Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 10:37 - ಕನ್ನಡ ಸಮಕಾಲಿಕ ಅನುವಾದ

37 ಯೋಹಾನನು ದೀಕ್ಷಾಸ್ನಾನದ ಬಗ್ಗೆ ಬೋಧಿಸಿದ ನಂತರ ಗಲಿಲಾಯದಲ್ಲಿ ಪ್ರಾರಂಭವಾಗಿ ಯೂದಾಯದಲ್ಲೆಲ್ಲಾ ಏನು ಸಂಭವಿಸಿತೆಂಬುದನ್ನೂ ನೀವು ತಿಳಿದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಯೋಹಾನನು ಸಾರಿದ ತರುವಾಯ ಈ ವಾಕ್ಯವು ಗಲಿಲಾಯದಿಂದ ಪ್ರಾರಂಭವಾಗಿ, ಯೂದಾಯದಲ್ಲೆಲ್ಲಾ ಪ್ರಬಲವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಇತ್ತೀಚೆಗೆ ಜುದೇಯ ನಾಡಿನಾದ್ಯಂತ ನಡೆದ ಘಟನೆಗಳು ನಿಮಗೆ ತಿಳಿದೇ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಯೋಹಾನನು ಸಾರಿದ ತರುವಾಯ ಈ ವಾಕ್ಯವು ಗಲಿಲಾಯದಿಂದ ಪ್ರಾರಂಭವಾಗಿ ಯೂದಾಯದಲ್ಲೆಲ್ಲಾ ಪ್ರಬಲವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 “ಜುದೇಯದಲ್ಲೆಲ್ಲಾ ಏನಾಯಿತೆಂಬುದು ನಿಮಗೆ ಗೊತ್ತಿದೆ. ಗಲಿಲಾಯದಲ್ಲಿ ಯೋಹಾನನು ದೀಕ್ಷಾಸ್ನಾನದ ಬಗ್ಗೆ ಜನರಿಗೆ ಬೋಧಿಸಿದ ಮೇಲೆ ಅದು ಆರಂಭವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ಗಲಿಲಾಯಾತ್ ಶುರು ಹೊವ್ನ್ ಜುವಾಂವಾಕ್ ಬಾಲ್ತಿಮಾಚ್ಯಾ ವಿಶಯಾತ್ ಪರ್ಗಟ್ ಕರಲ್ಯಾ ಮಾನಾ ಜುದೆಯಾತ್ ಕಾಯ್ ಹೊಲೆ ಮನ್ತಲೆ ತುಮ್ಕಾ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 10:37
16 ತಿಳಿವುಗಳ ಹೋಲಿಕೆ  

ಯೇಸು ಪವಿತ್ರಾತ್ಮರ ಶಕ್ತಿಯಿಂದ ಗಲಿಲಾಯಕ್ಕೆ ಹಿಂದಿರುಗಿದರು. ಅವರ ಸುದ್ದಿಯು ಸುತ್ತಮುತ್ತೆಲ್ಲಾ ಹರಡಿತು.


ಆದರೆ ನಿನ್ನ ಅಭಿಪ್ರಾಯಗಳೇನೆಂಬುದನ್ನು ಕೇಳಲು ನಮಗೆ ಮನಸ್ಸಿದೆ. ಏಕೆಂದರೆ ಈ ಪಂಥದ ವಿರುದ್ಧವಾಗಿ ಎಲ್ಲಾ ಕಡೆಗಳಲ್ಲಿ ಜನರು ಮಾತನಾಡುತ್ತಿರುವುದನ್ನು ನಾವು ಬಲ್ಲೆವು,” ಎಂದರು.


ಏಕೆಂದರೆ ರಾಜರಿಗೆ ಈ ಎಲ್ಲಾ ಸಂಗತಿಗಳ ಪರಿಚಯವಿದೆ. ರಾಜರೊಂದಿಗೆ ನಾನು ಸಹ ಭರವಸೆಯಿಂದ ಮಾತನಾಡುತ್ತಿರುವೆನು. ಇವುಗಳಲ್ಲಿ ಯಾವುದೂ ರಾಜರ ಗಮನಕ್ಕೆ ಬಾರದೆ ಹೋಗಿಲ್ಲ ಎಂಬುದು ನನ್ನ ದೃಢ ನಂಬಿಕೆ. ಏಕೆಂದರೆ ಇದು ಮೂಲೆಯಲ್ಲಿ ನಡೆದ ಸಂಗತಿಯಲ್ಲ.


“ಇಸ್ರಾಯೇಲ್ ಜನರೇ, ಈ ವಿಷಯವನ್ನು ಕೇಳಿರಿ: ದೇವರು ನಜರೇತಿನ ಯೇಸುಸ್ವಾಮಿಯವರ ಮುಖಾಂತರ ನಿಮ್ಮ ಮಧ್ಯದಲ್ಲಿ ಅದ್ಭುತಕಾರ್ಯಗಳನ್ನೂ ಆಶ್ಚರ್ಯಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ನಡೆಸಿದ್ದರಿಂದ, ಯೇಸು ದೇವರ ಮೆಚ್ಚಿಕೆ ಪಡೆದವರಾಗಿದ್ದಾರೆಂಬುದನ್ನು, ನೀವೇ ತಿಳಿದಿರುವಿರಿ.


ಅಂದರೆ, ಯೋಹಾನನಿಂದ ದೀಕ್ಷಾಸ್ನಾನ ಪಡೆದ ದಿನದಿಂದ, ಯೇಸು ಸ್ವರ್ಗಕ್ಕೆ ಏರಿಹೋದ ಕಾಲದವರೆಗೆ ನಮ್ಮ ಸಂಗಡ ಇದ್ದವನಾಗಿರಬೇಕು.” ಅವನು ಯೇಸುವಿನ ಪುನರುತ್ಥಾನಕ್ಕೆ ನಮ್ಮೊಂದಿಗೆ ಸಾಕ್ಷಿಯಾಗಿರಬೇಕು.


ಅದಕ್ಕೆ ಅವರು, “ಈತನು ಗಲಿಲಾಯ ಪ್ರಾಂತ ಮೊದಲುಗೊಂಡು ಈ ಸ್ಥಳದವರೆಗೂ ಯೂದಾಯ ಪ್ರಾಂತದ ಎಲ್ಲಾ ಕಡೆಗೂ ಬೋಧಿಸುತ್ತಾ, ಜನರನ್ನು ಕ್ರಾಂತಿಗೆ ಪ್ರೇರೇಪಿಸುತ್ತಿದ್ದಾನೆ,” ಎಂದು ಒತ್ತಾಯ ಪೂರ್ವಕವಾಗಿ ಹೇಳಿದರು.


ಹೆರೋದ ರಾಜನ ಕಾಲದಲ್ಲಿ, ಯೂದಾಯದ ಬೇತ್ಲೆಹೇಮಿನಲ್ಲಿ ಯೇಸು ಜನಿಸಿದಾಗ, ಪೂರ್ವ ದೇಶದಿಂದ ಜ್ಞಾನಿಗಳು ಯೆರೂಸಲೇಮಿಗೆ ಬಂದು,


ಅವರು ತಮ್ಮ ತಮ್ಮ ಪಾಪಗಳನ್ನು ಅರಿಕೆಮಾಡುತ್ತಾ, ಅವನಿಂದ ಯೊರ್ದನ್ ನದಿಯಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.


ಸರ್ವಸೃಷ್ಟಿಗೆ ಕರ್ತ ಆಗಿರುವ ಯೇಸುಕ್ರಿಸ್ತರ ಮುಖಾಂತರ ಸಮಾಧಾನದ ಶುಭಸಮಾಚಾರ ಹೇಳುತ್ತಾ, ಇಸ್ರಾಯೇಲ್ ಜನರಿಗೆ ದೇವರು ಕಳುಹಿಸಿದ ವಾಕ್ಯವನ್ನು ನೀವು ತಿಳಿದಿದ್ದೀರಿ.


ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮರಿಂದಲೂ ಶಕ್ತಿಯಿಂದಲೂ ಅಭಿಷೇಕಿಸಿದ್ದರು. ಮಾತ್ರವಲ್ಲದೆ, ದೇವರು ಯೇಸುವಿನೊಡನೆ ಇದ್ದುದರಿಂದ, ಅವರು ಬೇರೆ ಬೇರೆ ಕಡೆಗಳಿಗೆ ಹೋಗಿ ಒಳಿತನ್ನು ಮಾಡಿ, ಪಿಶಾಚನಿಂದ ಪೀಡಿತರಾದವರನ್ನು ಗುಣಪಡಿಸುತ್ತಾ ಸಂಚರಿಸಿದ್ದನ್ನು ನೀವು ಬಲ್ಲಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು