Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 10:4 - ಕನ್ನಡ ಸಮಕಾಲಿಕ ಅನುವಾದ

4 ಕೊರ್ನೇಲ್ಯನು ಭಯದಿಂದ ದೇವದೂತನನ್ನೇ ದೃಷ್ಟಿಸಿ ನೋಡಿ, “ಏನು ಸ್ವಾಮೀ?” ಎಂದು ಕೇಳಲು, “ನಿನ್ನ ಪ್ರಾರ್ಥನೆಗಳು, ಬಡವರಿಗೆ ನೀನು ಕೊಟ್ಟ ದಾನಗಳು ದೇವರ ಸನ್ನಿಧಿಗೆ ಜ್ಞಾಪಕಾರ್ಥ ಅರ್ಪಣೆಗಳಾಗಿ ಬಂದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನು ಆ ದೂತನನ್ನು ದೃಷ್ಟಿಸಿನೋಡಿ ಭಯಹಿಡಿದವನಾಗಿ; “ಕರ್ತನೇ, ಇದೇನು?” ಎಂದು ಕೇಳಲು, ಆ ದೂತನು ಅವನಿಗೆ; “ನಿನ್ನ ಪ್ರಾರ್ಥನೆಗಳೂ, ನಿನ್ನ ದಾನಧರ್ಮಗಳೂ ದೇವರ ಸನ್ನಿಧಿಗೆ ಜ್ಞಾಪರ್ಥಕವಾಗಿ ಬಂದು ತಲುಪಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಕೊರ್ನೇಲಿಯನು ಭಯದಿಂದ ದೇವದೂತನನ್ನು ದಿಟ್ಟಿಸಿನೋಡುತ್ತಾ, “ಏನು ಸ್ವಾಮಿ?” ಎಂದನು. ಅದಕ್ಕೆ ದೇವದೂತನು, “ನಿನ್ನ ಪ್ರಾರ್ಥನೆ ಮತ್ತು ದಾನಧರ್ಮ ದೇವರನ್ನು ಮುಟ್ಟಿವೆ. ಅವರು ನಿನ್ನನ್ನು ಮೆಚ್ಚಿದ್ದಾರೆ; ನಿನ್ನ ಕೋರಿಕೆಗಳನ್ನು ಈಡೇರಿಸಲಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನು ಆ ದೂತನನ್ನು ದೃಷ್ಟಿಸಿನೋಡಿ ಭಯಹಿಡಿದವನಾಗಿ - ಏನು ಸ್ವಾಮೀ ಎಂದು ಕೇಳಲು ದೂತನು ಅವನಿಗೆ - ನಿನ್ನ ಪ್ರಾರ್ಥನೆಗಳೂ ನಿನ್ನ ದಾನಧರ್ಮಗಳೂ ದೇವರ ಮುಂದೆ ಜ್ಞಾಪಕಾರ್ಥವಾಗಿ ಏರಿ ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಕೊರ್ನೇಲಿಯನು ದೇವದೂತನನ್ನು ಕಂಡು ಭಯದಿಂದ “ಸ್ವಾಮೀ, ನಿಮಗೇನು ಬೇಕು?” ಎಂದು ಕೇಳಿದನು. ಆ ದೇವದೂತನು ಅವನಿಗೆ, “ದೇವರು ನಿನ್ನ ಪ್ರಾರ್ಥನೆಗಳನ್ನು ಕೇಳಿದ್ದಾನೆ. ನೀನು ಬಡವರಿಗೆ ಕೊಟ್ಟವುಗಳನ್ನು ಆತನು ನೋಡಿದ್ದಾನೆ. ದೇವರು ನಿನ್ನನ್ನು ಮೆಚ್ಚಿಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತನ್ನಾ ಕೊರ್ನೆಲಾನ್ ದೆವಾಚ್ಯಾ ದುತಾಕ್ ಬಗುನ್ ಭಿಂವ್ನ್ ಸಾಯ್ಬಾ ತುಕಾ ಕಾಯ್ ಹೊವ್ಚೆ? ಮನುನ್ ಇಚಾರ್‍ಲ್ಯಾನ್, ತೆಕಾ “ದೆವಾನ್ ತುಜಿ ಮಾಗ್ನಿಯಾ ಆಯಿಕ್ಲ್ಯಾನ್, ತಿಯಾ ಗರಿಬಾಕ್ನಿ ದಾನ್ ಧರ್ಮ್ ದಿಲ್ಲೆ ಸಗ್ಳ್ಯೆ ತೆನಿ ಬಗ್ಲಾ, ದೆವಾನ್ ತುಕಾ ಮೆಚ್ಚುನ್ ಘೆಟ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 10:4
24 ತಿಳಿವುಗಳ ಹೋಲಿಕೆ  

ಯಾವ ವಿಷಯವಾಗಿಯೂ ಚಿಂತೆ ಮಾಡದೆ, ಸರ್ವ ವಿಷಯದಲ್ಲಿ ಕೃತಜ್ಞತಾಸ್ತುತಿಯೊಡನೆ ಪ್ರಾರ್ಥನೆ ವಿಜ್ಞಾಪನೆಗಳನ್ನು ಮಾಡುತ್ತಾ ನಿಮ್ಮ ಬೇಡಿಕೆಯನ್ನು ದೇವರಿಗೆ ಸಮರ್ಪಿಸಿರಿ.


ಅವರು ನಿಮ್ಮ ಸೇವೆಯನ್ನೂ ನೀವು ಪರಿಶುದ್ಧರಿಗೆ ಸೇವೆಮಾಡಿದ್ದರಲ್ಲಿ ಇನ್ನೂ ಮಾಡುತ್ತಿರುವುದರಲ್ಲಿ ದೇವರ ಹೆಸರಿನ ಕಡೆಗೆ ತೋರಿಸಿದ ಪ್ರೀತಿಯನ್ನೂ ಅವರು ಮರೆಯುವುದಕ್ಕೆ ದೇವರು ಅನ್ಯಾಯಗಾರರಲ್ಲ.


ಆಗ ಯೆಹೋವ ದೇವರಿಗೆ ಭಯಪಡುವವರು, ಒಬ್ಬರ ಸಂಗಡಲೊಬ್ಬರು ಮಾತಾಡಿಕೊಂಡರು. ಯೆಹೋವ ದೇವರು ಕಿವಿಗೊಟ್ಟು ಅದನ್ನು ಕೇಳಿದರು. ಇದಲ್ಲದೆ ಯೆಹೋವ ದೇವರಿಗೆ ಭಯಪಟ್ಟು, ಅವರ ನಾಮವನ್ನು ಗೌರವಿಸುವವರ ಬಗ್ಗೆ ಅವರು ತಮ್ಮ ಮುಂದೆ ಇದ್ದ ಜ್ಞಾಪಕ ಪುಸ್ತಕದಲ್ಲಿ ಬರೆಸಿದರು.


ಅವನು ನನಗೆ, ‘ಕೊರ್ನೇಲ್ಯನೇ, ದೇವರು ನಿನ್ನ ಪ್ರಾರ್ಥನೆ ಕೇಳಿದ್ದಾರೆ. ಬಡವರಿಗೆ ಕೊಟ್ಟ ನಿನ್ನ ದಾನಗಳನ್ನು ಜ್ಞಾಪಿಸಿಕೊಂಡಿದ್ದಾರೆ.


ದೇವದೂತನ ಕೈಯಿಂದ ಧೂಪದ ಹೊಗೆಯು, ದೇವಜನರ ಪ್ರಾರ್ಥನೆಗಳೊಂದಿಗೆ ಸೇರಿ, ದೇವಸನ್ನಿಧಿಗೆ ಏರಿಹೋಯಿತು.


ನನ್ನ ಪ್ರಾರ್ಥನೆ ನಿಮ್ಮ ಮುಂದೆ ಧೂಪವಾಗಿರಲಿ, ನಾನು ನಿಮ್ಮ ಕಡೆ ಕೈ ಎತ್ತುವುದು ಸಾಯಂಕಾಲದ ಬಲಿಯಂತೆ ನಿಮಗೆ ಸಮರ್ಪಕವಾಗಿರಲಿ.


ನಾನು ಎಲ್ಲವನ್ನೂ ಪರಿಪೂರ್ಣವಾಗಿ ಹೊಂದಿದ್ದೇನೆ. ನನಗೆ ಅಗತ್ಯಕ್ಕಿಂತಲೂ ಹೆಚ್ಚು ದೊರೆತಿದೆ. ನೀವು ಎಪಫ್ರೊದೀತನಿಂದ ಕಳುಹಿಸುವವುಗಳು ಈಗ ನನಗೆ ತಲುಪಿದೆ; ನಿಮ್ಮ ಕೊಡುಗೆ ದೇವರನ್ನು ಮೆಚ್ಚಿಸುವ ಸುಗಂಧ ಕಾಣಿಕೆಯೂ ಸ್ವೀಕೃತವಾದ ಯಜ್ಞವೂ ಆಗಿರುತ್ತವೆ.


ಇದಲ್ಲದೆ ಒಳ್ಳೆಯದನ್ನು ಮಾಡುವುದನ್ನೂ ಪರರೊಡನೆ ಹಂಚಿಕೊಳ್ಳುವುದನ್ನೂ ಮರೆಯಬೇಡಿರಿ. ಏಕೆಂದರೆ ಇಂಥಾ ಯಜ್ಞಗಳನ್ನು ದೇವರು ಮೆಚ್ಚುತ್ತಾರೆ.


ಮರಿಯಳು ದೇವದೂತನ ಮಾತಿಗೆ ಬಹಳವಾಗಿ ಕಳವಳಗೊಂಡು, “ಇದು ಎಂಥಾ ಶುಭಾಶಯ?” ಎಂದು ತನ್ನ ಮನದಲ್ಲಿ ಯೋಚಿಸತೊಡಗಿದಳು.


ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಲೋಕದಾದ್ಯಂತ ಎಲ್ಲೆಲ್ಲಿ ಸುವಾರ್ತೆಯು ಸಾರಲಾಗುವದೋ, ಅಲ್ಲೆಲ್ಲಾ ಈ ಸ್ತ್ರೀಯು ಮಾಡಿದ್ದನ್ನು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳಲಾಗುವುದು,” ಎಂದರು.


ಆತನು ನನಗೆ, “ದಾನಿಯೇಲನೇ, ಅತಿ ಪ್ರಿಯನಾದ ಮನುಷ್ಯನೇ, ನಾನು ನಿನಗೆ ಹೇಳುವ ಮಾತುಗಳನ್ನು ತಿಳಿದುಕೊಂಡು ಸ್ಥಿರವಾಗಿ ನಿಲ್ಲು. ಏಕೆಂದರೆ ನಾನು ಈಗ ನಿನ್ನ ಬಳಿಗೆ ಕಳುಹಿಸಲಾಗಿದ್ದೇನೆ,” ಎಂದು ಹೇಳಿದನು. ಅವನು ಈ ಮಾತನ್ನು ಹೇಳಿದ ಮೇಲೆ, ನಾನು ನಡುಗುತ್ತಲೇ ನಿಂತೆನು.


ನನಗೆ ಜ್ಞಾಪಕಪಡಿಸು, ನಾವಿಬ್ಬರೂ ವಾದಿಸುವಾ, ನೀನು ನೀತಿವಂತನೆಂದು ತೋರಿಸು.


ಆ ದಿವಸಗಳಲ್ಲಿ ಹಿಜ್ಕೀಯನು ರೋಗದಿಂದ ಮರಣಾವಸ್ಥೆಯಲ್ಲಿದ್ದನು. ಆಗ ಅವನು ಯೆಹೋವ ದೇವರನ್ನು ಪ್ರಾರ್ಥಿಸಲು, ದೇವರು ಅವನ ಸಂಗಡ ಮಾತನಾಡಿ ಅವನಿಗೆ ಒಂದು ಅದ್ಭುತವಾದ ಗುರುತನ್ನು ಕೊಟ್ಟರು.


ನೀವು ವಾಸಮಾಡುವ ಪರಲೋಕದಿಂದ ಕೇಳಿ, ಪರದೇಶಿಯು ಕೇಳಿದ್ದೆಲ್ಲವನ್ನು ನೆರವೇರಿಸಿರಿ. ಆಗ ಭೂಲೋಕದ ಎಲ್ಲಾ ಜನರೂ ನಿಮ್ಮ ನಾಮವನ್ನು ತಿಳಿದು, ನಿಮ್ಮ ಜನರಾದ ಇಸ್ರಾಯೇಲರಂತೆ ನಿಮಗೆ ಭಯಭಕ್ತಿಯುಳ್ಳವರಾಗಿ, ನಾನು ಕಟ್ಟಿಸಿದ ಈ ಆಲಯವು ನಿಮ್ಮ ಹೆಸರಿನಿಂದ ಕರೆಯಲಾಗಿದೆ ಎಂದು ತಿಳಿದುಕೊಳ್ಳುವರು.


ಆಗ ಯೆಹೋವ ದೇವರು ಬಂದು ನಿಂತು ಮೊದಲಿನ ಹಾಗೆಯೇ, “ಸಮುಯೇಲನೇ, ಸಮುಯೇಲನೇ,” ಎಂದು ಕರೆದರು. ಅದಕ್ಕೆ ಸಮುಯೇಲನು, “ಯೆಹೋವ ದೇವರೇ ಮಾತನಾಡಿ; ನಿಮ್ಮ ದಾಸನು ಕೇಳುತ್ತಾನೆ,” ಎಂದನು.


“ಆಗ ನಾನು, ‘ಸ್ವಾಮಿ, ನಾನೇನು ಮಾಡಬೇಕು?’ ಎಂದು ಕೇಳಲು, “ ‘ಎದ್ದೇಳು, ದಮಸ್ಕದೊಳಗೆ ಹೋಗು, ನೀನು ಏನೇನು ಮಾಡಬೇಕಾಗಿದೆಯೋ ಅದೆಲ್ಲವನ್ನು ನಿನಗೆ ಅಲ್ಲಿ ಹೇಳಲಾಗುವುದು,’ ಎಂದು ಕರ್ತ ಯೇಸು ನನಗೆ ಹೇಳಿದರು.


ಆ ಸ್ತ್ರೀಯರು ಭಯಪಟ್ಟು ತಮ್ಮ ದೃಷ್ಟಿಯನ್ನು ನೆಲದ ಕಡೆಗೆ ನಾಟಿರಲು, ಆ ಪುರುಷರು ಅವರಿಗೆ, “ಜೀವಿಸುವವರನ್ನು ಸತ್ತವರೊಳಗೆ ನೀವು ಏಕೆ ಹುಡುಕುತ್ತೀರಿ?


ಭೂಮಿಯ ಕತ್ತಲಾದ ಸ್ಥಳದಲ್ಲಿ ರಹಸ್ಯವಾಗಿ ನಾನು ಮಾತನಾಡಲಿಲ್ಲ. ‘ವ್ಯರ್ಥವಾಗಿ ನನ್ನನ್ನು ಹುಡುಕಿರಿ’ ಎಂದು ಯಾಕೋಬನ ವಂಶದವರಿಗೆ ನಾನು ಹೇಳಲಿಲ್ಲ. ಯೆಹೋವನಾದ ನಾನೇ ನೀತಿಯನ್ನು ಮಾತನಾಡಿ, ಯಥಾರ್ಥವಾದವುಗಳನ್ನೇ ತಿಳಿಸುತ್ತೇನೆ.


ಇದಲ್ಲದೆ ಅವನು ಅದನ್ನು ಯಾಜಕರಾದ ಆರೋನನ ಪುತ್ರರ ಬಳಿಗೆ ತರಬೇಕು. ಅವನು ಹಿಟ್ಟಿನಲ್ಲಿಯೂ, ಎಣ್ಣೆಯಲ್ಲಿಯೂ ಒಂದು ಹಿಡಿಯನ್ನು ಅದರ ಎಲ್ಲಾ ಸಾಂಬ್ರಾಣಿಯ ಸಂಗಡ ತೆಗೆದುಕೊಳ್ಳಬೇಕು. ಯಾಜಕನು ಅದನ್ನು ಜ್ಞಾಪಕಾರ್ಥವಾಗಿ ಬಲಿಪೀಠದ ಮೇಲೆ ಯೆಹೋವ ದೇವರಿಗೆ ಸುವಾಸನೆಯ ಸಮರ್ಪಣೆಯಾಗಿ ಬೆಂಕಿಯಿಂದ ಸುಡಬೇಕು.


ನಿಮ್ಮ ಯಜ್ಞಾರ್ಪಣೆಗಳನ್ನೆಲ್ಲಾ ಜ್ಞಾಪಕಮಾಡಿಕೊಂಡು, ನಿಮ್ಮ ದಹನಬಲಿಗಳನ್ನು ಸ್ವೀಕರಿಸಲಿ.


ಪೇತ್ರ ಯೋಹಾನರಿಬ್ಬರೂ ಭಿಕ್ಷುಕನನ್ನು ನೇರವಾಗಿ ದೃಷ್ಟಿಸಿ ನೋಡಿದರು. ಪೇತ್ರನು ಭಿಕ್ಷುಕನಿಗೆ, “ನಮ್ಮನ್ನು ನೋಡು!” ಎಂದು ಹೇಳಿದನು.


ಪೌಲನು ಮಾತನಾಡುತ್ತಿರುವುದನ್ನು ಅವನು ಆಲಿಸುತ್ತಿದ್ದನು. ಪೌಲನು ನೇರವಾಗಿ ಅವನನ್ನೇ ದೃಷ್ಟಿಸಿ ನೋಡಿ, ತಾನು ಗುಣಹೊಂದಲು ಅವನಲ್ಲಿ ವಿಶ್ವಾಸವಿದೆಯೆಂದು ಕಂಡು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು