Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:22 - ಕನ್ನಡ ಸಮಕಾಲಿಕ ಅನುವಾದ

22 ದೇವರು ಸೌಲನನ್ನು ಅರಸುತನದಿಂದ ತೆಗೆದುಹಾಕಿ, ದೇವರು ದಾವೀದನನ್ನು ಅವರ ಅರಸನನ್ನಾಗಿ ಎಬ್ಬಿಸಿದರು. ಇವನನ್ನು ಕುರಿತು, ‘ಇಷಯನ ಮಗ ದಾವೀದನು ನನಗೆ ಸಿಕ್ಕಿದನು. ನನ್ನ ಹೃದಯಕ್ಕೆ ತಕ್ಕಂಥ ಮನುಷ್ಯನು; ಇವನು ನಾನು ಅಪೇಕ್ಷಿಸುವುದೆಲ್ಲವನ್ನೂ ಮಾಡುವನು,’ ಎಂದು ದೇವರು ತಾವೇ ಸಾಕ್ಷಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆ ಮೇಲೆ ದೇವರು ಅವನನ್ನು ತೆಗೆದುಹಾಕಿ ದಾವೀದನನ್ನು ಅವರ ಮೇಲೆ ಅರಸನನ್ನಾಗಿ ನೇಮಕಮಾಡಿ; ‘ಇಷಯನ ಮಗನಾದ ದಾವೀದನು ನನಗೆ ಸಿಕ್ಕಿದನು, ಅವನು ನನ್ನ ಹೃದಯಕ್ಕೆ ಒಪ್ಪುವ ಮನುಷ್ಯನು, ಅವನು ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವನು’ ಎಂಬುದಾಗಿ ಅವನ ವಿಷಯವಾಗಿ ಸಾಕ್ಷಿಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅನಂತರ ದೇವರು ಸೌಲನನ್ನು ತ್ಯಜಿಸಿ ದಾವೀದನನ್ನು ಅರಸನನ್ನಾಗಿ ನೇಮಿಸಿದರು. ಇವನ ಬಗ್ಗೆ ದೇವರು, “ಜೆಸ್ಸೆಯನ ಮಗ ದಾವೀದನು ನನಗೆ ಮೆಚ್ಚುಗೆಯಾದ ವ್ಯಕ್ತಿ; ಇವನು ನನ್ನ ಆಶೆ ಆಕಾಂಕ್ಷೆಗಳನ್ನೆಲ್ಲಾ ಪೂರೈಸುವನು,” ಎಂದು ತಮ್ಮ ಒಪ್ಪಿಗೆಯನ್ನು ಸೂಚಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆಮೇಲೆ ದೇವರು ಅವನನ್ನು ತೆಗೆದುಹಾಕಿ ದಾವೀದನನ್ನು ಅವರ ಮೇಲೆ ಅರಸನನ್ನಾಗಿ ಮಾಡಿ - ಇಷಯನ ಮಗನಾದ ದಾವೀದನು ನನಗೆ ಸಿಕ್ಕಿದನು, ಅವನು ನನಗೆ ಒಪ್ಪುವ ಮನುಷ್ಯನು, ಅವನು ನನ್ನ ಇಷ್ಟವನ್ನೆಲ್ಲಾ ನೆರವೇರಿಸುವನು ಎಂಬದಾಗಿ ಅವನ ವಿಷಯದಲ್ಲಿ ಸಾಕ್ಷಿಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ದೇವರು ಸೌಲನನ್ನು ತೆಗೆದುಹಾಕಿದ ಮೇಲೆ ದಾವೀದನನ್ನು ಅವರ ರಾಜನನ್ನಾಗಿ ಮಾಡಿದನು. ‘ಇಷಯನ ಮಗನಾದ ದಾವೀದನು ನನಗೆ ಮೆಚ್ಚಿಗೆಯಾದವನು. ಅವನು ನನ್ನ ಅಪೇಕ್ಷೆಗೆ ತಕ್ಕಂತೆ ಕಾರ್ಯಗಳನ್ನು ಮಾಡುತ್ತಾನೆ’ ಎಂದು ದೇವರು ದಾವೀದನ ಬಗ್ಗೆ ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಸಾವ್ಲಾಕ್ ಕಾಡುನ್ ಘಾಟ್ಲ್ಯಾ ಮಾನಾ ದಾವಿದಾಕ್ ದೆವಾನ್ ತೆಂಚೊ ರಾಜಾ ಕರ್‍ಲ್ಯಾನ್, “ಕಿಸಿಯಾಚೊ ಲೆಕ್ ದಾವಿದ್ ಮಾಜ್ಯಾ ಮನಾ ಸಾರ್ಕೊ ಹೊವ್ನ್ ಹಾಯ್, ಅನಿ ತೊ ಮಾಜ್ಯಾ ಇಚ್ಚ್ಯಾ ಸಾರ್ಕೆಚ್ ಕಾಮಾ ಕರ್‍ತಾ” ಮನುನ್ ದೆವಾನ್ ದಾವಿದಾಚ್ಯಾ ವಿಶಯಾತ್ ಸಾಂಗ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:22
32 ತಿಳಿವುಗಳ ಹೋಲಿಕೆ  

ಏಕೆಂದರೆ ದಾವೀದನು ಹಿತ್ತಿಯನಾದ ಊರೀಯನ ವಿಷಯವೊಂದನ್ನು ಬಿಟ್ಟು, ತನ್ನ ಜೀವಿತದ ಸಮಸ್ತ ದಿವಸಗಳಲ್ಲಿ ಯೆಹೋವ ದೇವರು ತನಗೆ ಆಜ್ಞಾಪಿಸಿದ ಎಲ್ಲಾದಕ್ಕೆ ತೊಲಗದೆ, ಅವರ ದೃಷ್ಟಿಗೆ ಮೆಚ್ಚಿಕೆಯಾದದ್ದನ್ನು ಮಾಡಿದನು.


ಸಮುಯೇಲನು ಎಣ್ಣೆ ಇರುವ ಕೊಂಬನ್ನು ತೆಗೆದುಕೊಂಡು, ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕ ಮಾಡಿದನು. ಆ ದಿವಸದಲ್ಲೇ ಯೆಹೋವ ದೇವರ ಆತ್ಮರು ಕೂಡಲೆ ದಾವೀದನ ಮೇಲೆ ಇಳಿದು ಬಂದರು. ಅನಂತರ ಸಮುಯೇಲನು ಎದ್ದು ರಾಮಕ್ಕೆ ಹೋದನು.


ಯೆಹೋವ ದೇವರು ಸಮುಯೇಲನಿಗೆ, “ಇಸ್ರಾಯೇಲಿನ ಅರಸನಾಗಿರದ ಹಾಗೆ ನಾನು ಅಲಕ್ಷ್ಯಮಾಡಿದ ಸೌಲನಿಗೋಸ್ಕರ ನೀನು ಎಷ್ಟರವರೆಗೆ ದುಃಖವುಳ್ಳವನಾಗಿರುವೆ? ನೀನು ನಿನ್ನ ಕೊಂಬನ್ನು ತೈಲದಿಂದ ತುಂಬಿಸಿಕೊಂಡು ಬಾ. ಬೇತ್ಲೆಹೇಮಿನವನಾದ ಇಷಯನ ಬಳಿಗೆ ನಿನ್ನನ್ನು ಕಳುಹಿಸುವೆನು. ಏಕೆಂದರೆ ಅವನ ಮಕ್ಕಳಲ್ಲಿ ನಾನು ಒಬ್ಬನನ್ನು ಅರಸನಾಗಿ ಆಯ್ದುಕೊಂಡೆನು,” ಎಂದರು.


ಸಮುಯೇಲನು ಅವನಿಗೆ, “ನಿನ್ನ ಬಳಿಯಿಂದ ಇಸ್ರಾಯೇಲಿನ ರಾಜ್ಯವನ್ನು ಯೆಹೋವ ದೇವರು ಈ ಹೊತ್ತು ಕಿತ್ತು, ನಿನಗಿಂತ ಒಳ್ಳೆಯವನಾಗಿರುವ ನಿನ್ನ ನೆರೆಯವನಿಗೆ ಅದನ್ನು ಕೊಟ್ಟರು.


ಆದರೆ ಸಮುಯೇಲನು ಸೌಲನಿಗೆ, “ನಾನು ನಿನ್ನ ಸಂಗಡ ಹಿಂದಿರುಗಿ ಬರುವುದಿಲ್ಲ. ಏಕೆಂದರೆ ನೀನು ಯೆಹೋವ ದೇವರ ವಾಕ್ಯವನ್ನು ತಿರಸ್ಕರಿಸಿದ್ದೀ. ಯೆಹೋವ ದೇವರು ನಿನ್ನನ್ನು ಇಸ್ರಾಯೇಲರ ಮೇಲೆ ಅರಸನಾಗಿರದ ಹಾಗೆ ತಿರಸ್ಕಾರಮಾಡಿಬಿಟ್ಟರು,” ಎಂದು ಹೇಳಿದನು.


ದಾವೀದನು ದೇವರ ದಯೆಯನ್ನು ಹೊಂದಿದವನಾಗಿ ಯಾಕೋಬನ ದೇವರಿಗೆ ದೇವಾಲಯ ಕಟ್ಟಲು ತನಗೆ ಅಪ್ಪಣೆಯಾಗಬೇಕೆಂದು ದೇವರಿಗೆ ಕೇಳಿಕೊಂಡನು.


ಅಬಿಯಾಮನು, ತನ್ನ ಪಿತೃವಾದ ದಾವೀದನ ಹೃದಯದ ಪ್ರಕಾರ, ಅವನ ಹೃದಯವು ತನ್ನ ದೇವರಾದ ಯೆಹೋವ ದೇವರ ಮುಂದೆ ಪೂರ್ಣವಾಗಿರದೆ, ತನಗೆ ಮುಂಚೆ ಇದ್ದ ತನ್ನ ತಂದೆ ಮಾಡಿದ ಸಮಸ್ತ ಪಾಪಗಳಲ್ಲಿ ನಡೆದನು.


“ಈಗ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನೆಂದರೆ, ‘ಸೇನಾಧೀಶ್ವರ ಯೆಹೋವ ದೇವರು ನಿನಗೆ ತಿಳಿಸುವುದೇನೆಂದರೆ: ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ನಾನು ಕುರಿಯ ಹಟ್ಟಿಯಿಂದ ತೆಗೆದುಕೊಂಡು, ನನ್ನ ಜನರಾದ ಇಸ್ರಾಯೇಲರ ಮೇಲೆ ನಾಯಕನಾಗಿರುವಂತೆ ನೇಮಿಸಿದೆನು.


ಆಗ ಯೆಹೂದನ ಮನುಷ್ಯರು ಹೆಬ್ರೋನಿಗೆ ಬಂದು ಅಲ್ಲಿ ದಾವೀದನನ್ನು ಯೆಹೂದದವರ ಮೇಲೆ ಅರಸನನ್ನಾಗಿ ಅಭಿಷೇಕ ಮಾಡಿಸಿದರು. ಯಾಬೇಷ್ ಗಿಲ್ಯಾದಿನವರು ಸೌಲನನ್ನು ಸಮಾಧಿಮಾಡಿದರೆಂದು ದಾವೀದನಿಗೆ ತಿಳಿಸಿದಾಗ,


ಏಕೆಂದರೆ ಪ್ರತಿಭಟಿಸುವುದು ಮಂತ್ರತಂತ್ರಗಳಷ್ಟು ಪಾಪವಾಗಿದೆ. ಹಟಮಾರಿತನವು ದುಷ್ಟತನಕ್ಕೂ ವಿಗ್ರಹಾರಾಧನೆಗೂ ಸಮಾನವಾಗಿದೆ. ನೀನು ಯೆಹೋವ ದೇವರ ವಾಕ್ಯವನ್ನು ಅಲಕ್ಷ್ಯಮಾಡಿದ್ದರಿಂದ ಅವರು ನಿನ್ನನ್ನು ಅರಸನಾಗಿರದ ಹಾಗೆ ತಿರಸ್ಕರಿಸಿಬಿಟ್ಟಿದ್ದಾರೆ.”


ಹೃದಯವನ್ನು ಬಲ್ಲ ದೇವರು, ನಮಗೆ ಪವಿತ್ರಾತ್ಮ ದೇವರನ್ನು ಕೊಟ್ಟಂತೆಯೇ ಯಹೂದ್ಯರಲ್ಲದವರಿಗೂ ದಯಪಾಲಿಸಿ, ಅವರ ಬಗ್ಗೆ ಸಾಕ್ಷಿಕೊಟ್ಟರು.


ಆಮೇಲೆ ಇಸ್ರಾಯೇಲರು ತಿರುಗಿಕೊಂಡು ಅವರ ದೇವರಾದ ಯೆಹೋವ ದೇವರನ್ನು ಮತ್ತು ಅವರ ಅರಸನಾದ ದಾವೀದನನ್ನು ಹುಡುಕಿಕೊಂಡು, ಅಂತ್ಯ ದಿವಸಗಳಲ್ಲಿ ಯೆಹೋವ ದೇವರನ್ನೂ, ಆತನ ಒಳ್ಳೆಯತನವನ್ನೂ ಭಯಭಕ್ತಿಯಿಂದ ಪಡೆಯುವರು.


ಆಗ ಮಾತ್ರ ನಾನು ಯಾಕೋಬನ ಸಂತಾನದವರನ್ನು ತ್ಯಜಿಸುತ್ತಿದ್ದೆ. ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತತಿಯನ್ನು ಆಳತಕ್ಕ ಒಡೆಯನನ್ನು ದಾಸ ದಾವೀದನ ವಂಶದಿಂದ ಆರಿಸದೆ, ಆ ವಂಶವನ್ನು ನಿರಾಕರಿಸುತ್ತಿದ್ದೆ. ಆದರೆ ಈಗ ಗುಲಾಮಗಿರಿಯಿಂದ ಅವರನ್ನು ಬಿಡುಗಡೆಮಾಡುವೆನು. ಅವರಿಗೆ ಕರುಣೆಯನ್ನು ತೋರಿಸಿಯೇ ತೋರಿಸುವೆನು.’ ”


“ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.”


ಹೀಗೆಯೇ ಸೌಲನು ಯೆಹೋವ ದೇವರಿಗೆ ವಿರೋಧವಾಗಿ ಮಾಡಿದ ತನ್ನ ಅಪರಾಧದ ನಿಮಿತ್ತ ಸತ್ತುಹೋದನು. ಅವನು ಯೆಹೋವ ದೇವರ ವಾಕ್ಯವನ್ನು ಕೈಗೊಳ್ಳದೆ, ಅದಕ್ಕೆ ವಿರೋಧವಾಗಿ ನಡೆದು, ಯೆಹೋವ ದೇವರನ್ನು ವಿಚಾರಿಸದೆ, ಯಕ್ಷಿಣಿಗಾರರನ್ನು ವಿಚಾರಿಸಿದ್ದರಿಂದ,


ಆದರೆ ಸೌಲನ ಮೇಲಿದ್ದ ನನ್ನ ಪ್ರೀತಿಯನ್ನು ಹಿಂತೆಗೆದುಕೊಂಡ ಹಾಗೆ, ಎಂದಿಗೂ ಅವನಿಂದ ಹಿಂತೆಗೆಯುವುದಿಲ್ಲ. ನಾನು ಸೌಲನನ್ನು ನಿನ್ನ ಮುಂದೆಯೇ ಹೊರಡಿಸಿಬಿಟ್ಟೆನಲ್ಲಾ.


ಹೀಗೆ ಸೌಲನೂ, ಅವನ ಮೂರು ಮಂದಿ ಪುತ್ರರೂ, ಅವನ ಆಯುಧ ಹೊರುವವನೂ, ಅವನ ಸಮಸ್ತ ಜನರೂ ಅದೇ ದಿನ ಸತ್ತರು.


“ನಾನು ಸೌಲನನ್ನು ಅರಸನಾಗಿ ಮಾಡಿದ್ದರಿಂದ ದುಃಖಪಡುತ್ತೇನೆ. ಏಕೆಂದರೆ ಅವನು ನನ್ನನ್ನು ಹಿಂಬಾಲಿಸುವುದನ್ನು ಬಿಟ್ಟು, ಹಿಂದಕ್ಕೆ ಹೋದನು; ನನ್ನ ಆಜ್ಞೆಗಳನ್ನು ಈಡೇರಿಸಲಿಲ್ಲ,” ಎಂದರು. ಅದಕ್ಕೆ ಸಮುಯೇಲನು ಕೋಪಗೊಂಡು ರಾತ್ರಿಯೆಲ್ಲಾ ಯೆಹೋವ ದೇವರಿಗೆ ಮೊರೆಯಿಟ್ಟನು.


ನೀವು ಕೆಟ್ಟತನವನ್ನು ಇನ್ನೂ ಮಾಡಿದರೆ, ನೀವೂ ನಿಮ್ಮ ಅರಸನೂ ಸಹ ನಾಶವಾಗಿಹೋಗುವಿರಿ,” ಎಂದನು.


ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ.


ಆಗುವುದಾದರೆ ಮಾತ್ರ ನನ್ನ ದಾಸ ದಾವೀದನೊಂದಿಗೆ ನನ್ನ ಪರಿಚಾರಕರಾದ ಲೇವಿ ಕುಲದ ಯಾಜಕರೊಂದಿಗೆ ನಾನು ಮಾಡಿದ ಒಡಂಬಡಿಕೆ ನಿಂತುಹೋಗುವುದು ಮತ್ತು ದಾವೀದನ ಸಿಂಹಾಸನವನ್ನು ಏರಿ ಆಳತಕ್ಕ ಅವನ ಸಂತಾನದವನು ಒಬ್ಬನೂ ಇಲ್ಲವಾಗುವನು.


ಸಮುಯೇಲನು ಅವನಿಗೆ, “ಯೆಹೋವ ದೇವರು ನಿನ್ನನ್ನು ಬಿಟ್ಟು ಹೋಗಿ ನಿನಗೆ ಶತ್ರುವಾಗಿರುವಾಗ, ನೀನು ನನ್ನನ್ನು ಕೇಳುವುದು ಏಕೆ?


“ದಾವೀದನು ತನ್ನ ಜೀವಮಾನದಲ್ಲಿ ದೇವರ ಉದ್ದೇಶಕ್ಕೆ ಅನುಗುಣವಾಗಿ ಸೇವೆಮಾಡಿ ಮರಣಹೊಂದಿದನು. ಅವನ ಪಿತೃಗಳೊಂದಿಗೆ ಅವನನ್ನು ಸೇರಿಸಿದರು. ಅವನ ದೇಹ ಕೊಳೆತುಹೋಯಿತು.


ಬೋವಜನು ಓಬೇದನ ತಂದೆ, ಓಬೇದನು ಇಷಯನ ತಂದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು