Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 12:4 - ಕನ್ನಡ ಸಮಕಾಲಿಕ ಅನುವಾದ

4 ಪೇತ್ರನನ್ನು ಬಂಧಿಸಿದ ನಂತರ ಅವನನ್ನು ಸೆರೆಮನೆಯಲ್ಲಿ ಹಾಕಿದನು. ಪೇತ್ರನನ್ನು ಕಾಯಲು ನಾಲ್ಕು ದಳಗಳನ್ನು ನೇಮಿಸಿದನು. ಒಂದೊಂದು ದಳದಲ್ಲಿಯೂ ನಾಲ್ಕು ಸಿಪಾಯಿಗಳಿದ್ದರು. ಪಸ್ಕಹಬ್ಬ ಮುಗಿದ ತರುವಾಯ ಪೇತ್ರನನ್ನು ಬಹಿರಂಗ ವಿಚಾರಣೆಗೆ ತರಬೇಕೆಂದು ಉದ್ದೇಶಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನನ್ನು ಪಸ್ಕ ಹಬ್ಬವಾದ ಮೇಲೆ ಜನರ ಮುಂದೆ ತರಿಸಬೇಕೆಂಬ ಯೋಚನೆಯಿಂದ ಸೆರೆಯಲ್ಲಿ ಹಾಕಿಸಿ ಅವನನ್ನು ಕಾಯಲಿಕ್ಕೆ ನಾಲ್ಕು ನಾಲ್ಕು ಸಿಪಾಯಿಗಳಿದ್ದ ನಾಲ್ಕು ಗುಂಪುಗಳ ವಶಕ್ಕೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಪೇತ್ರನನ್ನು ಬಂಧಿಸಿದ ಮೇಲೆ ಸೆರೆಮನೆಯಲ್ಲಿಟ್ಟು ಅವನನ್ನು ಕಾಯಲು ನಾಲ್ಕು ನಾಲ್ಕು ಸೈನಿಕರಿದ್ದ ಚತುರ್ದಳಕ್ಕೆ ವಹಿಸಿದನು. ಪಾಸ್ಕಹಬ್ಬದ ನಂತರ ಪೇತ್ರನನ್ನು ಬಹಿರಂಗ ವಿಚಾರಣೆಗೆ ಗುರಿಪಡಿಸಲು ಉದ್ದೇಶಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನನ್ನು ಪಸ್ಕಹಬ್ಬವಾದ ಮೇಲೆ ಜನರ ಮುಂದೆ ತರಿಸಬೇಕೆಂಬ ಯೋಚನೆಯಿಂದ ಸೆರೆಯಲ್ಲಿ ಹಾಕಿಸಿ ಅವನನ್ನು ಕಾಯಲಿಕ್ಕೆ ನಾಲ್ಕು ನಾಲ್ಕು ಸಿಪಾಯಿಗಳಿದ್ದ ನಾಲ್ಕು ಗುಂಪುಗಳ ವಶಕ್ಕೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಹದಿನಾರು ಮಂದಿ ಸಿಪಾಯಿಗಳು ಪೇತ್ರನನ್ನು ಕಾಯುತ್ತಿದ್ದರು. ಪಸ್ಕಹಬ್ಬದ ಕಾಲ ಮುಗಿದೊಡನೆ ಪೇತ್ರನನ್ನು ಜನರ ಮುಂದೆ ನಿಲ್ಲಿಸಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಸೊಳಾ ಸೈನಿಕಾ ಪೆದ್ರುಕ್ ರಾಕ್ವಲಿ ಹೊತ್ತೆ, ಪಾಸ್ಕಾಚೊ ಸನ್ ಸರಲ್ಯಾ ತನ್ನಾ ತೆಕಾ ಲೊಕಾಂಚ್ಯಾ ಇದ್ರಾಕ್ ಹಾನುನ್ ಇಬೆ ಕರುಚೆ ಮನುನ್ ಘೆಟಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 12:4
22 ತಿಳಿವುಗಳ ಹೋಲಿಕೆ  

ಆದರೆ ಅವನು ಯೇಸುವಿಗೆ, “ಕರ್ತದೇವರೇ, ನಾನು ನಿಮ್ಮ ಜೊತೆಯಲ್ಲಿ ಸೆರೆಮನೆಗೆ ಹೋಗುವುದಕ್ಕೂ ಸಾಯುವುದಕ್ಕೂ ಸಿದ್ಧನಾಗಿದ್ದೇನೆ,” ಎಂದನು.


ಮನುಷ್ಯನ ಹೃದಯದಲ್ಲಿ ಅನೇಕ ಯೋಜನೆಗಳಿವೆ; ಆದರೂ ಯೆಹೋವ ದೇವರ ಸಂಕಲ್ಪವೇ ಈಡೇರುವುದು.


“ಆದರೆ ಇವೆಲ್ಲವುಗಳಿಗಿಂತ ಮೊದಲು ಅವರು ನಿಮ್ಮನ್ನು ಹಿಡಿದು, ಹಿಂಸಿಸಿ ಸಭಾಮಂದಿರಗಳಿಗೂ ಸೆರೆಮನೆಗಳಿಗೂ ಒಪ್ಪಿಸಿ, ನನ್ನ ಹೆಸರಿನ ನಿಮಿತ್ತ ಅರಸುಗಳ ಮತ್ತು ಅಧಿಕಾರಿಗಳ ಮುಂದೆ ನಿಮ್ಮನ್ನು ತರುವರು.


ನಿಮ್ಮ ಶಕ್ತಿಯೂ ಚಿತ್ತವೂ ಮುಂಚಿತವಾಗಿಯೇ ಏನಾಗಬೇಕೆಂದು ನಿರ್ಣಯಿಸಿದ್ದನ್ನೇ ಅವರು ಮಾಡಿದರು.


ಅವರು ಪೇತ್ರ ಯೋಹಾನರನ್ನು ಬಂಧಿಸಿ, ಸಂಜೆಯಾದ್ದರಿಂದ ಮರುದಿನದವರೆಗೆ ಅವರನ್ನು ಸೆರೆಮನೆಯಲ್ಲಿ ಹಾಕಿದರು.


ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, “ನೀನು ಯುವಕನಾಗಿದ್ದಾಗ ನೀನೇ ನಿನ್ನ ಉಡುಪನ್ನು ಧರಿಸಿಕೊಂಡು ಇಷ್ಟ ಬಂದ ಕಡೆಗೆ ತಿರುಗಾಡುತ್ತಿದ್ದೆ. ಆದರೆ ನೀನು ವೃದ್ಧನಾದಾಗ ನಿನ್ನ ಕೈಗಳನ್ನು ಚಾಚುವೆ, ಆಗ ಮತ್ತೊಬ್ಬನು ನಿನ್ನ ನಡುವನ್ನು ಕಟ್ಟಿ ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ಹೊತ್ತುಕೊಂಡು ಹೋಗುವನು,” ಎಂದರು.


ಆದರೆ ಅವರು, “ಜನರಲ್ಲಿ ಗದ್ದಲವಾದೀತು, ಹಬ್ಬದಲ್ಲಿ ಬೇಡ,” ಎಂದರು.


“ಆಗ ಜನರು ನಿಮ್ಮನ್ನು ಹಿಂಸೆಪಡಿಸುವುದಕ್ಕಾಗಿ ಒಪ್ಪಿಸಿ ನಿಮ್ಮನ್ನು ಕೊಲ್ಲುವರು. ಇದಲ್ಲದೆ ನನ್ನ ಹೆಸರಿನ ನಿಮಿತ್ತವಾಗಿ ಎಲ್ಲಾ ಜನಾಂಗದವರು ನಿಮ್ಮನ್ನು ದ್ವೇಷಮಾಡುವರು.


ನಾಳೆಯ ವಿಷಯವಾಗಿ ಕೊಚ್ಚಿಕೊಳ್ಳಬೇಡ; ಏಕೆಂದರೆ ಒಂದು ದಿನದೊಳಗೆ ಏನಾಗುವುದೋ ನಿನಗೆ ತಿಳಿಯದು.


ಹನ್ನೆರಡನೆಯ ತಿಂಗಳಾದ ಆದಾರ್ ಮಾಸದ ಹದಿಮೂರನೆಯ ದಿನದಲ್ಲಿ, ಹಿರಿಯರೂ, ಕಿರಿಯರೂ, ಮಕ್ಕಳೂ, ಮಹಿಳೆಯರೂ, ಒಟ್ಟು ಎಲ್ಲಾ ಯೆಹೂದ್ಯರನ್ನು ಒಂದೇ ದಿನದಲ್ಲಿ ಕೊಂದುಹಾಕುವುದಕ್ಕೂ ನಾಶಮಾಡುವುದಕ್ಕೂ ಅವರ ಆಸ್ತಿಯನ್ನು ಕೊಳ್ಳೆ ಹೊಡೆಯುವದಕ್ಕೂ ಅರಸನ ಎಲ್ಲಾ ಪ್ರಾಂತಗಳಿಗೆ ಅಂಚೆಯವರ ಮೂಲಕ ಪತ್ರಗಳನ್ನು ಕಳುಹಿಸಲಾಯಿತು.


ಆದರೆ ಸೌಲನು ಸಭೆಯನ್ನು ಹಾಳುಮಾಡಲು ಪ್ರಾರಂಭಿಸಿದನು. ಅವನು ಮನೆಮನೆಗಳಿಗೆ ಹೋಗಿ ಸ್ತ್ರೀಪುರುಷರನ್ನು ಹೊರಗೆಳೆದು ಅವರನ್ನು ಸೆರೆಮನೆಯಲ್ಲಿ ಹಾಕಿಸಿದನು.


ಅವರು ಅಪೊಸ್ತಲರನ್ನು ಬಂಧಿಸಿ ಸಾರ್ವಜನಿಕ ಸೆರೆಮನೆಯಲ್ಲಿ ಹಾಕಿಸಿದರು.


ಸೈನಿಕರು ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ ಅವರ ವಸ್ತ್ರಗಳನ್ನು ತೆಗೆದು ಪ್ರತಿಯೊಬ್ಬ ಸೈನಿಕನಿಗೆ ಒಂದೊಂದು ಭಾಗದಂತೆ ನಾಲ್ಕು ಭಾಗಗಳನ್ನಾಗಿ ಹಂಚಿಕೊಂಡರು. ಅವರ ಒಳ ಅಂಗಿಯನ್ನು ಸಹ ತೆಗೆದುಕೊಂಡರು. ಆ ಒಳ ಅಂಗಿಯು ಹೊಲಿಗೆ ಇಲ್ಲದೆ ಮೇಲಿನಿಂದ ಕೆಳಗಿನವರೆಗೆ ಹೆಣೆದದ್ದಾಗಿತ್ತು.


ಕರ್ತದೇವರು ಆಜ್ಞಾಪಿಸದೆ ಇರುವಾಗ, ಸಂಭವಿಸಿ ನಡೆಯುವ ಹಾಗೆ ಹೇಳುವವನು ಯಾರು?


ಯೆಹೋವ ದೇವರು ಈಜಿಪ್ಟಿನಲ್ಲಿ ಮೋಶೆ ಆರೋನರ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,


ಪಸ್ಕದ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವುದಕ್ಕೆ ಇನ್ನೂ ಎರಡು ದಿವಸಗಳಿದ್ದಾಗ, ಮುಖ್ಯಯಾಜಕರೂ ನಿಯಮ ಬೋಧಕರೂ ಉಪಾಯದಿಂದ ಯೇಸುವನ್ನು ಹೇಗೆ ಹಿಡಿದು ಕೊಲ್ಲಬೇಕೆಂದು ಮಾರ್ಗ ಹುಡುಕುತ್ತಿದ್ದರು.


ಇದರಿಂದ ಯೆಹೂದ್ಯರಿಗೆ ಮೆಚ್ಚಿಕೆಯಾಯಿತೆಂದು ತಿಳಿದಾಗ, ಅವನು ಪೇತ್ರನನ್ನು ಬಂಧಿಸಿದನು. ಇದು ಹುಳಿಯಿಲ್ಲದ ರೊಟ್ಟಿಯ ಹಬ್ಬದ ಸಮಯದಲ್ಲಿ ನಡೆಯಿತು.


ಹೀಗೆ ಪೇತ್ರನು ಸೆರೆಮನೆಯಲ್ಲಿ ಬಂಧಿಸಲಾಗಿದ್ದಾಗ, ದೇವರ ಸಭೆಯು ಅವನಿಗೋಸ್ಕರವಾಗಿ ಆಸಕ್ತಿಯಿಂದ ದೇವರಿಗೆ ಪ್ರಾರ್ಥಿಸುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು