Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 12:5 - ಕನ್ನಡ ಸಮಕಾಲಿಕ ಅನುವಾದ

5 ಹೀಗೆ ಪೇತ್ರನು ಸೆರೆಮನೆಯಲ್ಲಿ ಬಂಧಿಸಲಾಗಿದ್ದಾಗ, ದೇವರ ಸಭೆಯು ಅವನಿಗೋಸ್ಕರವಾಗಿ ಆಸಕ್ತಿಯಿಂದ ದೇವರಿಗೆ ಪ್ರಾರ್ಥಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಪೇತ್ರನು ಸೆರೆಮನೆಯೊಳಗೆ ಕಾವಲಲ್ಲಿದ್ದಾಗ, ಸಭೆಯವರು ಅವನಿಗೋಸ್ಕರ ಆಸಕ್ತಿಯಿಂದ ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಪೇತ್ರನನ್ನು ಹೀಗೆ ಸೆರೆಯಲ್ಲಿಟ್ಟಿದ್ದಾಗ, ಸಭೆಯು ಅವನಿಗಾಗಿ ಶ್ರದ್ಧೆಯಿಂದ ದೇವರಿಗೆ ಪ್ರಾರ್ಥನೆಮಾಡುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಪೇತ್ರನು ಸೆರೆಮನೆಯೊಳಗೆ ಕಾವಲಲ್ಲಿದ್ದಾಗ ಸಭೆಯವರು ಆತನಿಗೋಸ್ಕರ ಆಸಕ್ತಿಯಿಂದ ದೇವರಿಗೆ ಪ್ರಾರ್ಥನೆಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಹೀಗೆ ಪೇತ್ರನು ಸೆರೆಮನೆಯಲ್ಲಿದ್ದಾಗ ಸಭೆಯವರು ಅವನಿಗಾಗಿ ಎಡಬಿಡದೆ ದೇವರಲ್ಲಿ ಪ್ರಾರ್ಥಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಪೆದ್ರು ಬಂದಿಖಾನ್ಯಾತ್ ರಾತಾನಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾತ್ಲಿ ಲೊಕಾ ತೆಚ್ಯಾ ಸಾಟ್ನಿ ಪುರಾ ಮನ್ ದಿವ್ನ್ ಮಾಗ್ನಿ ಕರಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 12:5
12 ತಿಳಿವುಗಳ ಹೋಲಿಕೆ  

ದೇಹದ ಒಂದು ಅಂಗ ಬಾಧೆಪಟ್ಟರೆ, ಎಲ್ಲಾ ಅಂಗಗಳು ಬಾಧೆಪಡುತ್ತದೆ. ಒಂದು ಅಂಗಕ್ಕೆ ಗೌರವ ದೊರೆತರೆ, ಅದರೊಂದಿಗೆ ಪ್ರತಿಯೊಂದು ಅಂಗವೂ ಆನಂದಪಡುತ್ತವೆ.


ನೀವು ಸ್ವಸ್ಥವಾಗಬೇಕಾದರೆ, ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು, ಅರಿಕೆಮಾಡಿ, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಪ್ರಾರ್ಥನೆಯು ಶಕ್ತಿಯುತವೂ ಪರಿಣಾಮಕಾರಿಯೂ ಆಗಿರುತ್ತದೆ.


ನೀವು ನಿಮ್ಮ ಪ್ರಾರ್ಥನೆಯಿಂದ ನಮಗೆ ಸಹಾಯಮಾಡಿರಿ. ಹೀಗೆ, ಬಹಳ ಜನರ ಪ್ರಾರ್ಥನೆಗಳಿಗೆ ಉತ್ತರವಾಗಿ ನಮಗೆ ದೊರಕಿದ ಕೃಪೆಯ ಮೆಚ್ಚುಗೆಗಾಗಿ, ಅನೇಕರು ನಮ್ಮ ಪರವಾಗಿ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುವರು.


“ಇನ್ನೂ ನಾನು ನಿಮಗೆ ನಿಜವಾಗಿ ಹೇಳುವುದೇನೆಂದರೆ: ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳುವ ಯಾವುದೇ ವಿಷಯಕ್ಕಾಗಿ ಭೂಮಿಯಲ್ಲಿ ಒಂದೇ ಮನಸ್ಸುಳ್ಳವರಾಗಿದ್ದರೆ, ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವುದು.


ಸೆರೆಯವರ ಸಂಗಡ ನೀವೂ ಜೊತೆಸೆರೆಯವರೆಂಬಂತೆ ಅವರನ್ನು ಜ್ಞಾಪಕಮಾಡಿಕೊಳ್ಳಿರಿ. ಕಷ್ಟ ಅನುಭವಿಸುವವರ ಸಂಗಡ ನೀವು ಸಹ ಕಷ್ಟ ಅನುಭವಿಸುವವರೆಂಬಂತೆ ನೆನೆಸಿರಿ.


ಅವನು ಇದನ್ನು ಗ್ರಹಿಸಿ, ಮಾರ್ಕನೆನಿಸಿಕೊಳ್ಳುವ ಯೋಹಾನನ ತಾಯಿ ಮರಿಯಳ ಮನೆಗೆ ಹೋದನು. ಅಲ್ಲಿ ಅನೇಕರು ಒಟ್ಟಾಗಿ ಕೂಡಿಬಂದು ಪ್ರಾರ್ಥನೆ ಮಾಡುತ್ತಿದ್ದರು.


ನಿರಾಶರಾಗದೆ ಯಾವಾಗಲೂ ಪ್ರಾರ್ಥಿಸಬೇಕೆಂದು ಯೇಸು ತಮ್ಮ ಶಿಷ್ಯರಿಗೆ ಒಂದು ಸಾಮ್ಯವನ್ನು ಹೇಳಿದರು.


ಪೇತ್ರನನ್ನು ಬಂಧಿಸಿದ ನಂತರ ಅವನನ್ನು ಸೆರೆಮನೆಯಲ್ಲಿ ಹಾಕಿದನು. ಪೇತ್ರನನ್ನು ಕಾಯಲು ನಾಲ್ಕು ದಳಗಳನ್ನು ನೇಮಿಸಿದನು. ಒಂದೊಂದು ದಳದಲ್ಲಿಯೂ ನಾಲ್ಕು ಸಿಪಾಯಿಗಳಿದ್ದರು. ಪಸ್ಕಹಬ್ಬ ಮುಗಿದ ತರುವಾಯ ಪೇತ್ರನನ್ನು ಬಹಿರಂಗ ವಿಚಾರಣೆಗೆ ತರಬೇಕೆಂದು ಉದ್ದೇಶಿಸಿದ್ದನು.


ಹೆರೋದನು ಅವನನ್ನು ವಿಚಾರಣೆಗೆ ತರಲಿಕ್ಕಿದ್ದ ದಿನದ ಹಿಂದಿನ ರಾತ್ರಿ ಪೇತ್ರನು ಸರಪಣಿಗಳಿಂದ ಬಂಧಿಸಲಾಗಿ ಇಬ್ಬರು ಸಿಪಾಯಿಗಳ ಮಧ್ಯೆ ನಿದ್ರಿಸುತ್ತಿದ್ದನು. ಕಾವಲುಗಾರರು ದ್ವಾರದ ಬಳಿಯಲ್ಲಿ ಕಾಯುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು