Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 11:19 - ಕನ್ನಡ ಸಮಕಾಲಿಕ ಅನುವಾದ

19 ಸ್ತೆಫನನ ಮರಣದ ನಂತರ ಸಂಭವಿಸಿದ ಹಿಂಸೆಯ ನಿಮಿತ್ತ ಚದರಿಹೋದವರು ಫೊಯಿನಿಕೆ, ಸೈಪ್ರಸ್ ಮತ್ತು ಅಂತಿಯೋಕ್ಯದವರೆಗೆ ಪ್ರಯಾಣಮಾಡಿದರು. ಹೀಗೆ ಅವರು ಯೆಹೂದ್ಯರಿಗೆ ಮಾತ್ರವೇ ವಾಕ್ಯವನ್ನು ಸಾರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಸ್ತೆಫನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚದರಿಹೋದವರು ಯೆಹೂದ್ಯರಿಗಲ್ಲದೇ ಮತ್ತಾರಿಗೂ ದೇವರ ವಾಕ್ಯವನ್ನು ಹೇಳದೆ ಫೊಯಿನಿಕೆ, ಕುಪ್ರ ಹಾಗೂ ಅಂತಿಯೋಕ್ಯ ಪ್ರಾಂತ್ಯಗಳವರೆಗೂ ಸಂಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಸ್ತೇಫನನು ಕೊಲೆಯಾದ ಮೊದಲ್ಗೊಂಡು ಉಂಟಾದ ಹಿಂಸಾಚಾರದ ನಿಮಿತ್ತ ಭಕ್ತಾದಿಗಳು ಚದರಿಹೋದರು. ಅವರಲ್ಲಿ ಕೆಲವರು ಫೆನಿಷ್ಯ, ಸೈಪ್ರಸ್, ಅಂತಿಯೋಕ್ಯದವರೆಗೂ ಹೋಗಿ ಶುಭಸಂದೇಶವನ್ನು ಸಾರಿದರು. ಆದರೆ ಇದನ್ನು ಸಾರಿದ್ದು ಯೆಹೂದ್ಯರಿಗೆ ಮಾತ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಸ್ತೆಫನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚದರಿಹೋದವರು ಯೆಹೂದ್ಯರಿಗೇ ಹೊರತು ಮತ್ತಾರಿಗೂ ವಾಕ್ಯವನ್ನು ಹೇಳದೆ ಫೊಯಿನಿಕೆ ಕುಪ್ರ ಅಂತಿಯೋಕ್ಯ ಪ್ರಾಂತ್ಯಗಳವರೆಗೂ ಸಂಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಸ್ತೆಫನನು ಕೊಲ್ಲಲ್ಪಟ್ಟ ನಂತರ ಉಂಟಾದ ಹಿಂಸೆಯಿಂದಾಗಿ ವಿಶ್ವಾಸಿಗಳು ಚದರಿಹೋದರು. ವಿಶ್ವಾಸಿಗಳಲ್ಲಿ ಕೆಲವರು ಬಹು ದೂರದ ಸ್ಥಳಗಳಾದ ಫೆನಿಷ್ಯ, ಸೈಪ್ರಸ್ ಮತ್ತು ಅಂತಿಯೋಕ್ಯಗಳಿಗೆ ಹೋದರು. ವಿಶ್ವಾಸಿಗಳು ಈ ಸ್ಥಳಗಳಲ್ಲಿ ಸುವಾರ್ತೆಯನ್ನು ತಿಳಿಸಿದರು. ಆದರೆ ಅವರು ಯೆಹೂದ್ಯರಿಗೆ ಮಾತ್ರ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಸ್ತೆಪನಾಕ್ ಜಿವಾನಿ ಮಾರುನ್ ಹೊಲ್ಲ್ಯಾ ಮಾನಾ ಯೆಲ್ಲ್ಯಾ ತರಾಸಾನಿ ದೆವಾಚಿ ಲೊಕಾ ಸಗ್ಳಿ ಪಗ್ಳುನ್ ಗೆಲ್ಲಿ, ದೆವಾಚ್ಯಾ ಲೊಕಾತ್ನಿ ಥೊಡಿ ಲೊಕಾ ಪೊಯಿನಿಕ್ಯಾ, ಸಿಪ್ರ್ ಅನಿ ಅಂತಿಯೊಕ್ಯ್ ಮನ್ತಲ್ಯಾ ಲೈ ಧುರ್‍ಲ್ಯಾ ಗಾಂವಾತ್ನಿ ಗೆಲೆ, ದೆವಾಚ್ಯಾ ಲೊಕಾನಿ ಹ್ಯಾ ಗಾಂವಾತ್ನಿ ದೆವಾಚಿ ಬರಿ ಖಬರ್ ಕಳ್ವುಲ್ಯಾನಿ ಖರೆ ತೆನಿ ಜುದೆವಾಕ್ನಿ ಎವ್ಡೆಚ್ ಕಳ್ವುಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 11:19
22 ತಿಳಿವುಗಳ ಹೋಲಿಕೆ  

ಅಲ್ಲಿ ಫೊಯಿನಿಕೆಗೆ ಹೋಗುವ ನೌಕೆಯನ್ನು ಕಂಡು, ಅದನ್ನೇರಿ ಪ್ರಯಾಣ ಮುಂದುವರಿಸಿದೆವು.


ಆದರೆ ಪೌಲನು ಮತ್ತು ಬಾರ್ನಬರು ಅಂತಿಯೋಕ್ಯದಲ್ಲಿಯೇ ಉಳಿದುಕೊಂಡು ಅನೇಕರಿಗೆ ಕರ್ತ ಯೇಸುವಿನ ವಾಕ್ಯವನ್ನು ಬೋಧಿಸುತ್ತಾ ಸುವಾರ್ತೆ ಸಾರಿದರು.


ಆಗ ಅಪೊಸ್ತಲರು ಮತ್ತು ಹಿರಿಯರು ಇಡೀ ಸಭೆಯ ಸಮ್ಮತಿ ಪಡೆದು, ಸಹೋದರರಲ್ಲಿ ನಾಯಕರಾಗಿದ್ದ ಬಾರ್ಸಬನೆಂದು ಕರೆಯಲಾದ ಯೂದ ಮತ್ತು ಸೀಲ ಎಂಬಿಬ್ಬರನ್ನು ಆಯ್ದುಕೊಂಡರು. ಅವರನ್ನು ಪೌಲ ಮತ್ತು ಬಾರ್ನಬರೊಂದಿಗೆ ಅಂತಿಯೋಕ್ಯಕ್ಕೆ ಕಳುಹಿಸಲು ನಿರ್ಧರಿಸಿದರು.


ಆದ್ದರಿಂದ ಸಭೆಯವರು ಅವರನ್ನು ಸಾಗಕಳುಹಿಸಲು, ಅವರು ಫೊಯಿನಿಕೆಯ ಮತ್ತು ಸಮಾರ್ಯದ ಮಾರ್ಗವಾಗಿ ಪ್ರಯಾಣ ಮಾಡುವಾಗ, ಯೆಹೂದ್ಯರಲ್ಲದವರ ಪರಿವರ್ತನೆಯನ್ನು ವಿವರವಾಗಿ ಅಲ್ಲಿಯವರೆಗೆ ತಿಳಿಸುತ್ತಾ ಸಹೋದರರೆಲ್ಲರಿಗೂ ಮಹಾಸಂತೋಷವನ್ನುಂಟುಮಾಡಿದರು.


ಸೈಪ್ರಸ್ ಎಂಬಲ್ಲಿ ಹುಟ್ಟಿದ ಒಬ್ಬ ಲೇವಿಯನು ಇದ್ದನು, ಅವನ ಹೆಸರು ಯೋಸೇಫ, ಅಪೊಸ್ತಲರು ಅವನನ್ನು “ಬಾರ್ನಬ” ಎಂದು ಕರೆದರು. ಬಾರ್ನಬ ಅಂದರೆ “ಆದರಣೆಯ ಪುತ್ರನು” ಎಂದು ಅರ್ಥ.


ಕೇಫನು ಅಂತಿಯೋಕ್ಯ ಎಂಬ ಪಟ್ಟಣಕ್ಕೆ ಬಂದಾಗ ಅವನು ತಪ್ಪುಮಾಡಿದವನಾಗಿ ಇದ್ದುದರಿಂದ, ನಾನು ಅವನನ್ನು ಬಹಿರಂಗವಾಗಿ ಎದುರಿಸಿದೆನು.


ಕೈಸರೈಯದಿಂದ ಕೆಲವು ಶಿಷ್ಯರು ನಮ್ಮೊಂದಿಗೆ ಬಂದು, ಮ್ನಾಸೋನ ಎಂಬುವನ ಮನೆಗೆ ನಾವು ಇಳಿದುಕೊಳ್ಳುವಂತೆ ಕರೆದುಕೊಂಡು ಹೋದರು. ಅವನು ಸೈಪ್ರಸ್ ದಿಂದ ಬಂದ ಪ್ರಥಮ ಶಿಷ್ಯರಲ್ಲಿ ಒಬ್ಬನಾಗಿದ್ದನು.


ಅನಂತರ ಅವನು ಕೈಸರೈಯವನ್ನು ಸೇರಿದಾಗ, ಅಲ್ಲಿದ್ದ ಸಭೆಯನ್ನು ವಂದಿಸಿ ಅಂತಿಯೋಕ್ಯಕ್ಕೆ ಹೊರಟುಹೋದನು.


ಇದರಿಂದ ಅವರಲ್ಲಿ ತೀವ್ರ ಭಿನ್ನಾಭಿಪ್ರಾಯ ಉಂಟಾಗಿ ಅವರು ಒಬ್ಬರಿಂದೊಬ್ಬರು ಪ್ರತ್ಯೇಕವಾಗಿ ಹೋಗಬೇಕಾಯಿತು. ಬಾರ್ನಬನು ಮಾರ್ಕನನ್ನು ಕರೆದುಕೊಂಡು ಸೈಪ್ರಸ್ ದ್ವೀಪಕ್ಕೆ ಪ್ರಯಾಣಮಾಡಿದನು,


ಆಗ ಪೌಲ, ಬಾರ್ನಬರು ಧೈರ್ಯದಿಂದ ಅವರಿಗೆ ಉತ್ತರಕೊಟ್ಟರು: “ದೇವರ ವಾಕ್ಯವನ್ನು ನಾವು ಮೊದಲು ನಿಮಗೆ ಹೇಳುವುದು ಅವಶ್ಯವಾಗಿತ್ತು. ಆದರೆ ನೀವು ಅದನ್ನು ತಳ್ಳಿಬಿಟ್ಟಿದ್ದರಿಂದಲೂ ನಿತ್ಯಜೀವಕ್ಕೆ ನೀವು ಅಯೋಗ್ಯರೆಂದು ತೀರ್ಮಾನಿಸಿಕೊಂಡಿದ್ದೀರಿ. ಆದುದರಿಂದ ಇಗೋ, ನಾವೀಗ ಯೆಹೂದ್ಯರಲ್ಲದ ಜನರ ಬಳಿಗೆ ಹೋಗುತ್ತೇವೆ.


ಪವಿತ್ರಾತ್ಮ ದೇವರಿಂದ ಕಳುಹಿಸಲಾದ ಅವರಿಬ್ಬರೂ ಸೆಲ್ಯೂಕ್ಯಕ್ಕೆ ಹೋಗಿ ಅಲ್ಲಿಂದ ನೌಕೆಯಲ್ಲಿ ಪ್ರಯಾಣಮಾಡಿ ಸೈಪ್ರಸಿಗೆ ತಲುಪಿದರು.


ಅಂತಿಯೋಕ್ಯದ ಸಭೆಯಲ್ಲಿ, ಪ್ರವಾದಿಗಳೂ ಬೋಧಕರೂ ಇದ್ದರು. ಅವರು ಯಾರೆಂದರೆ ಬಾರ್ನಬನು, ನೀಗರ ಎಂದು ಕರೆಯಲಾಗುತ್ತಿದ್ದ ಸಿಮೆಯೋನ, ಕುರೇನೆದ ಲೂಕ್ಯ, ಚತುರಾಧಿಪತಿ ಹೆರೋದನೊಂದಿಗೆ ಬೆಳೆದ ಮೆನಹೇನ ಮತ್ತು ಸೌಲ ಮುಂತಾದವರೇ.


ದೇವರು ತಮ್ಮ ಸೇವಕರಾದ ಯೇಸುವನ್ನು ಜೀವಂತವಾಗಿ ಎಬ್ಬಿಸಿದಾಗ, ನಿಮ್ಮಲ್ಲಿ ಪ್ರತಿಯೊಬ್ಬರೂ ನಿಮ್ಮ ದುರ್ಮಾರ್ಗಗಳಿಂದ ತಿರುಗಿಸಿ ನಿಮ್ಮನ್ನು ಮೊಟ್ಟಮೊದಲು ಆಶೀರ್ವದಿಸಲು ಯೇಸುವನ್ನು ನಿಮ್ಮ ಬಳಿಗೆ ಕಳುಹಿಸಿದರು.”


ಆಗ ಯೆಹೂದಿ ನಾಯಕರು, “ನಾವು ಈತನನ್ನು ಕಾಣದ ಹಾಗೆ ಈತ ಎಲ್ಲಿಗೆ ಹೋಗಲಿದ್ದಾನೆ? ಗ್ರೀಕರ ನಡುವೆ ಚದರಿ ಹೋದವರ ಬಳಿಗೆ ಹೋಗಿ ಗ್ರೀಕರಿಗೆ ಬೋಧಿಸುವನೋ?


ಆದರೆ ತಪ್ಪಿಹೋದ ಕುರಿಗಳಾದ ಇಸ್ರಾಯೇಲಿನ ಮನೆತನದವರ ಬಳಿಗೆ ಹೋಗಿರಿ.


ಈ ಮಾತು ಇಡೀ ಸಮೂಹಕ್ಕೆ ಮೆಚ್ಚುಗೆಯಾಯಿತು. ಅವರು ಪೂರ್ಣನಂಬಿಕೆಯುಳ್ಳವನೂ ಪವಿತ್ರಾತ್ಮಭರಿತನೂ ಆದ ಸ್ತೆಫನನ್ನು ಆರಿಸಿಕೊಂಡರು; ಅಲ್ಲದೆ ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ ಮತ್ತು ಯೆಹೂದ್ಯ ಮಾರ್ಗ ಅನುಸರಿಸುತ್ತಿದ್ದ ಅಂತಿಯೋಕ್ಯದ ನಿಕೊಲಾಯನನ್ನು ಆಯ್ಕೆಮಾಡಿದರು.


ಆದರೆ ಅವರಲ್ಲಿ, ಕೆಲವರು ಅಂದರೆ ಸೈಪ್ರಸ್ ಮತ್ತು ಕುರೇನೆದ ಪುರುಷರು ಅಂತಿಯೋಕ್ಯಕ್ಕೆ ಹೋಗಿ ಗ್ರೀಕರಿಗೂ ಕರ್ತ ಯೇಸುವಿನ ಶುಭಸಮಾಚಾರ ಸಾರಲು ಪ್ರಾರಂಭಿಸಿದರು.


ಈ ಸಮಾಚಾರ ಯೆರೂಸಲೇಮಿನ ಸಭೆಯವರಿಗೆ ತಿಳಿಯಿತು. ಅವರು ಬಾರ್ನಬನನ್ನು ಅಂತಿಯೋಕ್ಯಕ್ಕೆ ಕಳುಹಿಸಿಕೊಟ್ಟರು.


ಅತ್ತಾಲಿಯದಿಂದ ನೌಕೆಯಲ್ಲಿ ಪ್ರಯಾಣಮಾಡಿ ಅಂತಿಯೋಕ್ಯಕ್ಕೆ ಬಂದರು. ಅವರು ಪೂರೈಸಿದ ಸೇವೆಗಾಗಿ ದೇವರ ಕೃಪೆಗೆ ತಮ್ಮನ್ನು ಸಮರ್ಪಿಸಿಕೊಂಡದ್ದು ಈ ಪಟ್ಟಣದಿಂದಲೇ.


ಅವರು ಹೊರಟುಹೋಗಿ ಅಂತಿಯೋಕ್ಯವನ್ನು ತಲುಪಿದರು. ಅಲ್ಲಿ ದೇವಸಭೆಯನ್ನು ಕೂಡಿಸಿ ಆ ಪತ್ರವನ್ನು ಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು