Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 12:17 - ಕನ್ನಡ ಸಮಕಾಲಿಕ ಅನುವಾದ

17 ಸುಮ್ಮನಿರಬೇಕೆಂದು ಪೇತ್ರನು ಅವರಿಗೆ ಕೈಸನ್ನೆ ಮಾಡಿ ಕರ್ತದೇವರು ಹೇಗೆ ತನ್ನನ್ನು ಸೆರೆಮನೆಯಿಂದ ಬಿಡಿಸಿ ಹೊರಗೆ ಕರೆದುಕೊಂಡು ಬಂದರು ಎಂಬುದನ್ನು ವಿವರಿಸಿದನು. “ಇದನ್ನು ಯಾಕೋಬನಿಗೆ ಹಾಗೂ ಸಹೋದರರಿಗೆ ತಿಳಿಸಿರಿ,” ಎಂದು ಹೇಳಿ ಬೇರೆ ಸ್ಥಳಕ್ಕೆ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವನು ಸುಮ್ಮನಿರಿ ಎಂದು ಅವರಿಗೆ ಕೈಸನ್ನೆ ಮಾಡಿ ತನ್ನನ್ನು ಕರ್ತನು ಸೆರೆಮನೆಯೊಳಗಿಂದ ಹೊರಗೆ ಕರೆದುಕೊಂಡು ಬಂದ ರೀತಿಯನ್ನು ವಿವರಿಸಿ; “ಈ ಸಂಗತಿಗಳನ್ನು ಯಾಕೋಬನಿಗೂ, ಸಹೋದರರೆಲ್ಲರಿಗೂ ತಿಳಿಸಿರೆಂದು” ಹೇಳಿ ಬೇರೆ ಸ್ಥಳಕ್ಕೆ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಪೇತ್ರನು ನಿಶ್ಯಬ್ದರಾಗಿರುವಂತೆ ಅವರಿಗೆ ಕೈಸನ್ನೆ ಮಾಡಿದನು. ಪ್ರಭು ತನ್ನನ್ನು ಹೇಗೆ ಸೆರೆಮನೆಯಿಂದ ಹೊರಗೆ ಕರೆತಂದರೆಂದು ವಿವರಿಸಿದನು. ಈ ವಿಷಯವನ್ನು ಯಕೋಬನಿಗೂ ಇತರ ಸಹೋದರರಿಗೂ ತಿಳಿಸಲು ಹೇಳಿ ಅಲ್ಲಿಂದ ಹೊರಟು ಬೇರೆ ಸ್ಥಳಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆದರೆ ಅವನು ಸುಮ್ಮಗಿರ್ರಿ ಎಂದು ಅವರಿಗೆ ಕೈಸನ್ನೆ ಮಾಡಿ ತನ್ನನ್ನು ಕರ್ತನು ಸೆರೆಮನೆಯೊಳಗಿಂದ ಹೊರಗೆ ಕರೆದುಕೊಂಡು ಬಂದ ರೀತಿಯನ್ನು ವಿವರಿಸಿ ಈ ಸಂಗತಿಗಳನ್ನು ಯಾಕೋಬನಿಗೂ ಸಹೋದರರೆಲ್ಲರಿಗೂ ತಿಳಿಸಿರೆಂದು ಹೇಳಿ ಬೇರೆ ಸ್ಥಳಕ್ಕೆ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಪೇತ್ರನು ಅವರಿಗೆ ಸುಮ್ಮನಿರಬೇಕೆಂದು ಸನ್ನೆ ಮಾಡಿದನು. ಪ್ರಭುವು ತನ್ನನ್ನು ಸೆರೆಮನೆಯಿಂದ ಬಿಡಿಸಿದ ರೀತಿಯನ್ನು ಅವನು ಅವರಿಗೆ ವಿವರಿಸಿ, “ಯಾಕೋಬನಿಗೂ ಮತ್ತು ಸಹೋದರರಿಗೂ ಈ ಸಂಗತಿಯನ್ನು ತಿಳಿಸಿರಿ” ಎಂದು ಹೇಳಿದನು. ಬಳಿಕ ಪೇತ್ರನು ಬೇರೊಂದು ಸ್ಥಳಕ್ಕೆ ಅಲ್ಲಿಂದ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಪೆದ್ರುನ್ ತೆಂಕಾ ಗಪ್ಪ್ ರ್‍ಹಾಯ್ ಸಾರ್ಕೆ ಸೊನ್ನಾಯ್ ಕರ್‍ಲ್ಯಾನ್, ಅನಿ ಧನಿಯಾನ್ ಅಪ್ನಾಕ್ ಬಂದಿಖಾನ್ಯಾತ್ನಾ ಸೊಡ್ವುನ್ ಹಾನಲೆ ಕಶೆ ಮನ್ತಲೆ ತೆಂಕಾ ಸಾಂಗುನ್, ಜಾಕೊಬಾಕ್ ಅನಿ ಹುರಲ್ಲ್ಯಾ ಭಾವಾಕ್ನಿಬಿ ಹಿ ಸಂಗ್ತಿಯಾ ಕಳ್ವಾ ಮನುನ್ ಸಾಂಗ್ಲ್ಯಾನ್, ಮಾನಾ ಪೆದ್ರು ಥೈತ್ನಾ ದುಸ್ರ್ಯಾಕ್ಡೆ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 12:17
28 ತಿಳಿವುಗಳ ಹೋಲಿಕೆ  

ಸಹಸ್ರಾಧಿಪತಿಯ ಅಪ್ಪಣೆ ಪಡೆದುಕೊಂಡು, ಪೌಲನು ಮೆಟ್ಟಲುಗಳ ಮೇಲೆ ನಿಂತುಕೊಂಡು ಜನಸಮೂಹಕ್ಕೆ ಸುಮ್ಮನಿರುವಂತೆ ಸನ್ನೆಮಾಡಲು, ಅವರು ಬಹು ನಿಶ್ಶಬ್ದರಾದಾಗ ಅವನು ಹೀಬ್ರೂ ಭಾಷೆಯಲ್ಲಿ ಅವರಿಗೆ ಹೀಗೆಂದನು:


ಆದರೆ ಯೆಹೂದ್ಯರು ಅಲೆಕ್ಸಾಂದ್ರ ಎಂಬುವನನ್ನು ಮುಂದಕ್ಕೆ ತಳ್ಳಿದರು. ಜನಸಮೂಹದಲ್ಲಿದ್ದ ಕೆಲವರು ಅವನಿಗೆ ವಿಷಯ ತಿಳಿಸಿದರು. ಆಗ ಅಲೆಕ್ಸಾಂದ್ರನು, ಜನರ ಎದುರಿನಲ್ಲಿ ವಾದಿಸಲಿಕ್ಕಾಗುವಂತೆ ಕೈಸನ್ನೆ ಮಾಡಿದನು.


ಪೌಲನು ಎದ್ದು ನಿಂತು, ಕೈಸನ್ನೆ ಮಾಡಿ ಹೀಗೆ ಹೇಳಿದನು: “ಇಸ್ರಾಯೇಲ್ ಜನರೇ, ದೇವರಲ್ಲಿ ಭಯಭಕ್ತಿಯುಳ್ಳವರೇ, ಕೇಳಿರಿ!


ಮರುದಿನ ನಾವೆಲ್ಲರೂ ಪೌಲನೊಂದಿಗೆ ಯಾಕೋಬನನ್ನು ನೋಡಲು ಹೋದೆವು. ಅಲ್ಲಿ ಎಲ್ಲಾ ಸಭೆಹಿರಿಯರೂ ಇದ್ದರು.


ಅವರು ಹೇಳಿ ಮುಗಿಸಿದಾಗ, ಯಾಕೋಬನು ಮಾತನಾಡಿ, “ಸಹೋದರರೇ, ನನ್ನ ಮಾತುಗಳನ್ನು ಆಲಿಸಿರಿ,


ಏಕೆಂದರೆ ಯಾಕೋಬನ ಕಡೆಯಿಂದ ಕೆಲವರು ಬರುವುದಕ್ಕೆ ಮುಂಚೆ ಪೇತ್ರನು ಯೆಹೂದ್ಯರಲ್ಲದವರೊಡನೆ ಊಟಮಾಡುತ್ತಿದ್ದನು. ಅವರು ಬಂದ ಮೇಲೆ ಯೆಹೂದ್ಯರಿಗೆ ಅವನು ಭಯಪಟ್ಟು ಯೆಹೂದ್ಯರಲ್ಲದವರಿಂದ ತನ್ನನ್ನು ಪ್ರತ್ಯೇಕಿಸಿಕೊಂಡನು.


ಸಭೆಯ ಸ್ತಂಭಗಳಂತಿರುವ ನಾಯಕರಾದ ಯಾಕೋಬ, ಪೇತ್ರ ಹಾಗೂ ಯೋಹಾನರು ನನಗೆ ಕೊಡಲಾದ ಕೃಪೆಯನ್ನು ಗ್ರಹಿಸಿಕೊಂಡರು. ಆಗ ಅವರು, ನನಗೂ ಬಾರ್ನಬನಿಗೂ ಅನ್ಯೋನ್ಯತೆಯ ಬಲಗೈಯನ್ನು ಕೊಟ್ಟರು. ಹೀಗೆ ನಾವು ಯೆಹೂದ್ಯರಲ್ಲದವರ ಬಳಿಗೂ ಅವರು ಯೆಹೂದ್ಯರ ಬಳಿಗೂ ಹೋಗುವಂತೆ ತೀರ್ಮಾನವಾಯಿತು.


ಆದರೆ ಕರ್ತ ಯೇಸುವಿನ ಸಹೋದರನಾದ ಯಾಕೋಬನನ್ನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ನಾನು ಕಾಣಲಿಲ್ಲ.


ತರುವಾಯ ಕ್ರಿಸ್ತ ಯೇಸು ಯಾಕೋಬನಿಗೂ ಆಮೇಲೆ ಅಪೊಸ್ತಲರೆಲ್ಲರಿಗೂ ಕಾಣಿಸಿಕೊಂಡರು.


ಹೀಗಿರುವುದರಿಂದ ಯೇಸು ಯೆಹೂದ್ಯರ ಮಧ್ಯದಲ್ಲಿ ಬಹಿರಂಗವಾಗಿ ತಿರುಗಾಡಲಿಲ್ಲ. ಆದರೆ ಅವರು ಅಲ್ಲಿಂದ ಅರಣ್ಯಕ್ಕೆ ಸಮೀಪದಲ್ಲಿದ್ದ ಎಫ್ರಾಯೀಮ್ ಎಂಬ ಊರಿಗೆ ಹೋಗಿ ಅಲ್ಲಿ ತಮ್ಮ ಶಿಷ್ಯರ ಸಂಗಡ ವಾಸಮಾಡಿದರು.


ಆಗ ಅವರು ಯೇಸುವಿನ ಮೇಲೆ ಎಸೆಯಲು ಕಲ್ಲುಗಳನ್ನು ಎತ್ತಿಕೊಂಡರು. ಆದರೆ ಯೇಸು ಅಡಗಿಕೊಂಡು ದೇವಾಲಯದೊಳಗಿಂದ ಹೊರಟು ಹೋದರು.


ಒಂದು ಸ್ಥಳದಲ್ಲಿ ನಿಮಗೆ ಹಿಂಸೆಯಾದರೆ ಇನ್ನೊಂದು ಸ್ಥಳಕ್ಕೆ ಓಡಿಹೋಗಿರಿ. ಮನುಷ್ಯಪುತ್ರನು ಬರುವಷ್ಟರಲ್ಲಿ ಇಸ್ರಾಯೇಲಿನ ಪಟ್ಟಣಗಳ ಸಂಚಾರವನ್ನು ನೀವು ಮುಗಿಸುವುದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.


ದೇವರಿಗೂ ಕರ್ತ ಆಗಿರುವ ಯೇಸು ಕ್ರಿಸ್ತರಿಗೂ ದಾಸನಾಗಿರುವ ಯಾಕೋಬನು, ವಿವಿಧ ದೇಶಗಳಲ್ಲಿ ಚದರಿರುವ ಇಸ್ರಾಯೇಲರ ಹನ್ನೆರಡು ಗೋತ್ರದವರಿಗೆ ಬರೆಯುವುದು: ನಿಮಗೆ ಶುಭವಾಗಲಿ.


ಪೌಲ, ಸೀಲರು ಸೆರೆಮನೆಯಿಂದ ಹೊರಗೆ ಬಂದ ಮೇಲೆ ಲುದ್ಯಳ ಮನೆಗೆ ಹೋಗಿ, ಅಲ್ಲಿ ಸಹೋದರರನ್ನು ಭೇಟಿಯಾಗಿ ಅವರನ್ನು ಪ್ರೋತ್ಸಾಹಿಸಿ, ಅಲ್ಲಿಂದ ಹೊರಟು ಹೋದರು.


ಸೀಮೋನ ಪೇತ್ರನು ಅವನಿಗೆ ಸನ್ನೆಮಾಡಿ, “ಅವರು ಯಾರ ವಿಷಯವಾಗಿ ಮಾತನಾಡಿದರು ಕೇಳು,” ಎಂದು ಹೇಳಿದನು.


ಆಮೇಲೆ ಯೇಸು ಯೊರ್ದನ್ ನದಿಯನ್ನು ದಾಟಿ ಯೋಹಾನನು ಮೊದಲು ದೀಕ್ಷಾಸ್ನಾನ ಮಾಡಿಸುತ್ತಿದ್ದ ಸ್ಥಳಕ್ಕೆ ಬಂದು, ಅಲ್ಲಿಯೇ ವಾಸಮಾಡಿದರು.


ಇವುಗಳಾದ ಮೇಲೆ ಯೇಸು ಗಲಿಲಾಯದ ಪ್ರಾಂತದಲ್ಲಿ ಸಂಚಾರ ಮಾಡಿದರು. ಯೆಹೂದ್ಯರು ಯೇಸುವನ್ನು ಕೊಲ್ಲುವುದಕ್ಕೆ ಹುಡುಕುತ್ತಿದ್ದುದರಿಂದ ಯೂದಾಯದಲ್ಲಿ ಸಂಚರಿಸಲು ಅವರು ಇಷ್ಟಪಡಲಿಲ್ಲ.


ಜಕರೀಯನು ಹೊರಗೆ ಬಂದಾಗ, ಅವರೊಂದಿಗೆ ಏನೂ ಮಾತನಾಡಲಾಗಲಿಲ್ಲ. ಅವನು ಅವರಿಗೆ ಸನ್ನೆಮಾಡುತ್ತಾ ಮೂಕನಾಗಿಯೇ ಇದ್ದುದರಿಂದ, ಅವರು ದೇವಾಲಯದಲ್ಲಿ ಅವನಿಗೆ ಏನೋ ದರ್ಶನವಾಗಿರಬೇಕೆಂದು ಗ್ರಹಿಸಿದರು.


ಅವರು ದಬ್ಬಾಳಿಕೆಯಾದ ನ್ಯಾಯತೀರಿಸುತ್ತಾರೆ, ಹಸಿದವರಿಗೆ ಆಹಾರವನ್ನು ಕೊಡುತ್ತಾರೆ. ಯೆಹೋವ ದೇವರು ಸೆರೆಯವರನ್ನು ಬಿಡಿಸುತ್ತಾರೆ.


ಸಮಸ್ತ ದೇವಭಕ್ತರೇ, ಬಂದು ಕೇಳಿರಿ. ದೇವರು ನನಗೆ ಮಾಡಿದ್ದನ್ನು ನಾನು ನಿಮಗೆ ತಿಳಿಸುವೆನು.


ಈತನು ಬಡಗಿಯಲ್ಲವೇ? ಈತನು ಮರಿಯಳ ಮಗನಲ್ಲವೇ? ಈತನು ಯಾಕೋಬ, ಯೋಸೆ, ಯೂದ ಮತ್ತು ಸೀಮೋನರ ಅಣ್ಣನಲ್ಲವೇ? ಈತನ ತಂಗಿಯರು ನಮ್ಮಲ್ಲಿ ಇದ್ದಾರಲ್ಲವೇ?” ಎಂದು ಹೇಳಿ, ಯೇಸುವಿನ ವಿಷಯವಾಗಿ ಬೇಸರಗೊಂಡರು.


ಆ ದಿನಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ವಿಶ್ವಾಸಿಗಳು ಸೇರಿದ್ದರು. ಅವರ ನಡುವೆ ಪೇತ್ರನು ಎದ್ದು ನಿಂತು, ಹೀಗೆಂದನು:


ಆದರೆ ಪೇತ್ರನು ಬಾಗಿಲು ತಟ್ಟುತ್ತಲೇ ಇರಲು, ಅವರು ಹೋಗಿ ಬಾಗಿಲು ತೆರೆಯಲು ಅವನನ್ನು ಕಂಡು ಅತ್ಯಾಶ್ಚರ್ಯಗೊಂಡರು.


ಬೆಳಗಾದ ಮೇಲೆ ಪೇತ್ರನಿಗೆ ಏನಾಯಿತೆಂದು ಸೈನಿಕರ ನಡುವೆ ಬಹಳಷ್ಟು ಗೊಂದಲವಿತ್ತು.


ಅಲ್ಲಿದ್ದ ಸಹೋದರರು ನಾವು ಬರುತ್ತೇವೆಂಬ ವಿಷಯವನ್ನು ಕೇಳಿ ನಮ್ಮನ್ನು ಎದುರುಗೊಳ್ಳಲು ಅಪ್ಪಿಯ ಪೇಟೆಗೂ ತ್ರಿಛತ್ರದ ಬಳಿಗೂ ಬಂದರು. ಪೌಲನು ಅವರನ್ನು ನೋಡಿ ದೇವರ ಸ್ತುತಿ ಮಾಡಿ ಧೈರ್ಯ ತಂದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು