Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:19 - ಕನ್ನಡ ಸಮಕಾಲಿಕ ಅನುವಾದ

19 ಕಾನಾನ್ ದೇಶದಲ್ಲಿದ್ದ ಏಳು ರಾಜ್ಯಗಳನ್ನು ಜಯಿಸಿ, ಅವರ ದೇಶವನ್ನು ತಮ್ಮ ಜನರಿಗೆ ಬಾಧ್ಯವಾಗಿ ದಯಪಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಕಾನಾನ್ ದೇಶದಲ್ಲಿದ್ದ ಅನ್ಯಜನಗಳ ಏಳು ರಾಜ್ಯಗಳನ್ನು ನಿರ್ಮೂಲಮಾಡಿ, ಆ ಜನರ ದೇಶವನ್ನು ಅವರಿಗೆ ಸ್ವತ್ತಾಗಿ ಹಂಚಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಕಾನಾನ್ ನಾಡಿನ ಏಳು ಜನಾಂಗಗಳನ್ನು ನಾಶಮಾಡಿ ನಮ್ಮ ಜನರಿಗೆ ಆ ನಾಡನ್ನು ಸ್ವಾಸ್ತ್ಯವಾಗಿ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಕಾನಾನ್ ದೇಶದಲ್ಲಿದ್ದ ಅನ್ಯಜನಗಳ ಏಳು ರಾಜ್ಯಗಳನ್ನು ನಿರ್ಮೂಲ ಮಾಡಿ ಆ ಜನರ ದೇಶವನ್ನು ಅವರಿಗೆ ಬಾಧ್ಯವಾಗಿ ಹಂಚಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಕಾನಾನ್ ನಾಡಿನ ಏಳು ಜನಾಂಗಗಳನ್ನು ನಾಶಮಾಡಿ ತನ್ನ ಜನರಿಗೆ ಆ ನಾಡನ್ನು ಸ್ವಾಸ್ತ್ಯವಾಗಿ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಕಾನಾನ್ ಮನ್ತಲ್ಯಾ ಪ್ರಾಂತ್ಯಾತ್ಲ್ಯಾ ಸಾತ್ ಘರಾನಾಂಚ್ಯಾ ಲೊಕಾಕ್ನಿ ನಾಸ್‍ ಕರುನ್ ಅಪ್ಲ್ಯಾ ಲೊಕಾಕ್ನಿ ತ್ಯಾ ಗಾಂವಾಚೊ ಅದಿಕಾರ್ ಸ್ವತಾಚೆ ಕರುನ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:19
16 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವ ದೇವರು ನೀವು ಸ್ವತಂತ್ರಿಸಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮನ್ನು ಬರಮಾಡಿದಾಗ, ಅವರು ನಿಮಗಿಂತ ದೊಡ್ಡವರೂ ಬಲಿಷ್ಠರೂ ಆದ ಏಳು ಜನಾಂಗಗಳನ್ನು ಎಂದರೆ, ಗಿರ್ಗಾಷಿಯರನ್ನೂ ಹಿತ್ತಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಈ ಪ್ರಕಾರ ಬಹಳ ಜನಾಂಗಗಳನ್ನು ನಿಮ್ಮ ಮುಂದೆಯೇ ಹೊರಡಿಸುವರು.


ದೇವರು ಜನಾಂಗಗಳನ್ನು ಅವರ ಮುಂದೆ ಹೊರಗೆ ಹಾಕಿ, ಅವರ ಬಾಧ್ಯತೆಯನ್ನು ಹಂಚಿ, ಅವರ ಗುಡಾರಗಳಲ್ಲಿ ಇಸ್ರಾಯೇಲರನ್ನು ವಾಸಿಸುವಂತೆ ಮಾಡಿದರು.


ನಮ್ಮ ಪಿತೃಗಳು ದೇವದರ್ಶನ ಗುಡಾರವನ್ನು ಪಡೆದುಕೊಂಡು, ಯೆಹೋಶುವನ ನಾಯಕತ್ವದ ಕೆಳಗೆ ದೇವರು ಅವರೆದುರಿನಲ್ಲಿ ಹೊರದೊಬ್ಬಿದ ದೇಶಗಳ ನಾಡನ್ನು ವಶಪಡಿಸಿಕೊಂಡಾಗ ಅದನ್ನು ತಮ್ಮೊಂದಿಗೆ ತೆಗೆದುಕೊಂಡು ಬಂದರು. ದಾವೀದನ ಕಾಲದವರೆಗೂ ಆ ಗುಡಾರವು ಅಲ್ಲಿಯೇ ಇತ್ತು.


ಯಾಜಕನಾದ ಎಲಿಯಾಜರನೂ ನೂನನ ಮಗ ಯೆಹೋಶುವನೂ ಇಸ್ರಾಯೇಲರ ಗೋತ್ರಗಳ ಪಿತೃಗಳ ಹಿರಿಯರೂ ಶೀಲೋವಿನಲ್ಲಿ ದೇವದರ್ಶನ ಗುಡಾರದ ಬಾಗಿಲ ಬಳಿಯಲ್ಲಿ ಯೆಹೋವ ದೇವರ ಸಮ್ಮುಖದಲ್ಲಿ ಚೀಟುಹಾಕಿ ಹಂಚಿಕೊಟ್ಟ ಬಾಧ್ಯತೆಗಳು ಇವೇ. ಹೀಗೆ ಅವರು ದೇಶವನ್ನು ಹಂಚಿಕೊಳ್ಳುವ ಕೆಲಸವನ್ನು ಪೂರೈಸಿದರು.


ಯಾಜಕನಾದ ಎಲಿಯಾಜರನೂ ನೂನನ ಮಗನಾದ ಯೆಹೋಶುವನೂ ಇಸ್ರಾಯೇಲರ ಗೋತ್ರಗಳ ಮುಖ್ಯಸ್ಥರೂ ಜನರಿಗೆ ಸೊತ್ತಾಗಿ ಕೊಡಲು ಕಾನಾನ್ ದೇಶದಲ್ಲಿ ಇಸ್ರಾಯೇಲರು ಬಾಧ್ಯವಾಗಿ ಪ್ರದೇಶಗಳನ್ನು ಹೊಂದಿದರು.


ಅಮೋರಿಯರ ಅರಸನಾದ ಸೀಹೋನನನ್ನು, ಬಾಷಾನಿನ ಅರಸನಾದ ಓಗನನ್ನೂ, ಕಾನಾನಿನ ಎಲ್ಲಾ ಅರಸರನ್ನೂ ದಂಡಿಸಿದರು.


ಹಾಗೆಯೇ ಇಸ್ರಾಯೇಲರು ಹೋಗಿ, ಆ ದೇಶವನ್ನು ಸ್ವಾಧೀನಮಾಡಿಕೊಂಡರು. ನೀವು ಆ ದೇಶದ ನಿವಾಸಿಗಳಾದ ಕಾನಾನ್ಯರನ್ನು ಅವರ ಮುಂದೆ ಕುಗ್ಗಿಸಿ, ಅವರಿಗೆ ಸರಿತೋರಿದ ಪ್ರಕಾರ ಮಾಡುವುದಕ್ಕೆ ಅವರನ್ನೂ, ಅವರ ಅರಸರನ್ನೂ, ದೇಶದ ಜನರನ್ನೂ ಅವರ ಕೈಯಲ್ಲಿ ಒಪ್ಪಿಸಿಕೊಟ್ಟಿರಿ.


“ ‘ನೀವು ಯೊರ್ದನ್ ನದಿಯನ್ನು ದಾಟಿ ಯೆರಿಕೋವಿಗೆ ಬಂದಿರಿ. ಯೆರಿಕೋವಿನ ನಿವಾಸಿಗಳೂ ನಿಮ್ಮ ಸಂಗಡ ಯುದ್ಧಮಾಡಿದರು. ಹಾಗೆಯೇ ಅಮೋರಿಯರೂ ಪೆರಿಜೀಯರೂ ಕಾನಾನ್ಯರೂ ಹಿತ್ತಿಯರೂ ಗಿರ್ಗಾಷಿಯರೂ ಹಿವ್ವಿಯರೂ ಯೆಬೂಸಿಯರೂ ನಿಮ್ಮ ಸಂಗಡ ಯುದ್ಧಮಾಡಿದರು. ಆದರೆ ನಾನು ಅವರನ್ನು ನಿಮ್ಮ ಕೈಗೆ ಒಪ್ಪಿಸಿದೆನು.


ನಾನು ಯೊರ್ದನ್ ನದಿ ಮೊದಲುಗೊಂಡು ಪಶ್ಚಿಮಕ್ಕಿರುವ ಮೆಡಿಟೆರೆನಿಯನ್ ಸಮುದ್ರದವರೆಗೂ ರಾಷ್ಟ್ರಗಳನ್ನು ಸೋಲಿಸಿ, ಉಳಿದ ಸಕಲ ನಾಡನ್ನು ನಿಮ್ಮ ಗೋತ್ರಗಳಿಗೆ ಸೊತ್ತಾಗಿ ಕೊಟ್ಟಿದ್ದೇನೆ.


ಆಗ ಯೆಹೋಶುವನು ಅವರಿಗೆ ಶೀಲೋವಿನಲ್ಲಿ ಯೆಹೋವ ದೇವರ ಮುಂದೆ ಚೀಟುಗಳನ್ನು ಹಾಕಿದನು. ಅಲ್ಲಿ ಯೆಹೋಶುವನು ಇಸ್ರಾಯೇಲರಿಗೆ ನಾಡನ್ನು ಅವರ ಗೋತ್ರಗಳ ಪ್ರಕಾರ ಪಾಲುಗಳನ್ನು ಹಂಚಿಕೊಟ್ಟನು.


ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ನಿನಗೂ ನಿನ್ನ ತರುವಾಯ ನಿನ್ನ ಸಂತತಿಗೂ ಶಾಶ್ವತವಾದ ಸ್ವತ್ತನ್ನಾಗಿ ಕೊಟ್ಟು, ನಾನು ಅವರಿಗೆ ದೇವರಾಗಿರುವೆನು,” ಎಂದರು.


ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ, ತನ್ನ ಸಹೋದರನ ಮಗ ಲೋಟನನ್ನೂ, ತಾವು ಕೂಡಿಸಿಕೊಂಡಿದ್ದ ಎಲ್ಲಾ ಆಸ್ತಿಯನ್ನೂ, ಹಾರಾನಿನಲ್ಲಿ ಸಂಪಾದಿಸಿಕೊಂಡಿದ್ದ ಎಲ್ಲಾ ಜನರನ್ನೂ ತಮ್ಮ ಸಂಗಡ ಕರೆದುಕೊಂಡು ಕಾನಾನ್ ದೇಶಕ್ಕೆ ಸೇರಿದನು.


ಇಸ್ರಾಯೇಲು ಹೆಷ್ಬೋನಿನಲ್ಲಿಯೂ, ಅದರ ಗ್ರಾಮಗಳಲ್ಲಿಯೂ; ಅರೋಯೇರಿನಲ್ಲಿಯೂ, ಅದರ ಗ್ರಾಮಗಳಲ್ಲಿಯೂ; ಅರ್ನೋನಿನ ತೀರವಾದ ಎಲ್ಲಾ ಪಟ್ಟಣಗಳಲ್ಲಿಯೂ, ಮುನ್ನೂರು ವರ್ಷಗಳಿಂದ ವಾಸಿಸಿರುವಾಗ, ಇಷ್ಟರವರೆಗೆ ನೀವು ಅದನ್ನು ಬಿಡಿಸದೆ ಹೋದದ್ದೇನು?


ಇಸ್ರಾಯೇಲರು ಈಜಿಪ್ಟ್ ದೇಶದಿಂದ ಬಂದ ನಾನೂರ ಎಂಬತ್ತನೆಯ ವರುಷದಲ್ಲಿ ಇಸ್ರಾಯೇಲಿನ ಮೇಲೆ ಸೊಲೊಮೋನನ ಆಳಿಕೆಯ ನಾಲ್ಕನೆಯ ವರ್ಷದ, ಎರಡನೆಯ ತಿಂಗಳಾದ ಜಿವ್ ತಿಂಗಳಲ್ಲಿ ಅವನು ಯೆಹೋವ ದೇವರ ಆಲಯವನ್ನು ಕಟ್ಟಿಸಲು ಪ್ರಾರಂಭಿಸಿದನು.


ಅವರೇ ಅವುಗಳಿಗೋಸ್ಕರ ಚೀಟು ಹಾಕಿದ್ದಾರೆ. ಅವರ ಕೈಯೇ ಅದನ್ನು ಗೆರೆ ಎಳೆದು, ಅವರಿಗೆ ಹಂಚಿಕೊಟ್ಟಿದೆ. ಅವು ಅದನ್ನು ನಿರಂತರಕ್ಕೂ ವಶಮಾಡಿಕೊಳ್ಳುವುವು. ಅವು ತಲತಲಾಂತರಕ್ಕೂ ಅದರಲ್ಲಿ ವಾಸವಾಗಿರುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು