Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 12:3 - ಕನ್ನಡ ಸಮಕಾಲಿಕ ಅನುವಾದ

3 ಇದರಿಂದ ಯೆಹೂದ್ಯರಿಗೆ ಮೆಚ್ಚಿಕೆಯಾಯಿತೆಂದು ತಿಳಿದಾಗ, ಅವನು ಪೇತ್ರನನ್ನು ಬಂಧಿಸಿದನು. ಇದು ಹುಳಿಯಿಲ್ಲದ ರೊಟ್ಟಿಯ ಹಬ್ಬದ ಸಮಯದಲ್ಲಿ ನಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇದು ಯೆಹೂದ್ಯರಿಗೆ ಮೆಚ್ಚಿಕೆಯಾಗಿದೆ ಎಂದು ತಿಳಿದು, ಅಷ್ಟಕ್ಕೆ ನಿಲ್ಲದೆ ಪೇತ್ರನನ್ನೂ ಬಂಧಿಸಿದನು. ಆ ಕಾಲದಲ್ಲಿ ಪಸ್ಕಹಬ್ಬ ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ ನಡೆಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇದರಿಂದ ಯೆಹೂದ್ಯರಿಗೆ ಮೆಚ್ಚುಗೆಯಾಯಿತೆಂದು ತಿಳಿದು ಪೇತ್ರನನ್ನು ಬಂಧಿಸಿದನು. (ಆಗ ಹುಳಿರಹಿತ ರೊಟ್ಟಿಯ ಹಬ್ಬ ನಡೆಯುತ್ತಿತ್ತು).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇದು ಯೆಹೂದ್ಯರಿಗೆ ಮೆಚ್ಚಿಕೆಯಾಗಿದೆ ಎಂದು ನೋಡಿ ಅಷ್ಟಕ್ಕೆ ನಿಲ್ಲದೆ ಪೇತ್ರನನ್ನೂ ಹಿಡಿಸಿದನು. ಆ ಕಾಲದಲ್ಲಿ ಹುಳಿಯಿಲ್ಲದ ರೊಟ್ಟಿಯ ಹಬ್ಬ ನಡೆಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೂದ್ಯರು ಇದನ್ನು ಮೆಚ್ಚಿಕೊಂಡರೆಂಬುದು ಹೆರೋದನಿಗೆ ತಿಳಿಯಿತು. ಆದ್ದರಿಂದ ಅವನು ಪೇತ್ರನನ್ನು ಬಂಧಿಸಿ (ಇದು ನಡೆದದ್ದು ಯೆಹೂದ್ಯರ ಪಸ್ಕಹಬ್ಬದ ಕಾಲದಲ್ಲಿ) ಸೆರೆಮನೆಗೆ ಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಜುದೆವಾಂಚ್ಯಾ ಲೊಕಾಕ್ನಿ ಹೆ ಸಗ್ಳೆ ಬರೆ ದಿಸ್ಲಿ ಮನ್ತಲೆ ಹೆರೊದಾನ್ ಕಳ್ವುನ್ ಘೆಟ್ಲ್ಯಾನ್, ತಸೆ ಹೊವ್ನ್ ತೆನಿ ಪೆದ್ರುಕ್ ಭಾಂದುನ್ ಬಂಧಿಖಾನ್ಯಾತ್ ಘಾಲುಕ್ ಲಾವ್ಲ್ಯಾನ್, ತನ್ನಾ ಫುಗ್ ನಸಲ್ಲ್ಯಾ ಭಾಕ್ರಿಯಾಂಚೊ ಸನ್ ಚಲಿತ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 12:3
18 ತಿಳಿವುಗಳ ಹೋಲಿಕೆ  

“ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ಅಬೀಬ ತಿಂಗಳಿನ ನೇಮಕವಾದ ಸಮಯದಲ್ಲಿ ಏಳು ದಿನಗಳವರೆಗೆ ನಾನು ನಿಮಗೆ ಆಜ್ಞಾಪಿಸಿದ ಪ್ರಕಾರ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಕೆಂದರೆ ನೀವು ಆ ತಿಂಗಳಲ್ಲೇ ಈಜಿಪ್ಟಿನಿಂದ ಹೊರಗೆ ಬಂದಿದ್ದೀರಿ. “ಒಬ್ಬರೂ ಕಾಣಿಕೆಯಿಲ್ಲದೆ ಬರಿಗೈಯಿಂದ ನನ್ನ ಸನ್ನಿಧಿಗೆ ಬರಬಾರದು.


ಎರಡು ವರ್ಷಗಳು ಕಳೆದವು. ಫೇಲಿಕ್ಸನ ಬದಲಾಗಿ ಪೊರ್ಸಿಯ ಫೆಸ್ತನು ಎಂಬುವನು ರಾಜ್ಯಪಾಲನಾಗಿ ಬಂದನು. ಫೇಲಿಕ್ಸನು ಯೆಹೂದ್ಯರಿಗೆ ಮೆಚ್ಚುಗೆಯನ್ನು ಗಳಿಸಬಯಸಿದವನಾಗಿ ಪೌಲನನ್ನು ಸೆರೆಮನೆಯಲ್ಲಿಯೇ ಬಿಟ್ಟುಹೋದನು.


ಅವರು ದೇವರಿಂದ ಬರುವ ಹೊಗಳಿಕೆಗಿಂತ ಮನುಷ್ಯರ ಹೊಗಳಿಕೆಯನ್ನೇ ಹೆಚ್ಚಾಗಿ ಪ್ರೀತಿಸಿದರು.


ಫೆಸ್ತನು ಯೆಹೂದ್ಯರ ಮೆಚ್ಚುಗೆಯನ್ನು ಗಳಿಸಲು ಬಯಸಿ ಪೌಲನಿಗೆ, “ನೀನು ಯೆರೂಸಲೇಮಿಗೆ ಹೋಗಿ, ಅಲ್ಲಿ ನನ್ನೆದುರಿನಲ್ಲಿ ಈ ದೂರುಗಳ ನ್ಯಾಯವಿಚಾರಣೆಗಾಗಿ ಒಪ್ಪಿಕೊಳ್ಳುವಿಯೋ?” ಎಂದು ಕೇಳಿದನು.


ನಾನು ಈಗ ಯಾರ ಅನುಮೋದವನ್ನು ಗಳಿಸಲು ಯತ್ನಿಸುತ್ತಿದ್ದೇನೆ? ಮಾನವರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸಲು ಪ್ರಯತಿಸುತ್ತಿದ್ದೇನೋ? ಇನ್ನೂ ಮನುಷ್ಯರನ್ನೇ ಮೆಚ್ಚಿಸುವವನಾಗಿದ್ದರೆ, ನಾನು ಕ್ರಿಸ್ತ ಯೇಸುವಿನ ದಾಸನಾಗಿರಲಾರೆ.


ಹುಳಿಯಿಲ್ಲದ ರೊಟ್ಟಿಯ ಹಬ್ಬದ ನಂತರ ನಾವು ಫಿಲಿಪ್ಪಿಯಿಂದ ಸಮುದ್ರ ಮಾರ್ಗವಾಗಿ ಪ್ರಯಾಣಮಾಡಿ, ಐದು ದಿನಗಳ ತರುವಾಯ ತ್ರೋವದಲ್ಲಿದ್ದ ಇತರರೊಂದಿಗೆ ಸೇರಿ, ಅಲ್ಲಿ ಏಳು ದಿನ ಇದ್ದೆವು.


ದೇವರು ನಮ್ಮನ್ನು ಅನುಮೋದಿಸಿ ನಮ್ಮ ವಶಕ್ಕೆ ಸುವಾರ್ತೆಯನ್ನು ಒಪ್ಪಿಸಿಕೊಟ್ಟಿದ್ದಾರೆ. ಹಾಗಿರುವುದರಿಂದ, ನಾವು ಮನುಷ್ಯರನ್ನು ಮೆಚ್ಚಿಸದೆ ನಮ್ಮ ಹೃದಯಗಳನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತೇವೆ.


ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, “ನೀನು ಯುವಕನಾಗಿದ್ದಾಗ ನೀನೇ ನಿನ್ನ ಉಡುಪನ್ನು ಧರಿಸಿಕೊಂಡು ಇಷ್ಟ ಬಂದ ಕಡೆಗೆ ತಿರುಗಾಡುತ್ತಿದ್ದೆ. ಆದರೆ ನೀನು ವೃದ್ಧನಾದಾಗ ನಿನ್ನ ಕೈಗಳನ್ನು ಚಾಚುವೆ, ಆಗ ಮತ್ತೊಬ್ಬನು ನಿನ್ನ ನಡುವನ್ನು ಕಟ್ಟಿ ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ಹೊತ್ತುಕೊಂಡು ಹೋಗುವನು,” ಎಂದರು.


ಅದಕ್ಕೆ ಯೇಸು, “ಪರಲೋಕದಿಂದ ನಿನಗೆ ಕೊಟ್ಟ ಹೊರತು ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪವಿದೆ,” ಎಂದು ಉತ್ತರಕೊಟ್ಟರು.


ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು, “ನೀವು ಪಸ್ಕದ ಊಟ ಮಾಡಲು ನಾವು ನಿಮಗಾಗಿ ಎಲ್ಲಿ ಸಿದ್ಧಮಾಡಬೇಕೆಂದು ಬಯಸುತ್ತೀರಿ?” ಎಂದು ಕೇಳಿದರು.


ಮನುಷ್ಯರ ವಿರುದ್ಧ ನಿಮ್ಮ ಕೋಪವು ನಿಮಗೆ ಘನವನ್ನು ತರುವುದು. ಉಳಿದಿರುವವರು ಕೋಪಕ್ಕೆ ತುತ್ತಾಗುವುದಿಲ್ಲ.


ಪೇತ್ರ, ಯೋಹಾನರ ಧೈರ್ಯವನ್ನು ಅವರು ಕಂಡಾಗ, ಇವರು ವಿದ್ಯೆ ಕಲಿಯದ ಸಾಮಾನ್ಯ ಜನರೆಂದು ತಿಳಿದು ಬಹು ಆಶ್ಚರ್ಯಚಕಿತರಾಗಿ, ಇವರು ಯೇಸುವಿನೊಂದಿಗೆ ಇದ್ದವರು ಎಂಬುದನ್ನು ಗುರುತಿಸಿಕೊಂಡರು.


ಆಗ ಹನ್ನೊಂದು ಜನರೊಂದಿಗೆ ಪೇತ್ರನು ಎದ್ದು ನಿಂತುಕೊಂಡು, ಜನಸಮೂಹವನ್ನು ಉದ್ದೇಶಿಸಿ ಹೇಳಿದ್ದೇನೆಂದರೆ: “ಯೆಹೂದ್ಯರೇ, ಯೆರೂಸಲೇಮಿನ ಸರ್ವನಿವಾಸಿಗಳೇ, ಇದರ ಬಗ್ಗೆ ನಾನು ವಿವರಿಸುತ್ತೇನೆ, ಕೇಳಿರಿ. ನಾನು ಹೇಳುವುದನ್ನು ಜಾಗರೂಕತೆಯಿಂದ ಆಲಿಸಿರಿ.


ಪೇತ್ರನನ್ನು ಬಂಧಿಸಿದ ನಂತರ ಅವನನ್ನು ಸೆರೆಮನೆಯಲ್ಲಿ ಹಾಕಿದನು. ಪೇತ್ರನನ್ನು ಕಾಯಲು ನಾಲ್ಕು ದಳಗಳನ್ನು ನೇಮಿಸಿದನು. ಒಂದೊಂದು ದಳದಲ್ಲಿಯೂ ನಾಲ್ಕು ಸಿಪಾಯಿಗಳಿದ್ದರು. ಪಸ್ಕಹಬ್ಬ ಮುಗಿದ ತರುವಾಯ ಪೇತ್ರನನ್ನು ಬಹಿರಂಗ ವಿಚಾರಣೆಗೆ ತರಬೇಕೆಂದು ಉದ್ದೇಶಿಸಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು