡಿರ್ರಿ ಎಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಒಮ್ಮೆ, ಯೇಸು ಅವರೊಂದಿಗೆ ಊಟ ಮಾಡುತ್ತಿದ್ದಾಗ, ಜೆರುಸಲೇಮನ್ನು ಬಿಟ್ಟುಹೋಗಬಾರದೆಂದು ಅವರಿಗೆ ಹೇಳಿದನು. “ತಂದೆಯು ನಿಮಗೊಂದು ವಾಗ್ದಾನವನ್ನು ಮಾಡಿದ್ದಾನೆ. ನಾನು ಮೊದಲೇ ಅದರ ಬಗ್ಗೆ ನಿಮಗೆ ತಿಳಿಸಿದ್ದೇನೆ. ಈ ವಾಗ್ದಾನವನ್ನು ಸ್ವೀಕರಿಸಿಕೊಳ್ಳಲು ಜೆರುಸಲೇಮಿನಲ್ಲಿ ಕಾದುಕೊಂಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಎಗ್ದಾ ತಸಿ ಎಕಾಕ್ಡೆ ತೊ ತೆಂಚ್ಯಾ ವಾಂಗ್ಡಾ ಜೆವಾನ್ ಕರುಕ್ ಲಾಗಲ್ಲೊ ತೆನಿ ತೆಂಕಾ ಅಶೆ ತಾಕಿತ್ ದಿಲ್ಯಾನ್ ಜೆರುಜಲೆಮ್ ಸೊಡುನ್ ಜಾವ್‍ನಕಾಶಿ , ಖರೆ ಮಾಜ್ಯಾ ಬಾಬಾನ್ ಗೊಸ್ಟ್ ದಿಲ್ಲ್ಯಾ ಭೊಮಾನಾಚಿ ವಾಟ್ ರಾಕಾ, ಹೆಚ್ಯಾ ವಿಶಯಾತ್ ಮಿಯಾ ಬೊಲ್ತಾನಾ ತುಮಿ ಆಯಿಕ್ಲ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 1:4
14 ತಿಳಿವುಗಳ ಹೋಲಿಕೆ  

ಇಗೋ, ನನ್ನ ತಂದೆಯು ವಾಗ್ದಾನ ಮಾಡಿದ್ದನ್ನು ನಿಮಗೆ ಕಳುಹಿಸುವೆನು; ಆದರೆ ನೀವು ಪರಲೋಕದ ಶಕ್ತಿಯನ್ನು ಹೊದಿಸುವ ತನಕ, ಈ ಪಟ್ಟಣದಲ್ಲಿಯೇ ಕಾದುಕೊಂಡಿರಿ,” ಎಂದರು.


ನಾನು ತಂದೆಯನ್ನು ಕೇಳಿಕೊಳ್ಳುವೆನು. ಆಗ ತಂದೆ ನಿಮಗೆ ಬೇರೊಬ್ಬ ಸಹಾಯಕರನ್ನು ಸದಾಕಾಲವೂ ನಿಮ್ಮೊಂದಿಗೆ ಇರುವುದಕ್ಕೆ ಕೊಡುವರು.


“ಆದರೂ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಆ ಸಹಾಯಕರೊಬ್ಬರು ನಿಮ್ಮ ಬಳಿಗೆ ಬರುವರು. ಆಗ ತಂದೆಯಿಂದ ಬರುವ ಆ ಸತ್ಯದ ಆತ್ಮವಾಗಿರುವವರೇ ನನ್ನ ವಿಷಯವಾಗಿ ಸಾಕ್ಷಿಕೊಡುವರು.


ಆದ್ದರಿಂದ ಯೇಸು ದೇವರ ಬಲಗಡೆಗೆ ಏರಿಹೋಗಿ ವಾಗ್ದಾನಮಾಡಿದ ಪವಿತ್ರಾತ್ಮ ದೇವರನ್ನು ತಂದೆಯಿಂದ ಪಡೆದುಕೊಂಡರು. ಈಗ ನೀವು ಕಂಡು ಕೇಳಿರುವ ಆ ಪವಿತ್ರಾತ್ಮ ವರವನ್ನು ಯೇಸುವೇ ಇವರ ಮೇಲೆ ಸುರಿಸಿದ್ದಾರೆ.


ಆದರೆ ಯೇಸು ತಮ್ಮಲ್ಲಿ ನಂಬಿಕೆಯಿಡುವವರು ಹೊಂದಲಿರುವ ಪವಿತ್ರಾತ್ಮರನ್ನು ಕುರಿತು ಹೀಗೆ ಹೇಳಿದರು. ಯೇಸು ಇನ್ನೂ ಮಹಿಮೆ ಹೊಂದಿರಲಿಲ್ಲ. ಈ ಕಾರಣದಿಂದ ಪವಿತ್ರ ಆತ್ಮ ಇನ್ನೂ ಬಂದಿರಲಿಲ್ಲ.


ಯೇಸು ಇದನ್ನು ಹೇಳಿ ಅವರ ಮೇಲೆ ಉಸಿರೂದಿ ಅವರಿಗೆ, “ನೀವು ಪವಿತ್ರಾತ್ಮರನ್ನು ಪಡೆದುಕೊಳ್ಳಿರಿ.


ಆ ಸಮಯದಲ್ಲಿ ನೀವು ಹೇಳಬೇಕಾದದ್ದನ್ನು ಪವಿತ್ರಾತ್ಮರು ನಿಮಗೆ ಕಲಿಸಿಕೊಡುವರು.”


ಹಾಗಾದರೆ ಕೆಟ್ಟವರಾದ ನೀವೇ ನಿಮ್ಮ ಮಕ್ಕಳಿಗೆ ಒಳ್ಳೆಯವುಗಳನ್ನು ಕೊಡಬಲ್ಲವರಾದರೆ, ಪರಲೋಕದಲ್ಲಿರುವ ನಿಮ್ಮ ತಂದೆಯು ಎಷ್ಟೋ ಹೆಚ್ಚಾಗಿ ತಮ್ಮನ್ನು ಬೇಡಿಕೊಳ್ಳುವವರಿಗೆ ಪವಿತ್ರಾತ್ಮರನ್ನು ದಯಪಾಲಿಸುವರಲ್ಲವೇ!” ಎಂದು ನಾನು ನಿಮಗೆ ಹೇಳುತ್ತೇನೆ ಎಂದರು.


ಯೇಸುವನ್ನು ಎಲ್ಲರೂ ನೋಡಲಿಲ್ಲ. ಆದರೆ ದೇವರು ಮೊದಲೇ ನೇಮಿಸಿಕೊಂಡ ಸಾಕ್ಷಿಗಳಾಗಿರುವ ನಮಗೆ ಕಾಣಿಸಿಕೊಂಡರು. ಯೇಸು ಸತ್ತವರೊಳಗಿಂದ ಜೀವಂತವಾಗಿ ಎದ್ದು ಬಂದ ತರುವಾಯ ಅವರೊಡನೆ ಊಟ, ಪಾನಮಾಡಿದ ನಮಗೆ ಕಾಣಿಸಿಕೊಂಡರು.


ಏಕೆಂದರೆ ಮಾತನಾಡುವವರು ನೀವಲ್ಲ, ನಿಮ್ಮ ತಂದೆಯ ಆತ್ಮವೇ ನಿಮ್ಮೊಳಗಿಂದ ಮಾತನಾಡುವರು.


ಆ ಮೇಘವು ಎರಡು ದಿವಸಗಳಾದರೂ, ಒಂದು ತಿಂಗಳಾದರೂ, ಒಂದು ವರ್ಷವಾದರೂ ಗುಡಾರದ ಮೇಲೆ ನೆಲೆಸಿ ತಡಮಾಡಿದರೆ ಇಸ್ರಾಯೇಲರು ಪ್ರಯಾಣ ಮಾಡದೆ ಅಲ್ಲೇ ಇಳಿದುಕೊಳ್ಳುತ್ತಿದ್ದರು. ಅದು ಮೇಲೆ ಎದ್ದಾಗ ಮಾತ್ರ ಅವರು ಪ್ರಯಾಣ ಮಾಡುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು