Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 11:27 - ಕನ್ನಡ ಸಮಕಾಲಿಕ ಅನುವಾದ

27 ಈ ಸಮಯದಲ್ಲಿ ಯೆರೂಸಲೇಮಿನಿಂದ ಕೆಲವು ಪ್ರವಾದಿಗಳು ಅಂತಿಯೋಕ್ಯಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅ ಕಾಲದಲ್ಲಿ ಪ್ರವಾದಿಗಳಾಗಿದ್ದ ಕೆಲವರು ಯೆರೂಸಲೇಮಿನಿಂದ ಅಂತಿಯೋಕ್ಯಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆ ದಿನಗಳಲ್ಲಿ ಕೆಲವು ಪ್ರವಾದಿಗಳು ಜೆರುಸಲೇಮಿನಿಂದ ಅಂತಿಯೋಕ್ಯಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆ ಕಾಲದಲ್ಲಿ ಪ್ರವಾದಿಗಳಾಗಿದ್ದ ಕೆಲವರು ಯೆರೂಸಲೇವಿುನಿಂದ ಅಂತಿಯೋಕ್ಯಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆ ಕಾಲದಲ್ಲಿ ಕೆಲವು ಪ್ರವಾದಿಗಳು ಜೆರುಸಲೇಮಿನಿಂದ ಅಂತಿಯೋಕ್ಯಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ತ್ಯಾ ಎಳಾರ್ ಥೊಡಿ ಲೊಕಾ ಪ್ರವಾದಿಯಾ ಜೆರುಜಲೆಮಾಕ್ನಾ ಅಂತಿಯೊಕಾಕ್ ಗೆಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 11:27
19 ತಿಳಿವುಗಳ ಹೋಲಿಕೆ  

ಅಂತಿಯೋಕ್ಯದ ಸಭೆಯಲ್ಲಿ, ಪ್ರವಾದಿಗಳೂ ಬೋಧಕರೂ ಇದ್ದರು. ಅವರು ಯಾರೆಂದರೆ ಬಾರ್ನಬನು, ನೀಗರ ಎಂದು ಕರೆಯಲಾಗುತ್ತಿದ್ದ ಸಿಮೆಯೋನ, ಕುರೇನೆದ ಲೂಕ್ಯ, ಚತುರಾಧಿಪತಿ ಹೆರೋದನೊಂದಿಗೆ ಬೆಳೆದ ಮೆನಹೇನ ಮತ್ತು ಸೌಲ ಮುಂತಾದವರೇ.


ದೇವರು ತಮ್ಮ ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ನೇಮಿಸಿದ್ದಾರೆ. ಅನಂತರ ಅದ್ಭುತಕಾರ್ಯಗಳನ್ನು ಮಾಡುವವರನ್ನು, ರೋಗಗಳನ್ನು ಗುಣಪಡಿಸುವ ವರವನ್ನು, ಪರೋಪಕಾರಿಗಳನ್ನು, ಆಡಳಿತಗಾರರನ್ನು, ವಿವಿಧ ವಾಣಿಗಳನ್ನಾಡುವವರನ್ನು ನೇಮಿಸಿದ್ದಾರೆ.


ಕ್ರಿಸ್ತನು ಕೆಲವರನ್ನು ಅಪೊಸ್ತಲರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸುವಾರ್ತಿಕರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಕೆಲವರನ್ನು ಉಪದೇಶಿಗಳನ್ನಾಗಿಯೂ ಸಭೆಗೆ ಕೊಟ್ಟರು.


ಯೂದ ಮತ್ತು ಸೀಲರು ಸ್ವತಃ ಪ್ರವಾದಿಗಳಾಗಿದ್ದುದರಿಂದ ಅಲ್ಲಿದ್ದ ವಿಶ್ವಾಸಿಗಳನ್ನು ಅನೇಕ ಬುದ್ಧಿವಾದಗಳಿಂದ ಬಲಪಡಿಸಿದರು.


“ದೇವರು ಹೇಳುವುದೇನೆಂದರೆ: ‘ಅಂತ್ಯ ದಿನಗಳಲ್ಲಿ ನನ್ನ ಆತ್ಮವನ್ನು ಎಲ್ಲಾ ಮನುಷ್ಯರ ಮೇಲೆ ಸುರಿಸುವೆನು, ನಿಮ್ಮ ಗಂಡು ಹೆಣ್ಣುಮಕ್ಕಳು ಪ್ರವಾದಿಸುವರು, ನಿಮ್ಮ ಯುವಜನರಿಗೆ ದರ್ಶನಗಳು ಕಾಣುವವು, ನಿಮ್ಮ ಹಿರಿಯರಿಗೆ ಕನಸುಗಳು ಬೀಳುವುವು.


ಆದ್ದರಿಂದ ನೋಡಿರಿ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ನಿಯಮ ಬೋಧಕರನ್ನೂ ನಿಮ್ಮ ಬಳಿಗೆ ಕಳುಹಿಸುತ್ತೇನೆ. ಅವರಲ್ಲಿ ಕೆಲವರನ್ನು ಕೊಲ್ಲುವಿರಿ, ಶಿಲುಬೆಗೆ ಏರಿಸುವಿರಿ. ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸುವಿರಿ.


ಪ್ರವಾದಿಗಳ ಆತ್ಮಗಳು ಪ್ರವಾದಿಗಳ ಸ್ವಾಧೀನದಲ್ಲಿವೆ.


ಅವನಿಗೆ ಅವಿವಾಹಿತರಾದ ನಾಲ್ಕು ಮಂದಿ ಹೆಣ್ಣು ಮಕ್ಕಳಿದ್ದರು. ಅವರು ಪ್ರವಾದಿಸುವವರಾಗಿದ್ದರು.


ಅಲ್ಲಿ ಶಿಷ್ಯರನ್ನು ಹುಡುಕಿ, ಕಂಡು ಅವರೊಂದಿಗೆ ಏಳು ದಿನ ಇದ್ದೆವು. ಪೌಲನು ಯೆರೂಸಲೇಮಿಗೆ ಹೋಗಬಾರದೆಂದು ಅವರು ಪವಿತ್ರಾತ್ಮ ಪ್ರೇರಣೆಯಿಂದ ಹೇಳಿದರು.


ಈ ಕಾರಣದಿಂದ, ದೇವರ ಜ್ಞಾನವು ಸಹ ಹೇಳಿರುವುದೇನೆಂದರೆ, ‘ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು, ಅವರಲ್ಲಿ ಕೆಲವರನ್ನು ಅವರು ಕೊಲ್ಲುವರು ಮತ್ತು ಹಿಂಸೆಪಡಿಸುವರು.’


ಈ ಮಾತು ಇಡೀ ಸಮೂಹಕ್ಕೆ ಮೆಚ್ಚುಗೆಯಾಯಿತು. ಅವರು ಪೂರ್ಣನಂಬಿಕೆಯುಳ್ಳವನೂ ಪವಿತ್ರಾತ್ಮಭರಿತನೂ ಆದ ಸ್ತೆಫನನ್ನು ಆರಿಸಿಕೊಂಡರು; ಅಲ್ಲದೆ ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ ಮತ್ತು ಯೆಹೂದ್ಯ ಮಾರ್ಗ ಅನುಸರಿಸುತ್ತಿದ್ದ ಅಂತಿಯೋಕ್ಯದ ನಿಕೊಲಾಯನನ್ನು ಆಯ್ಕೆಮಾಡಿದರು.


ಆದರೆ ಅವರಲ್ಲಿ, ಕೆಲವರು ಅಂದರೆ ಸೈಪ್ರಸ್ ಮತ್ತು ಕುರೇನೆದ ಪುರುಷರು ಅಂತಿಯೋಕ್ಯಕ್ಕೆ ಹೋಗಿ ಗ್ರೀಕರಿಗೂ ಕರ್ತ ಯೇಸುವಿನ ಶುಭಸಮಾಚಾರ ಸಾರಲು ಪ್ರಾರಂಭಿಸಿದರು.


ಈ ಸಮಾಚಾರ ಯೆರೂಸಲೇಮಿನ ಸಭೆಯವರಿಗೆ ತಿಳಿಯಿತು. ಅವರು ಬಾರ್ನಬನನ್ನು ಅಂತಿಯೋಕ್ಯಕ್ಕೆ ಕಳುಹಿಸಿಕೊಟ್ಟರು.


ಅತ್ತಾಲಿಯದಿಂದ ನೌಕೆಯಲ್ಲಿ ಪ್ರಯಾಣಮಾಡಿ ಅಂತಿಯೋಕ್ಯಕ್ಕೆ ಬಂದರು. ಅವರು ಪೂರೈಸಿದ ಸೇವೆಗಾಗಿ ದೇವರ ಕೃಪೆಗೆ ತಮ್ಮನ್ನು ಸಮರ್ಪಿಸಿಕೊಂಡದ್ದು ಈ ಪಟ್ಟಣದಿಂದಲೇ.


ಆಗ ಅಪೊಸ್ತಲರು ಮತ್ತು ಹಿರಿಯರು ಇಡೀ ಸಭೆಯ ಸಮ್ಮತಿ ಪಡೆದು, ಸಹೋದರರಲ್ಲಿ ನಾಯಕರಾಗಿದ್ದ ಬಾರ್ಸಬನೆಂದು ಕರೆಯಲಾದ ಯೂದ ಮತ್ತು ಸೀಲ ಎಂಬಿಬ್ಬರನ್ನು ಆಯ್ದುಕೊಂಡರು. ಅವರನ್ನು ಪೌಲ ಮತ್ತು ಬಾರ್ನಬರೊಂದಿಗೆ ಅಂತಿಯೋಕ್ಯಕ್ಕೆ ಕಳುಹಿಸಲು ನಿರ್ಧರಿಸಿದರು.


ಅವರು ಹೊರಟುಹೋಗಿ ಅಂತಿಯೋಕ್ಯವನ್ನು ತಲುಪಿದರು. ಅಲ್ಲಿ ದೇವಸಭೆಯನ್ನು ಕೂಡಿಸಿ ಆ ಪತ್ರವನ್ನು ಕೊಟ್ಟರು.


ಅನಂತರ ಅವನು ಕೈಸರೈಯವನ್ನು ಸೇರಿದಾಗ, ಅಲ್ಲಿದ್ದ ಸಭೆಯನ್ನು ವಂದಿಸಿ ಅಂತಿಯೋಕ್ಯಕ್ಕೆ ಹೊರಟುಹೋದನು.


ಒಬ್ಬನಿಗೆ ಅದ್ಭುತಕಾರ್ಯಗಳ ಶಕ್ತಿಯೂ ಒಬ್ಬನಿಗೆ ಪ್ರವಾದನೆಯೂ ಒಬ್ಬನಿಗೆ ಆತ್ಮಗಳನ್ನು ವಿವೇಚಿಸುವ ವರವೂ ಒಬ್ಬನಿಗೆ ವಿವಿಧ ಭಾಷೆಗಳನ್ನಾಡುವ ಶಕ್ತಿಯೂ ಮತ್ತೊಬ್ಬನಿಗೆ ಅನ್ಯಭಾಷೆಗಳ ಅರ್ಥವನ್ನು ಹೇಳುವ ವರವೂ ಕೊಡಲಾಗುತ್ತದೆ.


ಕೇಫನು ಅಂತಿಯೋಕ್ಯ ಎಂಬ ಪಟ್ಟಣಕ್ಕೆ ಬಂದಾಗ ಅವನು ತಪ್ಪುಮಾಡಿದವನಾಗಿ ಇದ್ದುದರಿಂದ, ನಾನು ಅವನನ್ನು ಬಹಿರಂಗವಾಗಿ ಎದುರಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು